Exile Chhalavadi: Shanta Kumar M Kattimani demand

ಛಲವಾದಿ ಅವರನ್ನು ಗಡಿಪಾರು ಮಾಡಿ: ಶಾಂತ ಕುಮಾರ ಎಮ್ ಕಟ್ಟಿಮನಿ ಆಗ್ರಹ

ಛಲವಾದಿ ಅವರನ್ನು ಗಡಿಪಾರು ಮಾಡಿ: ಶಾಂತ ಕುಮಾರ ಎಮ್ ಕಟ್ಟಿಮನಿ ಆಗ್ರಹ

ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವಾಚ್ಯ ಶಬ್ದದಿಂದ ನಿಂದನೆ ಮಾಡಿದ್ದಾರೆ. ಅವರ ವಿಧಾನ ಪರಿಷತ್ ಸದಸ್ಯತ್ವ ರದ್ದು ಮಾಡಿ ಬಂಧಿಸಿ ಗಡಿಪಾರು ಮಾಡಬೇಕೆಂದು ಕಾಂಗ್ರೆಸ್ ಮುಖಂಡರಾದ ಶಾಂತ ಕುಮಾರ ಎಮ್ ಕಟ್ಟಿಮನಿ ಆಗ್ರಹಿಸಿದರು.

ನಾರಾಯಣಸ್ವಾಮಿ ಕ್ಷಮೆ ಕೇಳಿದರೆ ಸಾಲದು. ಯಾವುದೇ ಕಾರ್ಯಕ್ರಮಕ್ಕೆ ಹೋದರೆ ಕಪ್ಪು ಬಾವುಟ ಪ್ರದರ್ಶನ ಮಾಡಬೇಕಾಗುತ್ತದೆ. ಛಲವಾದಿ ಬಿಜೆಪಿ ರಾಷ್ಟ್ರೀಯ ನಾಯಕರಿಗೆ, ಹೈಕಮಾಂಡ್ ಮೆಚ್ಚಿಸಲು ಖರ್ಗೆ ಕುಟುಂಬದ ಬಗ್ಗೆ ಇಲ್ಲ ಸಲ್ಲದ ಕೀಳುಮಟ್ಟದ ಹೇಳಿಕೆ ನೀಡುತ್ತಾ ಬಂದಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಇವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಛಲವಾದಿ ನಾರಾಯಣಸ್ವಾಮಿ ಅವರು ಬಿಜೆಪಿ ಪಕ್ಷದಲ್ಲಿ ಬಂದಾಗ ಮುಂಚಿತ ಇದ್ದ ದಲಿತರನ್ನೇ ಬದಿಗಿಟ್ಟು ಈಗ ತಮ್ಮ ಸ್ವಾರ್ಥಕ್ಕಾಗಿ ತಾವೇ ವಿಧಾನಪರಿಷತ್ ಸದಸ್ಯರಾಗಿದ್ದೀರಿ ಇದು ದಲಿತರಿಗೆ ಮಾಡಿರು ಅನ್ಯಾಯ ಅಲ್ವ ಎಂದು ಅವರು ಪ್ರಶ್ನಿಸಿದರು?. ತನ್ನ ನೀಚ ಬುದ್ದಿ ಕರ್ನಾಟಕ ಜನತೆಗೆ ಗೊತ್ತಿಲ್ವಾ ಮತ್ತು ಬಿಜೆಪಿಯ ಸರ್ವ ಮುಖಂಡರು ಮಾಡುತ್ತಿರುವ ಕುತಂತ್ರವನ್ನು ಎಳೆ ಎಳೆಯಾಗಿ ಬಿಚ್ಚಿಡುತ್ತಿರುವ ಡೈನಾಮಿಕ್ ಲೀಡರ್ ನಾಯಕರಾಗಿ ಅವರನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ . ಕಲ್ಬುರ್ಗಿ ಜಿಲ್ಲೆಗೆ ವಿಶೇಷವಾಗಿ ಅಭಿವೃದ್ಧಿ ಆಗುತ್ತಿರುವುದನ್ನು ಹಾಗೂ ಉದ್ಯೋಗ ಮೇಳ ಹೀಗೆ ಹತ್ತು ಹಲವಾರು ಯೋಜನೆಗಳನ್ನು ಮಾಡುತ್ತಿರುವುದನ್ನು ಇವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಅವರು ಆರೋಪಿಸಿದರು.

ಸಚಿವ ಪ್ರಿಯಾಂಕ್ ಖರ್ಗೆ ಅವರ ಜನಪ್ರಿಯತೆ ಕುಗ್ಗಿಸುವ ಬಿಜೆಪಿ ಹಾಗೂ ಆರ್‌ಎಸ್‌ಎಸ್ ತಂತ್ರ ಫಲಿಸದು ಎಂದು ಅವರು ಹೇಳಿದ್ದಾರೆ. ಖರ್ಗೆ ಅವರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮೂಲಕ ವೈಯಕ್ತಿಕ ದಾಳಿಗಿಳಿದಿವೆ. ಆದರೆ, ಜನಪರ ಕಾಳಜಿಯುಳ್ಳ ಸಚಿವ ಹಾಗೂ ಡೈನಾಮಿಕ್ ನಾಯಕರೊಬ್ಬರನ್ನು ತೇಜೋವಧೆ ಮಾಡುತ್ತಿರುವ ಬಿಜೆಪಿಯ ಕುತಂತ್ರ ಇದಾಗಿದೆ ಎಂದು ಹರಿಹಾಯ್ದಿದ್ದಾರೆ.

ವರದಿಗಾರ : ಶಿವು ರಾಠೋಡ

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ