Fatal attack on college lecturer

ಕಾಲೇಜು ಉಪನ್ಯಾಸಕಿ ಮೇಲೆ ಮಾರಣಾಂತಿಕ ಹಲ್ಲೆ

ಕಾಲೇಜು ಉಪನ್ಯಾಸಕಿ ಮೇಲೆ ಮಾರಣಾಂತಿಕ ಹಲ್ಲೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ) : ಮನೆ ಬಾಡಿಗೆ ಕೇಳುವ ನೆಪದಲ್ಲಿ ಮನೆಗೆ ಬಂದ ಆಗುಂತಕನೊಬ್ಬ ಕಾಲೇಜು ಉಪನ್ಯಾಸಕಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆಗೈದು ತಡೆಯಲು ಹೋದ ಉಪನ್ಯಾಸಕಿ ತಾಯಿಯನ್ನು ಎಳೆದಾಡಿದ ಘಟನೆ ಪಟ್ಟಣದ ಸಾಯಿ ನಗರದ ಹೇಮರಡ್ಡಿ ದೇವಸ್ಥಾನದ ಹಿಂಭಾಗದಲ್ಲಿ ಶನಿವಾರ ಮದ್ಯಾಹ್ನ ನಡೆದಿದೆ.

ಘಟನೆ ವಿವರ : ಮುದ್ದೇಬಿಹಾಳ ಪಟ್ಟಣದ ಎಂ.ಜಿ.ವಿ.ಸಿ ಕಾಲೇಜಿನ ಉಪನ್ಯಾಸಕಿ ಸುಮಂಗಲಾ ಅಂಗಡಿ(46) ಆಗುಂತಕ ವ್ಯಕ್ತಿಯ ದಾಳಿಯಿಂದ ಗಂಭೀರವಾಗಿ ಗಾಯಗೊಂಡವರು. ಪಿಎಸ್‌ಐ ಸಂಜಯ ತಿಪರೆಡ್ಡಿ ಅವರ ಎದುರಿಗೆ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಅಂಬ್ಯುಲೆನ್ಸ್ನಲ್ಲಿ ಬಾಗಲಕೋಟ ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಘಟನೆಯ ಸಂದರ್ಭವನ್ನು ವಿವರಿಸಿದ ಉಪನ್ಯಾಸಕಿ ಸುಮಂಗಲಾ, ಎರಡು ದಿನದ ಹಿಂದೆ ವ್ಯಕ್ತಿಯೊಬ್ಬ ಮನೆ ಬಾಡಿಗೆ ಕೇಳಿಕೊಂಡು ಬಂದಿದ್ದ. ಕೊಠಡಿ ಖಾಲಿ ಇದೆ ಎಂದು ತಿಳಿಸಿದ್ದೇವು. ಶನಿವಾರ ಮದ್ಯಾಹ್ನದ ಹೊತ್ತಿಗೆ ಮನೆ ಬಾಡಿಗೆ ಕೇಳುವ ನೆಪದಲ್ಲಿ ಹಿಂದಿ ಭಾಷೆಯನ್ನು ಮಾತನಾಡುತ್ತಿದ್ದ ಆತನಿಗೆ ಮನೆಯ ಮೇಲಿನ ಮಹಡಿ ಖಾಲಿ ಇದ್ದು ಬಾಡಿಗೆಗೆ ನೋಡುವಂತೆ ತಿಳಿಸಿದೆವು. ಆತ ಮನೆಯ ಫೋಟೋ ತೆಗೆದುಕೊಳ್ಳುವುದಾಗಿ ಹೇಳಿ ಮೊದಲು ಮನೆಯ ಪೂರ್ತಿ ಫೋಟೋ ತಗೆದುಕೊಂಡು ನಂತರ ಬಾಡಿಗೆ ಇರುವ ಕೊಠಡಿಯ ಫೋಟೋ ಬೇಕು ಎಂದ. ಅದಕ್ಕೆ ನಾವು ಕೊಠಡಿಯ ಫೋಟೋ ಯಾವುದಕ್ಕೆ ಎಂದು ಪ್ರಶ್ನಿಸಿದಾಗ ತಮ್ಮ ಕಂಪನಿಯವರಿಗೆ ತೋರಿಸಬೇಕು ಎಂದು ತಿಳಿಸಿದ. ಮೇಲಿನ ಮಹಡಿ ಕೊಠಡಿಗೆ ಹೋಗುತ್ತಿದ್ದಂತೆ ಏಕಾಏಕಿ ನನ್ನ ಮುಖಕ್ಕೆ ಬಲವಾಗಿ ಗುದ್ದಲು ಶುರು ಮಾಡಿದ. ಇದರಿಂದ ಗಾಬರಿಯಾಗಿ ನಾನು ನನ್ನ ತಾಯಿಯನ್ನು ಕೂಗಿದಾಗ ಅವರು ಓಡಿ ಬಂದು ನೋಡುವಷ್ಟರಲ್ಲಿ ತಾಯಿಯವರಿಗೂ ಆತ ಹೊಡೆದಿದ್ದಾನೆ. ಅವರ ಕನ್ನಡಕ ನೆಲಕ್ಕೆ ಬಿದ್ದು ಒಡೆದಿದ್ದು ಅವರು ಹೊರಗೆ ಹೋಗಿ ಓಣಿಯ ಜನರನ್ನು ಕರೆಯಲು ಯತ್ನಿಸುತ್ತಾರೆ ಎಂದು ಅವರನ್ನು ಎಳೆದಾಡಿ ಬಟ್ಟೆ ಹರಿದಿದ್ದಾನೆ. ಘಟನೆಯಿಂದ ನಮಗೆ ತುಂಬಾ ಗಾಬರಿಯಾಗಿದ್ದು ಆತನನ್ನು ಬಿಡಬೇಡಿ ಎಂದು ಹೇಳಿಕೊಂಡಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದ್ದು ಹೆಚ್ಚಿನ ವಿಚಾರಣೆ ಬಳಿಕವೇ ಆತ ಏಕೆ ಹೋಗಿದ್ದ ಎಂಬ ಮಾಹಿತಿ ತಿಳಿದು ಬರಲಿದೆ.

ಹಾಡಹಗಲೇ ನಡೆದ ಘಟನೆಯಿಂದ ಪಟ್ಟಣದ ಜನತೆ ಆತಂಕಗೊಂಡಿದ್ದು ಮನೆಯಲ್ಲಿ ಒಂಟಿ ಮಹಿಳೆಯರು ಇದ್ದಾಗ ಘಟನೆ ನಡೆದಿರುವುದು ಜನರನ್ನು ಭಯಭೀತರನ್ನಾಗಿಸಿದೆ. ಗಾಯಗೊಂಡಿದ್ದ ಉಪನ್ಯಾಸಕಿ ಸುಮಂಗಲಾ ಹಾಗೂ ಅವರ ತಾಯಿ ವಿಜಯಲಕ್ಷ್ಮಿ ಅಂಗಡಿ ಅವರನ್ನು ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಕಾಲೇಜು ಆಡಳಿತ ಮಂಡಳಿ ಪದಾಧಿಕಾರಿಗಳಿಂದ ಸಾಂತ್ವನ : ಘಟನೆಯ ವಿಷಯ ತಿಳಿಯುತ್ತಿದ್ದಂತೆ ತಕ್ಷಣ ಸರಕಾರಿ ಆಸ್ಪತ್ರೆಗೆ ಆಗಮಿಸಿದ ಎಂ.ಜಿ.ವಿ.ಸಿ ಕಾಲೇಜಿನ ಕಾರ್ಯದರ್ಶಿ ಅಶೋಕ ತಡಸದ, ಪ್ರಾಚಾರ್ಯ ಎಸ್.ಎನ್.ಪೊಲೇಶಿ, ಉಪನ್ಯಾಸಕ ರಹೀಂ ಮುಲ್ಲಾ, ಸಿಬ್ಬಂದಿ ಬಾಬು ಚವ್ಹಾಣ ಉಪನ್ಯಾಸಕಿ ಸುಮಂಗಲಾ ಅಂಗಡಿ ಅವರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು. ಅಲ್ಲದೇ ತಕ್ಷಣ ಅವರನ್ನು ಬಾಗಲಕೋಟ ಜಿಲ್ಲಾಸ್ಪತ್ರೆಗೆ ಕಳಿಸಲು ನೆರವು ನೀಡಿದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ