ಪ್ರಚಾರಕ್ಕೆ ಸೀಮಿತವಾದ ಪ್ರವೇಶ ಪರೀಕ್ಷೆ ?: 3,555 ವಿದ್ಯಾರ್ಥಿಗಳಲ್ಲಿ ನಾಲ್ವರಿಗೆ ಮಾತ್ರ ಉಚಿತ ಶಿಕ್ಷಣದ ಭರವಸೆ..!

ಪ್ರಚಾರಕ್ಕೆ ಸೀಮಿತವಾದ ಪ್ರವೇಶ ಪರೀಕ್ಷೆ ?: 3,555 ವಿದ್ಯಾರ್ಥಿಗಳಲ್ಲಿ ನಾಲ್ವರಿಗೆ ಮಾತ್ರ ಉಚಿತ ಶಿಕ್ಷಣದ ಭರವಸೆ..!

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ) : ತಮ್ಮ ಮಕ್ಕಳು ಡಾಕ್ಟರ್ ಆಗಬೇಕು, ಎಂಜೀನಿಯರ್ ಆಗಬೇಕು ಎಂಬ ಆಸೆ ಇಟ್ಟುಕೊಂಡು ಮಕ್ಕಳ ಪ್ರತಿಭೆ ಅನಾವರಣಗೊಳ್ಳುತ್ತದೆ, ಉತ್ತಮ ಭವಿಷ್ಯ ರೂಪಿಸಲು ಹಲವಾರು ಕನಸುಗಳನ್ನು ಕಟ್ಟಿಕೊಂಡು ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿಗೆ ಭಾನುವಾರ ಆಗಮಿಸಿದ್ದ ಮೂರು ಸಾವಿರಕ್ಕೂ ಅಧಿಕ ಸಂಖ್ಯೆಯ ಪಾಲಕರಿಗೆ ಭಾನುವಾರ ನಿರಾಸೆ ಅನುಭವಿಸಬೇಕಾಯಿತು.

ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಟ್ಯಾಲೆಂಟ್ ಸರ್ಚ್ ಪರೀಕ್ಷೆ ನಿಜವಾಗಲೂ ವಿದ್ಯಾರ್ಥಿಗಳ ಪ್ರತಿಭೆಯನ್ನು ಅನಾವರಣಗೊಳಿಸುವುದಕ್ಕೆ ರೂಪಿಸಿದ ಪರೀಕ್ಷೆಯೋ ಅಥವಾ ಕಾಲೇಜಿನ ಪ್ರಚಾರಕ್ಕೆಂದು ರೂಪಿಸಿದ ಕಾರ್ಯಕ್ರಮವೋ ಎಂಬುದು ಗೊತ್ತಾಗಲಿಲ್ಲ ಎಂದು ದಾವಣಗೆರೆಯಿಂದ ಬಂದಿದ್ದ ಪಾಲಕರೊಬ್ಬರು ದೂರಿದರು.

ರಾಜ್ಯದ ವಿವಿಧ ಜಿಲ್ಲೆಗಳಿಂದ 3555 ವಿದ್ಯಾರ್ಥಿಗಳು, ಅವರೊಂದಿಗೆ ಪಾಲಕರು ಆಗಮಿಸಿ ಪರೀಕ್ಷೆಗೆ ಹಾಜರಾಗಿದ್ದರು. ಆದರೆ ಕಾಲೇಜಿನಿಂದ ಮುಂಚಿತವಾಗಿ ಪ್ರಕಟಣೆ ಕೊಟ್ಟಂತೆ ನಿಗದಿತ ಶೇ.ವಾರು ಅಂಕ ಪಡೆದುಕೊಳ್ಳುವಲ್ಲಿ ಇಷ್ಟೊಂದು ಭಾರೀ ಸಂಖ್ಯೆಯಲ್ಲಿ ಆಗಮಿಸಿದ್ದ ವಿದ್ಯಾರ್ಥಿಗಳು ವೈಫಲ್ಯತೆ ಅನುಭವಿಸಿದರು.

ಫಲಿತಾಂಶ ಪ್ರಕಟಿಸುವ ಸಮಯದಲ್ಲಿ ಆರಂಭದಲ್ಲಿ ಕಾಲೇಜಿನ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ್, 3555 ವಿದ್ಯಾರ್ಥಿಗಳಲ್ಲಿ ಕೇವಲ ನಾಲ್ವರಿಗೆ ಎರಡು ವರ್ಷದ ಉಚಿತ ಊಟ, ವಸತಿ,ಶಿಕ್ಷಣ ನೀಡುವುದಾಗಿ ಹೇಳಿ ಹುನಗುಂದ ಆರ್.ಎಂ.ಎಸ್.ಎ ಶಾಲೆಯ ಮಲ್ಲಿಕಾರ್ಜುನ ಕತನಿ(ಶೇ.58.33),ಶಹಾಪೂರಿನ ನಿಸರ್ಗ ಪೊಲೀಸಪಾಟೀಲ (ಶೇ.49.58),ಮುಂಡರಗಿ ಆರ್.ಎಂ.ಎಸ್.ಎ ಶಾಲೆಯ ಕಾವ್ಯಾ ಉಪ್ಪಾರ (ಶೇ.46.66), ಆತನೂರು ಆರ್.ಎಂ.ಎಸ್.ಎ ಶಾಲೆಯ ನಾಗೇಶ ಬಡಿಗೇರ(ಶೇ.46.25) ಅವರ ಹೆಸರುಗಳನ್ನು ಘೋಷಿಸಲಾಯಿತು.

ಇದಾದ ಬಳಿಕ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ್ ಮತ್ತೆ ಮಧ್ಯೆಪ್ರವೇಶಿಸಿ, ಫಲಿತಾಂಶ ಪ್ರಕಟಿಸುತ್ತಿದ್ದ ಆಕ್ಸಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯಗುರು ಇಸ್ಮಾಯಿಲ್ ಮನಿಯಾರ ಅವರಿಂದ ಅತೀ ಹೆಚ್ಚು ಅಂಕ ಪಡೆದ ಮೊದಲ 16 ವಿದ್ಯಾರ್ಥಿಗಳ ಹೆಸರುಗಳನ್ನು ಘೋಷಿಸಿದರು.ಅಲ್ಲದೇ ಅವರಿಗೆ ಪ್ರವೇಶ ಶುಲ್ಕದಲ್ಲಿ ರಿಯಾಯಿತಿ ನೀಡುವುದಾಗಿಯೂ ತಿಳಿಸಿದರು.ಆದರೆ ಎಷ್ಟು ರಿಯಾಯಿತಿ ಕೊಡಲಾಗುತ್ತದೆ ಎಂಬುದನ್ನು ಬಹಿರಂಗವಾಗಿ ಹೇಳಲಿಲ್ಲ.ಒಟ್ಟಾರೆ ಟ್ಯಾಲೆಂಟ್ ಸರ್ಚ್ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆಯಲ್ಲಿ ಋಣಾತ್ಮಕ ಅಂಕಗಳನ್ನು ಇಟ್ಟಿದ್ದು ಹಾಗೂ ಪ್ರಶ್ನೆಗಳು ಅತೀ ಕಠಿಣವಾಗಿದ್ದರಿಂದಲೇ ವಿದ್ಯಾರ್ಥಿಗಳು ನಿರೀಕ್ಷಿತ ಅಂಕ ಪಡೆದುಕೊಳ್ಳಲು ಸಾಧ್ಯವಾಗಲಿಲ್ಲ.ಸಂಸ್ಥೆಯವರಿAದ ಇದೊಂದು ಪ್ರಚಾರದ ಗಿಮಿಕ್ ಆಯಿತೇ ? ಎಂಬ ಮಾತುಗಳು ಪರೀಕ್ಷೆಗೆ ದೂರದ ಧಾರವಾಡ, ಬಾಗಲಕೋಟ,ವಿಜಯಪುರ,ಯಾದಗಿರಿ,ಕೊಪ್ಪಳ, ಗದಗ, ಗಂಗಾವತಿ ಭಾಗಗಳಿಂದ ಬಂದಿದ್ದ ಪೋಷಕರಿಂದ ಕೇಳಿ ಬಂದವು.

Latest News

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರಿಗೆ ಸಂಪುಟ ವಿಸ್ತರಣೆಯಲ್ಲಿ ಅವಕಾಶ

ಸಿದ್ಧರಾಮಯ್ಯ ಸರಕಾರದಲ್ಲಿ ನಾಡಗೌಡರು ಮಂತ್ರಿಯಾಗಬೇಕಿತ್ತು-ಸಿಎo ಡಿಕೆಶಿ

ಸಿದ್ಧರಾಮಯ್ಯ ಸರಕಾರದಲ್ಲಿ ನಾಡಗೌಡರು ಮಂತ್ರಿಯಾಗಬೇಕಿತ್ತು-ಸಿಎo ಡಿಕೆಶಿ

ಮುದ್ದೇಬಿಹಾಳ : ಸಿದ್ಧರಾಮಯ್ಯನವರ ಸರ್ಕಾರದಲ್ಲಿಯೇ ಈ ಹಿಂದೆ ನಿಮ್ಮ ಶಾಸಕ ಸಿ.ಎಸ್.ನಾಡಗೌಡರ ಹೆಸರು ಮಂತ್ರಿ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ,ನಾಲತವಾಡ ಸರಕಾರಿ ಆಸ್ಪತ್ರೆಗಳ ಆಡಳಿತ ವೈದ್ಯರ ವರ್ಗಾವಣೆ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡರ ಶಿಫಾರಸ್ಸಿನ ಮೇರೆಗೆ ಮುದ್ದೇಬಿಹಾಳ ಹಾಗೂ ನಾಲತವಾಡ ಸಾರ್ವಜನಿಕ ಆಸ್ಪತ್ರೆಗಳ

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಜೂ.19 ರಂದು ಸ್ವಯಂಪ್ರೇರಿತವಾಗಿ ಮುದ್ದೇಬಿಹಾಳ ಬಂದ್ ಮಾಡುವ ಮೂಲಕ ಕಾಂಗ್ರೆಸ್ ಹೈಕಮಾಂಡ್ ಮೇಲೆ ಪಕ್ಷಾತೀತವಾಗಿ ವ್ಯಾಪಾರಸ್ಥರು ಒತ್ತಡ ತರಲು ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ ಹೇಳಿದರು. ಪ್ರವಾಸಿ ಮಂದಿರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ಈಗಾಗಲೇ ಎಲ್ಲ ವ್ಯಾಪಾರಸ್ಥರು, ಗಣ್ಯ ಉದ್ಯಮಿದಾರರು, ಸಂಘ ಸಂಸ್ಥೆಯವರು ಸಂಪರ್ಕಿಸಿ ಮುದ್ದೇಬಿಹಾಳ ಸಂಪೂರ್ಣ ಬಂದ್

ಮುದ್ದೇಬಿಹಾಳ : ಬಲವಂತದ ಬಂದ್ ಕರೆ ಅಗತ್ಯವಿಲ್ಲ-ಪಂಪಣ್ಣವರ

ಮುದ್ದೇಬಿಹಾಳ : ಬಲವಂತದ ಬಂದ್ ಕರೆ ಅಗತ್ಯವಿಲ್ಲ-ಪಂಪಣ್ಣವರ

ಮುದ್ದೇಬಿಹಾಳ ; ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಅವರ ಸರ್ಕಾರದಲ್ಲಿ ಸಚಿವ ಸ್ಥಾನ ದೊರಕಲಿ.ಅವರ ಕಾರ್ಯಕರ್ತರು ತಮ್ಮ ಪಕ್ಷದ ಹೈಕಮಾಂಡ್ ಮೇಲೆ ಮನವಿ,ಆಗ್ರಹ ಮಾಡಲಿ.ಅದು ಬಿಟ್ಟು ಬಲವಂತದಿoದ ಮುದ್ದೇಬಿಹಾಳ ಬಂದ್ ಮಾಡುವುದರಿಂದ ಜನಸಾಮಾನ್ಯರ ಬದುಕಿನ ಮೇಲೆ ತೊಂದರೆಯುoಟಾಗುತ್ತದೆ ಎಂದು ವರ್ತಕ ಹಾಗೂ ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ಹೇಳಿದರು. ಪತ್ರಿಕೆಯೊಂದಿಗೆ ಮಾತನಾಡಿದ ಅವರು, ನಾಡಗೌಡರಿಗೆ ಸಚಿವ ಸ್ಥಾನ ಸಿಕ್ಕರೆ ಮುದ್ದೇಬಿಹಾಳದ ಅಭಿವೃದ್ಧಿಗೆ ವೇಗ ಸಿಗಬಹುದು ಎಂಬ ನಿರೀಕ್ಷೆ ನಮ್ಮದೂ