ಪ್ರಚಾರಕ್ಕೆ ಸೀಮಿತವಾದ ಪ್ರವೇಶ ಪರೀಕ್ಷೆ ?: 3,555 ವಿದ್ಯಾರ್ಥಿಗಳಲ್ಲಿ ನಾಲ್ವರಿಗೆ ಮಾತ್ರ ಉಚಿತ ಶಿಕ್ಷಣದ ಭರವಸೆ..!

ಪ್ರಚಾರಕ್ಕೆ ಸೀಮಿತವಾದ ಪ್ರವೇಶ ಪರೀಕ್ಷೆ ?: 3,555 ವಿದ್ಯಾರ್ಥಿಗಳಲ್ಲಿ ನಾಲ್ವರಿಗೆ ಮಾತ್ರ ಉಚಿತ ಶಿಕ್ಷಣದ ಭರವಸೆ..!

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ) : ತಮ್ಮ ಮಕ್ಕಳು ಡಾಕ್ಟರ್ ಆಗಬೇಕು, ಎಂಜೀನಿಯರ್ ಆಗಬೇಕು ಎಂಬ ಆಸೆ ಇಟ್ಟುಕೊಂಡು ಮಕ್ಕಳ ಪ್ರತಿಭೆ ಅನಾವರಣಗೊಳ್ಳುತ್ತದೆ, ಉತ್ತಮ ಭವಿಷ್ಯ ರೂಪಿಸಲು ಹಲವಾರು ಕನಸುಗಳನ್ನು ಕಟ್ಟಿಕೊಂಡು ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿಗೆ ಭಾನುವಾರ ಆಗಮಿಸಿದ್ದ ಮೂರು ಸಾವಿರಕ್ಕೂ ಅಧಿಕ ಸಂಖ್ಯೆಯ ಪಾಲಕರಿಗೆ ಭಾನುವಾರ ನಿರಾಸೆ ಅನುಭವಿಸಬೇಕಾಯಿತು.

ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಟ್ಯಾಲೆಂಟ್ ಸರ್ಚ್ ಪರೀಕ್ಷೆ ನಿಜವಾಗಲೂ ವಿದ್ಯಾರ್ಥಿಗಳ ಪ್ರತಿಭೆಯನ್ನು ಅನಾವರಣಗೊಳಿಸುವುದಕ್ಕೆ ರೂಪಿಸಿದ ಪರೀಕ್ಷೆಯೋ ಅಥವಾ ಕಾಲೇಜಿನ ಪ್ರಚಾರಕ್ಕೆಂದು ರೂಪಿಸಿದ ಕಾರ್ಯಕ್ರಮವೋ ಎಂಬುದು ಗೊತ್ತಾಗಲಿಲ್ಲ ಎಂದು ದಾವಣಗೆರೆಯಿಂದ ಬಂದಿದ್ದ ಪಾಲಕರೊಬ್ಬರು ದೂರಿದರು.

ರಾಜ್ಯದ ವಿವಿಧ ಜಿಲ್ಲೆಗಳಿಂದ 3555 ವಿದ್ಯಾರ್ಥಿಗಳು, ಅವರೊಂದಿಗೆ ಪಾಲಕರು ಆಗಮಿಸಿ ಪರೀಕ್ಷೆಗೆ ಹಾಜರಾಗಿದ್ದರು. ಆದರೆ ಕಾಲೇಜಿನಿಂದ ಮುಂಚಿತವಾಗಿ ಪ್ರಕಟಣೆ ಕೊಟ್ಟಂತೆ ನಿಗದಿತ ಶೇ.ವಾರು ಅಂಕ ಪಡೆದುಕೊಳ್ಳುವಲ್ಲಿ ಇಷ್ಟೊಂದು ಭಾರೀ ಸಂಖ್ಯೆಯಲ್ಲಿ ಆಗಮಿಸಿದ್ದ ವಿದ್ಯಾರ್ಥಿಗಳು ವೈಫಲ್ಯತೆ ಅನುಭವಿಸಿದರು.

ಫಲಿತಾಂಶ ಪ್ರಕಟಿಸುವ ಸಮಯದಲ್ಲಿ ಆರಂಭದಲ್ಲಿ ಕಾಲೇಜಿನ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ್, 3555 ವಿದ್ಯಾರ್ಥಿಗಳಲ್ಲಿ ಕೇವಲ ನಾಲ್ವರಿಗೆ ಎರಡು ವರ್ಷದ ಉಚಿತ ಊಟ, ವಸತಿ,ಶಿಕ್ಷಣ ನೀಡುವುದಾಗಿ ಹೇಳಿ ಹುನಗುಂದ ಆರ್.ಎಂ.ಎಸ್.ಎ ಶಾಲೆಯ ಮಲ್ಲಿಕಾರ್ಜುನ ಕತನಿ(ಶೇ.58.33),ಶಹಾಪೂರಿನ ನಿಸರ್ಗ ಪೊಲೀಸಪಾಟೀಲ (ಶೇ.49.58),ಮುಂಡರಗಿ ಆರ್.ಎಂ.ಎಸ್.ಎ ಶಾಲೆಯ ಕಾವ್ಯಾ ಉಪ್ಪಾರ (ಶೇ.46.66), ಆತನೂರು ಆರ್.ಎಂ.ಎಸ್.ಎ ಶಾಲೆಯ ನಾಗೇಶ ಬಡಿಗೇರ(ಶೇ.46.25) ಅವರ ಹೆಸರುಗಳನ್ನು ಘೋಷಿಸಲಾಯಿತು.

ಇದಾದ ಬಳಿಕ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ್ ಮತ್ತೆ ಮಧ್ಯೆಪ್ರವೇಶಿಸಿ, ಫಲಿತಾಂಶ ಪ್ರಕಟಿಸುತ್ತಿದ್ದ ಆಕ್ಸಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯಗುರು ಇಸ್ಮಾಯಿಲ್ ಮನಿಯಾರ ಅವರಿಂದ ಅತೀ ಹೆಚ್ಚು ಅಂಕ ಪಡೆದ ಮೊದಲ 16 ವಿದ್ಯಾರ್ಥಿಗಳ ಹೆಸರುಗಳನ್ನು ಘೋಷಿಸಿದರು.ಅಲ್ಲದೇ ಅವರಿಗೆ ಪ್ರವೇಶ ಶುಲ್ಕದಲ್ಲಿ ರಿಯಾಯಿತಿ ನೀಡುವುದಾಗಿಯೂ ತಿಳಿಸಿದರು.ಆದರೆ ಎಷ್ಟು ರಿಯಾಯಿತಿ ಕೊಡಲಾಗುತ್ತದೆ ಎಂಬುದನ್ನು ಬಹಿರಂಗವಾಗಿ ಹೇಳಲಿಲ್ಲ.ಒಟ್ಟಾರೆ ಟ್ಯಾಲೆಂಟ್ ಸರ್ಚ್ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆಯಲ್ಲಿ ಋಣಾತ್ಮಕ ಅಂಕಗಳನ್ನು ಇಟ್ಟಿದ್ದು ಹಾಗೂ ಪ್ರಶ್ನೆಗಳು ಅತೀ ಕಠಿಣವಾಗಿದ್ದರಿಂದಲೇ ವಿದ್ಯಾರ್ಥಿಗಳು ನಿರೀಕ್ಷಿತ ಅಂಕ ಪಡೆದುಕೊಳ್ಳಲು ಸಾಧ್ಯವಾಗಲಿಲ್ಲ.ಸಂಸ್ಥೆಯವರಿAದ ಇದೊಂದು ಪ್ರಚಾರದ ಗಿಮಿಕ್ ಆಯಿತೇ ? ಎಂಬ ಮಾತುಗಳು ಪರೀಕ್ಷೆಗೆ ದೂರದ ಧಾರವಾಡ, ಬಾಗಲಕೋಟ,ವಿಜಯಪುರ,ಯಾದಗಿರಿ,ಕೊಪ್ಪಳ, ಗದಗ, ಗಂಗಾವತಿ ಭಾಗಗಳಿಂದ ಬಂದಿದ್ದ ಪೋಷಕರಿಂದ ಕೇಳಿ ಬಂದವು.

Latest News

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ:                                ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ: ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಮುದ್ದೇಬಿಹಾಳ : ಸನ್ 2025-26ನೇ ಸಾಲಿನ ವರದಿ ವರ್ಷದಲ್ಲಿ ಸಂಘದ ಆದಾಯ ಒಟ್ಟು 1.04

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ:                              ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ: ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಮುದ್ದೇಬಿಹಾಳ : ಪ್ರಕೃತಿ ವಿಕೋಪ ಹಾಗೂ ತೀವ್ರ ಬರಪೀಡಿತ ಸಂದರ್ಭದಲ್ಲಿ ರೈತರಿಗೆ ನೆರವು ಒದಗಿಸುವ

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ:                     ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ: ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಮುದ್ದೇಬಿಹಾಳ : ಸರ್ಕಾರ ಕಾಲುವೆಗಳ ದುರಸ್ತಿಗೆ ಹಣ ಕೊಡುತ್ತಿಲ್ಲ.ನೀವೇ ಪಟ್ಟಿ ಹಾಕಿಕೊಂಡು ಕಾಲುವೆ ರಿಪೇರಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಮುದ್ದೇಬಿಹಾಳ : ಆರೋಗ್ಯ ಇಲಾಖೆಯಲ್ಲಿ ಪದವೀಧರ ಆರೋಗ್ಯ ನಿರೀಕ್ಷಣಾಧಿಕಾರಿಗಳು (ಬಿಎಚ್‌ಇಓ) ಹಾಗೂ ಪದವೀಧರ ಪ್ರಾಥಮಿಕ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ ಆಗ್ರಹಿಸಿ ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ ನೀಡಲಾಗಿದೆ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ತಿಳಿಸಿದ್ದಾರೆ. ರಾಜ್ಯದಲ್ಲಿ ತೀವ್ರ ಬರಗಾಲ ಇದ್ದರೂ ಮುದ್ದೇಬಿಹಾಳ ,ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಸರ್ಕಾರ ಘೋಷಣೆ ಮಾಡುತ್ತಿಲ್ಲ.ರೈತರು ಸಂಕಷ್ಟದಲ್ಲಿದ್ದು ಅವರಿಗೆ ಬೆಂಬಲಿಸಲು, ಸರ್ಕಾರದ ಮೇಲೆ ಒತ್ತಡ ಹೇರಲು ಈ ಬಂದ್ ಆಚರಿಸಲಾಗುತ್ತದೆ ಎಂದು ಹೇಳಿದರು. ಸೆ.12

ಬಸರಕೋಡದಲ್ಲಿ ಪೊಲೀಸ್ ಇಲಾಖೆ ಅಧಿಕಾರಿ,ಸಿಬ್ಬಂದಿಗೆ ಸನ್ಮಾನ:                                                                                   ಥ್ಯಾಂಕ್‌ಲೆಸ್ ಜಾಬ್‌ನಲ್ಲಿ ಸಮಾಜದ ಗೌರವ ನೀಡಿದ್ದೇ ಹೆಮ್ಮೆ-ಫಸಿವುದ್ದೀನ್

ಬಸರಕೋಡದಲ್ಲಿ ಪೊಲೀಸ್ ಇಲಾಖೆ ಅಧಿಕಾರಿ,ಸಿಬ್ಬಂದಿಗೆ ಸನ್ಮಾನ: ಥ್ಯಾಂಕ್‌ಲೆಸ್ ಜಾಬ್‌ನಲ್ಲಿ ಸಮಾಜದ ಗೌರವ ನೀಡಿದ್ದೇ ಹೆಮ್ಮೆ-ಫಸಿವುದ್ದೀನ್

ಮುದ್ದೇಬಿಹಾಳ : ಪೊಲೀಸ್ ಕೆಲಸ ಅದೊಂದು ಥ್ಯಾಂಕಲೆಸ್ ಜಾಬ್ ಎಂಬ ಅಪವಾದದ ಮಧ್ಯೆ ನಮ್ಮ ಇಲಾಖೆಯ ಎಲ್ಲ ಅಧಿಕಾರಿ,ಸಿಬ್ಬಂದಿ ಕೈಗೊಂಡ ಬಸರಕೋಡದ ಬೆಳ್ಳಿ ಮೂರ್ತಿ ಕಳ್ಳತನ ಪ್ರಕರಣದ ಆರೋಪಿಗಳನ್ನು ಬಂಧಿಸಿ ಅವರಿಂದ ಬೆಳ್ಳಿ ವಶಕ್ಕೆ ಪಡೆದ ಕಾರಣದಿಂದ ಸಮಾಜ ಕೊಟ್ಟಿರುವ ಸನ್ಮಾನ,ಗೌರವ ನಮ್ಮ ಕರ್ತವ್ಯದ ಸಮಯದ ಮಹತ್ವದ ಕ್ಷಣಗಳಲ್ಲಿ ಒಂದಾಗಿದೆ ಎಂದು ಮುದ್ದೇಬಿಹಾಳ ಸಿಪಿಐ ಮೊಹ್ಮದ ಫಸಿವುದ್ದೀನ್ ಹೇಳಿದರು. ತಾಲ್ಲೂಕಿನ ಬಸರಕೋಡ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪೊಲೀಸ್