ಸಸಿ ನೆಟ್ಟು ವನಮಹೋತ್ಸವ ಆಚರಣೆ

ಸಸಿ ನೆಟ್ಟು ವನಮಹೋತ್ಸವ ಆಚರಣೆ

Ad
Ad

ಇಳಕಲ್: ನಗರದ ಜೋಶಿ ಗಲ್ಲಿಯ ರಾಷ್ಟ್ರೀಯ ಹೆದ್ದಾರಿ ಐವತ್ತಕ್ಕೆ ಹೊಂದಿಕೊಂಡಂತೆ ಇರುವ ಸಾರ್ವಜನಿಕ ಉದ್ಯಾನವನದಲ್ಲಿ ಇಳಕಲ್ ಲೈನ್ಸ್ ಕ್ಲಬ್ ನ ಸದಸ್ಯರು ಸಸಿ ನೆಡುವ ಮೂಲಕ ವನಮಹೋತ್ಸವದಲ್ಲಿ ಪಾಲ್ಗೊಂಡರು.

Ad
Ad

ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತೆ ಇರುವ ಈ ಉದ್ಯಾನವನ ನಗರಕ್ಕೆ ಆಗಮಿಸುವ ಜನರನ್ನು ಆಕರ್ಷಿಸುವಂತೆ ಮಾಡುವ ನಿಟ್ಟಿನಲ್ಲಿ ಈ ಉದ್ಯಾನವನವನ್ನು ಸುಂದರವಾಗಿ ಮಾಡುವ ಉದ್ದೇಶ ಹೊಂದಿದ್ದೇವೆ ಎಂದು ಲೈನ್ಸ್ ಕ್ಲಬ್ ಅಧ್ಯಕ್ಷ ಮಹಾಬಲೇಶ್ ಮಠದ ಅವರು ತಿಳಿಸಿದರು.

ಲೈನ್ಸ್ ಕ್ಲಬ್ ನ ನಿಕಟಪೂರ್ವ ಅಧ್ಯಕ್ಷ ರಾಜು ಕಾಟವಾ ಮಾತನಾಡಿ, ಉದ್ಯಾನವನದ ಸುತ್ತಮುತ್ತಲಿ ವಾಸವಿರುವ ನಿವಾಸಿಗಳು ತಮ್ಮ ಮಕ್ಕಳನ್ನು ಪಾಲನೆ ಪೋಷಣೆ ಮಾಡುವಂತೆ ಈ ಸಸಿಗಳನ್ನು ಬೆಳೆಸುವಲ್ಲಿ ಕಾಳಜಿ ವಹಿಸಬೇಕು ಎಂದು ಅಲ್ಲಿಯ ನಿವಾಸಿಗಳಿಗೆ ಕರೆ ನೀಡಿದರು.

ಈ ವನಮಹೋತ್ಸವ ಕಾರ್ಯಕ್ರಮದಲ್ಲಿ ಜೋಶಿಗಲ್ಲಿ ಬಡಾವಣೆಯ ನಗರಸಭೆ ಸದಸ್ಯ ಮೌನೇಶ್ ಬಂಡಿವಡ್ಡರ್ ಪಾಲ್ಗೊಂಡಿದ್ದರು ಈ ವೇಳೆ ಹಾಗೂ ಬಡಾವಣೆಯ ನಿವಾಸಿಗಳ ಪರವಾಗಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಲೈನ್ಸ್ ಕ್ಲಬ್ ಅಧ್ಯಕ್ಷ ಮಹಾಬಲೇಶ್ ಮಾರಟದ, ಕಾರ್ಯದರ್ಶಿ ಮಹಾಂತೇಶ್ ಅಕ್ಕಿ, ಖಜಾಂಚಿ ಮುರುಗೇಶ್ ಪಾಟೀಲ್, ರಾಜಕುಮಾರ ಕಾಟವಾ, ಸಂತೋಷ್ ಪೂಜರಿ, ಡಾ. ವಿಠ್ಠಲ್ ಶಾವಿ, ಡಾ. ನಾಗರಾಜ ಸಜ್ಜನ್, ಪ್ರಮೋದ್ ಹಂಚಾಟೆ, ರವಿ ಅಂಗಡಿ, ವಿಶಾಲ್ ಜೈನ, ಲಾಲಬಾಷಾ ಶಿವನಗುತ್ತಿ, ಅಪ್ಪು ಹಿರೇಮಠ, ಬಸವರಾಜ ಮಠದ, ಡಾ. ಟಿಪ್ಪು ಭಂಡಾರಿ ಸೇರಿದಂತೆ ಬಡಾವಣೆ ನಿವಾಸಿಗಳಾದ ಆರ್.ಕೆ. ಕುಲಕರ್ಣಿ ಹಾಗೂ ಲೈನ್ಸ್ ಕ್ಲಬ್ ನ ಸದಸ್ಯರು ಉಪಸ್ಥಿತರಿದ್ದರು.

Latest News

ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ

ಯತ್ನಾಳ ಉಚ್ಚಾಟನೆಗೆ ಆಕ್ರೋಶ: ಯತ್ನಾಳರಿಗಾಗಿ ಪ್ರಾಣ ಕೊಡಲು ಸಿದ್ಧ- ದೇಸಾಯಿ

ಯತ್ನಾಳ ಉಚ್ಚಾಟನೆಗೆ ಆಕ್ರೋಶ: ಯತ್ನಾಳರಿಗಾಗಿ ಪ್ರಾಣ ಕೊಡಲು ಸಿದ್ಧ- ದೇಸಾಯಿ

ಮುದ್ದೇಬಿಹಾಳ : ಬಸನಗೌಡ ಪಾಟೀಲ ಯತ್ನಾಳರು ಯಾವ ಪಕ್ಷದಲ್ಲಿರುತ್ತಾರೆಯೋ ಸಾಯುವವರಿಗೂ ಅವರ ಜೊತೆಗೆ ಇದ್ದು

ಭಾವಚಿತ್ರಗಳಿಗೆ ಅಪಮಾನ ತಡೆಗಟ್ಟಲು ಪೊಲೀಸರಿಗೆ ಬಿಜೆಪಿ ಪತ್ರ

ಭಾವಚಿತ್ರಗಳಿಗೆ ಅಪಮಾನ ತಡೆಗಟ್ಟಲು ಪೊಲೀಸರಿಗೆ ಬಿಜೆಪಿ ಪತ್ರ

ಯತ್ನಾಳ ಆಪ್ತ, ಜಿಪಂ ಮಾಜಿ ಉಪಾಧ್ಯಕ್ಷ ದೇಸಾಯಿ ವಿರುದ್ಧ ಕ್ರಮಕ್ಕೆ ಆಗ್ರಹ ಮುದ್ದೇಬಿಹಾಳ :

ರೇವಣಸಿದ್ದಪ್ಪಗೆ ಟ್ಯಾಲೆಂಟ್ ಅವಾರ್ಡ್ ಪ್ರಶಸ್ತಿಶಿಕ್ಷಣದೊಂದಿಗೆ ಸಂಸ್ಕಾರವೂ ಹೆಚ್ಚಲಿ- ಅಮರೇಶ್ವರ ಸ್ವಾಮೀಜಿ

ರೇವಣಸಿದ್ದಪ್ಪಗೆ ಟ್ಯಾಲೆಂಟ್ ಅವಾರ್ಡ್ ಪ್ರಶಸ್ತಿಶಿಕ್ಷಣದೊಂದಿಗೆ ಸಂಸ್ಕಾರವೂ ಹೆಚ್ಚಲಿ- ಅಮರೇಶ್ವರ ಸ್ವಾಮೀಜಿ

ಮುದ್ದೇಬಿಹಾಳ : ಮೊದಲು ಸಂಸ್ಕಾರ ಹೆಚ್ಚಾಗಿತ್ತು,ಶಿಕ್ಷಣ ಕಡಿಮೆ ಇತ್ತು. ಆದರೆ ಇಂದು ಶಿಕ್ಷಣ ಹೆಚ್ಚಿದಂತೆ

ಯತ್ನಾಳ ಉಚ್ಚಾಟನೆ ವಾಪಸಾತಿಗೆ ಪಂಚಮಸಾಲಿಗರ ಆಗ್ರಹ

ಯತ್ನಾಳ ಉಚ್ಚಾಟನೆ ವಾಪಸಾತಿಗೆ ಪಂಚಮಸಾಲಿಗರ ಆಗ್ರಹ

ಮುದ್ದೇಬಿಹಾಳ : ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಚಾಟನೆಗೊಳಗಾಗಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಗೌರವಯುತವಾಗಿ ಮರಳಿ ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಪಂಚಮಸಾಲಿ ಸಮಾಜದ ಮುಖಂಡರು ಇಂದಿಲ್ಲಿ ಆಗ್ರಹಿಸಿದರು. ಪಟ್ಟಣದ ಏಪಿಎಂಸಿಯಲ್ಲಿರುವ ಬಸಲಿಂಗಪ್ಪ ರಕ್ಕಸಗಿ ಅವರ ಅಡತಿ ಅಂಗಡಿಯಲ್ಲಿ ಗುರುವಾರ ಪಂಚಮಸಾಲಿ ಸಮಾಜದ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಾಜದ ಮುಖಂಡರಾದ ಶಿವಶಂಕರಗೌಡ ಹಿರೇಗೌಡರ, ಸಮಾಜದ ತಾಲ್ಲೂಕು ಅಧ್ಯಕ್ಷ ಅಮರೇಶ ಗೂಳಿ, ಕಾಮರಾಜ ಬಿರಾದಾರ ಮೊದಲಾದವರು,

ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಸ್ಪರ್ಧೆ:ಏ.5 ರಂದು 172 ಮೆಡಿಕಲ್ ವಿದ್ಯಾರ್ಥಿಗಳ ಸನ್ಮಾನ

ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಸ್ಪರ್ಧೆ:ಏ.5 ರಂದು 172 ಮೆಡಿಕಲ್ ವಿದ್ಯಾರ್ಥಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನಲ್ಲಿ ಏ.5 ರಂದು ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಪರೀಕ್ಷೆ-2025 ನ್ನು ಹಮ್ಮಿಕೊಳ್ಳಲಾಗಿದ್ದು ಆಯ್ಕೆಯಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಲಾಗುತ್ತದೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ ಹೇಳಿದರು. ಪಟ್ಟಣದಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ ಗುರುವಾರ ಸುದ್ದಿಗೋಷ್ಠಿಯಲ್ಲಿ ಪರೀಕ್ಷೆಯ ವಿವರಗಳನ್ನು ಅವರು ನೀಡಿದರು. ಸಂಸ್ಥೆಯ ಚೇರಮನ್ ಎಂ. ಎಸ್. ಪಾಟೀಲ್ ಅವರ ಮಾರ್ಗದರ್ಶನದಲ್ಲಿ ಈ