ಪ್ರತಿಯೊಬ್ಬರೂ ಸಂವಿಧಾನಕ್ಕೆ ಗೌರವ ನೀಡಿ: SMES ಅಧ್ಯಕ್ಷ ಎಂ.ಆರ್. ನಾಯಕರ

ಪ್ರತಿಯೊಬ್ಬರೂ ಸಂವಿಧಾನಕ್ಕೆ ಗೌರವ ನೀಡಿ: SMES ಅಧ್ಯಕ್ಷ ಎಂ.ಆರ್. ನಾಯಕರ

ಬಬಲೇಶ್ವರ: ದೇಶವನ್ನು ಸುವ್ಯವಸ್ಥಿತವಾಗಿ ಮುಂದೆ ಕೊಂಡ್ಯೊಯುವ ಉದ್ದೇಶದಿಂದ ಸ್ವತಂತ್ರ್ಯದ ನಂತರ ಸಂವಿಧಾನ ರಚಿಸಲಾಯಿತು ಎಂದು ದೇವಾಪುರದ ಶ್ರೀ ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆ (SMES) ಅಧ್ಯಕ್ಷ ಎಂ.ಆರ್. ನಾಯಕರ ಹೇಳಿದರು.

ತಾಲೂಕಿನ ಸಮೀಪದ ದೇವಾಪುರದ SMES ಆಂಗ್ಲ ಮಾಧ್ಯಮ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಸಂವಿಧಾನವನ್ನು 1949ರ ನವೆಂಬರ್ 26 ಅಳವಡಿಸಿಕೊಂಡು, 1950 ಜನೇವರಿ 26ರಂದು ಜಾರಿಗೆ ತರಲಾಯಿತು. ಇದರ ಸವಿನೆನಪಿಗಾಗಿ ಪ್ರತೀ ವರ್ಷ ಜನೇವರಿ 26ರಂದು ಗಣರಾಜ್ಯೋತ್ಸವ ಆರಿಸಲಾಗುತ್ತಿದೆ ಎಂದರು.

ಪ್ರತಿಯೊಬ್ಬರೂ ಸಂವಿಧಾನಕ್ಕೆ ಗೌರವ ನೀಡಿ, ಪಾಲಿಸಿದಾಗ ಸುಸಂಸ್ಕೃತ ಸಮಾಜ ನಿರ್ಮಾಣ ಸಾಧ್ಯ. ಈ ನಿಟ್ಟಿನಲ್ಲಿ ವಿದ್ಯಾರ್ಥಿ ದೆಸೆಯಿಂದಲೇ ಕಾನೂನಿನ ಅರಿವು ಹೊಂದುವುದು ಮುಖ್ಯ ಎಂದು SMES ಅಧ್ಯಕ್ಷ ಎಂ.ಆರ್. ನಾಯಕರ ಅಭಿಪ್ರಾಯಪಟ್ಟರು.

SMES ಕಾರ್ಯದರ್ಶಿ ಬಸುರಾಜ ಯಂಕಪ್ಪ ಸಿದ್ದರೆಡ್ಡಿ (ಪಪ್ಪು ದೇಸಾಯಿ) ಮಾತನಾಡಿ, ಕಾನೂನಿನ ಅರಿವು ಹೊಂದಿದಾಗ ಮಾತ್ರ ಪೊಲೀಸ್ ಠಾಣೆ, ಕೋರ್ಟ್ ನಲ್ಲಿ ನ್ಯಾಯ ಪಡೆಯುವುದು ಸುಲಭ ಸಾಧ್ಯ ಎಂದು ಹೇಳಿದರು.

SMES ಕಾರ್ಯಾಧ್ಯಕ್ಷ ಸಿದ್ದಪ್ಪ ಎಂ. ನಾಯಿಕರ (ವಿವೇಕ ನಾಯಿಕರ) ಮಾತನಾಡಿ, ಉತ್ತಮ ಶಿಕ್ಷಣ ಪಡೆದಾಗ ಮಾತ್ರ ಸಂವಿಧಾನದ ಅರಿವು ಹೊಂದಲು ಸಾಧ್ಯ‌. ಆದ್ದರಿಂದ ಎಲ್ಲರೂ ಗುಣಮಟ್ಟದ ಶಿಕ್ಷಣವನ್ನು ಪಡೆದು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಸಲಹೆ ನೀಡಿದರು.

ಧ್ವಜಾರೋಹಣದ ನಂತರ ವಿದ್ಯಾರ್ಥಿಗಳು ತಾಯಂದಿರ ಪಾದಪೂಜೆ ನೆರವೇರಿಸಿದರು. ತದನಂತರ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

ಈ ವೇಳೆ SMES ಗೌರವಾಧ್ಯಕ್ಷರಾದ ಲಕ್ಷ್ಮವ್ವ ಆರ್. ನಾಯಕರ, ಸದಸ್ಯರಾದ ವಿಠ್ಠಲ್ ಆರ್. ನಾಯಕರ, ಲಕ್ಷ್ಮಣ ಖಜ್ಜಿಡೋಣಿ, ಕಮಲಾ ವಿ. ನಾಯಕರ, ಕುಮಾರ ವಿ. ನಾಯಕರ, ಸಲಹಾ ಸಮಿತಿ ಸದಸ್ಯರಾದ ರಮೇಶ ಬಳೂತಿ, ಮಲ್ಲಪ್ಪ ಹಂಚಿನಾಳ, SMES ಆಡಳಿತಾಧಿಕಾರಿಗಳಾದ ಡಿ.ಸಿ. ಗುಡಿಹಿಂದಿನ, ಆನಂದ ಹುಣಶಾಳ, ಶಿಕ್ಷಕಿಯರಾದ ಪ್ರೇಮಾ, ರಾಧಿಕಾ, ಸಿಬ್ಬಂದಿ ಎಸ್.ಜಿ. ಮೇಟಿ, ಎಸ್.ಎಸ್ ಮೇಟಿ ಮತ್ತಿತರರು ಇದ್ದರು.

Latest News

Winning at Chicken Road Slot Machines

The Chicken Road slot machine is a 5-reel, 25-payline game that

Chicken Road 2 Slot Machine Experience

The Chicken Road 2 slot machine is a sequel to the

ಪ್ರತಿಯೊಬ್ಬರೂ ಸಂವಿಧಾನಕ್ಕೆ ಗೌರವ ನೀಡಿ: SMES ಅಧ್ಯಕ್ಷ ಎಂ.ಆರ್. ನಾಯಕರ

ಪ್ರತಿಯೊಬ್ಬರೂ ಸಂವಿಧಾನಕ್ಕೆ ಗೌರವ ನೀಡಿ: SMES ಅಧ್ಯಕ್ಷ ಎಂ.ಆರ್. ನಾಯಕರ

ಬಬಲೇಶ್ವರ: ದೇಶವನ್ನು ಸುವ್ಯವಸ್ಥಿತವಾಗಿ ಮುಂದೆ ಕೊಂಡ್ಯೊಯುವ ಉದ್ದೇಶದಿಂದ ಸ್ವತಂತ್ರ್ಯದ ನಂತರ ಸಂವಿಧಾನ ರಚಿಸಲಾಯಿತು ಎಂದು

ಮದರಿ ಗ್ರಾಮದ ನದಿ ತೀರದ ಜಮೀನಿನಲ್ಲಿ ಚಿರತೆ ಪ್ರತ್ಯಕ್ಷ: ಹೆಚ್ಚಿದ ಆತಂಕ

ಮದರಿ ಗ್ರಾಮದ ನದಿ ತೀರದ ಜಮೀನಿನಲ್ಲಿ ಚಿರತೆ ಪ್ರತ್ಯಕ್ಷ: ಹೆಚ್ಚಿದ ಆತಂಕ

ಮುದ್ದೇಬಿಹಾಳ : ತಾಲೂಕಿನ ಕೃಷ್ಣಾ ನದಿ ತೀರದ ಮದರಿ ಗ್ರಾಮವ್ಯಾಪ್ತಿಯ ಕಬ್ಬಿನ ಗದ್ದೆಯ ಹತ್ತಿರ

ಗುರು,ಹಿರಿಯರಿಗೆ ಕೊಡುವ ಗೌರವವೇ ದೇವರ ಪೂಜೆ-ನವಲಿ

ಗುರು,ಹಿರಿಯರಿಗೆ ಕೊಡುವ ಗೌರವವೇ ದೇವರ ಪೂಜೆ-ನವಲಿ

ಮುದ್ದೇಬಿಹಾಳ : ಗುರು ಹಿರಿಯರಿಗೆ ಕೊಡುವ ಗೌರವವೇ ನಿಜವಾದ ದೇವರ ಪೂಜೆ ಎಂದು ಗುಡಿಹಾಳದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಸಂಗಮೇಶ ನವಲಿ ಹೇಳಿದರು. ತಾಲ್ಲೂಕಿನ ಗುಡಿಹಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ದೇವರು ನಮ್ಮೊಳಗೆ ಇದ್ದಾನೆ. ನಮ್ಮ ತಂದೆ ತಾಯಿ ಗುರುಹಿರಿಯರ ರೂಪದಲ್ಲಿ ಇದ್ದಾನೆ. ಅವರನ್ನು ಗೌರವಿಸುವುದನ್ನು ಅಂಬಿಗರ ಚೌಡಯ್ಯನವರು ಹೇಳಿದ್ದಾರೆ ಎಂದು ಹೇಳಿದರು. ಶಾಲೆಯ ಎಸ್‌ಡಿಎಂಸಿ

ಜ.24 ರಂದು ಸಾವಿತ್ರಿ ಬಾಯಿ ಫುಲೆ ಜಯಂತಿ: ಉತ್ತಮ ಶಿಕ್ಷಕ,ಶಿಕ್ಷಕಿಯರಿಗೆ ಪ್ರಶಸ್ತಿ

ಜ.24 ರಂದು ಸಾವಿತ್ರಿ ಬಾಯಿ ಫುಲೆ ಜಯಂತಿ: ಉತ್ತಮ ಶಿಕ್ಷಕ,ಶಿಕ್ಷಕಿಯರಿಗೆ ಪ್ರಶಸ್ತಿ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದಿAದ ಸಾವಿತ್ರಿಬಾಯಿ ಫುಲೆ ಜಯಂತಿ ಹಾಗೂ ಶೈಕ್ಷಣಿಕ ಕಾರ್ಯಾಗಾರ, ಉತ್ತಮ ಶಿಕ್ಷಕ,ಶಿಕ್ಷಕಿಯರ ಪ್ರಶಸ್ತಿ ಪ್ರದಾನ ಸಮಾರಂಭ ಜ.24 ರಂದು ಬೆಳಗ್ಗೆ 11 ಗಂಟೆಗೆ ಪಟ್ಟಣದ ಕೃಷ್ಣಾ ಮಂಗಲಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ದಿವ್ಯ ಸಾನಿಧ್ಯವನ್ನು ಕುಂಟೋಜಿ ಭಾವೈಕ್ಯತಾ ಮಠದ ಚನ್ನವೀರ ಶಿವಾಚಾರ್ಯರು ವಹಿಸುವರು.ಶಾಸಕ ಸಿ.ಎಸ್.ನಾಡಗೌಡ ಉದ್ಘಾಟಿಸುವರು.ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಬಸವ ಭಾವಪೂಜೆ ಮಾಡುವರು.ಸಾವಿತ್ರಿಬಾಯಿ ಫುಲೆ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷೆ ಎಂ.ಜಿ.ವಾಲಿ