Vijay Famous actor enters politics.. Unveils own party's flag, symbol

Vijay: ಖ್ಯಾತ ನಟ ರಾಜಕೀಯಕ್ಕೆ‌ ಎಂಟ್ರಿ.. ಸ್ವಂತ ಪಕ್ಷದ ಧ್ವಜ, ಚಿಹ್ನೆ ಅನಾವರಣ.. (ವಿಡಿಯೋ ನೋಡಿ)

Vijay: ಖ್ಯಾತ ನಟ ರಾಜಕೀಯಕ್ಕೆ‌ ಎಂಟ್ರಿ.. ಸ್ವಂತ ಪಕ್ಷದ ಧ್ವಜ, ಚಿಹ್ನೆ ಅನಾವರಣ.. (ವಿಡಿಯೋ ನೋಡಿ)

ಚೆನ್ನೈ: ತಮಿಳುನಾಡು ರಾಜಕೀಯಕ್ಕೆ‌ ಅಧಿಕೃತವಾಗಿ ಮತ್ತೊಬ್ಬ ಖ್ಯಾತ ನಟ ( Vijay)ಎಂಟ್ರಿಯಾಗಿದ್ದು, ಇಂದು ಅಧಿಕೃತವಾಗಿ ಪಕ್ಷದ ಧ್ವಜ ಮತ್ತು ಲಾಂಛನವನ್ನು ಬಿಡುಗಡೆ ಮಾಡಿದ್ದಾರೆ.

Join Our Telegram: https://t.me/dcgkannada

ಹೌದು, ನಟ ವಿಜಯ್ (Vijay) ಇಂದು ತಮ್ಮ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಧ್ವಜ ಮತ್ತು ಚಿಹ್ನೆಯನ್ನು ಅಧಿಕೃತವಾಗಿ ಲೋಕಾರ್ಪಣೆ ಮಾಡುವ ಮೂಲಕ ತಮ್ಮ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದಾರೆ.

ಚೆನ್ನೈನ ಪನಾಯೂರ್‌ನಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಜಯ್ ಪಕ್ಷದ ಧ್ವಜ ಮತ್ತು ಚಿಹ್ನೆಯನ್ನು ಅಧಿಕೃತವಾಗಿ ಅನಾವರಣಗೊಳಿಸಿದ್ದಾರೆ. 2026 ರ ತಮಿಳುನಾಡು ವಿಧಾನಸಭಾ ಚುನಾವಣೆಯ ಮೇಲೆ ಕೇಂದ್ರೀಕರಿಸಿರುವ ವಿಜಯ್ ಅವರ ರಾಜಕೀಯ ಪ್ರಯಾಣದ ಮೊದಲ ಪ್ರಮುಖ ಹೆಜ್ಜೆ ಇದಾಗಿದೆ ಎಂದು ರಾಜಕೀಯ ಪಂಡಿತರು ಹೇಳುತ್ತಿದ್ದಾರೆ.

ತಮಿಳಗ ವೆಟ್ರಿ ಕಳಗಂ ಪಕ್ಷವು ಭಾರತೀಯ ಚುನಾವಣಾ ಆಯೋಗದಲ್ಲಿ ನೋಂದಾಯಿಸಿಕೊಳ್ಳುವ ಪ್ರಕ್ರಿಯೆಯಲ್ಲಿರುವ ಮಧ್ಯೆಯೇ ವಿಜಯ್ ಅವರ ಚಿತ್ರವನ್ನು ಹೊಂದಿರುವ ಹಳದಿ ಧ್ವಜದ ಪೊಟೋ ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ವಿಜಯ್ ಫೆಬ್ರವರಿಯಲ್ಲಿ ತಮ್ಮ ಪಕ್ಷದ ಹೆಸರನ್ನು (ತಮಿಳಗ ವೆಟ್ರಿ ಕಳಗಂ) ಘೋಷಿಸಿದ್ದರು. ಇದೀಗ ಆನೆಗಳುಳ್ಳ ಕೆಂಪು ಹಳದಿ ಬಣ್ಣದ ಧ್ವಜವನ್ನು ವಿಜಯ್ ಅನಾವರಣಗೊಳಿಸಿದ್ದಾರೆ.

ಇದನ್ನೂ ಓದಿ: Kodimathada shree: ಸ್ಫೋಟಕ ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ!

ಸೆಪ್ಟೆಂಬ‌ರ್ ಅಂತ್ಯದಲ್ಲಿ ವಿಲ್ಲುಪುರಂ ಜಿಲ್ಲೆಯ ವಿಕ್ರವಾಂಡಿಯಲ್ಲಿ ತಮಿಳಗ ವೆಟ್ರಿ ಕಳಗಂ ಪಕ್ಷದಿಂದ ರ್ಯಾಲಿಯನ್ನು ಆಯೋಜಿಸಲಾಗಹವುದು ಎಂದು ಮೂಲಗಳು ತಿಳಿಸಿವೆ.

Latest News

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಕುಳಗೇರಿ ಕ್ರಾಸ್: ಸಮೀಪದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೋಮನಕೊಪ್ಪದಲ್ಲಿ ಸನ್ 2025-26ನೇ ಸಾಲಿನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಮುದ್ದೇಬಿಹಾಳ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಕರಾಟೆ ಶಿಕ್ಷಕರ ಸಂಘದಿಂದ ಕೊಡಮಾಡುವ ಉತ್ತಮ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಮುದ್ದೇಬಿಹಾಳ : ಹಾಲು ಪೂರೈಸುವ ಗೂಡ್ಸ್ ವಾಹನವನ್ನು ಅಜಾಗರೂಕತೆಯಿಂದ ಚಲಾಯಿಸಿ ಬಸ್‌ಗೆ ಡಿಕ್ಕಿ ಹೊಡೆದ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಮುದ್ದೇಬಿಹಾಳ : ಪ್ರತಿ ಮೂರು ವರ್ಷಕ್ಕೊಮ್ಮೆ ಜರುಗುವ ಗ್ರಾಮದೇವತೆ ಜಾತ್ರೆಗೆ ಮುದ್ದೇಬಿಹಾಳ ಪಟ್ಟಣ ಮದುವಣಗಿತ್ತಿಯಂತೆ

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹಾಸನ: ಇತ್ತೀಚೆಗೆ ಯುವ ಜನರೇ ಹೃದಯಾಘತಕ್ಕೆ ಬಲಿಯಾಗುತ್ತಿರುವುದು ಹೆಚ್ಚಾಗಿದ್ದು, ಇದೀಗ ಹೃದಯಾಘಾತದಿಂದ ಕುಸಿದುಬಿದ್ದು ಪದವಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಕೆಲವತ್ತಿ ಗ್ರಾಮದ ಪಾಪಣ್ಣ ಹಾಗೂ ಗಾಯತ್ರಿ ದಂಪತಿ ಪುತ್ರಿ ಕವನಾ ಕೆ.ವಿ. (21) ಎಂದು ಗುರುತಿಸಲಾಗಿದೆ. ಈಕೆ ಹಾಸನ ಸರ್ಕಾರಿ ಕಾಲೇಜಿನಲ್ಲಿ ಅಂತಿಮ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜು ಮುಗಿಸಿ ಸಂಜೆ ಮನೆಗೆ ಬಂದ ಕವನಾಗೆ ಧಿಡೀರ್ ಆಗಿ ಎದೆನೋವು

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ಮುದ್ದೇಬಿಹಾಳ : ಮೇ.30 ರಿಂದ ಪಟ್ಟಣದಲ್ಲಿ ಗ್ರಾಮದೇವತೆ ಜಾತ್ರೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಕಮೀಟಿಯ ಮುಖಂಡ ಪ್ರಭುರಾಜ ಕಲ್ಬುರ್ಗಿ ಹೇಳಿದರು. ಪಟ್ಟಣದ ಹಳೆ ತಹಸೀಲ್ದಾರ್ ಕಚೇರಿ ಬಳಿ ಇರುವ ಪೊಲೀಸ್ ಕ್ವಾರ್ಟರ್ಸ್ನಲ್ಲಿ ಮುದ್ದೇಬಿಹಾಳ ಗ್ರಾಮ ದೇವತೆ ಜಾತ್ರಾ ಕಮೀಟಿ ನೇತೃತ್ವದಲ್ಲಿ ಬುಧವಾರ ಸಂಜೆ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಅಂದು ಬೆಳಗ್ಗೆ 8 ರಿಂದ ಗ್ರಾಮದೇವತೆ ಹಾಗೂ ಶಾರದಾ ದೇವಿಯವರ ಮೂರ್ತಿಗಳ ಭವ್ಯ ಮೆರವಣಿಗೆ ಕಿಲ್ಲಾದ ಹೊಸಮಠದಿಂದ