ಸರಕಾರಿ ನೌಕರರ ಸಂಘಕ್ಕೆ ಚುನಾವಣೆ : ಬಿರುಸಿನ ಮತದಾನ

ಸರಕಾರಿ ನೌಕರರ ಸಂಘಕ್ಕೆ ಚುನಾವಣೆ : ಬಿರುಸಿನ ಮತದಾನ

ಮುದ್ದೇಬಿಹಾಳ : ರಾಜ್ಯ ಸರ್ಕಾರಿ ನೌಕರರ ಸಂಘದ ಒಂದು ನಿರ್ದೇಶಕ ಸ್ಥಾನಕ್ಕೆ ಸೋಮವಾರ ಮತದಾನ ಕಾರ್ಯ ನಡೆದಿದ್ದು ಶಿಕ್ಷಕರಿಂದ ಉತ್ತಮ ಸ್ಪಂದನೆ ದೊರೆತಿದೆ.

ಶಿಕ್ಷಣ ಇಲಾಖೆಯ ಭಾಗ ಸಂಖ್ಯೆ 2 ರಲ್ಲಿ ಕಣದಲ್ಲಿ ಉಳಿದಿರುವ ಶಂಕರಗೌಡ ಬಿರಾದಾರ, ಬಂದಗಿಪಟೇಲ್ ಗಣಿಯಾರ ಮಧ್ಯೆ ಸ್ಪರ್ಧೆ ಇದೆ.
ಚುನಾವಣಾಧಿಕಾರಿ ಎಸ್.ಆರ್.ಕಟ್ಟಿಮನಿ , ಸಹಾಯಕ ಚುನಾವಣಾಧಿಕಾರಿ ಬಿ.ಎಚ್.ಹೂಗಾರ , ಸಹಾಯಕರಾಗಿ ವೆಂಕಟೇಶ ಅಂಬಿಗೇರ ಕಾರ್ಯನಿರ್ವಹಿಸುತ್ತಿದ್ದು ಬೆಳಗ್ಗೆ 9 ರಿಂದ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಮದ್ಯಾಹ್ನ 12.30 ರವರೆಗಿನ ಮಾಹಿತಿಯಂತೆ 160 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ.

ಅಭ್ಯರ್ಥಿಗಳು ಪ್ರತ್ಯೇಕ ವಾಹನಗಳಲ್ಲಿ ಶಿಕ್ಷಕರನ್ನು ಕರೆತರುತ್ತಿರುವ ದೃಶ್ಯಗಳು ಕಂಡು ಬಂದವು. ಎ.ಎಸ್.ಐ ಬಿ.ಡಿ.ಪವಾರ ಅವರ ನೇತೃತ್ವದಲ್ಲಿ ಭದ್ರತೆ ಒದಗಿಸಲಾಗಿದೆ.


ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಚಾರ ಕಾರ್ಯ ಕೈಗೊಳ್ಳುವ ರೀತಿಯಲ್ಲಿ ಬಸವೇಶ್ವರ ವೃತ್ತಕ್ಕೆ ಪ್ರಚಾರದ ಬ್ಯಾನರ್ ಹಚ್ಚಿದ್ದು ಕಂಡು ಬಂದಿತು.



Latest News

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರಿಗೆ ಸಂಪುಟ ವಿಸ್ತರಣೆಯಲ್ಲಿ ಅವಕಾಶ

ಸಿದ್ಧರಾಮಯ್ಯ ಸರಕಾರದಲ್ಲಿ ನಾಡಗೌಡರು ಮಂತ್ರಿಯಾಗಬೇಕಿತ್ತು-ಸಿಎo ಡಿಕೆಶಿ

ಸಿದ್ಧರಾಮಯ್ಯ ಸರಕಾರದಲ್ಲಿ ನಾಡಗೌಡರು ಮಂತ್ರಿಯಾಗಬೇಕಿತ್ತು-ಸಿಎo ಡಿಕೆಶಿ

ಮುದ್ದೇಬಿಹಾಳ : ಸಿದ್ಧರಾಮಯ್ಯನವರ ಸರ್ಕಾರದಲ್ಲಿಯೇ ಈ ಹಿಂದೆ ನಿಮ್ಮ ಶಾಸಕ ಸಿ.ಎಸ್.ನಾಡಗೌಡರ ಹೆಸರು ಮಂತ್ರಿ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡರ ಶಿಫಾರಸ್ಸಿನ ಮೇರೆಗೆ ಮುದ್ದೇಬಿಹಾಳ ಹಾಗೂ ನಾಲತವಾಡ ಸಾರ್ವಜನಿಕ ಆಸ್ಪತ್ರೆಗಳ

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಜೂ.19 ರಂದು ಸ್ವಯಂಪ್ರೇರಿತವಾಗಿ ಮುದ್ದೇಬಿಹಾಳ ಬಂದ್ ಮಾಡುವ ಮೂಲಕ ಕಾಂಗ್ರೆಸ್ ಹೈಕಮಾಂಡ್ ಮೇಲೆ ಪಕ್ಷಾತೀತವಾಗಿ ವ್ಯಾಪಾರಸ್ಥರು ಒತ್ತಡ ತರಲು ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ ಹೇಳಿದರು. ಪ್ರವಾಸಿ ಮಂದಿರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ಈಗಾಗಲೇ ಎಲ್ಲ ವ್ಯಾಪಾರಸ್ಥರು, ಗಣ್ಯ ಉದ್ಯಮಿದಾರರು, ಸಂಘ ಸಂಸ್ಥೆಯವರು ಸಂಪರ್ಕಿಸಿ ಮುದ್ದೇಬಿಹಾಳ ಸಂಪೂರ್ಣ ಬಂದ್

ಮುದ್ದೇಬಿಹಾಳ : ಬಲವಂತದ ಬಂದ್ ಕರೆ ಅಗತ್ಯವಿಲ್ಲ-ಪಂಪಣ್ಣವರ

ಮುದ್ದೇಬಿಹಾಳ : ಬಲವಂತದ ಬಂದ್ ಕರೆ ಅಗತ್ಯವಿಲ್ಲ-ಪಂಪಣ್ಣವರ

ಮುದ್ದೇಬಿಹಾಳ ; ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಅವರ ಸರ್ಕಾರದಲ್ಲಿ ಸಚಿವ ಸ್ಥಾನ ದೊರಕಲಿ.ಅವರ ಕಾರ್ಯಕರ್ತರು ತಮ್ಮ ಪಕ್ಷದ ಹೈಕಮಾಂಡ್ ಮೇಲೆ ಮನವಿ,ಆಗ್ರಹ ಮಾಡಲಿ.ಅದು ಬಿಟ್ಟು ಬಲವಂತದಿoದ ಮುದ್ದೇಬಿಹಾಳ ಬಂದ್ ಮಾಡುವುದರಿಂದ ಜನಸಾಮಾನ್ಯರ ಬದುಕಿನ ಮೇಲೆ ತೊಂದರೆಯುoಟಾಗುತ್ತದೆ ಎಂದು ವರ್ತಕ ಹಾಗೂ ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ಹೇಳಿದರು. ಪತ್ರಿಕೆಯೊಂದಿಗೆ ಮಾತನಾಡಿದ ಅವರು, ನಾಡಗೌಡರಿಗೆ ಸಚಿವ ಸ್ಥಾನ ಸಿಕ್ಕರೆ ಮುದ್ದೇಬಿಹಾಳದ ಅಭಿವೃದ್ಧಿಗೆ ವೇಗ ಸಿಗಬಹುದು ಎಂಬ ನಿರೀಕ್ಷೆ ನಮ್ಮದೂ