ಪ್ರಚಾರಕ್ಕೆ ಸೀಮಿತವಾದ ಪ್ರವೇಶ ಪರೀಕ್ಷೆ ?: 3,555 ವಿದ್ಯಾರ್ಥಿಗಳಲ್ಲಿ ನಾಲ್ವರಿಗೆ ಮಾತ್ರ ಉಚಿತ ಶಿಕ್ಷಣದ ಭರವಸೆ..!

ಪ್ರಚಾರಕ್ಕೆ ಸೀಮಿತವಾದ ಪ್ರವೇಶ ಪರೀಕ್ಷೆ ?: 3,555 ವಿದ್ಯಾರ್ಥಿಗಳಲ್ಲಿ ನಾಲ್ವರಿಗೆ ಮಾತ್ರ ಉಚಿತ ಶಿಕ್ಷಣದ ಭರವಸೆ..!

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ) : ತಮ್ಮ ಮಕ್ಕಳು ಡಾಕ್ಟರ್ ಆಗಬೇಕು, ಎಂಜೀನಿಯರ್ ಆಗಬೇಕು ಎಂಬ ಆಸೆ ಇಟ್ಟುಕೊಂಡು ಮಕ್ಕಳ ಪ್ರತಿಭೆ ಅನಾವರಣಗೊಳ್ಳುತ್ತದೆ, ಉತ್ತಮ ಭವಿಷ್ಯ ರೂಪಿಸಲು ಹಲವಾರು ಕನಸುಗಳನ್ನು ಕಟ್ಟಿಕೊಂಡು ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿಗೆ ಭಾನುವಾರ ಆಗಮಿಸಿದ್ದ ಮೂರು ಸಾವಿರಕ್ಕೂ ಅಧಿಕ ಸಂಖ್ಯೆಯ ಪಾಲಕರಿಗೆ ಭಾನುವಾರ ನಿರಾಸೆ ಅನುಭವಿಸಬೇಕಾಯಿತು.

ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಟ್ಯಾಲೆಂಟ್ ಸರ್ಚ್ ಪರೀಕ್ಷೆ ನಿಜವಾಗಲೂ ವಿದ್ಯಾರ್ಥಿಗಳ ಪ್ರತಿಭೆಯನ್ನು ಅನಾವರಣಗೊಳಿಸುವುದಕ್ಕೆ ರೂಪಿಸಿದ ಪರೀಕ್ಷೆಯೋ ಅಥವಾ ಕಾಲೇಜಿನ ಪ್ರಚಾರಕ್ಕೆಂದು ರೂಪಿಸಿದ ಕಾರ್ಯಕ್ರಮವೋ ಎಂಬುದು ಗೊತ್ತಾಗಲಿಲ್ಲ ಎಂದು ದಾವಣಗೆರೆಯಿಂದ ಬಂದಿದ್ದ ಪಾಲಕರೊಬ್ಬರು ದೂರಿದರು.

ರಾಜ್ಯದ ವಿವಿಧ ಜಿಲ್ಲೆಗಳಿಂದ 3555 ವಿದ್ಯಾರ್ಥಿಗಳು, ಅವರೊಂದಿಗೆ ಪಾಲಕರು ಆಗಮಿಸಿ ಪರೀಕ್ಷೆಗೆ ಹಾಜರಾಗಿದ್ದರು. ಆದರೆ ಕಾಲೇಜಿನಿಂದ ಮುಂಚಿತವಾಗಿ ಪ್ರಕಟಣೆ ಕೊಟ್ಟಂತೆ ನಿಗದಿತ ಶೇ.ವಾರು ಅಂಕ ಪಡೆದುಕೊಳ್ಳುವಲ್ಲಿ ಇಷ್ಟೊಂದು ಭಾರೀ ಸಂಖ್ಯೆಯಲ್ಲಿ ಆಗಮಿಸಿದ್ದ ವಿದ್ಯಾರ್ಥಿಗಳು ವೈಫಲ್ಯತೆ ಅನುಭವಿಸಿದರು.

ಫಲಿತಾಂಶ ಪ್ರಕಟಿಸುವ ಸಮಯದಲ್ಲಿ ಆರಂಭದಲ್ಲಿ ಕಾಲೇಜಿನ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ್, 3555 ವಿದ್ಯಾರ್ಥಿಗಳಲ್ಲಿ ಕೇವಲ ನಾಲ್ವರಿಗೆ ಎರಡು ವರ್ಷದ ಉಚಿತ ಊಟ, ವಸತಿ,ಶಿಕ್ಷಣ ನೀಡುವುದಾಗಿ ಹೇಳಿ ಹುನಗುಂದ ಆರ್.ಎಂ.ಎಸ್.ಎ ಶಾಲೆಯ ಮಲ್ಲಿಕಾರ್ಜುನ ಕತನಿ(ಶೇ.58.33),ಶಹಾಪೂರಿನ ನಿಸರ್ಗ ಪೊಲೀಸಪಾಟೀಲ (ಶೇ.49.58),ಮುಂಡರಗಿ ಆರ್.ಎಂ.ಎಸ್.ಎ ಶಾಲೆಯ ಕಾವ್ಯಾ ಉಪ್ಪಾರ (ಶೇ.46.66), ಆತನೂರು ಆರ್.ಎಂ.ಎಸ್.ಎ ಶಾಲೆಯ ನಾಗೇಶ ಬಡಿಗೇರ(ಶೇ.46.25) ಅವರ ಹೆಸರುಗಳನ್ನು ಘೋಷಿಸಲಾಯಿತು.

ಇದಾದ ಬಳಿಕ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ್ ಮತ್ತೆ ಮಧ್ಯೆಪ್ರವೇಶಿಸಿ, ಫಲಿತಾಂಶ ಪ್ರಕಟಿಸುತ್ತಿದ್ದ ಆಕ್ಸಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯಗುರು ಇಸ್ಮಾಯಿಲ್ ಮನಿಯಾರ ಅವರಿಂದ ಅತೀ ಹೆಚ್ಚು ಅಂಕ ಪಡೆದ ಮೊದಲ 16 ವಿದ್ಯಾರ್ಥಿಗಳ ಹೆಸರುಗಳನ್ನು ಘೋಷಿಸಿದರು.ಅಲ್ಲದೇ ಅವರಿಗೆ ಪ್ರವೇಶ ಶುಲ್ಕದಲ್ಲಿ ರಿಯಾಯಿತಿ ನೀಡುವುದಾಗಿಯೂ ತಿಳಿಸಿದರು.ಆದರೆ ಎಷ್ಟು ರಿಯಾಯಿತಿ ಕೊಡಲಾಗುತ್ತದೆ ಎಂಬುದನ್ನು ಬಹಿರಂಗವಾಗಿ ಹೇಳಲಿಲ್ಲ.ಒಟ್ಟಾರೆ ಟ್ಯಾಲೆಂಟ್ ಸರ್ಚ್ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆಯಲ್ಲಿ ಋಣಾತ್ಮಕ ಅಂಕಗಳನ್ನು ಇಟ್ಟಿದ್ದು ಹಾಗೂ ಪ್ರಶ್ನೆಗಳು ಅತೀ ಕಠಿಣವಾಗಿದ್ದರಿಂದಲೇ ವಿದ್ಯಾರ್ಥಿಗಳು ನಿರೀಕ್ಷಿತ ಅಂಕ ಪಡೆದುಕೊಳ್ಳಲು ಸಾಧ್ಯವಾಗಲಿಲ್ಲ.ಸಂಸ್ಥೆಯವರಿAದ ಇದೊಂದು ಪ್ರಚಾರದ ಗಿಮಿಕ್ ಆಯಿತೇ ? ಎಂಬ ಮಾತುಗಳು ಪರೀಕ್ಷೆಗೆ ದೂರದ ಧಾರವಾಡ, ಬಾಗಲಕೋಟ,ವಿಜಯಪುರ,ಯಾದಗಿರಿ,ಕೊಪ್ಪಳ, ಗದಗ, ಗಂಗಾವತಿ ಭಾಗಗಳಿಂದ ಬಂದಿದ್ದ ಪೋಷಕರಿಂದ ಕೇಳಿ ಬಂದವು.

Latest News

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

BREAKING : ಕ್ರಿಸ್ ಮಸ್ ದಿನವೇ ರಾಜ್ಯದಲ್ಲಿ ಘೋರ ದುರಂತ : ಭೀಕರ ಅಪಘಾತದಲ್ಲಿ 17 ಕ್ಕೂ ಹೆಚ್ಚು ಮಂದಿ ದುರ್ಮರಣ

ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 17 ಕ್ಕೂ ಹೆಚ್ಚು

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ತಾಳಿಕೋಟಿ : ತಾಲ್ಲೂಕಿನ ಮೈಲೇಶ್ವರ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಶಾಲೆಯಲ್ಲಿ ಎರಡು ದಿನಗಳ ಕಲಾ ವೈಭವ-2026ರ ಮೊದಲ ದಿನದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದ ಪ್ರದರ್ಶನ ನೆರೆದವರ ಮೆಚ್ಚುಗೆಗೆ ಪಾತ್ರವಾಯಿತು. ಕಾರ್ಯಕ್ರಮದಲ್ಲಿ ಬ್ರಿಲಿಯಂಟ್ ಶಾಲೆಯ 2026 ನೇ ಸಾಲಿನ ಕಲಾ ವೈಭವಕ್ಕೆಂದು ಸಿದ್ಧಪಡಿಸಿದ್ದ ಭವ್ಯ ವೇದಿಕೆ ಸಾರ್ವಜನಿಕರ,ಪಾಲಕರು,ವಿದ್ಯಾರ್ಥಿಗಳು ,ಅಧಿಕಾರಿಗಳ ಗಮನ ಸೆಳೆಯುವಂತಿತ್ತು.ಸಾಮಾನ್ಯವಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಧಾನ ವೇದಿಕೆ,ಮುಖ್ಯಮಂತ್ರಿಗಳು ಪಾಲ್ಗೊಳ್ಳುವ ಸರಕಾರಿ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ:                  ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ಮೈಲೇಶ್ವರದ ಬ್ರಿಲಿಯಂಟ್ ನಲ್ಲಿ ಕಲಾ ವೈಭವ: ಮಕ್ಕಳಲ್ಲಿ ಸಂಸ್ಕಾರ ವೃದ್ಧಿಸುವ ಕಾರ್ಯವಾಗಲಿ-ಬಿ.ಎಸ್.ಸಾವಳಗಿ

ತಾಳಿಕೋಟೆ : ಮಕ್ಕಳಲ್ಲಿ ಶಿಕ್ಷಣದೊಂದಿಗೆ ನಮ್ಮ ಸಂಸ್ಕೃತಿ ಸಂಸ್ಕಾರದ ಅರಿವು ಮೂಡಿಸುವ ಕಾರ್ಯ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಹೇಳಿದರು. ತಾಲ್ಲೂಕಿನ ಮೈಲೇಶ್ವರದ ಮಾರುತಿ ಶಿಕ್ಷಣ ಸಂಸ್ಥೆಯ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಆರಂಭಗೊAಡ ಎರಡು ದಿನಗಳ ಬ್ರಿಲಿಯಂಟ್ ಕಲಾ ವೈಭವ-2026 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಬ್ರಿಲಿಯಂಟ್ ಶಾಲೆ ನಮ್ಮ ಶೈಕ್ಷಣಿಕ ವಲಯದಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಅತ್ಯುತ್ತಮ ಸಾಧನೆ ತೋರುತ್ತಿದೆ.