Failed in SSLC exam: Parents who gave courage by cutting a cake

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲ್: ಪೋಷಕರು ಕೇಕ್ ಕಟ್ ಮಾಡಿ ಧೈರ್ಯ ತುಂಬಿದ್ದರು

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲ್: ಪೋಷಕರು ಕೇಕ್ ಕಟ್ ಮಾಡಿ ಧೈರ್ಯ ತುಂಬಿದ್ದರು

ಬಾಗಲಕೋಟೆ: ಎಸ್ಎಸ್ಎಲ್.ಸಿ ಪರೀಕ್ಷೆಯಲ್ಲಿ 6 ವಿಷಯಗಳಲ್ಲಿ ಫೇಲ್ ಆದ ಮಗನಿಗೆ ಕೇಕ್ ತಿನ್ನಿಸಿ ಪೋಷಕರು ಧೈರ್ಯ ತುಂಬಿರಿವ ಘಟನೆ ನಗರದಲ್ಲಿ ನಡೆದಿದೆ. ಬಾಗಲಕೋಟೆ ನವನಗರದ ನಿವಾಸಿಯಾಗಿರುವ ಅಭಿಷೇಕ್ ಚೊಳಚಗುಡ್ಡ ಆರು ವಿಷಯಗಳಲ್ಲಿ ಫೇಲ್ ಆಗಿದ್ದರಿಂದ ದುಖಃದಲ್ಲಿದ್ದ. ಆತನಿಗೆ ಕುಟುಂಬದ ಸದಸ್ಯರು ಕೇಕ್ ಕಟ್ ಮಾಡಿಸಿ, ತಿನ್ನಿಸುವ ಮೂಲಕ ಧೈರ್ಯ ಹೇಳಿದ್ದಾರೆ.

ನಗರದ ಬಸವೇಶ್ವರ ಆಂಗ್ಲ ಮಾಧ್ಯಮದಲ್ಲಿ ಓದುತ್ತಿದ್ದ ಅಭಿಷೇಕ 625ಕ್ಕೆ 200 ಅಂಕ ಪಡೆದು ಶೇ.32 ಅಂಕ ಪಡೆದು ಅನುತೀರ್ಣವಾಗಿ ದುಃಖದಲ್ಲಿರುವ ಮಗನಿಗೆ ತಂದೆ ಯಲ್ಲಪ್ಪ ಅವರು, ಸಿಹಿ ತಿನ್ನಿಸಿ ಮುತ್ತು ಕೊಟ್ಟು, ಪರೀಕ್ಷೆ ಒಂದೇ ಜೀವನವಲ್ಲ‌, ಮತ್ತೆ ಪ್ರಯತ್ನ‌ ಮಾಡು ಎಂದು ಹೆಗಲ‌ ಮೇಲೆ‌ ಕೈ ಇಟ್ಟು ಧೈರ್ಯ ತುಂಬಿದ್ದಾರೆ.

ಅಭಿಷೇಕ್‌, ಹದಿನೈದು ತಿಂಗಳ‌ ಮಗುವಾಗಿದ್ದಾಗ ಎರಡು ಪಾದ ಸುಟ್ಟು ನೆನಪಿನ ಶಕ್ತಿ ಕಳೆದುಕೊಂಡಿದ್ದ. ಹೀಗಾಗಿ ಉತ್ತರ ನೆನಪಿಟ್ಟುಕೊಂಡು ಬರೆಯಲು ವಿದ್ಯಾರ್ಥಿ ವಿಫಲವಾಗಿದ್ದಾನೆ.

ಫೇಲ್ ಆಗಿದ್ದರಿಂದ ಬಹಳ ಬೇಜಾರಾಗಿತ್ತು‌. ನಮ್ಮ ತಂದೆ ತಾಯಿ ಎಲ್ಲರೂ ಧೈರ್ಯ ಹೇಳಿದರು. ಫೇಲ್ ಆದರೂ ಧೈರ್ಯ ಹೇಳಿ ಕೇಕ್ ತಿನ್ನಿಸಿ ಸಂಭ್ರಮಿಸಿದ್ದಾರೆ. ಮತ್ತೆ ಪ್ರಯತ್ನ ಮಾಡಿ ಪಾಸ್ ಆಗ್ತೀನಿ. ಪರೀಕ್ಷೆಯಲ್ಲಿ ಫೇಲ್ ಆದರೂ ಜೀವನದಲ್ಲಿ ಸಾಧಿಸಿ ತೋರಿಸ್ತೀನಿ ಎಂದು ಅಭಿಷೇಕ್ ಹೇಳಿದ್ದಾನೆ.‌

Latest News

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಮುದ್ದೇಬಿಹಾಳ : ತುಮಕೂರು ಸಿದ್ಧಗಂಗಾ ಮಠದ ಡಾ.ಶಿವಕುಮಾರ ಮಹಾಸ್ವಾಮೀಜಿ ಅವರ ಜನ್ಮದಿನೋತ್ಸವ ಹಾಗೂ ಮಡಿಕೇಶ್ವರದ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ತಾಳಿಕೋಟಿ : ತಂದೆ ತಾಯಿ ಹುಟ್ಟಿನಿಂದ ನೀಡುವ ಸಂಸ್ಕಾರವು ಮಗುವಿನ ಭವಿಷ್ಯ ನಿರ್ಧರಿಸುತ್ತದೆ. ಈ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಕೊಣ್ಣೂರಿನ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಜ.14 ರಂದು ಸಂಜೆ 5 ಗಂಟೆಗೆ ಇಲ್ಲಿನ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಸಾಧಕರಿಗೆ ಸನ್ಮಾನ ಹಾಗೂ ನೂತನ ದಿನದರ್ಶಿಕೆ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳು ಮಹಾ ಮಂಡಳ ನಿ..ಬೆಂಗಳೂರು ಇದರ ನಿರ್ದೇಶಕರಾಗಿ ಆಯ್ಕೆಯಾದ ಆನಂದಗೌಡ ಎಸ್. ಬಿರಾದಾರ ಹಾಗೂ ಹಸಿರು ತೋರಣ ಗೆಳೆಯರ ಬಳಗಕ್ಕೆ ನೂತನ ಮುದ್ದೇಬಿಹಾಳ ತಾಲ್ಲೂಕು ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪಂಚಮಸಾಲಿ ಸಮಾಜದ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ:                     M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ: M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಮುದ್ದೇಬಿಹಾಳ : ಉತ್ತರ ಕರ್ನಾಟಕದ ಪ್ರಮುಖ ಹಬ್ಬಗಳಲ್ಲಿ ಒಂದಾದ ಮಕರ ಸಂಕ್ರಾಂತಿಯ ಮುನ್ನಾ ದಿನ ಪಟ್ಟಣದ ಮಾರುತಿ ನಗರದ ಗಣಪತಿ ಗುಡಿ ಹತ್ತಿರ ಇರುವ ಎಂ.ಆರ್.ಇ.ಎo ಇಂಟರ್‌ನ್ಯಾಶನಲ್ ಸ್ಕೂಲ್ ಹಾಗೂ ಭಾಗ್ಯವಂತಿ ಎಚ್.ಪಿ.ಎಸ್ ಶಾಲೆಯಲ್ಲಿ ಮಂಗಳವಾರ ಅದ್ದೂರಿಯಾಗಿ ಆಚರಿಸಲಾಯಿತು. ಸಂಕ್ರಾಂತಿಯ ಸಂಭ್ರಮದ ಅಂಗವಾಗಿ ಉತ್ತರ ಕರ್ನಾಟಕದ ಬಗೆ ಬಗೆಯ ತಿನಿಸುಗಳು,ಆಹಾರ ಪದ್ಧತಿಯನ್ನು ಮಕ್ಕಳಿಗೆ ಪರಿಚಯಿಸುವ ಕಾರ್ಯವನ್ನು ಶಿಕ್ಷಕರು ಮಾಡಿದರು.ಶಾಲೆಯ ಮುಖ್ಯಗುರುಮಾತೆ ಅಮೃತಾ ಹಿರೇಮಠ ಮಾತನಾಡಿ, ನಮ್ಮ ಭಾಗದಲ್ಲಿ ಆಚರಣೆಯಲ್ಲಿರುವ ಸಂಕ್ರಾಂತಿಯ