ಪ್ರಚಾರಕ್ಕೆ ಸೀಮಿತವಾದ ಪ್ರವೇಶ ಪರೀಕ್ಷೆ ?: 3,555 ವಿದ್ಯಾರ್ಥಿಗಳಲ್ಲಿ ನಾಲ್ವರಿಗೆ ಮಾತ್ರ ಉಚಿತ ಶಿಕ್ಷಣದ ಭರವಸೆ..!

ಪ್ರಚಾರಕ್ಕೆ ಸೀಮಿತವಾದ ಪ್ರವೇಶ ಪರೀಕ್ಷೆ ?: 3,555 ವಿದ್ಯಾರ್ಥಿಗಳಲ್ಲಿ ನಾಲ್ವರಿಗೆ ಮಾತ್ರ ಉಚಿತ ಶಿಕ್ಷಣದ ಭರವಸೆ..!

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ) : ತಮ್ಮ ಮಕ್ಕಳು ಡಾಕ್ಟರ್ ಆಗಬೇಕು, ಎಂಜೀನಿಯರ್ ಆಗಬೇಕು ಎಂಬ ಆಸೆ ಇಟ್ಟುಕೊಂಡು ಮಕ್ಕಳ ಪ್ರತಿಭೆ ಅನಾವರಣಗೊಳ್ಳುತ್ತದೆ, ಉತ್ತಮ ಭವಿಷ್ಯ ರೂಪಿಸಲು ಹಲವಾರು ಕನಸುಗಳನ್ನು ಕಟ್ಟಿಕೊಂಡು ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿಗೆ ಭಾನುವಾರ ಆಗಮಿಸಿದ್ದ ಮೂರು ಸಾವಿರಕ್ಕೂ ಅಧಿಕ ಸಂಖ್ಯೆಯ ಪಾಲಕರಿಗೆ ಭಾನುವಾರ ನಿರಾಸೆ ಅನುಭವಿಸಬೇಕಾಯಿತು.

ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಟ್ಯಾಲೆಂಟ್ ಸರ್ಚ್ ಪರೀಕ್ಷೆ ನಿಜವಾಗಲೂ ವಿದ್ಯಾರ್ಥಿಗಳ ಪ್ರತಿಭೆಯನ್ನು ಅನಾವರಣಗೊಳಿಸುವುದಕ್ಕೆ ರೂಪಿಸಿದ ಪರೀಕ್ಷೆಯೋ ಅಥವಾ ಕಾಲೇಜಿನ ಪ್ರಚಾರಕ್ಕೆಂದು ರೂಪಿಸಿದ ಕಾರ್ಯಕ್ರಮವೋ ಎಂಬುದು ಗೊತ್ತಾಗಲಿಲ್ಲ ಎಂದು ದಾವಣಗೆರೆಯಿಂದ ಬಂದಿದ್ದ ಪಾಲಕರೊಬ್ಬರು ದೂರಿದರು.

ರಾಜ್ಯದ ವಿವಿಧ ಜಿಲ್ಲೆಗಳಿಂದ 3555 ವಿದ್ಯಾರ್ಥಿಗಳು, ಅವರೊಂದಿಗೆ ಪಾಲಕರು ಆಗಮಿಸಿ ಪರೀಕ್ಷೆಗೆ ಹಾಜರಾಗಿದ್ದರು. ಆದರೆ ಕಾಲೇಜಿನಿಂದ ಮುಂಚಿತವಾಗಿ ಪ್ರಕಟಣೆ ಕೊಟ್ಟಂತೆ ನಿಗದಿತ ಶೇ.ವಾರು ಅಂಕ ಪಡೆದುಕೊಳ್ಳುವಲ್ಲಿ ಇಷ್ಟೊಂದು ಭಾರೀ ಸಂಖ್ಯೆಯಲ್ಲಿ ಆಗಮಿಸಿದ್ದ ವಿದ್ಯಾರ್ಥಿಗಳು ವೈಫಲ್ಯತೆ ಅನುಭವಿಸಿದರು.

ಫಲಿತಾಂಶ ಪ್ರಕಟಿಸುವ ಸಮಯದಲ್ಲಿ ಆರಂಭದಲ್ಲಿ ಕಾಲೇಜಿನ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ್, 3555 ವಿದ್ಯಾರ್ಥಿಗಳಲ್ಲಿ ಕೇವಲ ನಾಲ್ವರಿಗೆ ಎರಡು ವರ್ಷದ ಉಚಿತ ಊಟ, ವಸತಿ,ಶಿಕ್ಷಣ ನೀಡುವುದಾಗಿ ಹೇಳಿ ಹುನಗುಂದ ಆರ್.ಎಂ.ಎಸ್.ಎ ಶಾಲೆಯ ಮಲ್ಲಿಕಾರ್ಜುನ ಕತನಿ(ಶೇ.58.33),ಶಹಾಪೂರಿನ ನಿಸರ್ಗ ಪೊಲೀಸಪಾಟೀಲ (ಶೇ.49.58),ಮುಂಡರಗಿ ಆರ್.ಎಂ.ಎಸ್.ಎ ಶಾಲೆಯ ಕಾವ್ಯಾ ಉಪ್ಪಾರ (ಶೇ.46.66), ಆತನೂರು ಆರ್.ಎಂ.ಎಸ್.ಎ ಶಾಲೆಯ ನಾಗೇಶ ಬಡಿಗೇರ(ಶೇ.46.25) ಅವರ ಹೆಸರುಗಳನ್ನು ಘೋಷಿಸಲಾಯಿತು.

ಇದಾದ ಬಳಿಕ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ್ ಮತ್ತೆ ಮಧ್ಯೆಪ್ರವೇಶಿಸಿ, ಫಲಿತಾಂಶ ಪ್ರಕಟಿಸುತ್ತಿದ್ದ ಆಕ್ಸಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯಗುರು ಇಸ್ಮಾಯಿಲ್ ಮನಿಯಾರ ಅವರಿಂದ ಅತೀ ಹೆಚ್ಚು ಅಂಕ ಪಡೆದ ಮೊದಲ 16 ವಿದ್ಯಾರ್ಥಿಗಳ ಹೆಸರುಗಳನ್ನು ಘೋಷಿಸಿದರು.ಅಲ್ಲದೇ ಅವರಿಗೆ ಪ್ರವೇಶ ಶುಲ್ಕದಲ್ಲಿ ರಿಯಾಯಿತಿ ನೀಡುವುದಾಗಿಯೂ ತಿಳಿಸಿದರು.ಆದರೆ ಎಷ್ಟು ರಿಯಾಯಿತಿ ಕೊಡಲಾಗುತ್ತದೆ ಎಂಬುದನ್ನು ಬಹಿರಂಗವಾಗಿ ಹೇಳಲಿಲ್ಲ.ಒಟ್ಟಾರೆ ಟ್ಯಾಲೆಂಟ್ ಸರ್ಚ್ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆಯಲ್ಲಿ ಋಣಾತ್ಮಕ ಅಂಕಗಳನ್ನು ಇಟ್ಟಿದ್ದು ಹಾಗೂ ಪ್ರಶ್ನೆಗಳು ಅತೀ ಕಠಿಣವಾಗಿದ್ದರಿಂದಲೇ ವಿದ್ಯಾರ್ಥಿಗಳು ನಿರೀಕ್ಷಿತ ಅಂಕ ಪಡೆದುಕೊಳ್ಳಲು ಸಾಧ್ಯವಾಗಲಿಲ್ಲ.ಸಂಸ್ಥೆಯವರಿAದ ಇದೊಂದು ಪ್ರಚಾರದ ಗಿಮಿಕ್ ಆಯಿತೇ ? ಎಂಬ ಮಾತುಗಳು ಪರೀಕ್ಷೆಗೆ ದೂರದ ಧಾರವಾಡ, ಬಾಗಲಕೋಟ,ವಿಜಯಪುರ,ಯಾದಗಿರಿ,ಕೊಪ್ಪಳ, ಗದಗ, ಗಂಗಾವತಿ ಭಾಗಗಳಿಂದ ಬಂದಿದ್ದ ಪೋಷಕರಿಂದ ಕೇಳಿ ಬಂದವು.

Latest News

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ;                                      ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ; ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ವಿಜಯಪುರ : ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ಸೇರಿದಂತೆ ಗುತ್ತಿಗೆದಾರರ ಬೇಡಿಕೆಗಳನ್ನು ಆದ್ಯತೆ ಮೇರೆಗೆ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ:                                       ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ: ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಮುದ್ದೇಬಿಹಾಳ : ಜೀವ ಪಣಕ್ಕಿಟ್ಟು ಅಂತರಾಜ್ಯದ ಕಳ್ಳರನ್ನು ಹೆಡೆಮುರಿ ಕಟ್ಟಿದ ದಕ್ಷ ಅಧಿಕಾರಿ ಸಂಜಯ ತಿಪರೆಡ್ಡಿ ಭವಿಷ್ಯದಲ್ಲಿ ತಾವು ಸಲ್ಲಿಸುವ ಇಲಾಖೆಯಲ್ಲಿ ಉನ್ನತ ಸೇವೆ ಗಳಿಸುವಂತಾಗಲಿ ಎಂದು ಹೇಮರಡ್ಡಿ ಮಲ್ಲಮ್ಮ ಸೇವಾ ಸಂಸ್ಥೆಯ ನಿರ್ದೇಶಕ ಸುರೇಶಗೌಡ ಪಾಟೀಲ ಇಂಗಳಗೇರಿ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವರ್ಗಾವಣೆಗೊಂಡಿರುವ ಪಿಎಸ್‌ಐ ಸಂಜಯ ತಿಪರೆಡ್ಡಿ ದಂಪತಿಯ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.ನೇರ,ನಿಷ್ಠುರ ಅಧಿಕಾರಿಯಾಗಿದ್ದ ತಿಪರೆಡ್ಡಿ ಅವರು ರಾಜ್ಯದಲ್ಲಿಯೇ ಮಾದರಿ