ಪ್ರಚಾರಕ್ಕೆ ಸೀಮಿತವಾದ ಪ್ರವೇಶ ಪರೀಕ್ಷೆ ?: 3,555 ವಿದ್ಯಾರ್ಥಿಗಳಲ್ಲಿ ನಾಲ್ವರಿಗೆ ಮಾತ್ರ ಉಚಿತ ಶಿಕ್ಷಣದ ಭರವಸೆ..!

ಪ್ರಚಾರಕ್ಕೆ ಸೀಮಿತವಾದ ಪ್ರವೇಶ ಪರೀಕ್ಷೆ ?: 3,555 ವಿದ್ಯಾರ್ಥಿಗಳಲ್ಲಿ ನಾಲ್ವರಿಗೆ ಮಾತ್ರ ಉಚಿತ ಶಿಕ್ಷಣದ ಭರವಸೆ..!

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ) : ತಮ್ಮ ಮಕ್ಕಳು ಡಾಕ್ಟರ್ ಆಗಬೇಕು, ಎಂಜೀನಿಯರ್ ಆಗಬೇಕು ಎಂಬ ಆಸೆ ಇಟ್ಟುಕೊಂಡು ಮಕ್ಕಳ ಪ್ರತಿಭೆ ಅನಾವರಣಗೊಳ್ಳುತ್ತದೆ, ಉತ್ತಮ ಭವಿಷ್ಯ ರೂಪಿಸಲು ಹಲವಾರು ಕನಸುಗಳನ್ನು ಕಟ್ಟಿಕೊಂಡು ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿಗೆ ಭಾನುವಾರ ಆಗಮಿಸಿದ್ದ ಮೂರು ಸಾವಿರಕ್ಕೂ ಅಧಿಕ ಸಂಖ್ಯೆಯ ಪಾಲಕರಿಗೆ ಭಾನುವಾರ ನಿರಾಸೆ ಅನುಭವಿಸಬೇಕಾಯಿತು.

ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಟ್ಯಾಲೆಂಟ್ ಸರ್ಚ್ ಪರೀಕ್ಷೆ ನಿಜವಾಗಲೂ ವಿದ್ಯಾರ್ಥಿಗಳ ಪ್ರತಿಭೆಯನ್ನು ಅನಾವರಣಗೊಳಿಸುವುದಕ್ಕೆ ರೂಪಿಸಿದ ಪರೀಕ್ಷೆಯೋ ಅಥವಾ ಕಾಲೇಜಿನ ಪ್ರಚಾರಕ್ಕೆಂದು ರೂಪಿಸಿದ ಕಾರ್ಯಕ್ರಮವೋ ಎಂಬುದು ಗೊತ್ತಾಗಲಿಲ್ಲ ಎಂದು ದಾವಣಗೆರೆಯಿಂದ ಬಂದಿದ್ದ ಪಾಲಕರೊಬ್ಬರು ದೂರಿದರು.

ರಾಜ್ಯದ ವಿವಿಧ ಜಿಲ್ಲೆಗಳಿಂದ 3555 ವಿದ್ಯಾರ್ಥಿಗಳು, ಅವರೊಂದಿಗೆ ಪಾಲಕರು ಆಗಮಿಸಿ ಪರೀಕ್ಷೆಗೆ ಹಾಜರಾಗಿದ್ದರು. ಆದರೆ ಕಾಲೇಜಿನಿಂದ ಮುಂಚಿತವಾಗಿ ಪ್ರಕಟಣೆ ಕೊಟ್ಟಂತೆ ನಿಗದಿತ ಶೇ.ವಾರು ಅಂಕ ಪಡೆದುಕೊಳ್ಳುವಲ್ಲಿ ಇಷ್ಟೊಂದು ಭಾರೀ ಸಂಖ್ಯೆಯಲ್ಲಿ ಆಗಮಿಸಿದ್ದ ವಿದ್ಯಾರ್ಥಿಗಳು ವೈಫಲ್ಯತೆ ಅನುಭವಿಸಿದರು.

ಫಲಿತಾಂಶ ಪ್ರಕಟಿಸುವ ಸಮಯದಲ್ಲಿ ಆರಂಭದಲ್ಲಿ ಕಾಲೇಜಿನ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ್, 3555 ವಿದ್ಯಾರ್ಥಿಗಳಲ್ಲಿ ಕೇವಲ ನಾಲ್ವರಿಗೆ ಎರಡು ವರ್ಷದ ಉಚಿತ ಊಟ, ವಸತಿ,ಶಿಕ್ಷಣ ನೀಡುವುದಾಗಿ ಹೇಳಿ ಹುನಗುಂದ ಆರ್.ಎಂ.ಎಸ್.ಎ ಶಾಲೆಯ ಮಲ್ಲಿಕಾರ್ಜುನ ಕತನಿ(ಶೇ.58.33),ಶಹಾಪೂರಿನ ನಿಸರ್ಗ ಪೊಲೀಸಪಾಟೀಲ (ಶೇ.49.58),ಮುಂಡರಗಿ ಆರ್.ಎಂ.ಎಸ್.ಎ ಶಾಲೆಯ ಕಾವ್ಯಾ ಉಪ್ಪಾರ (ಶೇ.46.66), ಆತನೂರು ಆರ್.ಎಂ.ಎಸ್.ಎ ಶಾಲೆಯ ನಾಗೇಶ ಬಡಿಗೇರ(ಶೇ.46.25) ಅವರ ಹೆಸರುಗಳನ್ನು ಘೋಷಿಸಲಾಯಿತು.

ಇದಾದ ಬಳಿಕ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ್ ಮತ್ತೆ ಮಧ್ಯೆಪ್ರವೇಶಿಸಿ, ಫಲಿತಾಂಶ ಪ್ರಕಟಿಸುತ್ತಿದ್ದ ಆಕ್ಸಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯಗುರು ಇಸ್ಮಾಯಿಲ್ ಮನಿಯಾರ ಅವರಿಂದ ಅತೀ ಹೆಚ್ಚು ಅಂಕ ಪಡೆದ ಮೊದಲ 16 ವಿದ್ಯಾರ್ಥಿಗಳ ಹೆಸರುಗಳನ್ನು ಘೋಷಿಸಿದರು.ಅಲ್ಲದೇ ಅವರಿಗೆ ಪ್ರವೇಶ ಶುಲ್ಕದಲ್ಲಿ ರಿಯಾಯಿತಿ ನೀಡುವುದಾಗಿಯೂ ತಿಳಿಸಿದರು.ಆದರೆ ಎಷ್ಟು ರಿಯಾಯಿತಿ ಕೊಡಲಾಗುತ್ತದೆ ಎಂಬುದನ್ನು ಬಹಿರಂಗವಾಗಿ ಹೇಳಲಿಲ್ಲ.ಒಟ್ಟಾರೆ ಟ್ಯಾಲೆಂಟ್ ಸರ್ಚ್ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆಯಲ್ಲಿ ಋಣಾತ್ಮಕ ಅಂಕಗಳನ್ನು ಇಟ್ಟಿದ್ದು ಹಾಗೂ ಪ್ರಶ್ನೆಗಳು ಅತೀ ಕಠಿಣವಾಗಿದ್ದರಿಂದಲೇ ವಿದ್ಯಾರ್ಥಿಗಳು ನಿರೀಕ್ಷಿತ ಅಂಕ ಪಡೆದುಕೊಳ್ಳಲು ಸಾಧ್ಯವಾಗಲಿಲ್ಲ.ಸಂಸ್ಥೆಯವರಿAದ ಇದೊಂದು ಪ್ರಚಾರದ ಗಿಮಿಕ್ ಆಯಿತೇ ? ಎಂಬ ಮಾತುಗಳು ಪರೀಕ್ಷೆಗೆ ದೂರದ ಧಾರವಾಡ, ಬಾಗಲಕೋಟ,ವಿಜಯಪುರ,ಯಾದಗಿರಿ,ಕೊಪ್ಪಳ, ಗದಗ, ಗಂಗಾವತಿ ಭಾಗಗಳಿಂದ ಬಂದಿದ್ದ ಪೋಷಕರಿಂದ ಕೇಳಿ ಬಂದವು.

Latest News

ಡಿ.24 ರಂದು ದಲಿತ ಚಳವಳಿಯ ನಾಯಕ ಡಿ.ಬಿ.ಮುದೂರ ನುಡಿನಮನ

ಡಿ.24 ರಂದು ದಲಿತ ಚಳವಳಿಯ ನಾಯಕ ಡಿ.ಬಿ.ಮುದೂರ ನುಡಿನಮನ

ಮುದ್ದೇಬಿಹಾಳ ; ಕರ್ನಾಟಕ ದಲಿತ ಸಂಘರ್ಷ ಸಮೀತಿ ರಾಜ್ಯ ಸಂಘಟನಾ ಸಂಚಾಲಕ ಡಿ.ಬಿ.ಮುದೂರ ಅವರ

BREAKING : ಟಿ20 ವಿಶ್ವಕಪ್ ಗೆ ‘ಟೀಂ ಇಂಡಿಯಾ’ ಪ್ರಕಟ, ಶುಭಮನ್’ಗಿಲ್ ಔಟ್ (India T20 World Cup)

BREAKING : ಟಿ20 ವಿಶ್ವಕಪ್ ಗೆ ‘ಟೀಂ ಇಂಡಿಯಾ’ ಪ್ರಕಟ, ಶುಭಮನ್’ಗಿಲ್ ಔಟ್ (India T20 World Cup)

ನವದೆಹಲಿ : ಟಿ20 ವಿಶ್ವಕಪ್ ಗೆ ಟೀಂ ಇಂಡಿಯಾ ಪ್ರಕಟವಾಗಿದ್ದು, ಶುಭಮನ್ ಗಿಲ್ ತಂಡದಿಂದ

ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ‘ಜ್ಯೋತಿ ಪಾಟೀಲ್’ ಆತ್ಮಹತ್ಯೆ.!

ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ‘ಜ್ಯೋತಿ ಪಾಟೀಲ್’ ಆತ್ಮಹತ್ಯೆ.!

ಕಲಬುರಗಿ : ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ಜ್ಯೋತಿ ಪಾಟೀಲ್ ಆತ್ಮಹತ್ಯೆ

ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರಿಗೆ ಅಸ್ಕಿ ಫೌಂಡೇಶನ್‌ದಿoದ ಸನ್ಮಾನ

ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರಿಗೆ ಅಸ್ಕಿ ಫೌಂಡೇಶನ್‌ದಿoದ ಸನ್ಮಾನ

ವಿಜಯಪುರ : ನೂತನವಾಗಿ ವಿಜಯಪುರ ಜಿಲ್ಲೆಗೆ 152 ಹೊಸ ಬಸ್‌ಗಳ ನಗರಸಾರಿಗೆ ಬಸ್ಸುಗಳ ಲೋಕಾರ್ಪಣೆ

ನನ್ನ ಹಕ್ಕುಬಿಟ್ಟುಕೊಡಲು ಸಿದ್ದನಿದ್ದೇನೆ, ಆರೋಪದ ಚರ್ಚೆಗೆ ಸಿದ್ಧ: ಕೃಷ್ಣ ಬೈರೇಗೌಡರ ಸವಾಲ್..!

ಬೆಳಗಾವಿ ಡಿಸೆಂಬರ್ 18: ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವ್ಯಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಬಹಿರಂಗ ಸವಾಲು ಎಸೆದರು. ಗುರುವಾರ ವಿಧಾನಸಭೆ ಶೂನ್ಯ ಚರ್ಚೆಯ ವೇಳೆ ಸಚಿವ ಕೃಷ್ಣ ಬೈರೇಗೌಡ ಅವರು ಮೇಲೆ ವಿಧಾನ ಪರಿಷತ್ ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರು ಮಾಡಿರುವ ಸ್ಮಶಾನಭೂಮಿ ಒತ್ತುವರಿ ಆರೋಪ ಮಾಡಿದ್ದ ಬಗ್ಗೆ ಚರ್ಚಿಸಲು ಅವಕಾಶ

ಬಾಲಾಜಿ ಸಕ್ಕರೆ ಕಾರ್ಖಾನೆಗೆ ಡಿಸಿ ಭೇಟಿ:                           ಕಬ್ಬಿನ ತೂಕದಲ್ಲಿ ಪಾರದರ್ಶಕತೆ, ಕಾಲಮಿತಿಯಲ್ಲಿ ಬಿಲ್ ಪಾವತಿ

ಬಾಲಾಜಿ ಸಕ್ಕರೆ ಕಾರ್ಖಾನೆಗೆ ಡಿಸಿ ಭೇಟಿ: ಕಬ್ಬಿನ ತೂಕದಲ್ಲಿ ಪಾರದರ್ಶಕತೆ, ಕಾಲಮಿತಿಯಲ್ಲಿ ಬಿಲ್ ಪಾವತಿ

ಮುದ್ದೇಬಿಹಾಳ : ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆಗೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಬುಧವಾರ ಜಿಲ್ಲಾ ಮಟ್ಟದ ಸಕ್ಕರೆ ಇಳುವರಿ ಹಾಗೂ ತೂಕದ ಯಂತ್ರಗಳ ಪರಿಶೀಲನಾ ತಂಡ ಬುಧವಾರ ಭೇಟಿ ನೀಡಿ ಕಾರ್ಖಾನೆಯ ಕಾರ್ಯಾಚರಣೆಯನ್ನು ವೀಕ್ಷಿಸಿದರು. ಪತ್ರಿಕೆಯೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಡಾ.ಆನಂದ ಕೆ., ರಾಜ್ಯ ಸರ್ಕಾರ ಆದೇಶಿಸಿತ ಹೆಚ್ಚುವರಿ ಪರಿಹಾರವನ್ನು ಕಾರ್ಖಾನೆಯಿಂದ ರೈತರಿಗೆ ಪಾವತಿಸಲಾಗುತ್ತಿದೆ.ಕಾರ್ಖಾನೆಯ ತೂಕದ ಯಂತ್ರದ ಕುರಿತು ಈಚೇಗೆ ರೈತರು ಆಕ್ಷೇಪಿಸಿದ್ದಕ್ಕೆ ಕಬ್ಬು ಪರೈಸುವ ರೈತರು, ರೈತಪರ ಸಂಘಟನೆ