Festivel: ಸೆ.1 ರಿಂದ ಕುಂಟೋಜಿ ಬಸವೇಶ್ವರ ಜಾತ್ರೋತ್ಸವ.. ಯಾತ್ರಾತ್ರಿಗಳಿಗೆ ಅತ್ಯಾಧುನಿಕ ಸೌಲಭ್ಯಗಳುಳ್ಳ ಕೊಠಡಿಗಳ ನಿರ್ಮಾಣ

Festivel: ಸೆ.1 ರಿಂದ ಕುಂಟೋಜಿ ಬಸವೇಶ್ವರ ಜಾತ್ರೋತ್ಸವ.. ಯಾತ್ರಾತ್ರಿಗಳಿಗೆ ಅತ್ಯಾಧುನಿಕ ಸೌಲಭ್ಯಗಳುಳ್ಳ ಕೊಠಡಿಗಳ ನಿರ್ಮಾಣ

ಮುದ್ದೇಬಿಹಾಳ : ಭಕ್ತಾದಿಗಳ ಸಹಾಯ, ದಾನಿಗಳ ನೆರವಿನಿಂದ ಅಂದಾಜು 70 ಲಕ್ಷ ವೆಚ್ಚದಲ್ಲಿ ಜಾತ್ರೆಗೆ ಬರುವ ಭಕ್ತರಿಗೆ ಅತ್ಯಾಧುನಿಕ ಸೌಲಭ್ಯವುಳ್ಳ ವಸತಿ ಕೊಠಡಿಗಳನ್ನು ಹೊಂದಿರುವ ಯಾತ್ರಿ ನಿವಾಸ ನಿರ್ಮಾಣ ಮಾಡಿದ್ದೇವೆ. ಕಮೀಟಿಯ ಅಧಿಕಾರ ವಹಿಸಿಕೊಂಡ ಒಂದೇ ವರ್ಷದಲ್ಲಿ ಭಕ್ತಾದಿಗಳಿಗೆ ಯಾತ್ರಿ ನಿವಾಸವನ್ನು ಮುಕ್ತಗೊಳಿಸಿದ್ದೇವೆ ಎಂದು ಕುಂಟೋಜಿ ದೇವಸ್ಥಾನ ಕಮೀಟಿಯ ಅಧ್ಯಕ್ಷ ಗುರುಲಿಂಗಪ್ಪ ಸುಲ್ಲಳ್ಳಿ ಹೇಳಿದರು

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ತಾಲ್ಲೂಕಿನ ಕುಂಟೋಜಿ ದೇವಸ್ಥಾನದ ನೂತನ ಯಾತ್ರಿ ನಿವಾಸದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ಜಾತ್ರೆಯ ಕಾರ್ಯಕ್ರಮಗಳ ವಿವರ ನೀಡಿದರು.

ಯಾತ್ರಾ ನಿವಾಸದಲ್ಲಿರುವ ಕೊಠಡಿಗಳಲ್ಲಿ ದೇಶೀಯ, ವಿದೇಶಿಯ ಮಾದರಿಯ ಶೌಚಾಲಯವನ್ನು ನಿರ್ಮಾಣ ಮಾಡಿದ್ದು ಸ್ನಾನಕ್ಕೆ ಆಧುನಿಕ ಶೈಲಿಯ ವಿನ್ಯಾಸವನ್ನು ರೂಪುಗೊಳಿಸಲಾಗಿದೆ. ಜಾತ್ರೆಗೆ ದೂರು ಊರಿಂದ ಬರುವ ಭಕ್ತರು ನೆಮ್ಮದಿಯಿಂದ ಶುಚಿತ್ವ ಕಾಪಾಡಿಕೊಂಡು ಜಾತ್ರೆಯ ವೈಭವವನ್ನು ಕಣ್ತುಂಬಿಕೊಳ್ಳಬಹುದಾಗಿದೆ. ಕೆಲವು ದಾನಿಗಳು ಸ್ವಯಂಪ್ರೇರಣೆಯಿಂದ ದೇವಸ್ಥಾನದ ಯಾತ್ರಾ ನಿವಾಸಕ್ಕೆ ಸಹಾಯ, ಸೇವೆ ಸಲ್ಲಿಸಿದ್ದಾರೆ ಎಂದು ತಿಳಿಸಿದರು.

ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳನ್ನು ಸ್ವಾಮೀಜಿಗಳು, ಶಾಸಕರು, ಮಾಜಿ ಶಾಸಕರು, ಉದ್ಯಮಿದಾರರು, ಜನಪ್ರತಿನಿಧಿಗಳು, ದೇವಸ್ಥಾನ ಕಮಿಟಿ ಪದಾಧಿಕಾರಿಗಳು ನಡೆಸಿಕೊಡಲಿದ್ದಾರೆ.

ಮುಂದಿನ ವರ್ಷ ಬಾಗಲಕೋಟೆಯ ಭಕ್ತರು ದೇವಸ್ಥಾನಕ್ಕೆ ನೂತನ ಕಟ್ಟಿಗೆಯ ರಥ ಮಾಡಿಸಿಕೊಡುವ ಸಂಕಲ್ಪ ಮಾಡಿದ್ದಾರೆ ಎಂದು ತಿಳಿಸಿದರು.

ಮಾಜಿ ಸೈನಿಕ ನಾಗಲಿಂಗಯ್ಯ ಮಠ ಮಾತನಾಡಿ, ಕುಂಟೋಜಿ ಬಸವೇಶ್ವರ ಜಾತ್ರಾ ಮಹೋತ್ಸವ ಸೆ.1 ರಿಂದ 5ರವರೆಗೆ ಹಮ್ಮಿಕೊಂಡಿದ್ದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಕಾರ್ಯಕ್ರಮಗಳ ಮಾಹಿತಿ ಒದಗಿಸಿದರು.

ದೇವಸ್ಥಾನ ಸಮೀತಿ ಸದಸ್ಯ ಸಂತೋಷ ಬಿರಾದಾರ ಮಾತನಾಡಿ, ಜಾತ್ರೆಗೆ ಬರುವ ಭಕ್ತರಿಗೆ ಸಮಸ್ಯೆಯಾಗದಿರಲಿ, ಕಾರ್ಯಕ್ರಮಗಳಲ್ಲಿ ಭಾಗವಹಿಸುವ ವಿವಿಧ ಊರುಗಳಿಂದ ಬರುವ ಸ್ಪರ್ಧಾಳುಗಳ ಅನುಕೂಲಕ್ಕೆ ಐದು ದಿನವೂ ಪ್ರಸಾದ ಸೇವೆ ಇರಲಿದೆ ಎಂದು ತಿಳಿಸಿದರು.

ಇದನ್ನೂ ಓದಿ: Love story: ಪ್ರೀತಿಸಲು ಹುಡುಗಿ ಸಿಗಲಿಲ್ಲವೆಂದು ಡೆತ್ ನೋಟ್ ಬರೆದಿಟ್ಟ ಯುವಕ.. ತುಂಗಾ ನದಿಗೆ ಹಾರಿದ್ನಾ..?

ಸುದ್ದಿಗೋಷ್ಠಿಯಲ್ಲಿ ದೇವಸ್ಥಾನ ಸಮಿತಿಯ ಮಲ್ಲಿಕಾರ್ಜುನ ನಾಟೇಕಾರ, ಆನಂದ ಗಸ್ತಿಗಾರ, ಬಸನಗೌಡ ಬಿರಾದಾರ,ಬಸವರಾಜ ಹುಲಗಣ್ಣಿ,ಸಿದ್ದಪ್ಪ ಹೂಗಾರ, ಮಲ್ಲಿಕಾರ್ಜುನ ಹೆಬ್ಬಾಳ, ಬಸರಕೋಡ ಹೆಸ್ಕಾಂ ಶಾಖಾಧಿಕಾರಿ ಶಿವಪ್ಪ ಆರೇಶಂಕರ, ಸಂಗಯ್ಯ ಮಠ,ವೀರಬಸ್ಸು ಊರಾನ, ಬಸಯ್ಯ ಮಠ ಮೊದಲಾದವರು ಇದ್ದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ