3500 ರೂ.ದರ ನಿಗದಿಗೊಳಿಸುವವರೆಗೂ ಕಬ್ಬು ಪೂರೈಕೆ ಸ್ಥಗಿತಕ್ಕೆ ರೈತರ ನಿರ್ಧಾರ

3500 ರೂ.ದರ ನಿಗದಿಗೊಳಿಸುವವರೆಗೂ ಕಬ್ಬು ಪೂರೈಕೆ ಸ್ಥಗಿತಕ್ಕೆ ರೈತರ ನಿರ್ಧಾರ

ಮುದ್ದೇಬಿಹಾಳ : ಕಬ್ಬಿಗೆ 3500 ರೂ.ದರ ನಿಗದಿ ಮಾಡುವವರೆಗೂ ಕಬ್ಬು ಕಟಾವು ಮಾಡಲು ಕಾರ್ಖಾನೆಯವರು ಆದೇಶ ನೀಡಬಾರದು.ಅಲ್ಲಿಯವರೆಗೂ ನಾವು ಹೋರಾಟ ಬಿಟ್ಟು ಕದಲುವುದಿಲ್ಲ ಎಂದು ರೈತ ಮುಖಂಡರು ತಿಳಿಸಿದರು.

ತಾಲ್ಲೂಕಿನ ಯರಗಲ್ ಮದರಿ ಬಳಿ ಇರುವ ಬಾಲಾಜಿ ಸಕ್ಕರೆ ಕಾರ್ಖಾನೆಗೆ ಕಬ್ಬು ಪೂರೈಸುವ ಟ್ರಾö್ಯಕ್ಟರ್‌ಗಳನ್ನು ತಂಗಡಗಿ ಗ್ರಾಮದ ಸಮೀಪದಲ್ಲಿರುವ ಅಮರಗೋಳ ಕ್ರಾಸ್‌ನಲ್ಲಿ ನಿಲುಗಡೆ ಮಾಡಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಈ ನಿರ್ಧಾರವನ್ನು ಅಧಿಕಾರಿಗಳಿಗೆ ಪ್ರತಿಭಟನಾಕಾರರು ತಿಳಿಸಿದ್ದಾರೆ.

ರೈತ ಸಂಘದ ಅಧ್ಯಕ್ಷ ಬಾಲಪ್ಪಗೌಡ ಲಿಂಗದಳ್ಳಿ ಮಾತನಾಡಿ,ಕಾರ್ಖಾನೆಗಳಿಗೆ ಲಾಭವಿದ್ದರೂ ರೈತರಿಗೆ ಅದರ ಲಾಭಾಂಶವನ್ನು ಕೊಡುವುದಕ್ಕೆ ಹಿಂದೇಟು ಹಾಕುತ್ತಿದ್ದಾರೆ.ಪ್ರತಿಭಟನೆಗೆ ಮುಂದಾದ ರೈತರನ್ನು ಹತ್ತಿಕ್ಕುವ ಕೆಲಸವನ್ನು ಮಾಡಲಾಗುತ್ತಿದೆ ಎಂದು ದೂರಿದರು.

ರೈತ ಮುಖಂಡ ಅರವಿಂದ ಕೊಪ್ಪ ಮಾತನಾಡಿ, ಪೊಲೀಸರು ಶಾಂತಿಯುತವಾಗಿ ಹೋರಾಟ ನಡೆಸುತ್ತಿರುವ ರೈತರಿಗೆ ರಕ್ಷಣೆ ಒದಗಿಸಬೇಕು.ರೈತರ ಬೇಡಿಕೆಯಂತೆ 3500 ರೂ.ದರ ನಿಗದಿ ಮಾಡುವವರೆಗೂ ಕಬ್ಬು ನುರಿಸುವುದನ್ನು ಬಂದ್ ಮಾಡಬೇಕು.

ಡಿವೈಎಸ್‌ಪಿ ಬಲ್ಲಪ್ಪ ನಂದಗಾವಿ ಮಾತನಾಡಿ, ಈಗಾಗಲೇ ಹೊಲಗಳಲ್ಲಿ ಕಟಾವು ಮಾಡಿರುವ ಕಬ್ಬನ್ನು ಕಾರ್ಖಾನೆಗೆ ಸಾಗಿಸಲು ಅವಕಾಶ ಕಲ್ಪಿಸಬೇಕು.ನಾಳೆಯಿಂದ ಕಬ್ಬು ಕಡಿತ ನಿಲ್ಲಿಸುವಂತೆ ಕಾರ್ಖಾನೆಯವರು ರೈತರಿಗೆ ತಿಳಿಸಲಿದ್ದಾರೆ.ಹೋರಾಟದಿಂದ ಯಾವುದೇ ಒಬ್ಬ ರೈತನಿಗೂ ಅನ್ಯಾಯ ಆಗಬಾರದು ಎಂದು ಹೇಳಿದರು.

ಬಾಲಾಜಿ ಶುರ‍್ಸ್ ನಿರ್ದೇಶಕರಾದ ರಾಹುಲಗೌಡ ಪಾಟೀಲ, ಕಬ್ಬು ಪೂರೈಕೆ ವಿಭಾಗದ ಜಿ.ಎಂ.ಬಿರಾದಾರ ಮಾತನಾಡಿ, ಅಧಿಕಾರಿಗಳು,ರೈತರ ಮನವಿಯಂತೆ ಈಗಾಗಲೇ ಕಟಾವು ಮಾಡಿದ ಜಮೀನಿನಲ್ಲಿರುವ ಕಬ್ಬನ್ನು ಕಾರ್ಖಾನೆಗೆ ಸಾಗಿಸಲು ಅನುವು ಮಾಡಿಕೊಟ್ಟ ಬಳಿಕ ನ.6 ರಿಂದಲೇ ಕಬ್ಬು ಕಟಾವು ಮಾಡುವುದನ್ನು ಸ್ಥಗಿತಗೊಳಿಸುವಂತೆ ರೈತರಿಗೆ ತಿಳಿಸಲಾಗುವುದು.ಸರ್ಕಾರದ ಮಟ್ಟದಲ್ಲಿ ಬೆಲೆ ಹೆಚ್ಚಳ ನಿರ್ಧಾರ ಆಗಬೇಕಿರುವುದರಿಂದ ಅಲ್ಲಿಯವರೆಗೆ ಕಾಯುವುದು ಅನಿವಾರ್ಯ ಎಂದು ಹೇಳಿದರು.

ತಹಶೀಲ್ದಾರ್ ಕೀರ್ತಿ ಚಾಲಕ, ಕಂದಾಯ ನಿರೀಕ್ಷಕ ಪವನ್ ತಳವಾರ, ಪಿಎಸೈ ಸಂಜಯ ತಿಪರೆಡ್ಡಿ, ರೈತರಾದ ಸಿದ್ದಣ್ಣ ಮೇಟಿ, ಮಲ್ಲಿಕಾರ್ಜುನ ಬೀಸಲದಿನ್ನಿ, ಸೋಮನಗೌಡ ಪಾಟೀಲ, ಶಂಕ್ರಗೌಡ ಲಿಂಗದಳ್ಳಿ, ಗುರುಸಂಗಪ್ಪ ಹಂಡರಗಲ್ಲ, ಶಿವನಗೌಡ ಯಾಳವಾರ,ಶ್ರೀಶೈಲ ಅಳ್ಳಗಿ, ನಿಖಿಲ ಮಲಗಲದಿನ್ನಿ,ಗಂಗು ಕುಂಬಾರ,ಬಸನಗೌಡ ಗೋನಾಳ, ಬಸನಗೌಡ ಬಿರಾದಾರ,ಮಾಳಪ್ಪ ಬೂದಿಹಾಳ,ಬಸವರಾಜ ಮಾಮನಿ,ಹರೀಶ ಲಾಯದಗುಂದಿ,ಶಿವನಗೌಡ ಬಿರಾದಾರ (ಜಲಪೂರ) ಮೊದಲಾದವರು ಇದ್ದರು.

Latest News

ಕಂದಗನೂರ-ಮುದೂರ ರಸ್ತೆ ದುರಸ್ತಿ : ರೈತರ ಹೊಲಗಳ ದರ ದುಪ್ಪಟ್ಟು-ಶಾಸಕ ಸಿ.ಎಸ್.ನಾಡಗೌಡ

ಕಂದಗನೂರ-ಮುದೂರ ರಸ್ತೆ ದುರಸ್ತಿ : ರೈತರ ಹೊಲಗಳ ದರ ದುಪ್ಪಟ್ಟು-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಹಳ್ಳಿಗಳನ್ನು ಸಂಪರ್ಕಿಸುವ ರೈತರ ಹೊಲಗಳಿಗೆ ಹೋಗುವ ರಸ್ತೆಗಳ ಸುಧಾರಣೆಯಿಂದ

ನಾನು  ಕಾಂಗ್ರೆಸ್  ಹೈಕಮಾಂಡ್  ಲಿಸ್ಟ್’ನಲ್ಲಿರುವೆ-C.S.ನಾಡಗೌಡ

ನಾನು  ಕಾಂಗ್ರೆಸ್  ಹೈಕಮಾಂಡ್  ಲಿಸ್ಟ್’ನಲ್ಲಿರುವೆ-C.S.ನಾಡಗೌಡ

ಮುದ್ದೇಬಿಹಾಳ : ‘ಕೆಲವರು ನಾನು ಡಿಕೆಶಿ ಲಿಸ್ಟ್’ನಲ್ಲಿರುವೆ,ಇನ್ನು ಕೆಲವರು ಸಿದ್ಧರಾಮಯ್ಯ ಲಿಸ್ಟ್’ನಲ್ಲಿರುವೆ ಎನ್ನುತ್ತಿದ್ದಾರೆ.ನಾನು ಅವರಿಬ್ಬರ

ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ಸವಾರಿ ಮಾಡುವರು : ಕೆ. ಶಿವಕುಮಾರ್

ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ಸವಾರಿ ಮಾಡುವರು : ಕೆ. ಶಿವಕುಮಾರ್

ಚಾಮರಾಜನಗರ : ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ನಿಮ್ಮಗಳ ಮೇಲೆ ಸವಾರಿ ಮಾಡುವರು ಎಂದು ವಿಧಾನ

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ಬೀದರ್ ;- ರಾಜ್ಯದಲ್ಲಿ ಸಂಭವಿಸಿರುವ ನೆರೆ, ಬರ, ಪ್ರವಾಹ ಮೊದಲಾದ ಪ್ರಕೃತಿ ವಿಕೋಪಗಳಿಂದ ರೈತರು,

ಗುಳಬಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆ

ಗುಳಬಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆ

ಗುಳಬಾಳ : ಹುಣಸಗಿ ತಾಲ್ಲೂಕಿನ ಗುಳಬಾಳ ಗ್ರಾಮದ ನಿವಾಸಿಯಾದ ಶ್ರೀಮತಿ ಯಂಕಮ್ಮ ಬಮ್ಮನಳ್ಳಿ ಅವರು ಕಲಿತ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆಯಾಗಿ ನೀಡಿದರು. "ನಾನು ಕಲಿತ ಶಾಲೆ ನನ್ನ ಹೆಮ್ಮೆ" ಎಂದು ತಿಳಿದು ಶಾಲೆಯಲ್ಲಿ ನಡೆಯುವ ರಾಷ್ಟ್ರೀಯ ಕಾರ್ಯಕ್ರಮಗಳು ಇನ್ನಿತರೆ ಜಯಂತಿಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅನುಕೂಲವಾಗುವಂತೆ ತಮ್ಮ ವೈಯಕ್ತಿಕ ಹಣದಲ್ಲಿ ಶಾಲೆಗೆ ದೇಣಿಗೆ ನೀಡಿದರು. ಹುಣಸಗಿ ತಾಲೂಕಿನ ಪದವಿದರರೂ ತಮ್ಮ ಊರಿನ ಶಾಲೆಗೆ ದೇಣಿಗೆ ನೀಡಿ ಮಾದರಿಯಾಗಿ

ಬಸರಕೋಡ ಪಿ.ಕೆ.ಪಿ.ಎಸ್ :                                         ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ, ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಅವಿರೋಧ ಆಯ್ಕೆ

ಬಸರಕೋಡ ಪಿ.ಕೆ.ಪಿ.ಎಸ್ : ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ, ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ವಿವಿದೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ,ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಎರಡನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಕಚೇರಿಯಲ್ಲಿ ಮಂಗಳವಾರ ನಡೆದ ಅಧ್ಯಕ್ಷ,ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ತಲಾ ಒಂದೊAದೇ ನಾಮಪತ್ರ ಸಲ್ಲಿಕೆ ಆದ ಹಿನ್ನೆಲೆಯಲ್ಲಿ ಎರಡೂ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದೆ ಎಂದು ಚುನಾವಣಾಧಿಕಾರಿ, ಸಹಕಾರ ಅಭಿವೃದ್ಧಿ ಅಧಿಕಾರಿ ವಿ.ಎಸ್.ಉತ್ನಾಳ ತಿಳಿಸಿದರು. ಎರಡನೇ ಅವಧಿಗೆ