ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ ತಾಲ್ಲೂಕಿನ ಬೆಳಗಲ್ ಗ್ರಾಮದಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪಿಸಲು ಉದ್ದೇಶಿಸಿದ್ದೇವೆ ಎಂದು ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.

ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಗುರುವಾರ ಹುನಗುಂದದ ಶ್ರೀ ಎಸ್.ಆರ್.ಕೆ. ಸೌಹಾರ್ದ ಪತ್ತಿನ ಸಹಕಾರಿ ಸಂಘ ಇದರ 15ನೇ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಹುನಗುಂದ ಭಾಗದಲ್ಲಿ ಸಕ್ಕರೆ ಕಾರ್ಖಾನೆ ಆರಂಭಿಸಿದರೆ ಉದ್ಯೋಗ ಸೃಷ್ಟಿಯಾಗುತ್ತವೆ.ಅದರಲ್ಲಿಯೂ ಈ ಭಾಗದ ಕಬ್ಬು ಬೆಳೆಗಾರರಿಗೆ ಅನುಕೂಲ ಆಗಲಿದೆ ಎಂದು ಹೇಳಿದರು.

ಈ ಭಾಗದ ಶಾಸಕರಾದ ನಾಡಗೌಡರ ಸಮಕಾಲೀನ ರಾಜಕಾರಣ ಮಾಡಿದವರು ನಮ್ಮ ತಂದೆ ಎಸ್.ಆರ್.ಕಾಶಪ್ಪನವರ ಅವರು.ಅಖಂಡ ವಿಜಯಪುರ ಜಿಲ್ಲೆಯಲ್ಲಿ ಬಲದಿನ್ನಿ ನಾಡಗೌಡ್ರು,ಹುನಗುಂದ ಕಾಶಪ್ಪನವರ ಕುಟುಂಬಗಳಲ್ಲಿ ಅವಳಿ ಜಿಲ್ಲೆಯ ಎರಡು ಹುಲಿಗಳು ಎಂಬ ಭಾವನೆ ಜನರಲ್ಲಿದೆ.ಹಾವರಗಿ,ಬಲದಿನ್ನಿ ಬೇರೆಯಲ್ಲ ಅದೇ ಭಾವನೆಯಲ್ಲಿ ನಾವು ಇಂದಿಗೂ ಇದ್ದೇವೆ.ಸರಳ ಸಜ್ಜನಿಕೆ ರಾಜಕಾರಣಿ ನಾಡಗೌಡ್ರು. ಎಲ್ಲರ ಸಹಕಾರದಿಂದ ಇಲ್ಲಿ 15ನೇ ಶಾಖೆಯನ್ನು ಆರಂಭಿಸಿದ್ದೇವೆ.ಆರoಭಿಕ ಠೇವಣಿ 4 ಕೋಟಿ ಇದ್ದದ್ದು 25 ಕೋಟಿ ರೂ.ಗೆ ಬದಲಾವಣೆ ಆಗಿದೆ.ನಾಲ್ಕು ಜಿಲ್ಲೆಗಳಲ್ಲಿ ಶಾಖೆಗಳನ್ನು ವಿಸ್ತರಿಸಲಾಗುತ್ತಿದೆ.ಬರಲಿರುವ ದಿನಗಳಲ್ಲಿ ಅಮಿನಗಡದಲ್ಲಿ ಶಾಖೆ ಆರಂಭಿಸಲಿದ್ದೇವೆ ಎಂದು ಹೇಳಿದರು .

ರೈತರಿಗೆ,ಕಾರ್ಮಿಕರಿಗೆ ಸಣ್ಣ ಪುಟ್ಟ ವ್ಯಾಪಾರಸ್ಥರಿಗೆ ಅನುಕೂಲ ಆಗಲಿ ಎಂಬ ಉದ್ದೇಶದಿಂದ ಈ ಶಾಖೆಗಳನ್ನು ಆರಂಭಿಸಿದ್ದೇವೆ.ಹುನಗುoದದಲ್ಲಿ ಶಾಖೆಯ ಪ್ರಧಾನ ಕಚೇರಿಗೆ ಸ್ವಂತ ಕಟ್ಟಡ ಅರಂಭಿಸಲು ಮೂರು ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ.ರಾಷ್ಟ್ರೀಯ ಬ್ಯಾಂಕುಗಳಿಗಿoತ ಉತ್ತಮ ಕೆಲಸ ಮಾಡಲಿವೆ ಎಂದು ಹೇಳಿದರು.

ಶಾಖೆ ಉದ್ಘಾಟಿಸಿದ ಶಾಸಕ ಸಿ.ಎಸ್.ನಾಡಗೌಡ ಮಾತನಾಡಿ, ಆರ್ಥಿಕ ಸಂಕಷ್ಟದಲ್ಲಿದ್ದವರನ್ನು ಮೇಲೆತ್ತಬೇಕು ಎಂಬ ಉದ್ದೇಶದಿಂದ ಆರಂಭಗೊoಡಿರುವ ಎಸ್.ಆರ್.ಕೆ ಸೌಹಾರ್ದ ಸೊಸೈಟಿ ರಾಷ್ಟಿçÃಕೃತ ಬ್ಯಾಂಕುಗಳಿಗಿoತ ಉತ್ತಮ ಸೇವೆ ದೊರೆಯಲಿ ಎಂದು ಹೇಳಿದರು.

ಕಾಶಪ್ಪನವರ ಅವರ ತಾಯಿಯವರು ನಮ್ಮ ಜೊತೆಗೆ ಜಿಪಂ ಸದಸ್ಯರಾಗಿದ್ದವರು.ಕಾಶಪ್ಪನವರ ರಾಜಕೀಯವಾಗಿ ಹಿಂಬಾಲಕರನ್ನು ಅಲಕ್ಷ್ಯ ಮಾಡಲಿಲ್ಲ. ಮುನಿಸು ಬಂದವರ ಮನಿಗೆ ಹೋಗಿ ಮಾತನಾಡುತ್ತಿದ್ದರು. ರಾಜಕಾರಣ ಮಾಡುವಾಗ ಯಾವ ರೀತಿಯಲ್ಲಿ ಇರಬೇಕು ಎಂಬುದನ್ನು ಅರಿತುಕೊಳ್ಳಬೇಕು ಎಂಬುದನ್ನು ಕಾಶಪ್ಪನವರ ನೋಡಿ ತಿಳಿಯಬೇಕು.ಸೌಹಾರ್ದ ಶಾಖೆಗಳಲ್ಲಿ ಬಂಡವಾಳ ತೊಡಗಿಸಿದವರಿಗೂ ಆದಾಯ ಹೆಚ್ಚಾಗುತ್ತದೆ.ಇಡೀ ದೇಶದಲ್ಲಿ ಸೌಹಾರ್ದ ಬ್ಯಾಂಕುಗಳು ಆರ್ಥಿಕ ಕ್ರಾಂತಿ ಮಾಡುತ್ತಿವೆ ಎಂದರು.

ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯ ವಹಿಸಿದ್ದರು.ಸಂಘದ ನಿರ್ದೇಶಕರಾದ ಅಮರೇಶ ನಾಗೂರ, ಮಲ್ಲಿಕಾರ್ಜುನ ಲೆಕ್ಕಿಹಾಳ,ಎನ್.ಎಮ್.ಕಲಗೋಡಿ,ಪ್ರಭು ಇದ್ದಲಗಿ , ನಿಂಗಪ್ಪ ಬಿದರಕುಂದಿ, ಮಹಾಂತೇಶ ಕಡಿವಾಲ,ಮುದ್ದೇಬಿಹಾಳ ಸಲಹಾ ಸಮಿತಿ ಸದಸ್ಯರಾದ ಶಿವಶಂಕರಗೌಡ ಹಿರೇಗೌಡರ,ಮಹಾಂತೇಶ ಗಂಗನಗೌಡರ, ಅಮರೇಶ ಗೂಳಿ,ಶ್ರೀಶೈಲ ಮರೋಳ, ಸಂಗಮೇಶ ಕಡಿ, ರಾಜುಗೌಡ ಕೊಂಗಿ,ಅಲ್ಲಾಭಕ್ಷ ದೇಸಾಯಿ, ಹಣಮಂತ ಹಂಡರಗಲ್ಲ,ಶಿವು ಶಿವಪೂರ, ಅಶೋಕ ಚಟ್ಟೇರ,ವೀರೇಶ ಹಡಲಗೇರಿ, ಶ್ರೀನಿವಾಸ ಗೌಂಡಿ, ಕೆ.ಆರ್.ಚೋಪದಾರ,ಬಸವರಾಜ ಸಜ್ಜನ,ವಾಸುದೇವ ಶಾಸ್ತಿçÃ,ಶಂಕರಗೌಡ ತಾವರಖೇಡ ಮೊದಲಾದವರು ಇದ್ದರು.ವ್ಯವಸ್ಥಾಪಕ ಮಂಜುನಾಥ ಬಿ ನಿರೂಪಿಸಿದರು.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು