Fatal attack on college lecturer

ಕಾಲೇಜು ಉಪನ್ಯಾಸಕಿ ಮೇಲೆ ಮಾರಣಾಂತಿಕ ಹಲ್ಲೆ

ಕಾಲೇಜು ಉಪನ್ಯಾಸಕಿ ಮೇಲೆ ಮಾರಣಾಂತಿಕ ಹಲ್ಲೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ) : ಮನೆ ಬಾಡಿಗೆ ಕೇಳುವ ನೆಪದಲ್ಲಿ ಮನೆಗೆ ಬಂದ ಆಗುಂತಕನೊಬ್ಬ ಕಾಲೇಜು ಉಪನ್ಯಾಸಕಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆಗೈದು ತಡೆಯಲು ಹೋದ ಉಪನ್ಯಾಸಕಿ ತಾಯಿಯನ್ನು ಎಳೆದಾಡಿದ ಘಟನೆ ಪಟ್ಟಣದ ಸಾಯಿ ನಗರದ ಹೇಮರಡ್ಡಿ ದೇವಸ್ಥಾನದ ಹಿಂಭಾಗದಲ್ಲಿ ಶನಿವಾರ ಮದ್ಯಾಹ್ನ ನಡೆದಿದೆ.

ಘಟನೆ ವಿವರ : ಮುದ್ದೇಬಿಹಾಳ ಪಟ್ಟಣದ ಎಂ.ಜಿ.ವಿ.ಸಿ ಕಾಲೇಜಿನ ಉಪನ್ಯಾಸಕಿ ಸುಮಂಗಲಾ ಅಂಗಡಿ(46) ಆಗುಂತಕ ವ್ಯಕ್ತಿಯ ದಾಳಿಯಿಂದ ಗಂಭೀರವಾಗಿ ಗಾಯಗೊಂಡವರು. ಪಿಎಸ್‌ಐ ಸಂಜಯ ತಿಪರೆಡ್ಡಿ ಅವರ ಎದುರಿಗೆ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಅಂಬ್ಯುಲೆನ್ಸ್ನಲ್ಲಿ ಬಾಗಲಕೋಟ ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಘಟನೆಯ ಸಂದರ್ಭವನ್ನು ವಿವರಿಸಿದ ಉಪನ್ಯಾಸಕಿ ಸುಮಂಗಲಾ, ಎರಡು ದಿನದ ಹಿಂದೆ ವ್ಯಕ್ತಿಯೊಬ್ಬ ಮನೆ ಬಾಡಿಗೆ ಕೇಳಿಕೊಂಡು ಬಂದಿದ್ದ. ಕೊಠಡಿ ಖಾಲಿ ಇದೆ ಎಂದು ತಿಳಿಸಿದ್ದೇವು. ಶನಿವಾರ ಮದ್ಯಾಹ್ನದ ಹೊತ್ತಿಗೆ ಮನೆ ಬಾಡಿಗೆ ಕೇಳುವ ನೆಪದಲ್ಲಿ ಹಿಂದಿ ಭಾಷೆಯನ್ನು ಮಾತನಾಡುತ್ತಿದ್ದ ಆತನಿಗೆ ಮನೆಯ ಮೇಲಿನ ಮಹಡಿ ಖಾಲಿ ಇದ್ದು ಬಾಡಿಗೆಗೆ ನೋಡುವಂತೆ ತಿಳಿಸಿದೆವು. ಆತ ಮನೆಯ ಫೋಟೋ ತೆಗೆದುಕೊಳ್ಳುವುದಾಗಿ ಹೇಳಿ ಮೊದಲು ಮನೆಯ ಪೂರ್ತಿ ಫೋಟೋ ತಗೆದುಕೊಂಡು ನಂತರ ಬಾಡಿಗೆ ಇರುವ ಕೊಠಡಿಯ ಫೋಟೋ ಬೇಕು ಎಂದ. ಅದಕ್ಕೆ ನಾವು ಕೊಠಡಿಯ ಫೋಟೋ ಯಾವುದಕ್ಕೆ ಎಂದು ಪ್ರಶ್ನಿಸಿದಾಗ ತಮ್ಮ ಕಂಪನಿಯವರಿಗೆ ತೋರಿಸಬೇಕು ಎಂದು ತಿಳಿಸಿದ. ಮೇಲಿನ ಮಹಡಿ ಕೊಠಡಿಗೆ ಹೋಗುತ್ತಿದ್ದಂತೆ ಏಕಾಏಕಿ ನನ್ನ ಮುಖಕ್ಕೆ ಬಲವಾಗಿ ಗುದ್ದಲು ಶುರು ಮಾಡಿದ. ಇದರಿಂದ ಗಾಬರಿಯಾಗಿ ನಾನು ನನ್ನ ತಾಯಿಯನ್ನು ಕೂಗಿದಾಗ ಅವರು ಓಡಿ ಬಂದು ನೋಡುವಷ್ಟರಲ್ಲಿ ತಾಯಿಯವರಿಗೂ ಆತ ಹೊಡೆದಿದ್ದಾನೆ. ಅವರ ಕನ್ನಡಕ ನೆಲಕ್ಕೆ ಬಿದ್ದು ಒಡೆದಿದ್ದು ಅವರು ಹೊರಗೆ ಹೋಗಿ ಓಣಿಯ ಜನರನ್ನು ಕರೆಯಲು ಯತ್ನಿಸುತ್ತಾರೆ ಎಂದು ಅವರನ್ನು ಎಳೆದಾಡಿ ಬಟ್ಟೆ ಹರಿದಿದ್ದಾನೆ. ಘಟನೆಯಿಂದ ನಮಗೆ ತುಂಬಾ ಗಾಬರಿಯಾಗಿದ್ದು ಆತನನ್ನು ಬಿಡಬೇಡಿ ಎಂದು ಹೇಳಿಕೊಂಡಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದ್ದು ಹೆಚ್ಚಿನ ವಿಚಾರಣೆ ಬಳಿಕವೇ ಆತ ಏಕೆ ಹೋಗಿದ್ದ ಎಂಬ ಮಾಹಿತಿ ತಿಳಿದು ಬರಲಿದೆ.

ಹಾಡಹಗಲೇ ನಡೆದ ಘಟನೆಯಿಂದ ಪಟ್ಟಣದ ಜನತೆ ಆತಂಕಗೊಂಡಿದ್ದು ಮನೆಯಲ್ಲಿ ಒಂಟಿ ಮಹಿಳೆಯರು ಇದ್ದಾಗ ಘಟನೆ ನಡೆದಿರುವುದು ಜನರನ್ನು ಭಯಭೀತರನ್ನಾಗಿಸಿದೆ. ಗಾಯಗೊಂಡಿದ್ದ ಉಪನ್ಯಾಸಕಿ ಸುಮಂಗಲಾ ಹಾಗೂ ಅವರ ತಾಯಿ ವಿಜಯಲಕ್ಷ್ಮಿ ಅಂಗಡಿ ಅವರನ್ನು ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಕಾಲೇಜು ಆಡಳಿತ ಮಂಡಳಿ ಪದಾಧಿಕಾರಿಗಳಿಂದ ಸಾಂತ್ವನ : ಘಟನೆಯ ವಿಷಯ ತಿಳಿಯುತ್ತಿದ್ದಂತೆ ತಕ್ಷಣ ಸರಕಾರಿ ಆಸ್ಪತ್ರೆಗೆ ಆಗಮಿಸಿದ ಎಂ.ಜಿ.ವಿ.ಸಿ ಕಾಲೇಜಿನ ಕಾರ್ಯದರ್ಶಿ ಅಶೋಕ ತಡಸದ, ಪ್ರಾಚಾರ್ಯ ಎಸ್.ಎನ್.ಪೊಲೇಶಿ, ಉಪನ್ಯಾಸಕ ರಹೀಂ ಮುಲ್ಲಾ, ಸಿಬ್ಬಂದಿ ಬಾಬು ಚವ್ಹಾಣ ಉಪನ್ಯಾಸಕಿ ಸುಮಂಗಲಾ ಅಂಗಡಿ ಅವರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು. ಅಲ್ಲದೇ ತಕ್ಷಣ ಅವರನ್ನು ಬಾಗಲಕೋಟ ಜಿಲ್ಲಾಸ್ಪತ್ರೆಗೆ ಕಳಿಸಲು ನೆರವು ನೀಡಿದರು.

Latest News

ಮುದ್ದೇಬಿಹಾಳ : ಮೇ.4 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ಮೇ.4 ರಂದು ನೀರು ಪೂರೈಕೆಯಲ್ಲಿ ವ್ಯತ್ಯಯ

ಮುದ್ದೇಬಿಹಾಳ : ತಾಲೂಕಿನ ದೇವೂರ ಜಾಕ್‌ವೆಲ್‌ನಿಂದ ಮುದ್ದೇಬಿಹಾಳ ಪಟ್ಟಣಕ್ಕೆ ನೀರು ಸರಬರಾಜು ಮಾಡುವ ಮುಖ್ಯ

ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ? – ಚೂನಪ್ಪ ಪೂಜಾರಿ ಪ್ರಶ್ನೆ

ಈ ಭಾಗದ ಶಾಸಕರು ಏನು ಮಾಡುತ್ತಿದ್ದಾರೆ ? – ಚೂನಪ್ಪ ಪೂಜಾರಿ ಪ್ರಶ್ನೆ

ಮುದ್ದೇಬಿಹಾಳ : ಶೇ.90ರಷ್ಟು ಕಾಮಗಾರಿ ಪೂರ್ಣಗೊಂಡು ಸ್ಥಗಿತಗೊಂಡಿರುವ ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸುವುದಕ್ಕಾಗಿ

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ನನಗೆ ಬಿ.ಎಸ್.ಯಡಿಯೂರಪ್ಪನವರು ರಾಜಕೀಯ ಗುರುಗಳು.ರಾಜಕೀಯ ಭವಿಷ್ಯ ಕಲ್ಪಿಸಿದ ಮಾರ್ಗದರ್ಶಕರಾಗಿದ್ದಾರೆ.ಮೇ.9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ:                ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ: ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಮುದ್ದೇಬಿಹಾಳ : ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಒಟ್ಟು ಮೂರು ಪೆನಲ್‌ಗಳು ಸ್ಪರ್ಧಿಸಿದ್ದವು.ಅದರಲ್ಲಿ

ಪರಿಸರಪ್ರೇಮಿ ಎಂ.ಎಸ್.ಗಡೇದಗೆ ಕಾಯಕಯೋಗಿ ಪ್ರಶಸ್ತಿ

ಪರಿಸರಪ್ರೇಮಿ ಎಂ.ಎಸ್.ಗಡೇದಗೆ ಕಾಯಕಯೋಗಿ ಪ್ರಶಸ್ತಿ

ಮುದ್ದೇಬಿಹಾಳ : ಹಸಿರು ತೋರಣ ಗೆಳೆಯರ ಬಳಗದ ಸಂಚಾಲಕ ಮಹಾಬಲೇಶ್ವರ ಎಸ್. ಗಡೇದ ಅವರಿಗೆ 2026 ನೇ ಸಾಲಿನ "ಕಾಯಕ ಯೋಗಿ" ರಾಜ್ಯ ಪ್ರಶಸ್ತಿ ಲಭಿಸಿದೆ. ಪವಾಡ ಬಯಲು ಆಂದೋಲನದ ಮೂಲಕ ರಾಜ್ಯಾದ್ಯಂತ ಹೆಸರಾಗಿರುವ ಡಾ.ಹುಲಿಕಲ್ ನಟರಾಜ ಸಂಸ್ಥಾಪಕ ಅಧ್ಯಕ್ಷರಾಗಿರುವ 'ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು (ರಿ) ದೊಡ್ಡಬಳ್ಳಾಪುರ ಇವರು ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ. ಗಡೇದ ಅವರು ಸದ್ಯಕ್ಕೆ ಹೂವಿನ ಹಿಪ್ಪರಗಿ ಅಂಚೆ ಇಲಾಖೆಯಲ್ಲಿ ಸಬ್ ಪೋಸ್ಟ್ಮಾಸ್ಟರ್ ಆಗಿ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕೆಲವು ಗುತ್ತಿಗೆದಾರರು ಸಹಾಯ ಮಾಡುವುದು ತಮ್ಮ ರಾಜಕೀಯ ಲಾಭಕ್ಕೋಸ್ಕರ ಮಾಡುತ್ತಾರೆಯೇ ಹೊರತು ಸಮಾಜಕ್ಕೆ ನಿಸ್ವಾರ್ಥದಿಂದ ಕೊಡುವುದಿಲ್ಲ.ತಾಲ್ಲೂಕಿನಲ್ಲಿ ಕೆಲವು ಗುತ್ತಿಗೆದಾರರಿಗೆ ಕೆಲಸ ಬೇಕು.ಆದರೆ ಸಮಾಜಕ್ಕೆ ಕೊಡುವ ಮಾತು ದೂರ.ಅಂತವರಿಗೆ ಮುಂದಿನ ದಿನಗಳಲ್ಲಿ ಕಡಿವಾಣ ಹಾಕುವ ಕೆಲಸ ಮಾಡುವುದಾಗಿ ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಮಾರುತಿ ನಗರದಲ್ಲಿ ಹಮ್ಮಿಕೊಂಡಿದ್ದ ಯಲ್ಲಾಲಿಂಗೇಶ್ವರ ದೇವಸ್ಥಾನದ ಸಮೀಪದಲ್ಲಿ ಸನ್ 2025-26 ಸಾಲಿನ ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ 25 ಲಕ್ಷ ರೂ.ವೆಚ್ಚದಲ್ಲಿ ಸಭಾಭವನದ ಭೂಮಿಪೂಜೆ