ಪ್ರತಿಯೊಬ್ಬರೂ ಸಂವಿಧಾನಕ್ಕೆ ಗೌರವ ನೀಡಿ: SMES ಅಧ್ಯಕ್ಷ ಎಂ.ಆರ್. ನಾಯಕರ

ಪ್ರತಿಯೊಬ್ಬರೂ ಸಂವಿಧಾನಕ್ಕೆ ಗೌರವ ನೀಡಿ: SMES ಅಧ್ಯಕ್ಷ ಎಂ.ಆರ್. ನಾಯಕರ

ಬಬಲೇಶ್ವರ: ದೇಶವನ್ನು ಸುವ್ಯವಸ್ಥಿತವಾಗಿ ಮುಂದೆ ಕೊಂಡ್ಯೊಯುವ ಉದ್ದೇಶದಿಂದ ಸ್ವತಂತ್ರ್ಯದ ನಂತರ ಸಂವಿಧಾನ ರಚಿಸಲಾಯಿತು ಎಂದು ದೇವಾಪುರದ ಶ್ರೀ ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆ (SMES) ಅಧ್ಯಕ್ಷ ಎಂ.ಆರ್. ನಾಯಕರ ಹೇಳಿದರು.

ತಾಲೂಕಿನ ಸಮೀಪದ ದೇವಾಪುರದ SMES ಆಂಗ್ಲ ಮಾಧ್ಯಮ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಸಂವಿಧಾನವನ್ನು 1949ರ ನವೆಂಬರ್ 26 ಅಳವಡಿಸಿಕೊಂಡು, 1950 ಜನೇವರಿ 26ರಂದು ಜಾರಿಗೆ ತರಲಾಯಿತು. ಇದರ ಸವಿನೆನಪಿಗಾಗಿ ಪ್ರತೀ ವರ್ಷ ಜನೇವರಿ 26ರಂದು ಗಣರಾಜ್ಯೋತ್ಸವ ಆರಿಸಲಾಗುತ್ತಿದೆ ಎಂದರು.

ಪ್ರತಿಯೊಬ್ಬರೂ ಸಂವಿಧಾನಕ್ಕೆ ಗೌರವ ನೀಡಿ, ಪಾಲಿಸಿದಾಗ ಸುಸಂಸ್ಕೃತ ಸಮಾಜ ನಿರ್ಮಾಣ ಸಾಧ್ಯ. ಈ ನಿಟ್ಟಿನಲ್ಲಿ ವಿದ್ಯಾರ್ಥಿ ದೆಸೆಯಿಂದಲೇ ಕಾನೂನಿನ ಅರಿವು ಹೊಂದುವುದು ಮುಖ್ಯ ಎಂದು SMES ಅಧ್ಯಕ್ಷ ಎಂ.ಆರ್. ನಾಯಕರ ಅಭಿಪ್ರಾಯಪಟ್ಟರು.

SMES ಕಾರ್ಯದರ್ಶಿ ಬಸುರಾಜ ಯಂಕಪ್ಪ ಸಿದ್ದರೆಡ್ಡಿ (ಪಪ್ಪು ದೇಸಾಯಿ) ಮಾತನಾಡಿ, ಕಾನೂನಿನ ಅರಿವು ಹೊಂದಿದಾಗ ಮಾತ್ರ ಪೊಲೀಸ್ ಠಾಣೆ, ಕೋರ್ಟ್ ನಲ್ಲಿ ನ್ಯಾಯ ಪಡೆಯುವುದು ಸುಲಭ ಸಾಧ್ಯ ಎಂದು ಹೇಳಿದರು.

SMES ಕಾರ್ಯಾಧ್ಯಕ್ಷ ಸಿದ್ದಪ್ಪ ಎಂ. ನಾಯಿಕರ (ವಿವೇಕ ನಾಯಿಕರ) ಮಾತನಾಡಿ, ಉತ್ತಮ ಶಿಕ್ಷಣ ಪಡೆದಾಗ ಮಾತ್ರ ಸಂವಿಧಾನದ ಅರಿವು ಹೊಂದಲು ಸಾಧ್ಯ‌. ಆದ್ದರಿಂದ ಎಲ್ಲರೂ ಗುಣಮಟ್ಟದ ಶಿಕ್ಷಣವನ್ನು ಪಡೆದು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಸಲಹೆ ನೀಡಿದರು.

ಧ್ವಜಾರೋಹಣದ ನಂತರ ವಿದ್ಯಾರ್ಥಿಗಳು ತಾಯಂದಿರ ಪಾದಪೂಜೆ ನೆರವೇರಿಸಿದರು. ತದನಂತರ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

ಈ ವೇಳೆ SMES ಗೌರವಾಧ್ಯಕ್ಷರಾದ ಲಕ್ಷ್ಮವ್ವ ಆರ್. ನಾಯಕರ, ಸದಸ್ಯರಾದ ವಿಠ್ಠಲ್ ಆರ್. ನಾಯಕರ, ಲಕ್ಷ್ಮಣ ಖಜ್ಜಿಡೋಣಿ, ಕಮಲಾ ವಿ. ನಾಯಕರ, ಕುಮಾರ ವಿ. ನಾಯಕರ, ಸಲಹಾ ಸಮಿತಿ ಸದಸ್ಯರಾದ ರಮೇಶ ಬಳೂತಿ, ಮಲ್ಲಪ್ಪ ಹಂಚಿನಾಳ, SMES ಆಡಳಿತಾಧಿಕಾರಿಗಳಾದ ಡಿ.ಸಿ. ಗುಡಿಹಿಂದಿನ, ಆನಂದ ಹುಣಶಾಳ, ಶಿಕ್ಷಕಿಯರಾದ ಪ್ರೇಮಾ, ರಾಧಿಕಾ, ಸಿಬ್ಬಂದಿ ಎಸ್.ಜಿ. ಮೇಟಿ, ಎಸ್.ಎಸ್ ಮೇಟಿ ಮತ್ತಿತರರು ಇದ್ದರು.

Latest News

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ ಸಹಕಾರದಿಂದ ಗಣತಿ ನಮೂನೆಗಳ ವಿತರಣೆ ಕಾರ್ಯದಲ್ಲಿ ಮುದ್ದೇಬಿಹಾಳ ಮತಕ್ಷೇತ್ರ ಶೇ.98.38ರಷ್ಟು ಸಾಧನೆ ಮಾಡಿ ವಿಜಯಪುರ ಜಿಲ್ಲೆಗೆ ಎರಡನೇ ಸ್ಥಾನ ಪಡೆದುಕೊಂಡಿದೆ ಎಂದು ಮತದಾರರ ನೋಂದಣಾಧಿಕಾರಿ,ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯ ಕುರಿತು ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.2,28,285 ಮತದಾರರಲ್ಲಿ 2,24,589 ಮತದಾರರಿಗೆ ಗಣತಿ ನಮೂನೆ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ