3500 ರೂ.ದರ ನಿಗದಿಗೊಳಿಸುವವರೆಗೂ ಕಬ್ಬು ಪೂರೈಕೆ ಸ್ಥಗಿತಕ್ಕೆ ರೈತರ ನಿರ್ಧಾರ

3500 ರೂ.ದರ ನಿಗದಿಗೊಳಿಸುವವರೆಗೂ ಕಬ್ಬು ಪೂರೈಕೆ ಸ್ಥಗಿತಕ್ಕೆ ರೈತರ ನಿರ್ಧಾರ

ಮುದ್ದೇಬಿಹಾಳ : ಕಬ್ಬಿಗೆ 3500 ರೂ.ದರ ನಿಗದಿ ಮಾಡುವವರೆಗೂ ಕಬ್ಬು ಕಟಾವು ಮಾಡಲು ಕಾರ್ಖಾನೆಯವರು ಆದೇಶ ನೀಡಬಾರದು.ಅಲ್ಲಿಯವರೆಗೂ ನಾವು ಹೋರಾಟ ಬಿಟ್ಟು ಕದಲುವುದಿಲ್ಲ ಎಂದು ರೈತ ಮುಖಂಡರು ತಿಳಿಸಿದರು.

ತಾಲ್ಲೂಕಿನ ಯರಗಲ್ ಮದರಿ ಬಳಿ ಇರುವ ಬಾಲಾಜಿ ಸಕ್ಕರೆ ಕಾರ್ಖಾನೆಗೆ ಕಬ್ಬು ಪೂರೈಸುವ ಟ್ರಾö್ಯಕ್ಟರ್‌ಗಳನ್ನು ತಂಗಡಗಿ ಗ್ರಾಮದ ಸಮೀಪದಲ್ಲಿರುವ ಅಮರಗೋಳ ಕ್ರಾಸ್‌ನಲ್ಲಿ ನಿಲುಗಡೆ ಮಾಡಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಈ ನಿರ್ಧಾರವನ್ನು ಅಧಿಕಾರಿಗಳಿಗೆ ಪ್ರತಿಭಟನಾಕಾರರು ತಿಳಿಸಿದ್ದಾರೆ.

ರೈತ ಸಂಘದ ಅಧ್ಯಕ್ಷ ಬಾಲಪ್ಪಗೌಡ ಲಿಂಗದಳ್ಳಿ ಮಾತನಾಡಿ,ಕಾರ್ಖಾನೆಗಳಿಗೆ ಲಾಭವಿದ್ದರೂ ರೈತರಿಗೆ ಅದರ ಲಾಭಾಂಶವನ್ನು ಕೊಡುವುದಕ್ಕೆ ಹಿಂದೇಟು ಹಾಕುತ್ತಿದ್ದಾರೆ.ಪ್ರತಿಭಟನೆಗೆ ಮುಂದಾದ ರೈತರನ್ನು ಹತ್ತಿಕ್ಕುವ ಕೆಲಸವನ್ನು ಮಾಡಲಾಗುತ್ತಿದೆ ಎಂದು ದೂರಿದರು.

ರೈತ ಮುಖಂಡ ಅರವಿಂದ ಕೊಪ್ಪ ಮಾತನಾಡಿ, ಪೊಲೀಸರು ಶಾಂತಿಯುತವಾಗಿ ಹೋರಾಟ ನಡೆಸುತ್ತಿರುವ ರೈತರಿಗೆ ರಕ್ಷಣೆ ಒದಗಿಸಬೇಕು.ರೈತರ ಬೇಡಿಕೆಯಂತೆ 3500 ರೂ.ದರ ನಿಗದಿ ಮಾಡುವವರೆಗೂ ಕಬ್ಬು ನುರಿಸುವುದನ್ನು ಬಂದ್ ಮಾಡಬೇಕು.

ಡಿವೈಎಸ್‌ಪಿ ಬಲ್ಲಪ್ಪ ನಂದಗಾವಿ ಮಾತನಾಡಿ, ಈಗಾಗಲೇ ಹೊಲಗಳಲ್ಲಿ ಕಟಾವು ಮಾಡಿರುವ ಕಬ್ಬನ್ನು ಕಾರ್ಖಾನೆಗೆ ಸಾಗಿಸಲು ಅವಕಾಶ ಕಲ್ಪಿಸಬೇಕು.ನಾಳೆಯಿಂದ ಕಬ್ಬು ಕಡಿತ ನಿಲ್ಲಿಸುವಂತೆ ಕಾರ್ಖಾನೆಯವರು ರೈತರಿಗೆ ತಿಳಿಸಲಿದ್ದಾರೆ.ಹೋರಾಟದಿಂದ ಯಾವುದೇ ಒಬ್ಬ ರೈತನಿಗೂ ಅನ್ಯಾಯ ಆಗಬಾರದು ಎಂದು ಹೇಳಿದರು.

ಬಾಲಾಜಿ ಶುರ‍್ಸ್ ನಿರ್ದೇಶಕರಾದ ರಾಹುಲಗೌಡ ಪಾಟೀಲ, ಕಬ್ಬು ಪೂರೈಕೆ ವಿಭಾಗದ ಜಿ.ಎಂ.ಬಿರಾದಾರ ಮಾತನಾಡಿ, ಅಧಿಕಾರಿಗಳು,ರೈತರ ಮನವಿಯಂತೆ ಈಗಾಗಲೇ ಕಟಾವು ಮಾಡಿದ ಜಮೀನಿನಲ್ಲಿರುವ ಕಬ್ಬನ್ನು ಕಾರ್ಖಾನೆಗೆ ಸಾಗಿಸಲು ಅನುವು ಮಾಡಿಕೊಟ್ಟ ಬಳಿಕ ನ.6 ರಿಂದಲೇ ಕಬ್ಬು ಕಟಾವು ಮಾಡುವುದನ್ನು ಸ್ಥಗಿತಗೊಳಿಸುವಂತೆ ರೈತರಿಗೆ ತಿಳಿಸಲಾಗುವುದು.ಸರ್ಕಾರದ ಮಟ್ಟದಲ್ಲಿ ಬೆಲೆ ಹೆಚ್ಚಳ ನಿರ್ಧಾರ ಆಗಬೇಕಿರುವುದರಿಂದ ಅಲ್ಲಿಯವರೆಗೆ ಕಾಯುವುದು ಅನಿವಾರ್ಯ ಎಂದು ಹೇಳಿದರು.

ತಹಶೀಲ್ದಾರ್ ಕೀರ್ತಿ ಚಾಲಕ, ಕಂದಾಯ ನಿರೀಕ್ಷಕ ಪವನ್ ತಳವಾರ, ಪಿಎಸೈ ಸಂಜಯ ತಿಪರೆಡ್ಡಿ, ರೈತರಾದ ಸಿದ್ದಣ್ಣ ಮೇಟಿ, ಮಲ್ಲಿಕಾರ್ಜುನ ಬೀಸಲದಿನ್ನಿ, ಸೋಮನಗೌಡ ಪಾಟೀಲ, ಶಂಕ್ರಗೌಡ ಲಿಂಗದಳ್ಳಿ, ಗುರುಸಂಗಪ್ಪ ಹಂಡರಗಲ್ಲ, ಶಿವನಗೌಡ ಯಾಳವಾರ,ಶ್ರೀಶೈಲ ಅಳ್ಳಗಿ, ನಿಖಿಲ ಮಲಗಲದಿನ್ನಿ,ಗಂಗು ಕುಂಬಾರ,ಬಸನಗೌಡ ಗೋನಾಳ, ಬಸನಗೌಡ ಬಿರಾದಾರ,ಮಾಳಪ್ಪ ಬೂದಿಹಾಳ,ಬಸವರಾಜ ಮಾಮನಿ,ಹರೀಶ ಲಾಯದಗುಂದಿ,ಶಿವನಗೌಡ ಬಿರಾದಾರ (ಜಲಪೂರ) ಮೊದಲಾದವರು ಇದ್ದರು.

Latest News

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ