ಮುದ್ದೇಬಿಹಾಳ : ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಷ್ಠಾಪಿಸಲು ಸಿದ್ಧಗೊಳಿಸಿರುವ ರಾಯಣ್ಣನವರ ಕಂಚಿನ ಪುತ್ಥಳಿಯನ್ನು ಪಟ್ಟಣದಲ್ಲಿ ಭಾನುವಾರ ಭವ್ಯ ಮೆರವಣಿಗೆ ಮೂಲಕ ಕರೆತರಲಾಯಿತು.
ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿ.ಎಲ್.ಬಿರಾದಾರ ಕಲ್ಯಾಣ ಮಂಟಪದಿಂದ ವಿವಿಧ ಊರುಗಳಿಂದ ಆಗಮಿಸಿದ್ದ ಡೊಳ್ಳಿನ ಮೇಳದವರು, ವಿಶೇಷವಾಗಿ ಕುದುರೆ ಕುಣಿತದ ತಂಡ ಅಲಂಕಾರಿಕ ಬೊಂಬೆಗಳು ಮೆರವಣಿಗೆಯ ಕಳೆ ಹೆಚ್ಚಿಸಿದ್ದವು. ಬಸವೇಶ್ವರ ವೃತ್ತ, ಬಸ್ ನಿಲ್ದಾಣ, ರಾಯಣ್ಣ ವೃತ್ತ, ಅಂಬೇಡ್ಕರ್ ವೃತ್ತಕ್ಕೆ ತೆರಳಿ ಮೆರವಣಿಗೆ ಸಮಾಪ್ತಿಗೊಂಡಿತು.
ಕುರುಬರ ಸಂಘದ ತಾಲ್ಲೂಕು ಅಧ್ಯಕ್ಷ ಎಂ.ಎನ್.ಮದರಿ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ, ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ, ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ, ನಿವೃತ್ತ ಡಿವೈಎಸ್ಪಿ ಎಸ್.ಎಸ್.ಹುಲ್ಲೂರ, ವಾಯ್. ಎಚ್. ವಿಜಯಕರ್, ಸೋಮನಗೌಡ ಪಾಟೀಲ ನಡಹಳ್ಳಿ,ಸಂಗಣ್ಣ ಮೇಲಿನಮನಿ, ಸಾಯೇಬಣ್ಣ ವಾಲೀಕಾರ, ಮುತ್ತಣ್ಣ ಮುತ್ತಣ್ಣವರ, ಲಕ್ಷ್ಮಣ ಬಿಜ್ಜೂರ, ಸಂತೋಷ ನಾಯ್ಕೋಡಿ, ಬಿ.ಎಸ್.ಮೇಟಿ, ನಾಗಪ್ಪ ರೂಢಗಿ, ಸಂತೋಷ ನಡಗೇರಿ, ಪುರಸಭೆ ಸದಸ್ಯರು, ಮಹಿಳಾ ಮುಖಂಡರು ಸೇರಿದಂತೆ ಹಾಲುಮತ ಸಮಾಜದ ನೂರಾರು ಜನರು ಭಾಗಿಯಾಗಿದ್ದರು.