ಪ್ರಚಾರಕ್ಕೆ ಸೀಮಿತವಾದ ಪ್ರವೇಶ ಪರೀಕ್ಷೆ ?: 3,555 ವಿದ್ಯಾರ್ಥಿಗಳಲ್ಲಿ ನಾಲ್ವರಿಗೆ ಮಾತ್ರ ಉಚಿತ ಶಿಕ್ಷಣದ ಭರವಸೆ..!

ಪ್ರಚಾರಕ್ಕೆ ಸೀಮಿತವಾದ ಪ್ರವೇಶ ಪರೀಕ್ಷೆ ?: 3,555 ವಿದ್ಯಾರ್ಥಿಗಳಲ್ಲಿ ನಾಲ್ವರಿಗೆ ಮಾತ್ರ ಉಚಿತ ಶಿಕ್ಷಣದ ಭರವಸೆ..!

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ) : ತಮ್ಮ ಮಕ್ಕಳು ಡಾಕ್ಟರ್ ಆಗಬೇಕು, ಎಂಜೀನಿಯರ್ ಆಗಬೇಕು ಎಂಬ ಆಸೆ ಇಟ್ಟುಕೊಂಡು ಮಕ್ಕಳ ಪ್ರತಿಭೆ ಅನಾವರಣಗೊಳ್ಳುತ್ತದೆ, ಉತ್ತಮ ಭವಿಷ್ಯ ರೂಪಿಸಲು ಹಲವಾರು ಕನಸುಗಳನ್ನು ಕಟ್ಟಿಕೊಂಡು ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿಗೆ ಭಾನುವಾರ ಆಗಮಿಸಿದ್ದ ಮೂರು ಸಾವಿರಕ್ಕೂ ಅಧಿಕ ಸಂಖ್ಯೆಯ ಪಾಲಕರಿಗೆ ಭಾನುವಾರ ನಿರಾಸೆ ಅನುಭವಿಸಬೇಕಾಯಿತು.

ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಟ್ಯಾಲೆಂಟ್ ಸರ್ಚ್ ಪರೀಕ್ಷೆ ನಿಜವಾಗಲೂ ವಿದ್ಯಾರ್ಥಿಗಳ ಪ್ರತಿಭೆಯನ್ನು ಅನಾವರಣಗೊಳಿಸುವುದಕ್ಕೆ ರೂಪಿಸಿದ ಪರೀಕ್ಷೆಯೋ ಅಥವಾ ಕಾಲೇಜಿನ ಪ್ರಚಾರಕ್ಕೆಂದು ರೂಪಿಸಿದ ಕಾರ್ಯಕ್ರಮವೋ ಎಂಬುದು ಗೊತ್ತಾಗಲಿಲ್ಲ ಎಂದು ದಾವಣಗೆರೆಯಿಂದ ಬಂದಿದ್ದ ಪಾಲಕರೊಬ್ಬರು ದೂರಿದರು.

ರಾಜ್ಯದ ವಿವಿಧ ಜಿಲ್ಲೆಗಳಿಂದ 3555 ವಿದ್ಯಾರ್ಥಿಗಳು, ಅವರೊಂದಿಗೆ ಪಾಲಕರು ಆಗಮಿಸಿ ಪರೀಕ್ಷೆಗೆ ಹಾಜರಾಗಿದ್ದರು. ಆದರೆ ಕಾಲೇಜಿನಿಂದ ಮುಂಚಿತವಾಗಿ ಪ್ರಕಟಣೆ ಕೊಟ್ಟಂತೆ ನಿಗದಿತ ಶೇ.ವಾರು ಅಂಕ ಪಡೆದುಕೊಳ್ಳುವಲ್ಲಿ ಇಷ್ಟೊಂದು ಭಾರೀ ಸಂಖ್ಯೆಯಲ್ಲಿ ಆಗಮಿಸಿದ್ದ ವಿದ್ಯಾರ್ಥಿಗಳು ವೈಫಲ್ಯತೆ ಅನುಭವಿಸಿದರು.

ಫಲಿತಾಂಶ ಪ್ರಕಟಿಸುವ ಸಮಯದಲ್ಲಿ ಆರಂಭದಲ್ಲಿ ಕಾಲೇಜಿನ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ್, 3555 ವಿದ್ಯಾರ್ಥಿಗಳಲ್ಲಿ ಕೇವಲ ನಾಲ್ವರಿಗೆ ಎರಡು ವರ್ಷದ ಉಚಿತ ಊಟ, ವಸತಿ,ಶಿಕ್ಷಣ ನೀಡುವುದಾಗಿ ಹೇಳಿ ಹುನಗುಂದ ಆರ್.ಎಂ.ಎಸ್.ಎ ಶಾಲೆಯ ಮಲ್ಲಿಕಾರ್ಜುನ ಕತನಿ(ಶೇ.58.33),ಶಹಾಪೂರಿನ ನಿಸರ್ಗ ಪೊಲೀಸಪಾಟೀಲ (ಶೇ.49.58),ಮುಂಡರಗಿ ಆರ್.ಎಂ.ಎಸ್.ಎ ಶಾಲೆಯ ಕಾವ್ಯಾ ಉಪ್ಪಾರ (ಶೇ.46.66), ಆತನೂರು ಆರ್.ಎಂ.ಎಸ್.ಎ ಶಾಲೆಯ ನಾಗೇಶ ಬಡಿಗೇರ(ಶೇ.46.25) ಅವರ ಹೆಸರುಗಳನ್ನು ಘೋಷಿಸಲಾಯಿತು.

ಇದಾದ ಬಳಿಕ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ್ ಮತ್ತೆ ಮಧ್ಯೆಪ್ರವೇಶಿಸಿ, ಫಲಿತಾಂಶ ಪ್ರಕಟಿಸುತ್ತಿದ್ದ ಆಕ್ಸಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯಗುರು ಇಸ್ಮಾಯಿಲ್ ಮನಿಯಾರ ಅವರಿಂದ ಅತೀ ಹೆಚ್ಚು ಅಂಕ ಪಡೆದ ಮೊದಲ 16 ವಿದ್ಯಾರ್ಥಿಗಳ ಹೆಸರುಗಳನ್ನು ಘೋಷಿಸಿದರು.ಅಲ್ಲದೇ ಅವರಿಗೆ ಪ್ರವೇಶ ಶುಲ್ಕದಲ್ಲಿ ರಿಯಾಯಿತಿ ನೀಡುವುದಾಗಿಯೂ ತಿಳಿಸಿದರು.ಆದರೆ ಎಷ್ಟು ರಿಯಾಯಿತಿ ಕೊಡಲಾಗುತ್ತದೆ ಎಂಬುದನ್ನು ಬಹಿರಂಗವಾಗಿ ಹೇಳಲಿಲ್ಲ.ಒಟ್ಟಾರೆ ಟ್ಯಾಲೆಂಟ್ ಸರ್ಚ್ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆಯಲ್ಲಿ ಋಣಾತ್ಮಕ ಅಂಕಗಳನ್ನು ಇಟ್ಟಿದ್ದು ಹಾಗೂ ಪ್ರಶ್ನೆಗಳು ಅತೀ ಕಠಿಣವಾಗಿದ್ದರಿಂದಲೇ ವಿದ್ಯಾರ್ಥಿಗಳು ನಿರೀಕ್ಷಿತ ಅಂಕ ಪಡೆದುಕೊಳ್ಳಲು ಸಾಧ್ಯವಾಗಲಿಲ್ಲ.ಸಂಸ್ಥೆಯವರಿAದ ಇದೊಂದು ಪ್ರಚಾರದ ಗಿಮಿಕ್ ಆಯಿತೇ ? ಎಂಬ ಮಾತುಗಳು ಪರೀಕ್ಷೆಗೆ ದೂರದ ಧಾರವಾಡ, ಬಾಗಲಕೋಟ,ವಿಜಯಪುರ,ಯಾದಗಿರಿ,ಕೊಪ್ಪಳ, ಗದಗ, ಗಂಗಾವತಿ ಭಾಗಗಳಿಂದ ಬಂದಿದ್ದ ಪೋಷಕರಿಂದ ಕೇಳಿ ಬಂದವು.

Latest News

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಮುದ್ದೇಬಿಹಾಳ(ಜಿಲ್ಲೆ : ವಿಜಯಪುರ) : ದೇಶದ ಪ್ರತಿಷ್ಠಿತ ಐಐಟಿ ಕಾಲೇಜುಗಳಲ್ಲಿ ಒಂದಾಗಿರುವ ಕಾನ್ಪುರದ ಐಐಟಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ : ಸಿಎಂ ಸಿದ್ಧರಾಮಯ್ಯನವರ ಅವಧಿಯಲ್ಲಿ ಕಳೆದ ಬಜೆಟ್‌ನಲ್ಲಿ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ ಎಸ್.ಆಯ್.ಆರ್ ಪ್ರಗತಿಯನ್ನು ತಹಶೀಲ್ದಾರ್ ಕೀರ್ತಿ ಚಾಲಕ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಾಲ್ಲೂಕಿನ ನೇಬಗೇರಿಯ ಭಾಗ ಸಂಖ್ಯೆ 211 ಹಾಗೂ 212ರಲ್ಲಿ,ಮುದ್ದೇಬಿಹಾಳದ ಕಿಲ್ಲಾ ಸೇರಿದಂತೆ ಹಲವು ಪ್ರದೇಶಗಳಿಗೆ ಭೇಟಿ ನೀಡಿರುವ ತಹಶೀಲ್ದಾರರು, ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಸಾರ್ವಜನಿಕರು ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊAಡಿರುವ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ ಹುಡೇದ ಅವರು ಮಂಗಳವಾರ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆಗೆ ನಾನೇ ಕಾರಣ ಎಂದು ಆರೋಪಿಸಿದ್ದು, ಅದರಲ್ಲಿ ನನ್ನದು ಯಾವುದೇ ಪಾತ್ರವಿಲ್ಲ.ನನ್ನ ಹೋರಾಟವನ್ನು ಹತ್ತಿಕ್ಕಲು ಈ ಸಂಚು ಕೆಲವರು ರೂಪಿಸಿದ್ದಾರೆ ಎಂದು ಪ್ರತ್ಯಾರೋಪ ಮಾಡಿರುವ ಯುವಕ ವೀರೇಶ ಆಲಕೊಪ್ಪರ ಸರ್ಕಾರಿ ಆಸ್ಪತ್ರೆಯಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ನಡೆದಿದೆ. ಆಸ್ಪತ್ರೆಯ ಎದುರಿಗೆ