ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗೆ ಪರೀಕ್ಷೆ : ಅಭ್ಯರ್ಥಿಗಳ ಕಿವಿಗಳ ತಪಾಸಣೆಗೆ ಓಟೋಸ್ಕೋಪ್ ಬಳಕೆ..

ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗೆ ಪರೀಕ್ಷೆ : ಅಭ್ಯರ್ಥಿಗಳ ಕಿವಿಗಳ ತಪಾಸಣೆಗೆ ಓಟೋಸ್ಕೋಪ್ ಬಳಕೆ..

ಮುದ್ದೇಬಿಹಾಳ : ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ನೇರ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಕ್ರಮ ತಡೆಯಲು (Otoscope) ಓಟೋಸ್ಕೋಪ್ ಮೂಲಕ (ಟಾರ್ಚ್ ಹಾಕಿ) ಅಭ್ಯರ್ಥಿಗಳ ಶ್ರವಣೇಂದ್ರಿಯಗಳನ್ನು ಕೂಲಂಕಷವಾಗಿ ಪರೀಕ್ಷಿಸಲಾಯಿತು.
ಮುದ್ದೇಬಿಹಾಳದ ಅಭ್ಯುದಯ, ಎಸ್.ಎಸ್.ಶಿವಾಚಾರ್ಯ, ಶಾ ಎಸ್.ಪಿ.ಓಸ್ವಾಲ್ ಪ್ರಥಮ ದರ್ಜೆ ಕಾಲೇಜು, ನಾಗರಬೆಟ್ಟದ ಎಕ್ಸಪರ್ಟ್ ಸೈನ್ಸ್ ಕಾಲೇಜು, ಆಕ್ಸ್‌ಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ, ನಾಗರಬೆಟ್ಟದ ಪಿಯು ಸೈನ್ಸ್ ಕಾಲೇಜು, ಎಂ.ಜಿ.ಎಂ.ಕೆ, ಜ್ಞಾನಭಾರತಿ, ಪದವಿ ಪೂರ್ವ ಕಾಲೇಜಿನಲ್ಲಿ ಪರೀಕ್ಷಾ ಕೇಂದ್ರ ನಡೆಸಲಾಯಿತು.
ಯಾವುದೇ ವಿದ್ಯುನ್ಮಾನ ಯಂತ್ರಗಳಾದ ಬ್ಲೂಟೂತ್ ಹಾಗೂ ಇಯರ್-ಫೋನ್‌ಗಳನ್ನು ಇಲ್ಲದಿರುವುದನ್ನು ಖಚಿತಪಡಿಸಿಕೊಳ್ಳಲು ತಾಲೂಕಿನ ಪರೀಕ್ಷಾ ಕೇಂದ್ರಗಳಲ್ಲಿ ತಜ್ಞ ವೈದ್ಯರು, ಶ್ರವಣಶಾಸ್ತ್ರಜ್ಞರು ಮತ್ತು ಸಿಬ್ಬಂದಿ ಕಾರ್ಯನಿರ್ವಹಿಸಿದರು.
ತಾಲೂಕಾ ಆರೋಗ್ಯ ಅಧಿಕಾರಿಗಳಾದ ಡಾ. ಸತೀಶ ತಿವಾರಿ , ನಗರ ಆರೋಗ್ಯ ನಿರೀಕ್ಷಣಾಧಿಕಾರಿ ಎಂ ಎಸ್ ಗೌಡರ, ಪಿಎಸ್ ಐ ಸಂಜಯ ತಿಪರಡ್ಡಿ ಸೇರಿದಂತೆ ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ನಡೆಯದಂತೆ ನೋಡಿಕೊಂಡರು.
ಒಟ್ಟು 3532 ಅಭ್ಯರ್ಥಿಗಳು ಮುದ್ದೇಬಿಹಾಳದಲ್ಲಿ ಪರೀಕ್ಷೆ ಬರೆದರು ಎಂದು ಸರ್ಕಾರ. ಪಪೂ ಕಾಲೇಜು ಪ್ರಾಚಾರ್ಯ ಎಸ್.ಎಸ್.ಅಂಗಡಿ ತಿಳಿಸಿದ್ದಾರೆ.

Latest News

ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಪ್ರದೀಪನ

ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಪ್ರದೀಪನ

ಮುದ್ದೇಬಿಹಾಳ : ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಶುಕ್ರವಾರ ಬಾಯ್ಲರ್ ಪ್ರದೀಪನ

ಸಚಿವ ಖರ್ಗೆಗೆ ಬೆದರಿಕೆಗೆ ಖಂಡನೆ :                       ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸದವರಿಂದ ದೇಶಪ್ರೇಮದ ಪಾಠ-ಸದ್ದಾಂ ಕುಂಟೋಜಿ ವ್ಯಂಗ್ಯ

ಸಚಿವ ಖರ್ಗೆಗೆ ಬೆದರಿಕೆಗೆ ಖಂಡನೆ : ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸದವರಿಂದ ದೇಶಪ್ರೇಮದ ಪಾಠ-ಸದ್ದಾಂ ಕುಂಟೋಜಿ ವ್ಯಂಗ್ಯ

ಮುದ್ದೇಬಿಹಾಳ : ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಕರೆಗಳನ್ನು ಮಾಡುತ್ತಿರುವ ದುಷ್ಕರ್ಮಿಗಳ ವಿರುದ್ದ

ತಾ.ಪಂ ಕಾನೂನು ಸಲಹೆಗಾರರಾಗಿ ಎನ್.ಬಿ.ಮುದ್ನಾಳ ನೇಮಕ

ತಾ.ಪಂ ಕಾನೂನು ಸಲಹೆಗಾರರಾಗಿ ಎನ್.ಬಿ.ಮುದ್ನಾಳ ನೇಮಕ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡ ಶಿಫಾರಸ್ಸಿನ ಮೇರೆಗೆ ಇಲ್ಲಿನ ಹಿರಿಯ ವಕೀಲರಾದ ಎನ್.ಬಿ.ಮುದ್ನಾಳ ಅವರನ್ನು

ರಾಯಚೂರು: ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

ರಾಯಚೂರು: ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

ರಾಯಚೂರು ಅಕ್ಟೋಬರ್ 15: ಇ- ಕಾಮರ್ಸ್‌ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ,

ಶಾಸಕ ನಾಡಗೌಡ ರಣತಂತ್ರ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ ಅವಿರೋಧ ಆಯ್ಕೆ

ಶಾಸಕ ನಾಡಗೌಡ ರಣತಂತ್ರ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ ಅವಿರೋಧ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿ., ಇದರ ಆಡಳಿತ ಮಂಡಳಿಯ 12 ಜನ ನಿರ್ದೇಶಕರು ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಕಚೇರಿಯಲ್ಲಿ ಚುನಾವಣಾಧಿಕಾರಿಯೂ ಆಗಿರುವ ವಿಜಯಪುರ ಸಹಕಾರ ಅಭಿವೃದ್ಧಿ ಅಧಿಕಾರಿ ರವೀಂದ್ರ ಆಳೂರ ಫಲಿತಾಂಶ ಘೋಷಿಸಿದರು. ಬ ವರ್ಗದ ಮತಕ್ಷೇತ್ರದಲ್ಲಿ ಸಾಮಾನ್ಯ ವರ್ಗದಿಂದ ಗುರುಲಿಂಗಪ್ಪ ಹಡಲಗೇರಿ(ಕೊಣ್ಣೂರ), ಬಸವರಾಜ ಬಗಲಿ(ತಮದಡ್ಡಿ), ಮಹಿಳಾ ವರ್ಗದಿಂದ ವನಮಾಲಾ ಮೇಟಿ(ಹಂದ್ರಾಳ), ಮಲ್ಲಮ್ಮ ಪಾಟೀಲ(ಗುಂಡಕರ್ಜಗಿ), ಹಿಂದುಳಿದ ಅ ವರ್ಗದಿಂದ ಮುತ್ತಪ್ಪ ಮುತ್ತಣ್ಣವರ(ಮಸೂತಿ),

ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳಿಗೆ 78 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಹೇಳಿದರು. ಅವರು ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಸಾರಿಗೆ ಇಲಾಖೆ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಅಡ್ಯಾರ್ ಗಾರ್ಡನ್ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು