ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ ತಾಲ್ಲೂಕಿನ ಬೆಳಗಲ್ ಗ್ರಾಮದಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪಿಸಲು ಉದ್ದೇಶಿಸಿದ್ದೇವೆ ಎಂದು ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.

ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಗುರುವಾರ ಹುನಗುಂದದ ಶ್ರೀ ಎಸ್.ಆರ್.ಕೆ. ಸೌಹಾರ್ದ ಪತ್ತಿನ ಸಹಕಾರಿ ಸಂಘ ಇದರ 15ನೇ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಹುನಗುಂದ ಭಾಗದಲ್ಲಿ ಸಕ್ಕರೆ ಕಾರ್ಖಾನೆ ಆರಂಭಿಸಿದರೆ ಉದ್ಯೋಗ ಸೃಷ್ಟಿಯಾಗುತ್ತವೆ.ಅದರಲ್ಲಿಯೂ ಈ ಭಾಗದ ಕಬ್ಬು ಬೆಳೆಗಾರರಿಗೆ ಅನುಕೂಲ ಆಗಲಿದೆ ಎಂದು ಹೇಳಿದರು.

ಈ ಭಾಗದ ಶಾಸಕರಾದ ನಾಡಗೌಡರ ಸಮಕಾಲೀನ ರಾಜಕಾರಣ ಮಾಡಿದವರು ನಮ್ಮ ತಂದೆ ಎಸ್.ಆರ್.ಕಾಶಪ್ಪನವರ ಅವರು.ಅಖಂಡ ವಿಜಯಪುರ ಜಿಲ್ಲೆಯಲ್ಲಿ ಬಲದಿನ್ನಿ ನಾಡಗೌಡ್ರು,ಹುನಗುಂದ ಕಾಶಪ್ಪನವರ ಕುಟುಂಬಗಳಲ್ಲಿ ಅವಳಿ ಜಿಲ್ಲೆಯ ಎರಡು ಹುಲಿಗಳು ಎಂಬ ಭಾವನೆ ಜನರಲ್ಲಿದೆ.ಹಾವರಗಿ,ಬಲದಿನ್ನಿ ಬೇರೆಯಲ್ಲ ಅದೇ ಭಾವನೆಯಲ್ಲಿ ನಾವು ಇಂದಿಗೂ ಇದ್ದೇವೆ.ಸರಳ ಸಜ್ಜನಿಕೆ ರಾಜಕಾರಣಿ ನಾಡಗೌಡ್ರು. ಎಲ್ಲರ ಸಹಕಾರದಿಂದ ಇಲ್ಲಿ 15ನೇ ಶಾಖೆಯನ್ನು ಆರಂಭಿಸಿದ್ದೇವೆ.ಆರoಭಿಕ ಠೇವಣಿ 4 ಕೋಟಿ ಇದ್ದದ್ದು 25 ಕೋಟಿ ರೂ.ಗೆ ಬದಲಾವಣೆ ಆಗಿದೆ.ನಾಲ್ಕು ಜಿಲ್ಲೆಗಳಲ್ಲಿ ಶಾಖೆಗಳನ್ನು ವಿಸ್ತರಿಸಲಾಗುತ್ತಿದೆ.ಬರಲಿರುವ ದಿನಗಳಲ್ಲಿ ಅಮಿನಗಡದಲ್ಲಿ ಶಾಖೆ ಆರಂಭಿಸಲಿದ್ದೇವೆ ಎಂದು ಹೇಳಿದರು .

ರೈತರಿಗೆ,ಕಾರ್ಮಿಕರಿಗೆ ಸಣ್ಣ ಪುಟ್ಟ ವ್ಯಾಪಾರಸ್ಥರಿಗೆ ಅನುಕೂಲ ಆಗಲಿ ಎಂಬ ಉದ್ದೇಶದಿಂದ ಈ ಶಾಖೆಗಳನ್ನು ಆರಂಭಿಸಿದ್ದೇವೆ.ಹುನಗುoದದಲ್ಲಿ ಶಾಖೆಯ ಪ್ರಧಾನ ಕಚೇರಿಗೆ ಸ್ವಂತ ಕಟ್ಟಡ ಅರಂಭಿಸಲು ಮೂರು ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ.ರಾಷ್ಟ್ರೀಯ ಬ್ಯಾಂಕುಗಳಿಗಿoತ ಉತ್ತಮ ಕೆಲಸ ಮಾಡಲಿವೆ ಎಂದು ಹೇಳಿದರು.

ಶಾಖೆ ಉದ್ಘಾಟಿಸಿದ ಶಾಸಕ ಸಿ.ಎಸ್.ನಾಡಗೌಡ ಮಾತನಾಡಿ, ಆರ್ಥಿಕ ಸಂಕಷ್ಟದಲ್ಲಿದ್ದವರನ್ನು ಮೇಲೆತ್ತಬೇಕು ಎಂಬ ಉದ್ದೇಶದಿಂದ ಆರಂಭಗೊoಡಿರುವ ಎಸ್.ಆರ್.ಕೆ ಸೌಹಾರ್ದ ಸೊಸೈಟಿ ರಾಷ್ಟಿçÃಕೃತ ಬ್ಯಾಂಕುಗಳಿಗಿoತ ಉತ್ತಮ ಸೇವೆ ದೊರೆಯಲಿ ಎಂದು ಹೇಳಿದರು.

ಕಾಶಪ್ಪನವರ ಅವರ ತಾಯಿಯವರು ನಮ್ಮ ಜೊತೆಗೆ ಜಿಪಂ ಸದಸ್ಯರಾಗಿದ್ದವರು.ಕಾಶಪ್ಪನವರ ರಾಜಕೀಯವಾಗಿ ಹಿಂಬಾಲಕರನ್ನು ಅಲಕ್ಷ್ಯ ಮಾಡಲಿಲ್ಲ. ಮುನಿಸು ಬಂದವರ ಮನಿಗೆ ಹೋಗಿ ಮಾತನಾಡುತ್ತಿದ್ದರು. ರಾಜಕಾರಣ ಮಾಡುವಾಗ ಯಾವ ರೀತಿಯಲ್ಲಿ ಇರಬೇಕು ಎಂಬುದನ್ನು ಅರಿತುಕೊಳ್ಳಬೇಕು ಎಂಬುದನ್ನು ಕಾಶಪ್ಪನವರ ನೋಡಿ ತಿಳಿಯಬೇಕು.ಸೌಹಾರ್ದ ಶಾಖೆಗಳಲ್ಲಿ ಬಂಡವಾಳ ತೊಡಗಿಸಿದವರಿಗೂ ಆದಾಯ ಹೆಚ್ಚಾಗುತ್ತದೆ.ಇಡೀ ದೇಶದಲ್ಲಿ ಸೌಹಾರ್ದ ಬ್ಯಾಂಕುಗಳು ಆರ್ಥಿಕ ಕ್ರಾಂತಿ ಮಾಡುತ್ತಿವೆ ಎಂದರು.

ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯ ವಹಿಸಿದ್ದರು.ಸಂಘದ ನಿರ್ದೇಶಕರಾದ ಅಮರೇಶ ನಾಗೂರ, ಮಲ್ಲಿಕಾರ್ಜುನ ಲೆಕ್ಕಿಹಾಳ,ಎನ್.ಎಮ್.ಕಲಗೋಡಿ,ಪ್ರಭು ಇದ್ದಲಗಿ , ನಿಂಗಪ್ಪ ಬಿದರಕುಂದಿ, ಮಹಾಂತೇಶ ಕಡಿವಾಲ,ಮುದ್ದೇಬಿಹಾಳ ಸಲಹಾ ಸಮಿತಿ ಸದಸ್ಯರಾದ ಶಿವಶಂಕರಗೌಡ ಹಿರೇಗೌಡರ,ಮಹಾಂತೇಶ ಗಂಗನಗೌಡರ, ಅಮರೇಶ ಗೂಳಿ,ಶ್ರೀಶೈಲ ಮರೋಳ, ಸಂಗಮೇಶ ಕಡಿ, ರಾಜುಗೌಡ ಕೊಂಗಿ,ಅಲ್ಲಾಭಕ್ಷ ದೇಸಾಯಿ, ಹಣಮಂತ ಹಂಡರಗಲ್ಲ,ಶಿವು ಶಿವಪೂರ, ಅಶೋಕ ಚಟ್ಟೇರ,ವೀರೇಶ ಹಡಲಗೇರಿ, ಶ್ರೀನಿವಾಸ ಗೌಂಡಿ, ಕೆ.ಆರ್.ಚೋಪದಾರ,ಬಸವರಾಜ ಸಜ್ಜನ,ವಾಸುದೇವ ಶಾಸ್ತಿçÃ,ಶಂಕರಗೌಡ ತಾವರಖೇಡ ಮೊದಲಾದವರು ಇದ್ದರು.ವ್ಯವಸ್ಥಾಪಕ ಮಂಜುನಾಥ ಬಿ ನಿರೂಪಿಸಿದರು.

Latest News

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ