Failed in SSLC exam: Parents who gave courage by cutting a cake

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲ್: ಪೋಷಕರು ಕೇಕ್ ಕಟ್ ಮಾಡಿ ಧೈರ್ಯ ತುಂಬಿದ್ದರು

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲ್: ಪೋಷಕರು ಕೇಕ್ ಕಟ್ ಮಾಡಿ ಧೈರ್ಯ ತುಂಬಿದ್ದರು

ಬಾಗಲಕೋಟೆ: ಎಸ್ಎಸ್ಎಲ್.ಸಿ ಪರೀಕ್ಷೆಯಲ್ಲಿ 6 ವಿಷಯಗಳಲ್ಲಿ ಫೇಲ್ ಆದ ಮಗನಿಗೆ ಕೇಕ್ ತಿನ್ನಿಸಿ ಪೋಷಕರು ಧೈರ್ಯ ತುಂಬಿರಿವ ಘಟನೆ ನಗರದಲ್ಲಿ ನಡೆದಿದೆ. ಬಾಗಲಕೋಟೆ ನವನಗರದ ನಿವಾಸಿಯಾಗಿರುವ ಅಭಿಷೇಕ್ ಚೊಳಚಗುಡ್ಡ ಆರು ವಿಷಯಗಳಲ್ಲಿ ಫೇಲ್ ಆಗಿದ್ದರಿಂದ ದುಖಃದಲ್ಲಿದ್ದ. ಆತನಿಗೆ ಕುಟುಂಬದ ಸದಸ್ಯರು ಕೇಕ್ ಕಟ್ ಮಾಡಿಸಿ, ತಿನ್ನಿಸುವ ಮೂಲಕ ಧೈರ್ಯ ಹೇಳಿದ್ದಾರೆ.

ನಗರದ ಬಸವೇಶ್ವರ ಆಂಗ್ಲ ಮಾಧ್ಯಮದಲ್ಲಿ ಓದುತ್ತಿದ್ದ ಅಭಿಷೇಕ 625ಕ್ಕೆ 200 ಅಂಕ ಪಡೆದು ಶೇ.32 ಅಂಕ ಪಡೆದು ಅನುತೀರ್ಣವಾಗಿ ದುಃಖದಲ್ಲಿರುವ ಮಗನಿಗೆ ತಂದೆ ಯಲ್ಲಪ್ಪ ಅವರು, ಸಿಹಿ ತಿನ್ನಿಸಿ ಮುತ್ತು ಕೊಟ್ಟು, ಪರೀಕ್ಷೆ ಒಂದೇ ಜೀವನವಲ್ಲ‌, ಮತ್ತೆ ಪ್ರಯತ್ನ‌ ಮಾಡು ಎಂದು ಹೆಗಲ‌ ಮೇಲೆ‌ ಕೈ ಇಟ್ಟು ಧೈರ್ಯ ತುಂಬಿದ್ದಾರೆ.

ಅಭಿಷೇಕ್‌, ಹದಿನೈದು ತಿಂಗಳ‌ ಮಗುವಾಗಿದ್ದಾಗ ಎರಡು ಪಾದ ಸುಟ್ಟು ನೆನಪಿನ ಶಕ್ತಿ ಕಳೆದುಕೊಂಡಿದ್ದ. ಹೀಗಾಗಿ ಉತ್ತರ ನೆನಪಿಟ್ಟುಕೊಂಡು ಬರೆಯಲು ವಿದ್ಯಾರ್ಥಿ ವಿಫಲವಾಗಿದ್ದಾನೆ.

ಫೇಲ್ ಆಗಿದ್ದರಿಂದ ಬಹಳ ಬೇಜಾರಾಗಿತ್ತು‌. ನಮ್ಮ ತಂದೆ ತಾಯಿ ಎಲ್ಲರೂ ಧೈರ್ಯ ಹೇಳಿದರು. ಫೇಲ್ ಆದರೂ ಧೈರ್ಯ ಹೇಳಿ ಕೇಕ್ ತಿನ್ನಿಸಿ ಸಂಭ್ರಮಿಸಿದ್ದಾರೆ. ಮತ್ತೆ ಪ್ರಯತ್ನ ಮಾಡಿ ಪಾಸ್ ಆಗ್ತೀನಿ. ಪರೀಕ್ಷೆಯಲ್ಲಿ ಫೇಲ್ ಆದರೂ ಜೀವನದಲ್ಲಿ ಸಾಧಿಸಿ ತೋರಿಸ್ತೀನಿ ಎಂದು ಅಭಿಷೇಕ್ ಹೇಳಿದ್ದಾನೆ.‌

Latest News

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ಮುದ್ದೇಬಿಹಾಳ : ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ಸಂಪೂರ್ಣವಾಗಿ ತಮ್ಮನ್ನು ಆಧುನಿಕ ಮಾಧ್ಯಮಗಳಲ್ಲಿ ಮಗ್ನರಾಗಿದ್ದು ಮಾನವೀಯ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್‌ದಿಂದ ಎ.ಎಲ್.ಬಿ.ಸಿ ಕಾಲುವೆಯ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ ಸಿಡಿಲಿಗೆ ಬಲಿಯಾಗಿರುವ ಘಟನೆ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ತಾಂಡಾದ ಮಾರುತೇಶ್ವರ ಜಾತ್ರೆಯ ಅಂಗವಾಗಿ ಹಮ್ಮಿಕೊಂಡಿದ್ದ ತೆರಬಂಡಿ ಸ್ಪರ್ಧೆಯಲ್ಲಿ ಶ್ರೀ ಲಕ್ಷ್ಮಿದೇವಿ ಕಮೀಟಿ ರೂಢಗಿ ಎತ್ತುಗಳು ಪ್ರಥಮ, ರೂಢಗಿ ಎಸ್.ಕೆ.ಟಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡವು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಂತೋಷ ಚವ್ಹಾಣ, ಗ್ರಾಮೀಣ ಪ್ರದೇಶದಲ್ಲಿ ರೈತರು ಎತ್ತುಗಳ ಸಂಸ್ಕೃತಿಯನ್ನು ಜೀವಂತವಾಗಿಡುವ ಸಲುವಾಗಿ ಇಂತಹ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದರು. ಗ್ರಾಪಂ ಸದಸ್ಯ ಶಿವಾನಂದ ಲಮಾಣಿ, ಮಾಜಿ ಸದಸ್ಯ ಥಾವರಪ್ಪ

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಬಾಗಲಕೋಟೆ :ಮುರನಾಳ ಗ್ರಾಮದ ಶ್ರೀ ಗದಿಗೆಪ್ಪಗೌಡ ವೆಂಕಪ್ಪ ಕೋನಪ್ಪನವರ ( ೮೩ ) ಇವರು ವಿದ್ಯಾಗಿರಿ , ಬಾಗಲಕೋಟೆ ನಿವಾಸದಲ್ಲಿ ಸ್ವರ್ಗಸ್ಥರಾದರು. ಸೋಮವಾರ ದಿ ೧೨ ಮೇ ೨೦೨೫ ರಂದು ಬೆಳಿಗ್ಗೆ ೧೦ ಗಂಟೆಗೆ ನಂದೀಶ್ವರ ನಗರ, ವಿದ್ಯಾಗಿರಿ ಬಾಗಲಕೋಟೆ ದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವದು. ಸಂಪರ್ಕ ಮೊಬೈಲ್ ನಂಬರ್9740339050 _ಓಂ ಶಾಂತಿ