ಮುದ್ದೇಬಿಹಾಳ : ಹಸಿರು ತೋರಣ ಗೆಳೆಯರ ಬಳಗದ ಸಂಚಾಲಕ ಮಹಾಬಲೇಶ್ವರ ಎಸ್. ಗಡೇದ ಅವರಿಗೆ 2026 ನೇ ಸಾಲಿನ “ಕಾಯಕ ಯೋಗಿ” ರಾಜ್ಯ ಪ್ರಶಸ್ತಿ ಲಭಿಸಿದೆ.
ಪವಾಡ ಬಯಲು ಆಂದೋಲನದ ಮೂಲಕ ರಾಜ್ಯಾದ್ಯಂತ ಹೆಸರಾಗಿರುವ ಡಾ.ಹುಲಿಕಲ್ ನಟರಾಜ ಸಂಸ್ಥಾಪಕ ಅಧ್ಯಕ್ಷರಾಗಿರುವ ‘ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು (ರಿ) ದೊಡ್ಡಬಳ್ಳಾಪುರ ಇವರು ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ.
ಗಡೇದ ಅವರು ಸದ್ಯಕ್ಕೆ ಹೂವಿನ ಹಿಪ್ಪರಗಿ ಅಂಚೆ ಇಲಾಖೆಯಲ್ಲಿ ಸಬ್ ಪೋಸ್ಟ್ಮಾಸ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.ಮೇ 1, ಕಾರ್ಮಿಕರ ದಿನಾಚರಣೆಯ ಅಂಗವಾಗಿ ರಾಜ್ಯಾಧ್ಯಕ್ಷರಾದ ಡಾ.ಹುಲಿಕಲ್ ನಟರಾಜ ಇವರ ಅಧ್ಯಕ್ಷತೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆಯಲ್ಲಿ ಕಾಯಕಯೋಗಿ-26 ಪ್ರಶಸ್ತಿ ಪದಾನ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







