ಪ್ರತಿಯೊಬ್ಬರೂ ಸಂವಿಧಾನಕ್ಕೆ ಗೌರವ ನೀಡಿ: SMES ಅಧ್ಯಕ್ಷ ಎಂ.ಆರ್. ನಾಯಕರ

ಪ್ರತಿಯೊಬ್ಬರೂ ಸಂವಿಧಾನಕ್ಕೆ ಗೌರವ ನೀಡಿ: SMES ಅಧ್ಯಕ್ಷ ಎಂ.ಆರ್. ನಾಯಕರ

ಬಬಲೇಶ್ವರ: ದೇಶವನ್ನು ಸುವ್ಯವಸ್ಥಿತವಾಗಿ ಮುಂದೆ ಕೊಂಡ್ಯೊಯುವ ಉದ್ದೇಶದಿಂದ ಸ್ವತಂತ್ರ್ಯದ ನಂತರ ಸಂವಿಧಾನ ರಚಿಸಲಾಯಿತು ಎಂದು ದೇವಾಪುರದ ಶ್ರೀ ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆ (SMES) ಅಧ್ಯಕ್ಷ ಎಂ.ಆರ್. ನಾಯಕರ ಹೇಳಿದರು.

ತಾಲೂಕಿನ ಸಮೀಪದ ದೇವಾಪುರದ SMES ಆಂಗ್ಲ ಮಾಧ್ಯಮ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಸಂವಿಧಾನವನ್ನು 1949ರ ನವೆಂಬರ್ 26 ಅಳವಡಿಸಿಕೊಂಡು, 1950 ಜನೇವರಿ 26ರಂದು ಜಾರಿಗೆ ತರಲಾಯಿತು. ಇದರ ಸವಿನೆನಪಿಗಾಗಿ ಪ್ರತೀ ವರ್ಷ ಜನೇವರಿ 26ರಂದು ಗಣರಾಜ್ಯೋತ್ಸವ ಆರಿಸಲಾಗುತ್ತಿದೆ ಎಂದರು.

ಪ್ರತಿಯೊಬ್ಬರೂ ಸಂವಿಧಾನಕ್ಕೆ ಗೌರವ ನೀಡಿ, ಪಾಲಿಸಿದಾಗ ಸುಸಂಸ್ಕೃತ ಸಮಾಜ ನಿರ್ಮಾಣ ಸಾಧ್ಯ. ಈ ನಿಟ್ಟಿನಲ್ಲಿ ವಿದ್ಯಾರ್ಥಿ ದೆಸೆಯಿಂದಲೇ ಕಾನೂನಿನ ಅರಿವು ಹೊಂದುವುದು ಮುಖ್ಯ ಎಂದು SMES ಅಧ್ಯಕ್ಷ ಎಂ.ಆರ್. ನಾಯಕರ ಅಭಿಪ್ರಾಯಪಟ್ಟರು.

SMES ಕಾರ್ಯದರ್ಶಿ ಬಸುರಾಜ ಯಂಕಪ್ಪ ಸಿದ್ದರೆಡ್ಡಿ (ಪಪ್ಪು ದೇಸಾಯಿ) ಮಾತನಾಡಿ, ಕಾನೂನಿನ ಅರಿವು ಹೊಂದಿದಾಗ ಮಾತ್ರ ಪೊಲೀಸ್ ಠಾಣೆ, ಕೋರ್ಟ್ ನಲ್ಲಿ ನ್ಯಾಯ ಪಡೆಯುವುದು ಸುಲಭ ಸಾಧ್ಯ ಎಂದು ಹೇಳಿದರು.

SMES ಕಾರ್ಯಾಧ್ಯಕ್ಷ ಸಿದ್ದಪ್ಪ ಎಂ. ನಾಯಿಕರ (ವಿವೇಕ ನಾಯಿಕರ) ಮಾತನಾಡಿ, ಉತ್ತಮ ಶಿಕ್ಷಣ ಪಡೆದಾಗ ಮಾತ್ರ ಸಂವಿಧಾನದ ಅರಿವು ಹೊಂದಲು ಸಾಧ್ಯ‌. ಆದ್ದರಿಂದ ಎಲ್ಲರೂ ಗುಣಮಟ್ಟದ ಶಿಕ್ಷಣವನ್ನು ಪಡೆದು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಸಲಹೆ ನೀಡಿದರು.

ಧ್ವಜಾರೋಹಣದ ನಂತರ ವಿದ್ಯಾರ್ಥಿಗಳು ತಾಯಂದಿರ ಪಾದಪೂಜೆ ನೆರವೇರಿಸಿದರು. ತದನಂತರ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

ಈ ವೇಳೆ SMES ಗೌರವಾಧ್ಯಕ್ಷರಾದ ಲಕ್ಷ್ಮವ್ವ ಆರ್. ನಾಯಕರ, ಸದಸ್ಯರಾದ ವಿಠ್ಠಲ್ ಆರ್. ನಾಯಕರ, ಲಕ್ಷ್ಮಣ ಖಜ್ಜಿಡೋಣಿ, ಕಮಲಾ ವಿ. ನಾಯಕರ, ಕುಮಾರ ವಿ. ನಾಯಕರ, ಸಲಹಾ ಸಮಿತಿ ಸದಸ್ಯರಾದ ರಮೇಶ ಬಳೂತಿ, ಮಲ್ಲಪ್ಪ ಹಂಚಿನಾಳ, SMES ಆಡಳಿತಾಧಿಕಾರಿಗಳಾದ ಡಿ.ಸಿ. ಗುಡಿಹಿಂದಿನ, ಆನಂದ ಹುಣಶಾಳ, ಶಿಕ್ಷಕಿಯರಾದ ಪ್ರೇಮಾ, ರಾಧಿಕಾ, ಸಿಬ್ಬಂದಿ ಎಸ್.ಜಿ. ಮೇಟಿ, ಎಸ್.ಎಸ್ ಮೇಟಿ ಮತ್ತಿತರರು ಇದ್ದರು.

Latest News

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ:                            ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಪತ್ರಕರ್ತ ಗುಲಾಂ ದಫೇದಾರ ನಾಮಪತ್ರ ಸಲ್ಲಿಕೆ: ಅಂಜುಮನ್ ಗತವೈಭವ ಮರುಸ್ಥಾಪಿಸಲು ಯತ್ನ-ಅಬ್ದುಲಗಫೂರ್ ಮಕಾನದಾರ

ಮುದ್ದೇಬಿಹಾಳ : ಸ್ವಾತಂತ್ರ ಪೂರ್ವದಲ್ಲಿ ಹುಟ್ಟಿರುವ ಅಂಜುಮನ್ ಇಸ್ಲಾಂ ಕಮೀಟಿಯ ಆರಂಭದಲ್ಲಿದ್ದ ವೈಭವವನ್ನು ಮರಳಿ

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು ಶಿಕ್ಷಣ ಸೇವಾ ಟ್ರಸ್ಟ್(ರಿ) ಸಹಯೋಗದಲ್ಲಿ ಪತ್ರಿಕಾ ಹಾಗೂ ವೈದ್ಯರ ದಿನಾಚರಣೆಯ ಅಂಗವಾಗಿ ಜು.26 ರಂದು ಬೆಳಗ್ಗೆ 10.00ಕ್ಕೆ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಿವೃತ್ತ ನೌಕರರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ, ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ. ಹುನಗುಂದ-ಮುದ್ದೇಬಿಹಾಳದ ಗಚ್ಚಿನಮಠ-ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯ ವಹಿಸುವರು.ಕಾನಿಪ ಧ್ವನಿ ರಾಜ್ಯ ಅಧ್ಯಕ್ಷ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್ ಅಕಾಡೆಮಿಯ 2026ರ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು 12 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ ಪಡೆದುಕೊಂಡಿದ್ದಾರೆ. ನೀಟ್ ಫಲಿತಾಂಶದ ಕುರಿತು ಮಾಹಿತಿ ನೀಡಿರುವ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ್, ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಅವರು, ಈ ಬಾರಿ 190ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ದೊರೆಯುವ ನಿರೀಕ್ಷೆ ಇದೆ ಎಂದು ತಿಳಿಸಿದರು.ನೀಟ್‌ನಲ್ಲಿ 500ಕ್ಕೂ ಅಧಿಕ 140 ವಿದ್ಯಾರ್ಥಿಗಳು,