Festivel: ಸೆ.1 ರಿಂದ ಕುಂಟೋಜಿ ಬಸವೇಶ್ವರ ಜಾತ್ರೋತ್ಸವ.. ಯಾತ್ರಾತ್ರಿಗಳಿಗೆ ಅತ್ಯಾಧುನಿಕ ಸೌಲಭ್ಯಗಳುಳ್ಳ ಕೊಠಡಿಗಳ ನಿರ್ಮಾಣ

Festivel: ಸೆ.1 ರಿಂದ ಕುಂಟೋಜಿ ಬಸವೇಶ್ವರ ಜಾತ್ರೋತ್ಸವ.. ಯಾತ್ರಾತ್ರಿಗಳಿಗೆ ಅತ್ಯಾಧುನಿಕ ಸೌಲಭ್ಯಗಳುಳ್ಳ ಕೊಠಡಿಗಳ ನಿರ್ಮಾಣ

ಮುದ್ದೇಬಿಹಾಳ : ಭಕ್ತಾದಿಗಳ ಸಹಾಯ, ದಾನಿಗಳ ನೆರವಿನಿಂದ ಅಂದಾಜು 70 ಲಕ್ಷ ವೆಚ್ಚದಲ್ಲಿ ಜಾತ್ರೆಗೆ ಬರುವ ಭಕ್ತರಿಗೆ ಅತ್ಯಾಧುನಿಕ ಸೌಲಭ್ಯವುಳ್ಳ ವಸತಿ ಕೊಠಡಿಗಳನ್ನು ಹೊಂದಿರುವ ಯಾತ್ರಿ ನಿವಾಸ ನಿರ್ಮಾಣ ಮಾಡಿದ್ದೇವೆ. ಕಮೀಟಿಯ ಅಧಿಕಾರ ವಹಿಸಿಕೊಂಡ ಒಂದೇ ವರ್ಷದಲ್ಲಿ ಭಕ್ತಾದಿಗಳಿಗೆ ಯಾತ್ರಿ ನಿವಾಸವನ್ನು ಮುಕ್ತಗೊಳಿಸಿದ್ದೇವೆ ಎಂದು ಕುಂಟೋಜಿ ದೇವಸ್ಥಾನ ಕಮೀಟಿಯ ಅಧ್ಯಕ್ಷ ಗುರುಲಿಂಗಪ್ಪ ಸುಲ್ಲಳ್ಳಿ ಹೇಳಿದರು

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ತಾಲ್ಲೂಕಿನ ಕುಂಟೋಜಿ ದೇವಸ್ಥಾನದ ನೂತನ ಯಾತ್ರಿ ನಿವಾಸದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ಜಾತ್ರೆಯ ಕಾರ್ಯಕ್ರಮಗಳ ವಿವರ ನೀಡಿದರು.

ಯಾತ್ರಾ ನಿವಾಸದಲ್ಲಿರುವ ಕೊಠಡಿಗಳಲ್ಲಿ ದೇಶೀಯ, ವಿದೇಶಿಯ ಮಾದರಿಯ ಶೌಚಾಲಯವನ್ನು ನಿರ್ಮಾಣ ಮಾಡಿದ್ದು ಸ್ನಾನಕ್ಕೆ ಆಧುನಿಕ ಶೈಲಿಯ ವಿನ್ಯಾಸವನ್ನು ರೂಪುಗೊಳಿಸಲಾಗಿದೆ. ಜಾತ್ರೆಗೆ ದೂರು ಊರಿಂದ ಬರುವ ಭಕ್ತರು ನೆಮ್ಮದಿಯಿಂದ ಶುಚಿತ್ವ ಕಾಪಾಡಿಕೊಂಡು ಜಾತ್ರೆಯ ವೈಭವವನ್ನು ಕಣ್ತುಂಬಿಕೊಳ್ಳಬಹುದಾಗಿದೆ. ಕೆಲವು ದಾನಿಗಳು ಸ್ವಯಂಪ್ರೇರಣೆಯಿಂದ ದೇವಸ್ಥಾನದ ಯಾತ್ರಾ ನಿವಾಸಕ್ಕೆ ಸಹಾಯ, ಸೇವೆ ಸಲ್ಲಿಸಿದ್ದಾರೆ ಎಂದು ತಿಳಿಸಿದರು.

ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳನ್ನು ಸ್ವಾಮೀಜಿಗಳು, ಶಾಸಕರು, ಮಾಜಿ ಶಾಸಕರು, ಉದ್ಯಮಿದಾರರು, ಜನಪ್ರತಿನಿಧಿಗಳು, ದೇವಸ್ಥಾನ ಕಮಿಟಿ ಪದಾಧಿಕಾರಿಗಳು ನಡೆಸಿಕೊಡಲಿದ್ದಾರೆ.

ಮುಂದಿನ ವರ್ಷ ಬಾಗಲಕೋಟೆಯ ಭಕ್ತರು ದೇವಸ್ಥಾನಕ್ಕೆ ನೂತನ ಕಟ್ಟಿಗೆಯ ರಥ ಮಾಡಿಸಿಕೊಡುವ ಸಂಕಲ್ಪ ಮಾಡಿದ್ದಾರೆ ಎಂದು ತಿಳಿಸಿದರು.

ಮಾಜಿ ಸೈನಿಕ ನಾಗಲಿಂಗಯ್ಯ ಮಠ ಮಾತನಾಡಿ, ಕುಂಟೋಜಿ ಬಸವೇಶ್ವರ ಜಾತ್ರಾ ಮಹೋತ್ಸವ ಸೆ.1 ರಿಂದ 5ರವರೆಗೆ ಹಮ್ಮಿಕೊಂಡಿದ್ದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಕಾರ್ಯಕ್ರಮಗಳ ಮಾಹಿತಿ ಒದಗಿಸಿದರು.

ದೇವಸ್ಥಾನ ಸಮೀತಿ ಸದಸ್ಯ ಸಂತೋಷ ಬಿರಾದಾರ ಮಾತನಾಡಿ, ಜಾತ್ರೆಗೆ ಬರುವ ಭಕ್ತರಿಗೆ ಸಮಸ್ಯೆಯಾಗದಿರಲಿ, ಕಾರ್ಯಕ್ರಮಗಳಲ್ಲಿ ಭಾಗವಹಿಸುವ ವಿವಿಧ ಊರುಗಳಿಂದ ಬರುವ ಸ್ಪರ್ಧಾಳುಗಳ ಅನುಕೂಲಕ್ಕೆ ಐದು ದಿನವೂ ಪ್ರಸಾದ ಸೇವೆ ಇರಲಿದೆ ಎಂದು ತಿಳಿಸಿದರು.

ಇದನ್ನೂ ಓದಿ: Love story: ಪ್ರೀತಿಸಲು ಹುಡುಗಿ ಸಿಗಲಿಲ್ಲವೆಂದು ಡೆತ್ ನೋಟ್ ಬರೆದಿಟ್ಟ ಯುವಕ.. ತುಂಗಾ ನದಿಗೆ ಹಾರಿದ್ನಾ..?

ಸುದ್ದಿಗೋಷ್ಠಿಯಲ್ಲಿ ದೇವಸ್ಥಾನ ಸಮಿತಿಯ ಮಲ್ಲಿಕಾರ್ಜುನ ನಾಟೇಕಾರ, ಆನಂದ ಗಸ್ತಿಗಾರ, ಬಸನಗೌಡ ಬಿರಾದಾರ,ಬಸವರಾಜ ಹುಲಗಣ್ಣಿ,ಸಿದ್ದಪ್ಪ ಹೂಗಾರ, ಮಲ್ಲಿಕಾರ್ಜುನ ಹೆಬ್ಬಾಳ, ಬಸರಕೋಡ ಹೆಸ್ಕಾಂ ಶಾಖಾಧಿಕಾರಿ ಶಿವಪ್ಪ ಆರೇಶಂಕರ, ಸಂಗಯ್ಯ ಮಠ,ವೀರಬಸ್ಸು ಊರಾನ, ಬಸಯ್ಯ ಮಠ ಮೊದಲಾದವರು ಇದ್ದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ