ರೈತರ ಮಕ್ಕಳು ವೈದ್ಯರಾಗಬೇಕು-ಇದು ನನ್ನ ಕನಸು-ಎಂ.ಎಸ್.ಪಾಟೀಲ

ರೈತರ ಮಕ್ಕಳು ವೈದ್ಯರಾಗಬೇಕು-ಇದು ನನ್ನ ಕನಸು-ಎಂ.ಎಸ್.ಪಾಟೀಲ

ಮುದ್ದೇಬಿಹಾಳ : ನನ್ನ ಕನಸು ಸೈನ್ಸ್ ಕಾಲೇಜು ಆರಂಭಿಸಬೇಕು ಎಂಬುದಿತ್ತು.ದುಡ್ಡು ಮಾಡುವುದಕ್ಕಾಗಿ ಸೈನ್ಸ್ ಕಾಲೇಜು ಮಾಡಿಲ್ಲ.ರಾಯಚೂರು,ವಿಜಯಪುರ,ಬಾಗಲಕೋಟೆ,ಕೊಪ್ಪಳ ಜಿಲ್ಲೆಗಳಂತಹ ಹಿಂದುಳಿದ ಜಿಲ್ಲೆಗಳ ರೈತಾಪಿ ವರ್ಗದ ಮಕ್ಕಳನ್ನು ಮೇಲೆ ತರಬೇಕು ಎಂಬ ಉದ್ದೇಶದಿಂದ ಸೈನ್ಸ್ ಕಾಲೇಜು ಆರಂಭಿಸಿದ್ದೇವೆ ಎಂದು ನಾಗರಬೆಟ್ಟ ಆಕ್ಸಫರ್ಡ್ ಸಮೂಹ ಶಿಕ್ಷಣ ಸಂಸ್ಥೆಯ ಚೇರಮನ್ ಎಂ.ಎಸ್.ಪಾಟೀಲ ಹೇಳಿದರು.

ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಆಕ್ಸಫರ್ಡ್ ಕಲಾಸಂಭ್ರಮ-2026 ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು.

ಇವತ್ತು 1100 ವಿದ್ಯಾರ್ಥಿಗಳು ವೈದ್ಯಕೀಯ ಸೀಟು ಕೊಟ್ಟಿರುವ ಹೆಗ್ಗಳಿಕೆ ನಮ್ಮ ಸಂಸ್ಥೆಗೆ ಇದೆ. ಐಐಟಿ ಫೌಂಡೇಶನ್ ಎನ್ನುವುದು ಕಾರ್ಪೋರೇಟ್ ಮಕ್ಕಳು ಮಾತ್ರ ಬರೆಯುವುದಕ್ಕೆ ಮಾತ್ರ ಇದೆ.ಆದರೆ ನಮ್ಮ ಭಾಗದ ಮಕ್ಕಳು ನೀಟ್,ಜೆಇಇ ಪರೀಕ್ಷೆ ಎದುರಿಸಬೇಕಾದರೆ ನಗರ ಪ್ರದೇಶದ ಮಕ್ಕಳೊಂದಿಗೆ ಪೈಪೋಟಿ ಮಾಡಬೇಕಾಗುತ್ತದೆ.ಎಲ್ಲ ಸಂಸ್ಥೆಯವರು ಇದನ್ನು ಬರೆಯುಸುವುದಕ್ಕೆ ಆಗುವುದಿಲ್ಲ.ಆದರೆ ನಮ್ಮಲ್ಲಿ ಈ ಉನ್ನತಮಟ್ದ ತರಬೇತಿ ಸೌಲಭ್ಯವಿದ್ದು ಅದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.

ಬಡವ,ಸಿರಿವಂತ ಇದ್ದವರು ಫೆ.22 ರಂದು ಟ್ಯಾಲೆಂಟ್ ಅವಾರ್ಡ ಪರೀಕ್ಷೆ ಬರೆಯಿರಿ.ನಿಜವಾದ ಪ್ರತಿಭಾವಂತ ವಿದ್ಯಾರ್ಥಿಗಳಿದ್ದು ಕಡು ಬಡವರಿದ್ದರೆ ಅವರಿಗೆ ಉಚಿತ ಶಿಕ್ಷಣಕ್ಕೆ ನಾವು ಆಯ್ಕೆ ಮಾಡಿಕೊಳ್ಳುತ್ತೇವೆ ಎಂದು ಹೇಳಿದರು.

ಸಂಸ್ಥೆಯ ಆಡಳಿತಾಧಿಕಾರಿ ಅಮೀತಗೌಡ ಪಾಟೀಲ ಮಾತನಾಡಿ, 187 ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟು ದೊರೆತಿದೆ.ನಮ್ಮಸಂಸ್ಥೆಯಲ್ಲಿ ಓದಿದ 35 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮೆಡಿಕಲ್ ಸೀಟು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.ವಿದ್ಯಾರ್ಥಿಗಳು ಮಕ್ಕಳನ್ನು ಬೈಬೇಡಿ,ನಿಂದಿಸಬೇಡಿ ಎಂದು ಹೇಳಿದರು.

ಎಂ.ಜಿ.ಎo.ಕೆ ಪಿಯು ಕಾಲೇಜಿನ ಪ್ರಾಚಾರ್ಯ ಎಸ್.ಕೆ.ಹರನಾಳ ಮಾತನಾಡಿ, ದುಡ್ಡು ಬೇಕಾದಷ್ಟು ಗಳಿಸಬಹುದು ಆದರೆ ಜ್ಞಾನ ಎಂಬುದನ್ನು ಗಳಿಸಲು ಅಷ್ಟು ಸುಲಭವಾಗಿ ಗಳಿಸುವುದಕ್ಕೆ ಸಾಧ್ಯವಿಲ್ಲ.ಶಿಕ್ಷಣ ಸಂಸ್ಥೆಯನ್ನು ಕಟ್ಟಿ ನೂರಾರು ಜನರಿಗೆ ಅನ್ನಕ್ಕೆ ದಾರಿ ಮಾಡಿಕೊಟ್ಟವರು ಎಂ.ಎಸ್.ಪಾಟೀಲರು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿದ್ದ ಇಲಕಲ್ ಶ್ರೀಗಳು, ಸಂಸ್ಥೆಯ ನಿರ್ದೇಶಕಿ ಸೌಮ್ಯಾ ಅಮಿತಗೌಡ ಪಾಟೀಲ, ನಿರ್ದೇಶಕ ದರ್ಶನಗೌಡ ಪಾಟೀಲ, ವಕೀಲ ಎಸ್.ಆರ್.ಜೋಗಿ, ಢವಳಗಿ ಗ್ರಾಪಂ ಮಾಜಿ ಉಪಾಧ್ಯಕ್ಷ ಸುರೇಶಗೌಡ ಪಾಟೀಲ,ಮುಖಂಡ ಎಂ.ಕೆ.ಗುಡಿಮನಿ, ಶಿಕ್ಷಕರಾದ ಜೆ.ಡಿ.ಮುಲ್ಲಾ, ಸಂಗಮೇಶ ಹೂಗಾರ, ಪ್ರೊ.ಎನ್.ಎ.ಬಿರಾಜದಾರ, ಎಎಸ್‌ಐ ಕೆ.ಎಸ್.ಅಸ್ಕಿ,ಗ್ರಂಥಪಾಲಕ ಸಗರಿ ಮೊದಲಾದವರು ಇದ್ದರು.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ