ಪ್ರಚಾರಕ್ಕೆ ಸೀಮಿತವಾದ ಪ್ರವೇಶ ಪರೀಕ್ಷೆ ?: 3,555 ವಿದ್ಯಾರ್ಥಿಗಳಲ್ಲಿ ನಾಲ್ವರಿಗೆ ಮಾತ್ರ ಉಚಿತ ಶಿಕ್ಷಣದ ಭರವಸೆ..!

ಪ್ರಚಾರಕ್ಕೆ ಸೀಮಿತವಾದ ಪ್ರವೇಶ ಪರೀಕ್ಷೆ ?: 3,555 ವಿದ್ಯಾರ್ಥಿಗಳಲ್ಲಿ ನಾಲ್ವರಿಗೆ ಮಾತ್ರ ಉಚಿತ ಶಿಕ್ಷಣದ ಭರವಸೆ..!

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ) : ತಮ್ಮ ಮಕ್ಕಳು ಡಾಕ್ಟರ್ ಆಗಬೇಕು, ಎಂಜೀನಿಯರ್ ಆಗಬೇಕು ಎಂಬ ಆಸೆ ಇಟ್ಟುಕೊಂಡು ಮಕ್ಕಳ ಪ್ರತಿಭೆ ಅನಾವರಣಗೊಳ್ಳುತ್ತದೆ, ಉತ್ತಮ ಭವಿಷ್ಯ ರೂಪಿಸಲು ಹಲವಾರು ಕನಸುಗಳನ್ನು ಕಟ್ಟಿಕೊಂಡು ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿಗೆ ಭಾನುವಾರ ಆಗಮಿಸಿದ್ದ ಮೂರು ಸಾವಿರಕ್ಕೂ ಅಧಿಕ ಸಂಖ್ಯೆಯ ಪಾಲಕರಿಗೆ ಭಾನುವಾರ ನಿರಾಸೆ ಅನುಭವಿಸಬೇಕಾಯಿತು.

ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಟ್ಯಾಲೆಂಟ್ ಸರ್ಚ್ ಪರೀಕ್ಷೆ ನಿಜವಾಗಲೂ ವಿದ್ಯಾರ್ಥಿಗಳ ಪ್ರತಿಭೆಯನ್ನು ಅನಾವರಣಗೊಳಿಸುವುದಕ್ಕೆ ರೂಪಿಸಿದ ಪರೀಕ್ಷೆಯೋ ಅಥವಾ ಕಾಲೇಜಿನ ಪ್ರಚಾರಕ್ಕೆಂದು ರೂಪಿಸಿದ ಕಾರ್ಯಕ್ರಮವೋ ಎಂಬುದು ಗೊತ್ತಾಗಲಿಲ್ಲ ಎಂದು ದಾವಣಗೆರೆಯಿಂದ ಬಂದಿದ್ದ ಪಾಲಕರೊಬ್ಬರು ದೂರಿದರು.

ರಾಜ್ಯದ ವಿವಿಧ ಜಿಲ್ಲೆಗಳಿಂದ 3555 ವಿದ್ಯಾರ್ಥಿಗಳು, ಅವರೊಂದಿಗೆ ಪಾಲಕರು ಆಗಮಿಸಿ ಪರೀಕ್ಷೆಗೆ ಹಾಜರಾಗಿದ್ದರು. ಆದರೆ ಕಾಲೇಜಿನಿಂದ ಮುಂಚಿತವಾಗಿ ಪ್ರಕಟಣೆ ಕೊಟ್ಟಂತೆ ನಿಗದಿತ ಶೇ.ವಾರು ಅಂಕ ಪಡೆದುಕೊಳ್ಳುವಲ್ಲಿ ಇಷ್ಟೊಂದು ಭಾರೀ ಸಂಖ್ಯೆಯಲ್ಲಿ ಆಗಮಿಸಿದ್ದ ವಿದ್ಯಾರ್ಥಿಗಳು ವೈಫಲ್ಯತೆ ಅನುಭವಿಸಿದರು.

ಫಲಿತಾಂಶ ಪ್ರಕಟಿಸುವ ಸಮಯದಲ್ಲಿ ಆರಂಭದಲ್ಲಿ ಕಾಲೇಜಿನ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ್, 3555 ವಿದ್ಯಾರ್ಥಿಗಳಲ್ಲಿ ಕೇವಲ ನಾಲ್ವರಿಗೆ ಎರಡು ವರ್ಷದ ಉಚಿತ ಊಟ, ವಸತಿ,ಶಿಕ್ಷಣ ನೀಡುವುದಾಗಿ ಹೇಳಿ ಹುನಗುಂದ ಆರ್.ಎಂ.ಎಸ್.ಎ ಶಾಲೆಯ ಮಲ್ಲಿಕಾರ್ಜುನ ಕತನಿ(ಶೇ.58.33),ಶಹಾಪೂರಿನ ನಿಸರ್ಗ ಪೊಲೀಸಪಾಟೀಲ (ಶೇ.49.58),ಮುಂಡರಗಿ ಆರ್.ಎಂ.ಎಸ್.ಎ ಶಾಲೆಯ ಕಾವ್ಯಾ ಉಪ್ಪಾರ (ಶೇ.46.66), ಆತನೂರು ಆರ್.ಎಂ.ಎಸ್.ಎ ಶಾಲೆಯ ನಾಗೇಶ ಬಡಿಗೇರ(ಶೇ.46.25) ಅವರ ಹೆಸರುಗಳನ್ನು ಘೋಷಿಸಲಾಯಿತು.

ಇದಾದ ಬಳಿಕ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ್ ಮತ್ತೆ ಮಧ್ಯೆಪ್ರವೇಶಿಸಿ, ಫಲಿತಾಂಶ ಪ್ರಕಟಿಸುತ್ತಿದ್ದ ಆಕ್ಸಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯಗುರು ಇಸ್ಮಾಯಿಲ್ ಮನಿಯಾರ ಅವರಿಂದ ಅತೀ ಹೆಚ್ಚು ಅಂಕ ಪಡೆದ ಮೊದಲ 16 ವಿದ್ಯಾರ್ಥಿಗಳ ಹೆಸರುಗಳನ್ನು ಘೋಷಿಸಿದರು.ಅಲ್ಲದೇ ಅವರಿಗೆ ಪ್ರವೇಶ ಶುಲ್ಕದಲ್ಲಿ ರಿಯಾಯಿತಿ ನೀಡುವುದಾಗಿಯೂ ತಿಳಿಸಿದರು.ಆದರೆ ಎಷ್ಟು ರಿಯಾಯಿತಿ ಕೊಡಲಾಗುತ್ತದೆ ಎಂಬುದನ್ನು ಬಹಿರಂಗವಾಗಿ ಹೇಳಲಿಲ್ಲ.ಒಟ್ಟಾರೆ ಟ್ಯಾಲೆಂಟ್ ಸರ್ಚ್ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆಯಲ್ಲಿ ಋಣಾತ್ಮಕ ಅಂಕಗಳನ್ನು ಇಟ್ಟಿದ್ದು ಹಾಗೂ ಪ್ರಶ್ನೆಗಳು ಅತೀ ಕಠಿಣವಾಗಿದ್ದರಿಂದಲೇ ವಿದ್ಯಾರ್ಥಿಗಳು ನಿರೀಕ್ಷಿತ ಅಂಕ ಪಡೆದುಕೊಳ್ಳಲು ಸಾಧ್ಯವಾಗಲಿಲ್ಲ.ಸಂಸ್ಥೆಯವರಿAದ ಇದೊಂದು ಪ್ರಚಾರದ ಗಿಮಿಕ್ ಆಯಿತೇ ? ಎಂಬ ಮಾತುಗಳು ಪರೀಕ್ಷೆಗೆ ದೂರದ ಧಾರವಾಡ, ಬಾಗಲಕೋಟ,ವಿಜಯಪುರ,ಯಾದಗಿರಿ,ಕೊಪ್ಪಳ, ಗದಗ, ಗಂಗಾವತಿ ಭಾಗಗಳಿಂದ ಬಂದಿದ್ದ ಪೋಷಕರಿಂದ ಕೇಳಿ ಬಂದವು.

Latest News

ಅಸ್ಕಿ ಫೌಂಡೇಶನ್ ಜನಸೇವೆ ಶ್ಲಾಘನೀಯ:              ಪವನಸುತನ ನಾಡಲ್ಲಿ ಅಸ್ಕಿ ಫೌಂಡೇಶನ್ ದಿನದರ್ಶಿಕೆ ಬಿಡುಗಡೆ

ಅಸ್ಕಿ ಫೌಂಡೇಶನ್ ಜನಸೇವೆ ಶ್ಲಾಘನೀಯ: ಪವನಸುತನ ನಾಡಲ್ಲಿ ಅಸ್ಕಿ ಫೌಂಡೇಶನ್ ದಿನದರ್ಶಿಕೆ ಬಿಡುಗಡೆ

ಆಲಮಟ್ಟಿ : ಇಲ್ಲಿಗೆ ಸಮೀಪದ ಯಲಗೂರು ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಾಂಗ್ರೆಸ್ ಮುಖಂಡ,

ಮುದ್ದೇಬಿಹಾಳ ಸಾರಿಗೆ ಘಟಕಕ್ಕೆ ಕೆಕೆಆರ್‌ಟಿಸಿ ಎಂ.ಡಿ ಭೇಟಿ: 40 ಲಕ್ಷ ರೂ.ವೆಚ್ಚದಲ್ಲಿ ನಿಲ್ದಾಣದ ಕಾಂಕ್ರಿಟ್,ಶೌಚಗೃಹ ನಿರ್ಮಾಣ

ಮುದ್ದೇಬಿಹಾಳ ಸಾರಿಗೆ ಘಟಕಕ್ಕೆ ಕೆಕೆಆರ್‌ಟಿಸಿ ಎಂ.ಡಿ ಭೇಟಿ: 40 ಲಕ್ಷ ರೂ.ವೆಚ್ಚದಲ್ಲಿ ನಿಲ್ದಾಣದ ಕಾಂಕ್ರಿಟ್,ಶೌಚಗೃಹ ನಿರ್ಮಾಣ

ಮುದ್ದೇಬಿಹಾಳ : ಪಟ್ಟಣದ ಸಾರಿಗೆ ಘಟಕದಲ್ಲಿ ಶೌಚಾಲಯ ನಿರ್ಮಾಣ ಹಾಗೂ ನಿಲ್ದಾಣದ ಆವರಣದಲ್ಲಿ ಕಾಂಕ್ರಿಟ್

ಮುಳುಗಡೆ ಸಂತ್ರಸ್ತ ರೈತರಿಗೆ ಎಕರೆಗೆ 35-40 ಲಕ್ಷ ಪರಿಹಾರ:                                                                           ಕೃಷ್ಣಾ ಮೇಲ್ದಂಡೆ ಯೋಜನೆಗೆ ಕೇಂದ್ರದ ಅಸಹಕಾರ : ಡಿಸಿಎಂ ಡಿ.ಕೆ.ಶಿ ಅಸಮಾಧಾನ

ಮುಳುಗಡೆ ಸಂತ್ರಸ್ತ ರೈತರಿಗೆ ಎಕರೆಗೆ 35-40 ಲಕ್ಷ ಪರಿಹಾರ: ಕೃಷ್ಣಾ ಮೇಲ್ದಂಡೆ ಯೋಜನೆಗೆ ಕೇಂದ್ರದ ಅಸಹಕಾರ : ಡಿಸಿಎಂ ಡಿ.ಕೆ.ಶಿ ಅಸಮಾಧಾನ

ವಿಜಯಪುರ : “ಕೃಷ್ಣಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಸಹಕಾರ ನೀಡುತ್ತಿಲ್ಲ. ಈ ಯೋಜನೆಗೆ

ನಾನು ಸಿದ್ಧರಾಮಯ್ಯ ಏಜೆಂಟ್ ಅಲ್ಲ-ಯತ್ನಾಳ ಖಡಕ್ ಮಾತು

ನಾನು ಸಿದ್ಧರಾಮಯ್ಯ ಏಜೆಂಟ್ ಅಲ್ಲ-ಯತ್ನಾಳ ಖಡಕ್ ಮಾತು

ವಿಜಯಪುರ : ನಾನು ಯೋಗ್ಯರಿಗೆ ಅಭಿನಂದನೆ ಸಲ್ಲಿಸುತ್ತೇನೆ.ಹಾಗೆಂದು ನಾನು ಸಿದ್ಧರಾಮಯ್ಯ ಏಜೆಂಟ್ ಅಲ್ಲ,ಹಿಂದೆ ಸಿದ್ಧರಾಮಯ್ಯ

ಮಹಿಳೆಯರು ಹಿಂದೂ ಸಮ್ಮೇಳನ ಯಶಸ್ವಿಗೊಳಿಸಿ-ಕಾಶೀಬಾಯಿ ರಾಂಪೂರ

ಮಹಿಳೆಯರು ಹಿಂದೂ ಸಮ್ಮೇಳನ ಯಶಸ್ವಿಗೊಳಿಸಿ-ಕಾಶೀಬಾಯಿ ರಾಂಪೂರ

ಮುದ್ದೇಬಿಹಾಳ : ಪಟ್ಟಣದಲ್ಲಿ ಜ.11 ರಂದು ನಡೆಯಲಿರುವ ಹಿಂದೂ ಮಹಾ ಸಮ್ಮೇಳನ ಯಶಸ್ವಿಗೊಳಿಸುವಂತೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಕಿತ್ತೂರ ಕರ್ನಾಟಕ ಮಹಿಳಾ ಘಟಕದ ಅಧ್ಯಕ್ಷೆ ಕಾಶೀಬಾಯಿ ರಾಂಪೂರ ವಿನಂತಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಮ್ಮೇಳನದಲ್ಲಿ ಎಲ್ಲ ಜಾತಿ ಜನಾಂಗದವರು ಪಾಲ್ಗೊಳ್ಳಲಿದ್ದು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕೋರಿದ್ದಾರೆ.ಹಿಂದೂ ಸಮ್ಮೇಳನದ ಅಂಗವಾಗಿ ವಿವಿಧ ಕಡೆಗಳಲ್ಲಿ ಸ್ವತಃ ತಿರುಗಾಡಿ ಸಮ್ಮೇಳನದ ಕರಪತ್ರಗಳನ್ನು ವಿತರಿಸಿ ಸಮ್ಮೇಳನಕ್ಕೆ ಆಹ್ವಾನಿಸಿದ್ದಾರೆ.

ಜನಪರ ಸೇವೆಯಲ್ಲಿ ಅಸ್ಕಿ ಫೌಂಡೇಶನ್ ಸದಾ ಮುಂದೆ-ಸಿದ್ಧಲಿಂಗ ದೇವರು

ಜನಪರ ಸೇವೆಯಲ್ಲಿ ಅಸ್ಕಿ ಫೌಂಡೇಶನ್ ಸದಾ ಮುಂದೆ-ಸಿದ್ಧಲಿಂಗ ದೇವರು

ತಾಳಿಕೋಟಿ :  ಕೊಡುಗೈ ದಾನಿಗಳಲ್ಲಿ ಈ ಭಾಗದಲ್ಲಿ ಒಳ್ಳೆಯ ಹೆಸರು ಸಂಪಾದಿಸಿರುವ ಸಿ.ಬಿ.ಅಸ್ಕಿ ಅವರ ನೇತೃತ್ವದಲ್ಲಿ ಅಸ್ಕಿ ಫೌಂಡೇಶನ್ ಅತ್ಯುತ್ತಮ ಕೆಲಸ ಮಾಡುತ್ತಿದೆ ಎಂದು ತಾಳಿಕೋಟಿ ಖಾಸ್ಗತೇಶ್ವರ ಮಠದ ಪೀಠಾಧಿಕಾರಿ ಸಿದ್ಧಲಿಂಗ ದೇವರು ನುಡಿದರು.        ತಾಳಿಕೋಟಿ ಪಟ್ಟಣದ ಖಾಸ್ಗತೇಶ್ವರ ಮಠದಲ್ಲಿ ಗುರುವಾರ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ನೂತನ ವರ್ಷದ ದಿನದರ್ಶಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.         ಮಠದ ಆಡಳಿತಾಧಿಕಾರಿ ವೇ.ಮರುಗೇಶ ವಿರಕ್ತಮಠ ಮಾತನಾಡಿ, ಹಣವುಳ್ಳವರು ಸಮಾಜದಲ್ಲಿ