Everything is possible with education; Bhringeshwar Shri

ಶಿಕ್ಷಣದಿಂದ ಎಲ್ಲವೂ ಸಾಧ್ಯ ; ಭೃಂಗೇಶ್ವರ ಶ್ರೀ

ಶಿಕ್ಷಣದಿಂದ ಎಲ್ಲವೂ ಸಾಧ್ಯ ; ಭೃಂಗೇಶ್ವರ ಶ್ರೀ

ಶಹಾಪುರ : ಇಂದಿನ ಪ್ರಸ್ತುತ ದಿನಗಳಲ್ಲಿ ಮಕ್ಕಳಿಗೆ ಆಸ್ತಿ ಮಾಡುವ ಬದಲು, ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡುವ ಜೊತೆಗೆ ಮಕ್ಕಳ ಉನ್ನತಿಗೆ ಪೋಷಕರು ಸಹಕಾರ ಅಗತ್ಯವಾಗಿದ್ದು ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ಹೆಳವ ಸಮಾಜ ಕೋಡಿಹಳ್ಳಿ ಮಠದ ಶ್ರೀ ಬಸವ ಭೃಂಗೇಶ್ವರ ಶ್ರೀಗಳು ತಿಳಿಸಿದರು.

ಅಖಿಲ ಕರ್ನಾಟಕ ಹೆಳವ ಸಮಾಜ ಯಾದಗಿರಿ ಜಿಲ್ಲಾ ಘಟಕದ ವತಿಯಿಂದ ಹಮ್ಮಿಕೊಂಡಿದ್ದ 2024 – 25ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ ಹೆಳವ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.

ಶಹಾಪುರ ನಗರದ ಶ್ರೀ ಚರಬಸವೇಶ್ವರ ಗದ್ದುಗೆ ಕಲ್ಯಾಣ ಮಂಟಪದಲ್ಲಿ ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದ ಕುರಿತು ಧುಮ್ಮನಸೂರು ಮಠದ ಶ್ರೀ ಶಂಕರಲಿಂಗ ಸ್ವಾಮಿಗಳು, ಯಾದವ ಸಮುದಾಯದ ಹಿರಿಯ ಮುಖಂಡರಾದ ತಿಮ್ಮಯ್ಯ ಪುರ್ಲೆ, ಕ್ರಾಂತಿ ಪತ್ರಿಕೆ ಸಂಪಾದಕರಾದ ಇಂಧೂಧರ ಸಿನ್ನೂರ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳಾದ ಸದಾಶಿವ ನಾರಾಯಣಕರ, ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಚನ್ನಪ್ಪಗೌಡ ಚೌಧರಿ, ಬಸವರಾಜ ಹೆಳವರ ಯಾಳಗಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದು ತೇರ್ಗಡೆಯಾದ 11 ವಿಧ್ಯಾರ್ಥಿಗಳನ್ನು ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನದ ಜೊತೆಗೆ ಪ್ರತಿಭಾ ಪುರಸ್ಕಾರದ ಮಾಡಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಹಿರಿಯರಾದ ಹೆಚ್. ಎನ್. ಗೋಗಿ, ಮಲ್ಲಿಕಾರ್ಜುನ ಬಿ. ಹೆಚ್. ಕಲಬುರ್ಗಿ, ಸಾಯಬಣ್ಣ ಹೆಳವರ ಕಲಬುರಗಿ, ಶ್ರೀಮಂತ ಸೌಂದರ್ಗೆ, ಶರಣಪ್ಪ ಕೆಲೂರ, ಹಣಮಂತ್ರಾಯ ಹಳಿಸಗರ, ಸಣ್ಣ ಭಿಮರಾಯ ಯಾಳಗಿ, ಶ್ರೀಕಾಂತ್ ಯಾಳಗಿ, ಪರಶುರಾಮ್ ಮುದನೂರ, ಲಾಲಪ್ಪ ಕಟ್ಟಿಮನಿ, ಹಣಮಂತ್ರಾಯ ಖಾನಾಪುರ, ಚಂದಪ್ಪ ಕಕ್ಕೇರಾ, ನೆಹರೂ ಹಳಿಸಗರ, ದೇವಪ್ಪ ನಗನೂರ, ಭೀಮರಾಯ ದಂಡಸೊಲ್ಲಾಪುರ, ರಾಮಚಂದ್ರ ಹೆಗ್ಗಣದೊಡ್ಡಿ, ಮಲ್ಲಪ್ಪ ದೋರನಳ್ಳಿ, ಭೀಮಣ್ಣ ಹಂಚಿನಾಳ, ಶಿವು ಕಕ್ಕೇರಾ, ಅಂಬ್ರೀಶ್ ಯಾದಗಿರಿ ಸೇರಿದಂತೆ ಇತರರು ಇದ್ದರು.

ರಾಘವೇಂದ್ರ ಮಾಸ್ತರ ನಿರೂಪಿಸಿದರು, ರಮೇಶ ಹೆಳವರ ಸ್ವಾಗತಿಸಿ ವಂದಿಸಿದರು.

ವರದಿ: ಶಿವು ರಾಠೋಡ

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು