ಪ್ರಚಾರಕ್ಕೆ ಸೀಮಿತವಾದ ಪ್ರವೇಶ ಪರೀಕ್ಷೆ ?: 3,555 ವಿದ್ಯಾರ್ಥಿಗಳಲ್ಲಿ ನಾಲ್ವರಿಗೆ ಮಾತ್ರ ಉಚಿತ ಶಿಕ್ಷಣದ ಭರವಸೆ..!

ಪ್ರಚಾರಕ್ಕೆ ಸೀಮಿತವಾದ ಪ್ರವೇಶ ಪರೀಕ್ಷೆ ?: 3,555 ವಿದ್ಯಾರ್ಥಿಗಳಲ್ಲಿ ನಾಲ್ವರಿಗೆ ಮಾತ್ರ ಉಚಿತ ಶಿಕ್ಷಣದ ಭರವಸೆ..!

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ) : ತಮ್ಮ ಮಕ್ಕಳು ಡಾಕ್ಟರ್ ಆಗಬೇಕು, ಎಂಜೀನಿಯರ್ ಆಗಬೇಕು ಎಂಬ ಆಸೆ ಇಟ್ಟುಕೊಂಡು ಮಕ್ಕಳ ಪ್ರತಿಭೆ ಅನಾವರಣಗೊಳ್ಳುತ್ತದೆ, ಉತ್ತಮ ಭವಿಷ್ಯ ರೂಪಿಸಲು ಹಲವಾರು ಕನಸುಗಳನ್ನು ಕಟ್ಟಿಕೊಂಡು ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿಗೆ ಭಾನುವಾರ ಆಗಮಿಸಿದ್ದ ಮೂರು ಸಾವಿರಕ್ಕೂ ಅಧಿಕ ಸಂಖ್ಯೆಯ ಪಾಲಕರಿಗೆ ಭಾನುವಾರ ನಿರಾಸೆ ಅನುಭವಿಸಬೇಕಾಯಿತು.

ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಟ್ಯಾಲೆಂಟ್ ಸರ್ಚ್ ಪರೀಕ್ಷೆ ನಿಜವಾಗಲೂ ವಿದ್ಯಾರ್ಥಿಗಳ ಪ್ರತಿಭೆಯನ್ನು ಅನಾವರಣಗೊಳಿಸುವುದಕ್ಕೆ ರೂಪಿಸಿದ ಪರೀಕ್ಷೆಯೋ ಅಥವಾ ಕಾಲೇಜಿನ ಪ್ರಚಾರಕ್ಕೆಂದು ರೂಪಿಸಿದ ಕಾರ್ಯಕ್ರಮವೋ ಎಂಬುದು ಗೊತ್ತಾಗಲಿಲ್ಲ ಎಂದು ದಾವಣಗೆರೆಯಿಂದ ಬಂದಿದ್ದ ಪಾಲಕರೊಬ್ಬರು ದೂರಿದರು.

ರಾಜ್ಯದ ವಿವಿಧ ಜಿಲ್ಲೆಗಳಿಂದ 3555 ವಿದ್ಯಾರ್ಥಿಗಳು, ಅವರೊಂದಿಗೆ ಪಾಲಕರು ಆಗಮಿಸಿ ಪರೀಕ್ಷೆಗೆ ಹಾಜರಾಗಿದ್ದರು. ಆದರೆ ಕಾಲೇಜಿನಿಂದ ಮುಂಚಿತವಾಗಿ ಪ್ರಕಟಣೆ ಕೊಟ್ಟಂತೆ ನಿಗದಿತ ಶೇ.ವಾರು ಅಂಕ ಪಡೆದುಕೊಳ್ಳುವಲ್ಲಿ ಇಷ್ಟೊಂದು ಭಾರೀ ಸಂಖ್ಯೆಯಲ್ಲಿ ಆಗಮಿಸಿದ್ದ ವಿದ್ಯಾರ್ಥಿಗಳು ವೈಫಲ್ಯತೆ ಅನುಭವಿಸಿದರು.

ಫಲಿತಾಂಶ ಪ್ರಕಟಿಸುವ ಸಮಯದಲ್ಲಿ ಆರಂಭದಲ್ಲಿ ಕಾಲೇಜಿನ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ್, 3555 ವಿದ್ಯಾರ್ಥಿಗಳಲ್ಲಿ ಕೇವಲ ನಾಲ್ವರಿಗೆ ಎರಡು ವರ್ಷದ ಉಚಿತ ಊಟ, ವಸತಿ,ಶಿಕ್ಷಣ ನೀಡುವುದಾಗಿ ಹೇಳಿ ಹುನಗುಂದ ಆರ್.ಎಂ.ಎಸ್.ಎ ಶಾಲೆಯ ಮಲ್ಲಿಕಾರ್ಜುನ ಕತನಿ(ಶೇ.58.33),ಶಹಾಪೂರಿನ ನಿಸರ್ಗ ಪೊಲೀಸಪಾಟೀಲ (ಶೇ.49.58),ಮುಂಡರಗಿ ಆರ್.ಎಂ.ಎಸ್.ಎ ಶಾಲೆಯ ಕಾವ್ಯಾ ಉಪ್ಪಾರ (ಶೇ.46.66), ಆತನೂರು ಆರ್.ಎಂ.ಎಸ್.ಎ ಶಾಲೆಯ ನಾಗೇಶ ಬಡಿಗೇರ(ಶೇ.46.25) ಅವರ ಹೆಸರುಗಳನ್ನು ಘೋಷಿಸಲಾಯಿತು.

ಇದಾದ ಬಳಿಕ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ್ ಮತ್ತೆ ಮಧ್ಯೆಪ್ರವೇಶಿಸಿ, ಫಲಿತಾಂಶ ಪ್ರಕಟಿಸುತ್ತಿದ್ದ ಆಕ್ಸಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯಗುರು ಇಸ್ಮಾಯಿಲ್ ಮನಿಯಾರ ಅವರಿಂದ ಅತೀ ಹೆಚ್ಚು ಅಂಕ ಪಡೆದ ಮೊದಲ 16 ವಿದ್ಯಾರ್ಥಿಗಳ ಹೆಸರುಗಳನ್ನು ಘೋಷಿಸಿದರು.ಅಲ್ಲದೇ ಅವರಿಗೆ ಪ್ರವೇಶ ಶುಲ್ಕದಲ್ಲಿ ರಿಯಾಯಿತಿ ನೀಡುವುದಾಗಿಯೂ ತಿಳಿಸಿದರು.ಆದರೆ ಎಷ್ಟು ರಿಯಾಯಿತಿ ಕೊಡಲಾಗುತ್ತದೆ ಎಂಬುದನ್ನು ಬಹಿರಂಗವಾಗಿ ಹೇಳಲಿಲ್ಲ.ಒಟ್ಟಾರೆ ಟ್ಯಾಲೆಂಟ್ ಸರ್ಚ್ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆಯಲ್ಲಿ ಋಣಾತ್ಮಕ ಅಂಕಗಳನ್ನು ಇಟ್ಟಿದ್ದು ಹಾಗೂ ಪ್ರಶ್ನೆಗಳು ಅತೀ ಕಠಿಣವಾಗಿದ್ದರಿಂದಲೇ ವಿದ್ಯಾರ್ಥಿಗಳು ನಿರೀಕ್ಷಿತ ಅಂಕ ಪಡೆದುಕೊಳ್ಳಲು ಸಾಧ್ಯವಾಗಲಿಲ್ಲ.ಸಂಸ್ಥೆಯವರಿAದ ಇದೊಂದು ಪ್ರಚಾರದ ಗಿಮಿಕ್ ಆಯಿತೇ ? ಎಂಬ ಮಾತುಗಳು ಪರೀಕ್ಷೆಗೆ ದೂರದ ಧಾರವಾಡ, ಬಾಗಲಕೋಟ,ವಿಜಯಪುರ,ಯಾದಗಿರಿ,ಕೊಪ್ಪಳ, ಗದಗ, ಗಂಗಾವತಿ ಭಾಗಗಳಿಂದ ಬಂದಿದ್ದ ಪೋಷಕರಿಂದ ಕೇಳಿ ಬಂದವು.

Latest News

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಮಾಜಿ ಶಾಸಕ ನಡಹಳ್ಳಿ ಆಗ್ರಹ:                                                           ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮಾಜಿ ಶಾಸಕ ನಡಹಳ್ಳಿ ಆಗ್ರಹ: ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮುದ್ದೇಬಿಹಾಳ : ರಾಜ್ಯದಲ್ಲಿ 199 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದು ಕಾಂಗ್ರೆಸ್ ಸರ್ಕಾರ ರೈತರ ಐದು

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡ ಪವಾಡ ಬಸವೇಶ್ವರ ಸಂಸ್ಥೆಯ ವತಿಯಿಂದ ಸೆ.11 ರಂದು ಬೆಳಗ್ಗೆ

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ:                            ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ: ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ಮುದ್ದೇಬಿಹಾಳ : ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆಯನ್ನು ಇಳಿಮುಖಗೊಳಿಸುವ ಕಾರ್ಯ ಶಿಕ್ಷಕರು ಮಾಡಬೇಕು.ಸರ್ಕಾರ ಜಾರಿಗೊಳಿಸಿರುವ ಹೊಸ ತಂತ್ರಾoಶವು ಶಿಕ್ಷಣ ಇಲಾಖೆಯಲ್ಲಿ ನಡೆದಿದ್ದ ಹಲವು ಅಕ್ರಮಗಳಿಗೆ ತಡೆ ನೀಡುವ ಉದ್ದೇಶ ಹೊಂದಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದ ಸಭಾಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಶಿಕ್ಷಕರೆಂದರೆ ದೇಶದ ಸಂಸ್ಕೃತಿ ಎತ್ತಿ ಹಿಡಿಯುವವರು.ಅತ್ಯುನ್ನತ ವ್ರತ್ತಿಯಲ್ಲಿರುವವರು.ಸರ್ಕಾರಿ ಶಾಲೆಯ

ಬಸವ ಇಂಟರನ್ಯಾಷನಲ್ ಸ್ಕೂಲ್ ಮಕ್ಕಳಿಂದ ವಿಶ್ವದಾಖಲೆ…!

ಬಸವ ಇಂಟರನ್ಯಾಷನಲ್ ಸ್ಕೂಲ್ ಮಕ್ಕಳಿಂದ ವಿಶ್ವದಾಖಲೆ…!

ಮುದ್ದೇಬಿಹಾಳ : ರಾಷ್ಟ್ರೀಯ ಮಟ್ಟದ ಇಬಿಕ್ ರೀಡಥಾನ್ -2,2025ರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪಟ್ಟಣದ ಬಸವ ಇಂಟರ್‌ನ್ಯಾಶನಲ್ ಶಾಲೆಯ ವಿದ್ಯಾರ್ಥಿಗಳು ಗಿನ್ನೆಸ್ ವರ್ಲ್ಡ್ ರೆಕಾರ್ಡ್ ಸಾಧನೆ ಮಾಡಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಶಿವಕುಮಾರ ಹರ್ಲಾಪೂರ ಹೇಳಿದರು. ಪಟ್ಟಣದ ಹೊರವಲಯದಲ್ಲಿರುವ ಬಸವ ಇಂಟರ್‌ನ್ಯಾಷನಲ್ ಸ್ಕೂಲ್‌ನಲ್ಲಿ ಮಂಗಳವಾರ ನಡೆದ ಸಾಧನೆ ತೋರಿದ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮದಲ್ಲಿ ಸಾಧಕ ವಿದ್ಯಾರ್ಥಿಗಳು ಹಾಗೂ ಅವರ ಪಾಲಕರನ್ನು ಸನ್ಮಾನಿಸಿ ಅವರು ಮಾತನಾಡಿದರು. ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸುವುದರ ಜೊತೆಗೆ