ಪ್ರಚಾರಕ್ಕೆ ಸೀಮಿತವಾದ ಪ್ರವೇಶ ಪರೀಕ್ಷೆ ?: 3,555 ವಿದ್ಯಾರ್ಥಿಗಳಲ್ಲಿ ನಾಲ್ವರಿಗೆ ಮಾತ್ರ ಉಚಿತ ಶಿಕ್ಷಣದ ಭರವಸೆ..!

ಪ್ರಚಾರಕ್ಕೆ ಸೀಮಿತವಾದ ಪ್ರವೇಶ ಪರೀಕ್ಷೆ ?: 3,555 ವಿದ್ಯಾರ್ಥಿಗಳಲ್ಲಿ ನಾಲ್ವರಿಗೆ ಮಾತ್ರ ಉಚಿತ ಶಿಕ್ಷಣದ ಭರವಸೆ..!

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ) : ತಮ್ಮ ಮಕ್ಕಳು ಡಾಕ್ಟರ್ ಆಗಬೇಕು, ಎಂಜೀನಿಯರ್ ಆಗಬೇಕು ಎಂಬ ಆಸೆ ಇಟ್ಟುಕೊಂಡು ಮಕ್ಕಳ ಪ್ರತಿಭೆ ಅನಾವರಣಗೊಳ್ಳುತ್ತದೆ, ಉತ್ತಮ ಭವಿಷ್ಯ ರೂಪಿಸಲು ಹಲವಾರು ಕನಸುಗಳನ್ನು ಕಟ್ಟಿಕೊಂಡು ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿಗೆ ಭಾನುವಾರ ಆಗಮಿಸಿದ್ದ ಮೂರು ಸಾವಿರಕ್ಕೂ ಅಧಿಕ ಸಂಖ್ಯೆಯ ಪಾಲಕರಿಗೆ ಭಾನುವಾರ ನಿರಾಸೆ ಅನುಭವಿಸಬೇಕಾಯಿತು.

ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಟ್ಯಾಲೆಂಟ್ ಸರ್ಚ್ ಪರೀಕ್ಷೆ ನಿಜವಾಗಲೂ ವಿದ್ಯಾರ್ಥಿಗಳ ಪ್ರತಿಭೆಯನ್ನು ಅನಾವರಣಗೊಳಿಸುವುದಕ್ಕೆ ರೂಪಿಸಿದ ಪರೀಕ್ಷೆಯೋ ಅಥವಾ ಕಾಲೇಜಿನ ಪ್ರಚಾರಕ್ಕೆಂದು ರೂಪಿಸಿದ ಕಾರ್ಯಕ್ರಮವೋ ಎಂಬುದು ಗೊತ್ತಾಗಲಿಲ್ಲ ಎಂದು ದಾವಣಗೆರೆಯಿಂದ ಬಂದಿದ್ದ ಪಾಲಕರೊಬ್ಬರು ದೂರಿದರು.

ರಾಜ್ಯದ ವಿವಿಧ ಜಿಲ್ಲೆಗಳಿಂದ 3555 ವಿದ್ಯಾರ್ಥಿಗಳು, ಅವರೊಂದಿಗೆ ಪಾಲಕರು ಆಗಮಿಸಿ ಪರೀಕ್ಷೆಗೆ ಹಾಜರಾಗಿದ್ದರು. ಆದರೆ ಕಾಲೇಜಿನಿಂದ ಮುಂಚಿತವಾಗಿ ಪ್ರಕಟಣೆ ಕೊಟ್ಟಂತೆ ನಿಗದಿತ ಶೇ.ವಾರು ಅಂಕ ಪಡೆದುಕೊಳ್ಳುವಲ್ಲಿ ಇಷ್ಟೊಂದು ಭಾರೀ ಸಂಖ್ಯೆಯಲ್ಲಿ ಆಗಮಿಸಿದ್ದ ವಿದ್ಯಾರ್ಥಿಗಳು ವೈಫಲ್ಯತೆ ಅನುಭವಿಸಿದರು.

ಫಲಿತಾಂಶ ಪ್ರಕಟಿಸುವ ಸಮಯದಲ್ಲಿ ಆರಂಭದಲ್ಲಿ ಕಾಲೇಜಿನ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ್, 3555 ವಿದ್ಯಾರ್ಥಿಗಳಲ್ಲಿ ಕೇವಲ ನಾಲ್ವರಿಗೆ ಎರಡು ವರ್ಷದ ಉಚಿತ ಊಟ, ವಸತಿ,ಶಿಕ್ಷಣ ನೀಡುವುದಾಗಿ ಹೇಳಿ ಹುನಗುಂದ ಆರ್.ಎಂ.ಎಸ್.ಎ ಶಾಲೆಯ ಮಲ್ಲಿಕಾರ್ಜುನ ಕತನಿ(ಶೇ.58.33),ಶಹಾಪೂರಿನ ನಿಸರ್ಗ ಪೊಲೀಸಪಾಟೀಲ (ಶೇ.49.58),ಮುಂಡರಗಿ ಆರ್.ಎಂ.ಎಸ್.ಎ ಶಾಲೆಯ ಕಾವ್ಯಾ ಉಪ್ಪಾರ (ಶೇ.46.66), ಆತನೂರು ಆರ್.ಎಂ.ಎಸ್.ಎ ಶಾಲೆಯ ನಾಗೇಶ ಬಡಿಗೇರ(ಶೇ.46.25) ಅವರ ಹೆಸರುಗಳನ್ನು ಘೋಷಿಸಲಾಯಿತು.

ಇದಾದ ಬಳಿಕ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ್ ಮತ್ತೆ ಮಧ್ಯೆಪ್ರವೇಶಿಸಿ, ಫಲಿತಾಂಶ ಪ್ರಕಟಿಸುತ್ತಿದ್ದ ಆಕ್ಸಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯಗುರು ಇಸ್ಮಾಯಿಲ್ ಮನಿಯಾರ ಅವರಿಂದ ಅತೀ ಹೆಚ್ಚು ಅಂಕ ಪಡೆದ ಮೊದಲ 16 ವಿದ್ಯಾರ್ಥಿಗಳ ಹೆಸರುಗಳನ್ನು ಘೋಷಿಸಿದರು.ಅಲ್ಲದೇ ಅವರಿಗೆ ಪ್ರವೇಶ ಶುಲ್ಕದಲ್ಲಿ ರಿಯಾಯಿತಿ ನೀಡುವುದಾಗಿಯೂ ತಿಳಿಸಿದರು.ಆದರೆ ಎಷ್ಟು ರಿಯಾಯಿತಿ ಕೊಡಲಾಗುತ್ತದೆ ಎಂಬುದನ್ನು ಬಹಿರಂಗವಾಗಿ ಹೇಳಲಿಲ್ಲ.ಒಟ್ಟಾರೆ ಟ್ಯಾಲೆಂಟ್ ಸರ್ಚ್ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆಯಲ್ಲಿ ಋಣಾತ್ಮಕ ಅಂಕಗಳನ್ನು ಇಟ್ಟಿದ್ದು ಹಾಗೂ ಪ್ರಶ್ನೆಗಳು ಅತೀ ಕಠಿಣವಾಗಿದ್ದರಿಂದಲೇ ವಿದ್ಯಾರ್ಥಿಗಳು ನಿರೀಕ್ಷಿತ ಅಂಕ ಪಡೆದುಕೊಳ್ಳಲು ಸಾಧ್ಯವಾಗಲಿಲ್ಲ.ಸಂಸ್ಥೆಯವರಿAದ ಇದೊಂದು ಪ್ರಚಾರದ ಗಿಮಿಕ್ ಆಯಿತೇ ? ಎಂಬ ಮಾತುಗಳು ಪರೀಕ್ಷೆಗೆ ದೂರದ ಧಾರವಾಡ, ಬಾಗಲಕೋಟ,ವಿಜಯಪುರ,ಯಾದಗಿರಿ,ಕೊಪ್ಪಳ, ಗದಗ, ಗಂಗಾವತಿ ಭಾಗಗಳಿಂದ ಬಂದಿದ್ದ ಪೋಷಕರಿಂದ ಕೇಳಿ ಬಂದವು.

Latest News

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ ಸಹಕಾರದಿಂದ ಗಣತಿ ನಮೂನೆಗಳ ವಿತರಣೆ ಕಾರ್ಯದಲ್ಲಿ ಮುದ್ದೇಬಿಹಾಳ ಮತಕ್ಷೇತ್ರ ಶೇ.98.38ರಷ್ಟು ಸಾಧನೆ ಮಾಡಿ ವಿಜಯಪುರ ಜಿಲ್ಲೆಗೆ ಎರಡನೇ ಸ್ಥಾನ ಪಡೆದುಕೊಂಡಿದೆ ಎಂದು ಮತದಾರರ ನೋಂದಣಾಧಿಕಾರಿ,ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯ ಕುರಿತು ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.2,28,285 ಮತದಾರರಲ್ಲಿ 2,24,589 ಮತದಾರರಿಗೆ ಗಣತಿ ನಮೂನೆ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ