Festivel: ಸೆ.1 ರಿಂದ ಕುಂಟೋಜಿ ಬಸವೇಶ್ವರ ಜಾತ್ರೋತ್ಸವ.. ಯಾತ್ರಾತ್ರಿಗಳಿಗೆ ಅತ್ಯಾಧುನಿಕ ಸೌಲಭ್ಯಗಳುಳ್ಳ ಕೊಠಡಿಗಳ ನಿರ್ಮಾಣ

Festivel: ಸೆ.1 ರಿಂದ ಕುಂಟೋಜಿ ಬಸವೇಶ್ವರ ಜಾತ್ರೋತ್ಸವ.. ಯಾತ್ರಾತ್ರಿಗಳಿಗೆ ಅತ್ಯಾಧುನಿಕ ಸೌಲಭ್ಯಗಳುಳ್ಳ ಕೊಠಡಿಗಳ ನಿರ್ಮಾಣ

ಮುದ್ದೇಬಿಹಾಳ : ಭಕ್ತಾದಿಗಳ ಸಹಾಯ, ದಾನಿಗಳ ನೆರವಿನಿಂದ ಅಂದಾಜು 70 ಲಕ್ಷ ವೆಚ್ಚದಲ್ಲಿ ಜಾತ್ರೆಗೆ ಬರುವ ಭಕ್ತರಿಗೆ ಅತ್ಯಾಧುನಿಕ ಸೌಲಭ್ಯವುಳ್ಳ ವಸತಿ ಕೊಠಡಿಗಳನ್ನು ಹೊಂದಿರುವ ಯಾತ್ರಿ ನಿವಾಸ ನಿರ್ಮಾಣ ಮಾಡಿದ್ದೇವೆ. ಕಮೀಟಿಯ ಅಧಿಕಾರ ವಹಿಸಿಕೊಂಡ ಒಂದೇ ವರ್ಷದಲ್ಲಿ ಭಕ್ತಾದಿಗಳಿಗೆ ಯಾತ್ರಿ ನಿವಾಸವನ್ನು ಮುಕ್ತಗೊಳಿಸಿದ್ದೇವೆ ಎಂದು ಕುಂಟೋಜಿ ದೇವಸ್ಥಾನ ಕಮೀಟಿಯ ಅಧ್ಯಕ್ಷ ಗುರುಲಿಂಗಪ್ಪ ಸುಲ್ಲಳ್ಳಿ ಹೇಳಿದರು

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ತಾಲ್ಲೂಕಿನ ಕುಂಟೋಜಿ ದೇವಸ್ಥಾನದ ನೂತನ ಯಾತ್ರಿ ನಿವಾಸದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ಜಾತ್ರೆಯ ಕಾರ್ಯಕ್ರಮಗಳ ವಿವರ ನೀಡಿದರು.

ಯಾತ್ರಾ ನಿವಾಸದಲ್ಲಿರುವ ಕೊಠಡಿಗಳಲ್ಲಿ ದೇಶೀಯ, ವಿದೇಶಿಯ ಮಾದರಿಯ ಶೌಚಾಲಯವನ್ನು ನಿರ್ಮಾಣ ಮಾಡಿದ್ದು ಸ್ನಾನಕ್ಕೆ ಆಧುನಿಕ ಶೈಲಿಯ ವಿನ್ಯಾಸವನ್ನು ರೂಪುಗೊಳಿಸಲಾಗಿದೆ. ಜಾತ್ರೆಗೆ ದೂರು ಊರಿಂದ ಬರುವ ಭಕ್ತರು ನೆಮ್ಮದಿಯಿಂದ ಶುಚಿತ್ವ ಕಾಪಾಡಿಕೊಂಡು ಜಾತ್ರೆಯ ವೈಭವವನ್ನು ಕಣ್ತುಂಬಿಕೊಳ್ಳಬಹುದಾಗಿದೆ. ಕೆಲವು ದಾನಿಗಳು ಸ್ವಯಂಪ್ರೇರಣೆಯಿಂದ ದೇವಸ್ಥಾನದ ಯಾತ್ರಾ ನಿವಾಸಕ್ಕೆ ಸಹಾಯ, ಸೇವೆ ಸಲ್ಲಿಸಿದ್ದಾರೆ ಎಂದು ತಿಳಿಸಿದರು.

ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳನ್ನು ಸ್ವಾಮೀಜಿಗಳು, ಶಾಸಕರು, ಮಾಜಿ ಶಾಸಕರು, ಉದ್ಯಮಿದಾರರು, ಜನಪ್ರತಿನಿಧಿಗಳು, ದೇವಸ್ಥಾನ ಕಮಿಟಿ ಪದಾಧಿಕಾರಿಗಳು ನಡೆಸಿಕೊಡಲಿದ್ದಾರೆ.

ಮುಂದಿನ ವರ್ಷ ಬಾಗಲಕೋಟೆಯ ಭಕ್ತರು ದೇವಸ್ಥಾನಕ್ಕೆ ನೂತನ ಕಟ್ಟಿಗೆಯ ರಥ ಮಾಡಿಸಿಕೊಡುವ ಸಂಕಲ್ಪ ಮಾಡಿದ್ದಾರೆ ಎಂದು ತಿಳಿಸಿದರು.

ಮಾಜಿ ಸೈನಿಕ ನಾಗಲಿಂಗಯ್ಯ ಮಠ ಮಾತನಾಡಿ, ಕುಂಟೋಜಿ ಬಸವೇಶ್ವರ ಜಾತ್ರಾ ಮಹೋತ್ಸವ ಸೆ.1 ರಿಂದ 5ರವರೆಗೆ ಹಮ್ಮಿಕೊಂಡಿದ್ದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಕಾರ್ಯಕ್ರಮಗಳ ಮಾಹಿತಿ ಒದಗಿಸಿದರು.

ದೇವಸ್ಥಾನ ಸಮೀತಿ ಸದಸ್ಯ ಸಂತೋಷ ಬಿರಾದಾರ ಮಾತನಾಡಿ, ಜಾತ್ರೆಗೆ ಬರುವ ಭಕ್ತರಿಗೆ ಸಮಸ್ಯೆಯಾಗದಿರಲಿ, ಕಾರ್ಯಕ್ರಮಗಳಲ್ಲಿ ಭಾಗವಹಿಸುವ ವಿವಿಧ ಊರುಗಳಿಂದ ಬರುವ ಸ್ಪರ್ಧಾಳುಗಳ ಅನುಕೂಲಕ್ಕೆ ಐದು ದಿನವೂ ಪ್ರಸಾದ ಸೇವೆ ಇರಲಿದೆ ಎಂದು ತಿಳಿಸಿದರು.

ಇದನ್ನೂ ಓದಿ: Love story: ಪ್ರೀತಿಸಲು ಹುಡುಗಿ ಸಿಗಲಿಲ್ಲವೆಂದು ಡೆತ್ ನೋಟ್ ಬರೆದಿಟ್ಟ ಯುವಕ.. ತುಂಗಾ ನದಿಗೆ ಹಾರಿದ್ನಾ..?

ಸುದ್ದಿಗೋಷ್ಠಿಯಲ್ಲಿ ದೇವಸ್ಥಾನ ಸಮಿತಿಯ ಮಲ್ಲಿಕಾರ್ಜುನ ನಾಟೇಕಾರ, ಆನಂದ ಗಸ್ತಿಗಾರ, ಬಸನಗೌಡ ಬಿರಾದಾರ,ಬಸವರಾಜ ಹುಲಗಣ್ಣಿ,ಸಿದ್ದಪ್ಪ ಹೂಗಾರ, ಮಲ್ಲಿಕಾರ್ಜುನ ಹೆಬ್ಬಾಳ, ಬಸರಕೋಡ ಹೆಸ್ಕಾಂ ಶಾಖಾಧಿಕಾರಿ ಶಿವಪ್ಪ ಆರೇಶಂಕರ, ಸಂಗಯ್ಯ ಮಠ,ವೀರಬಸ್ಸು ಊರಾನ, ಬಸಯ್ಯ ಮಠ ಮೊದಲಾದವರು ಇದ್ದರು.

Latest News

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಮುದ್ದೇಬಿಹಾಳ : ತುಮಕೂರು ಸಿದ್ಧಗಂಗಾ ಮಠದ ಡಾ.ಶಿವಕುಮಾರ ಮಹಾಸ್ವಾಮೀಜಿ ಅವರ ಜನ್ಮದಿನೋತ್ಸವ ಹಾಗೂ ಮಡಿಕೇಶ್ವರದ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ತಾಳಿಕೋಟಿ : ತಂದೆ ತಾಯಿ ಹುಟ್ಟಿನಿಂದ ನೀಡುವ ಸಂಸ್ಕಾರವು ಮಗುವಿನ ಭವಿಷ್ಯ ನಿರ್ಧರಿಸುತ್ತದೆ. ಈ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಕೊಣ್ಣೂರಿನ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಜ.14 ರಂದು ಸಂಜೆ 5 ಗಂಟೆಗೆ ಇಲ್ಲಿನ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಸಾಧಕರಿಗೆ ಸನ್ಮಾನ ಹಾಗೂ ನೂತನ ದಿನದರ್ಶಿಕೆ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳು ಮಹಾ ಮಂಡಳ ನಿ..ಬೆಂಗಳೂರು ಇದರ ನಿರ್ದೇಶಕರಾಗಿ ಆಯ್ಕೆಯಾದ ಆನಂದಗೌಡ ಎಸ್. ಬಿರಾದಾರ ಹಾಗೂ ಹಸಿರು ತೋರಣ ಗೆಳೆಯರ ಬಳಗಕ್ಕೆ ನೂತನ ಮುದ್ದೇಬಿಹಾಳ ತಾಲ್ಲೂಕು ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪಂಚಮಸಾಲಿ ಸಮಾಜದ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ:                     M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ: M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಮುದ್ದೇಬಿಹಾಳ : ಉತ್ತರ ಕರ್ನಾಟಕದ ಪ್ರಮುಖ ಹಬ್ಬಗಳಲ್ಲಿ ಒಂದಾದ ಮಕರ ಸಂಕ್ರಾಂತಿಯ ಮುನ್ನಾ ದಿನ ಪಟ್ಟಣದ ಮಾರುತಿ ನಗರದ ಗಣಪತಿ ಗುಡಿ ಹತ್ತಿರ ಇರುವ ಎಂ.ಆರ್.ಇ.ಎo ಇಂಟರ್‌ನ್ಯಾಶನಲ್ ಸ್ಕೂಲ್ ಹಾಗೂ ಭಾಗ್ಯವಂತಿ ಎಚ್.ಪಿ.ಎಸ್ ಶಾಲೆಯಲ್ಲಿ ಮಂಗಳವಾರ ಅದ್ದೂರಿಯಾಗಿ ಆಚರಿಸಲಾಯಿತು. ಸಂಕ್ರಾಂತಿಯ ಸಂಭ್ರಮದ ಅಂಗವಾಗಿ ಉತ್ತರ ಕರ್ನಾಟಕದ ಬಗೆ ಬಗೆಯ ತಿನಿಸುಗಳು,ಆಹಾರ ಪದ್ಧತಿಯನ್ನು ಮಕ್ಕಳಿಗೆ ಪರಿಚಯಿಸುವ ಕಾರ್ಯವನ್ನು ಶಿಕ್ಷಕರು ಮಾಡಿದರು.ಶಾಲೆಯ ಮುಖ್ಯಗುರುಮಾತೆ ಅಮೃತಾ ಹಿರೇಮಠ ಮಾತನಾಡಿ, ನಮ್ಮ ಭಾಗದಲ್ಲಿ ಆಚರಣೆಯಲ್ಲಿರುವ ಸಂಕ್ರಾಂತಿಯ