Ettinhole yojane: Another guarantee announced by CM Siddaramaiah

Ettinhole yojane: ಮತ್ತೊಂದು ಗ್ಯಾರಂಟಿ ಘೋಷಿಸಿದ ಸಿಎಂ ಸಿದ್ದರಾಮಯ್ಯ‌..!

Ettinhole yojane: ಮತ್ತೊಂದು ಗ್ಯಾರಂಟಿ ಘೋಷಿಸಿದ ಸಿಎಂ ಸಿದ್ದರಾಮಯ್ಯ‌..!

Ad
Ad

ಹಾಸನ: ಎತ್ತಿನಹೊಳೆ (Ettinholr yojane) ಎರಡನೆ ಹಂತ 2027ಕ್ಕೆ ಮುಗಿದು ಕುಡಿಯುವ ನೀರು 7 ಜಿಲ್ಲೆಗಳ ಲಕ್ಷಾಂತರ ಮನೆಗಳನ್ನು ತಲುಪುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ‌ ಅವರು ಭರವಸೆಯಿಂದ ನೀಡಿದರು.

Ad
Ad

ಇನ್ನಷ್ಟು ‌ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ‌ಚಾನೆಲ್ ಗೆ ಸೇರಿ: https://t.me/dcgkannada

ಎತ್ತಿನಹೊಳೆ (Ettinhole yojane) ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ಚಾಲನೆ ನೀಡಿದ ಬಳಿಕ, ಹೆಬ್ಬಹಳ್ಳಿಯ 4 ನೇ ವಿತರಣಾ ತೊಟ್ಟಿ ಬಳಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.

ಇದು ಎರಡು ಹಂತದ ಯೋಜನೆ. ಮೊದಲ ಹಂತ ಉದ್ಘಾಟನೆಯಾಗಿದೆ. ಎರಡನೇ ಹಂತ 2027 ಕ್ಕೆ ಮುಕ್ತಾಯಗೊಂಡು ಇಡೀ ಯೋಜನೆ ಯಶಸ್ವಿ ಜಾರಿ ಆಗುತ್ತದೆ. ಲಕ್ಷಾಂತರ ಫಲಾನುಭವಿಗಳ ಯೋಜನೆಯ ಅನುಕೂಲ ತಲುಪಲಿದೆ. 7 ಜಿಲ್ಲೆಗಳ ಜನತೆಯ ಮನಗೆ ಕುಡಿಯುವ ನೀರು ತಲುಪುತ್ತದೆ. ಹತ್ತಾರು ಕೆರೆಗಳನ್ನು ತುಂಬಿಸಲಾಗುತ್ತದೆಎಂದು ಸ್ಪಷ್ಟ ಭರವಸೆ ನೀಡಿದರು.

ಹೀಗಿದ್ದರೂ ಕೆಲವರು, ನಿಮ್ಮ ಕಣ್ಣೆದುರಿಗೇ ಇರುವ ಸತ್ಯವನ್ನು ಸುಳ್ಳು ಎಂದು ಬಿಂಬಿಸಿ ನಿಮ್ಮನ್ನು ಬಕ್ರಾ ಮಾಡಲು ಕೆಲವರು ಯತ್ನಿಸುತ್ತಾರೆ. ಆದ್ದರಿಂದ ಅಪನಂಬಿಕೆ ಸೃಷ್ಟಿಸುವವರ ಮಾತುಗಳನ್ನು ಕೇಳಬೇಡಿ. ನಿಮ್ಮ ಕಣ್ಣೆದುರಿಗೆ ಇರುವುದನ್ನು ನಂಬಿ ಎಂದು ಕರೆ ನೀಡಿದರು.

ಎತ್ತಿನಹೊಳೆಗೆ ನನ್ನ ಕಾಲದಲ್ಲೇ ಭೂಮಿಪೂಜೆ ಆಗಿತ್ತು. ಮೊದಲ ಹಂತದ ಯೋಜನೆಯನ್ನೂ ನಾನೇ ಉದ್ಘಾಟಿಸಿದ್ದೇನೆ. ಎರಡನೇ ಹಂತದ ಯೋಜನೆಯನ್ನೂ ನಾನೇ ಉದ್ಘಾಟಿಸಿ ಯೋಜನೆಯನ್ನು ಪೂರ್ಣ ಮಾಡಿ ಕುಡಿಯುವ ನೀರನ್ನು ಕೊಟ್ಟೇ ಕೊಡ್ತೀವಿ. ಕೆರೆಗಳನ್ನು ತುಂಬಿಸಿಯೇ ತೀರುವುದೂ ಶತಸಿದ್ಧ ಎಂದು ಗ್ಯಾರಂಟಿ ಮಾತುಗಳನ್ನಾಡಿದರು.

ಕುಡಿಯುವ ನೀರಿನ ವಿಚಾರದಲ್ಲಿ ರೈತರಿಗೆ ಅರಣ್ಯಾಧಿಕಾರಿಗಳು ಯಾವುದೇ ತೊಂದರೆ ಕೊಡಬಾರದು ಇದೇ ಸಂದರ್ಭದಲ್ಲಿ ಸ್ಪಷ್ಟ ಸೂಚನೆ ನೀಡಿದರು.

ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ 29 ತಾಲ್ಲೂಕುಗಳ ಬದುಕನ್ನೇ ಬದಲಾಯಿಸುವ ಈ ಮಹತ್ವಾಕಾಂಕ್ಷೆ ಯೋಜನೆಗೆ ಮುಖ್ಯಮಂತ್ರಿಗಳಿಂದ ಚಾಲನೆ ದೊರೆಯಿತು.

ಇದನ್ನೂ ಓದಿ: ಬಾಗಲಕೋಟೆಯಲ್ಲಿ ಎರಡು ಬೈಕ್‌ಗಳ ನಡುವೆ ಡಿಕ್ಕಿ: ಉಪನ್ಯಾಸಕಿ ಸೇರಿ ಮೂವರ ದುರ್ಮರಣ

ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಸಚಿವರಾದ ರಾಜಣ್ಣ, ಎಂ.ಬಿ.ಪಾಟೀಲ್, ಜಿ.ಪರಮೇಶ್ವರ್, ಕೆ.ಜೆ.ಜಾರ್ಜ್ ಸೇರಿ ಐದು ತಾಲ್ಲೂಕುಗಳ ಶಾಸಕರು, ಚುನಾಯಿತ ಪ್ರತಿನಿಧಿಗಳು ಇಲಾಖೆಯ ಹಿರಿಯ ಅಧಿಕಾರಿಗಳು ಈ ಸಂಭ್ರಮದ ಕ್ಷಣಕ್ಕೆ ಸಾಕ್ಷಿಯಾದರು.

Latest News

ಹೋಳಿ, ರಂಜಾನ್ ಶಾಂತಿಪಾಲನಾ ಸಭೆ:ಮತ್ತೊಬ್ಬರ ಭಾವನೆಗಳಿಗೆ ಧಕ್ಕೆ ಬಾರದಂತೆ ಹಬ್ಬದಾಚರಣೆhu ಮಾಡಿ

ಹೋಳಿ, ರಂಜಾನ್ ಶಾಂತಿಪಾಲನಾ ಸಭೆ:ಮತ್ತೊಬ್ಬರ ಭಾವನೆಗಳಿಗೆ ಧಕ್ಕೆ ಬಾರದಂತೆ ಹಬ್ಬದಾಚರಣೆhu ಮಾಡಿ

ಮುದ್ದೇಬಿಹಾಳ : ಹೋಳಿ ಹಾಗೂ ರಂಜಾನ್ ಹಬ್ಬಗಳು ಶಾಂತಿ,ಸಹೋದರತೆ ಪ್ರೀತಿ ಹಾಗೂ ಸಹೋದರತೆಯ ಸಂಕೇತಗಳಾಗಿದ್ದು

ಕ್ಷೌರಿಕ ಜನಾಂಗಕ್ಕೆ ಅಪಮಾನ-ಕ್ಷಮೆಯಾಚನೆಗೆ ಆಗ್ರಹ

ಕ್ಷೌರಿಕ ಜನಾಂಗಕ್ಕೆ ಅಪಮಾನ-ಕ್ಷಮೆಯಾಚನೆಗೆ ಆಗ್ರಹ

ಮುದ್ದೇಬಿಹಾಳ : ಪಟ್ಟಣದ ಹೆಸ್ಕಾಂನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಟಿಸಿ ದುರಸ್ತಿ ಕೇಂದ್ರದ ಉದ್ಘಾಟನಾ¸ ಸಮಾರಂಭದಲ್ಲಿ

ಕುಂಟೋಜಿ ಗ್ರಾಪಂ ಮುಂದೆ ಧರಣಿ: ನಕಲಿ ದಾಖಲೆ ಸೃಷ್ಟಿಸಿ ನೇಮಕವಾದ ವಾಟರ್‌ಮನ್‌ಗಳ ವಜಾಗೆ ಆಗ್ರಹ

ಕುಂಟೋಜಿ ಗ್ರಾಪಂ ಮುಂದೆ ಧರಣಿ: ನಕಲಿ ದಾಖಲೆ ಸೃಷ್ಟಿಸಿ ನೇಮಕವಾದ ವಾಟರ್‌ಮನ್‌ಗಳ ವಜಾಗೆ ಆಗ್ರಹ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮ ಪಂಚಾಯಿತಿಯಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ನೇಮಕಗೊಂಡಿರುವ ಮೂವರು

ಜೀವನಾಂಶ ಕೇಳಿದ್ದ ಪತ್ನಿಯ ಮನವೊಲಿಕೆ: ದಂಪತಿಗಳನ್ನು ಒಂದುಗೂಡಿಸಿದ ಲೋಕಅದಾಲತ್

ಜೀವನಾಂಶ ಕೇಳಿದ್ದ ಪತ್ನಿಯ ಮನವೊಲಿಕೆ: ದಂಪತಿಗಳನ್ನು ಒಂದುಗೂಡಿಸಿದ ಲೋಕಅದಾಲತ್

ಮುದ್ದೇಬಿಹಾಳ : ಕೌಟುಂಬಿಕ ಹಿನ್ನೆಲೆಯ ದಂಪತಿಗಳಿಬ್ಬರ ಪ್ರಕರಣವನ್ನು ಇಲ್ಲಿನ ಲೋಕ ಅದಾಲತ್‌ನಲ್ಲಿ ರಾಜೀ ಸಂಧಾನದ

ಇಟಗಿ ಗ್ರಾಮದ ಶರಣಮ್ಮ ಬ. ಪಾಟೀಲ ನಿಧನ

ಇಟಗಿ ಗ್ರಾಮದ ಶರಣಮ್ಮ ಬ. ಪಾಟೀಲ ನಿಧನ

ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕಿನ ಇಟಗಿ ಗ್ರಾಮದ ಶರಣಮ್ಮ ಬಸನಗೌಡ ಪಾಟೀಲ (72) ಅವರು ಬುಧವಾರ ಫೆ.12ರ ಬೆಳಗಿನ ಜಾವ ಸುಮಾರು 12:30ಕ್ಕೆ ನಿಧನರಾದರು. ಮೃತರಿಗೆ ಪತಿ, ಇಬ್ಬರು ಪುತ್ರರು, ನಾಲ್ವರು ಮೊಮ್ಮಕ್ಕಳು ಇದ್ದಾರೆ. ಮೃತರ ಅಂತ್ಯಕ್ರಿಯೆ ಬುಧವಾರ ಫೆ.12ರ ಮಧ್ಯಾಹ್ನ 2 ಗಂಟೆಗೆ ಸ್ವಗ್ರಾಮ ಇಟಗಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಸರಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣಕ್ಕೆ ಅಧಿಕಾರಿಗಳೇ ಗೈರು ಹಾಜರಿ

ಸರಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣಕ್ಕೆ ಅಧಿಕಾರಿಗಳೇ ಗೈರು ಹಾಜರಿ

ಬೀಳಗಿ: ನಮ್ಮೆಲ್ಲರ ಸಂಘಟಿತ ಹೋರಾಟದ ಫಲವಾಗಿ 7ನೇ ವೇತನ ಆಯೋಗ ಯಥಾವತ್ತಾಗಿ ಜಾರಿಗೆ ಬಂದಿದಲ್ಲದೆ, ನಮ್ಮ ಕುಟುಂಬ ವರ್ಗದಲ್ಲಿ ಅನಾರೋಗ್ಯಕೀಡಾದ ಸಂದರ್ಭದಲ್ಲಿ ಉಚಿತ ಚಿಕಿತ್ದೆಗಾಗಿ ಆರೋಗ್ಯ ಸಂಜವೀನಿ ಅನುಷ್ಟಾನಗೊಳಿಸಲು ಯಶಸ್ಬಿಯಾಗಿದ್ದು, 2006 ರಿಂದ ನೇಮಕಗೊಂಡ ಸರಕಾರಿ ನೌಕರರ ಹಿತ ದೃಷ್ಡಿಯಿಂದ ಸರಕಾರ ಜಾರಿಗೊಳಿಸಿದ ಎನ್ ಪಿ ಎಸ್ ರದ್ದುಗೊಳಿಸಿ ಓ ಪಿ ಎಸ್ ಜಾರಿಯಾಗಲು ಹೋರಾಟ ಮಾಡಿ ಯಶಸ್ವಿಯಾಗಲು ಪ್ರತಿಯೊಬ್ಬರು ಸಂಘಟೀತರಾಗೋಣ ಎಂದು ಕ.ರಾ.ಸ. ನೌಕರರ ಸಂಘದ ಜಿಲ್ಲಾಧ್ಯಕ್ಷ ಎಮ್.