ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್ ಅಡಿ ನಿರ್ಮಿಸಲಾದ ಕಾಲುವೆ ಸಂಖ್ಯೆ 16ಎ- ಲ್ಯಾಟರಲ್ ನಂ.2 ಕಾಲುವೆ ನಿರ್ಮಿಸಲು ಸ್ವಾಧೀನಪಡಿಸಿಕೊಂಡಿರುವ ಜಮೀನಿಗೆ ಸಂಬoಧಿಸಿದoತೆ ಎರಡು ದಶಕಗಳು ಕಳೆದರೂ ಈವರೆಗೂ ಬಾಧಿತ ರೈತರಿಗೆ ಯಾವುದೇ ರೀತಿಯಿಂದ ಪರಿಹಾರ ದೊರೆತಿಲ್ಲ.ಅಧಿಕಾರಿಗಳು ಪರಿಹಾರ ದೊರಕಿಸಿಕೊಡಬೇಕು ಎಂದು ತಾಲ್ಲೂಕಿನ ಮದರಿ ಮತ್ತು ಗರಸಂಗಿ ಗ್ರಾಮದ ರೈತರು ಕೆಬಿಜೆಎನ್‌ಎಲ್ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಶನಿವಾರ ಮನವಿ ಪತ್ರ ಸಲ್ಲಿಸಿದರು.

ಪಟ್ಟಣದ ಹುಡ್ಕೋದಲ್ಲಿರುವ ಕೆಬಿಜೆಎನ್‌ಎಲ್ ಎಎಲ್‌ಬಿಸಿ ವಿಭಾಗ-3 ಕಚೇರಿಗೆ ಆಗಮಿಸಿದ್ದ ರೈತರು, 16-09-2020 ಮತ್ತು 29-05-2025ರಂದು ಮದರಿ ಮತ್ತು ಗರಸಂಗಿ ಗ್ರಾಮದ ರೈತರು ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದೇವೆ.ಆದರೆ ಈವರೆಗೂ ಬಿಡಿಗಾಸು ಪರಿಹಾರ ನೀಡಿಲ್ಲ ಎಂದು ಆರೋಪಿಸಿದರು.

ಸದರಿ ಇಲಾಖೆಯ ಅಧಿಕಾರಿಯೊಬ್ಬರು ಓರ್ವ ಖಾಸಗಿ ವ್ಯಕ್ತಿಯನ್ನು ಗ್ರಾಮಕ್ಕೆ ಕಳುಹಿಸಿ ರೈತರಿಗೆ ಪರಿಹಾರ ನೀಡಲು ಅಗತ್ಯವಾದ ದಾಖಲೆಗಳನ್ನು ಸಂಗ್ರಹಿಸಲು ತಲಾ 500 ರೂ.ಗಳನ್ನು ರೈತರಿಂದ ವಸೂಲಿ ಮಾಡಿಸಿಕೊಂಡಿದ್ದಾರೆ.ಆದರೆ ಯಾವುದೇ ದಾಖಲೆಗಳನ್ನು ನೀಡಿಲ್ಲ ಎಂದು ದೂರಿದರು.
ಮದರಿ ಗ್ರಾಮದ ರೈತರಾದ ಮಹಾಂತೇಶ ಉಗರಗೋಳ ಮಾತನಾಡಿ, ಕಳೆದ ಇಪ್ಪತ್ತು ವರ್ಷಗಳಿಂದ ಸಾಕಷ್ಟು ಬಾರಿ ಅಧಿಕಾರಿಗಳಿಗೆ ಈ ವಿಷಯವಾಗಿ ಮನವಿ ಮಾಡುತ್ತ ಬಂದಿದ್ದೇವೆ.ಆದರೆ ಯಾರೂ ರೈತರ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ.ಯಾವ ಜನಪ್ರತಿನಿಧಿ,ಅಧಿಕಾರಿಯಿಂದಲೂ ಉಪಯೋಗವಾಗಿಲ್ಲ ಎಂದು ದೂರಿದರಲ್ಲದೇ ಸದ್ಯಕ್ಕೆ ಅಧಿಕಾರದಲ್ಲಿರುವ ಕಾರ್ಯನಿರ್ವಾಹಕ ಅಭಿಯಂತರ ಅಶೋಕ ಬಿರಾದಾರ ಅವರು ಪುನಃ ದಾಖಲೆಗಳನ್ನು ಒದಗಿಸಲು ತಿಳಿಸಿದಂತೆ ಮತ್ತೆ ರೈತರೇ ತಮ್ಮ ಸ್ವಂತ ಹಣ ಖರ್ಚು ಮಾಡಿ ಕಾಲುವೆಗೆ ಜಮೀನು ಕಳೆದುಕೊಂಡ ರೈತರು ಅಗತ್ಯ ದಾಖಲೆಗಳನ್ನು ನೀಡಿದ್ದೇವೆ.ಒಂದು ತಿಂಗಳೊಳಗಾಗಿ ಪರಿಹಾರ ಒದಗಿಸದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ತಿಳಿಸಿದರು.ಎಇ ಬಿ.ಎಸ್.ಕುಂಟೋಜಿ ಮನವಿ ಪತ್ರ ಸ್ವೀಕರಿಸಿದರು.ಈ ಸಂದರ್ಭದಲ್ಲಿ ರೈತರಾದ ಮಲಕೇಂದ್ರರಾವ ನಾಡಗೌಡ್ರ, ಎಸ್.ಕೆ.ತೊಂಡಿಹಾಳ, ಸಂಗಮೇಶ ಹಿರೇಮಠ,ಶರಣಬಸವ ಗೌಡರ,ಮುತ್ತು ಕಾನಕ್ಕಿ,ಶಿವರಾಜ ಮೇಟಿ,ಗೌಡಪ್ಪ ತೊಂಡಿಹಾಳ,ಜಿAಕಪ್ಪ ಕಾನಕ್ಕಿ ಮೊದಲಾದವರು ಇದ್ದರು.

ಸಾಷ್ಟಾಂಗ ಹಾಕಲು ಮುಂದಾದ ರೈತರು:ಕಳೆದ ಇಪ್ಪತ್ತು ವರ್ಷಗಳಿಂದ ಕೆಬಿಜೆಎನ್‌ಎಲ್‌ನಿಂದ ಯಾವುದೇ ಪರಿಹಾರ ರೈತರಿಗೆ ಬಾರದ್ದರಿಂದ ಬೇಸರಗೊಂಡ ಗರಸಂಗಿ,ಮದರಿ ಗ್ರಾಮದ ರೈತರು ಶನಿವಾರ ಕೆಬಿಜೆಎನ್‌ಎಲ್ ಕಚೇರಿಗೆ ಮನವಿ ಸಲ್ಲಿಸುವ ಸಮಯದಲ್ಲಿ ಜೆಇ ಬಿ.ಎಸ್.ಕುಂಟೋಜಿ ಅವರಿಗೆ ಸಾಷ್ಟಾಂಗ ಹಾಕಲು ಮುಂದಾದ ಘಟನೆ ನಡೆಯಿತು.ಅಧಿಕಾರಿಗಳಿಗೆ ಮನವಿ ಕೊಟ್ಟು ಸಾಕಾಗಿದೆ.ಅದಕ್ಕೆ ಶಿರಸಾಷ್ಟಾಂಗ ಹಾಕಿ ನಮಗೆ ಪರಿಹಾರ ದೊರಕಿಸಿಕೊಡುವಂತೆ ವಿನಂತಿಸುತ್ತಿದ್ದೇವೆ ಎಂದು ರೈತರು ತಿಳಿಸಿದರು.

ಟಿಪ್ಪಣಿ ಉತಾರೆ ಎಂದರೆ ಗೊತ್ತಿಲ್ಲವೆಂದ ಅಧಿಕಾರಿ :
ಕೆ.ಬಿ.ಜೆ.ಎನ್.ಎಲ್ ಎ.ಎಲ್.ಬಿ.ಸಿ-3 ಕಚೇರಿಯ ಎಇ ಬಿ.ಎಸ್.ಕುಂಟೋಜಿ ಸದರಿ ಕಾಲುವೆಯಿಂದ ಬಾಧಿತ ರೈತರ ದಾಖಲೆಗಳನ್ನು ಮೇಲಧಿಕಾರಿಗಳ ನಿರ್ದೇಶನದ ಮೇರೆಗೆ ಪಡೆದುಕೊಳ್ಳುವ ಸಮಯದಲ್ಲಿ ರೈತರು ಕೇಳಿದ ಪ್ರಶ್ನೆಗೆ ಏನೂ ಗೊತ್ತಿಲ್ಲ ಎಂದು ಉತ್ತರಿಸಿದ್ದು ಅಧಿಕಾರಿಯ ಬೇಜವಾಬ್ದಾರಿತನಕ್ಕೆ ಸಾಕ್ಷಿ ಒದಗಿಸಿತು.2019ರಿಂದ ಮುದ್ದೇಬಿಹಾಳ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಎಇಗೆ ಟಿಪ್ಪಣಿ ಉತಾರೆ ಎಂದರೆ ಗೊತ್ತಿಲ್ಲ ಎಂದರೆ ತಮಗೆ ಹೇಗೆ ಪರಿಹಾರ ದೊರೆಯುತ್ತದೆ ಎಂದು ರೈತರು ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ