Festivel: ಸೆ.1 ರಿಂದ ಕುಂಟೋಜಿ ಬಸವೇಶ್ವರ ಜಾತ್ರೋತ್ಸವ.. ಯಾತ್ರಾತ್ರಿಗಳಿಗೆ ಅತ್ಯಾಧುನಿಕ ಸೌಲಭ್ಯಗಳುಳ್ಳ ಕೊಠಡಿಗಳ ನಿರ್ಮಾಣ

Festivel: ಸೆ.1 ರಿಂದ ಕುಂಟೋಜಿ ಬಸವೇಶ್ವರ ಜಾತ್ರೋತ್ಸವ.. ಯಾತ್ರಾತ್ರಿಗಳಿಗೆ ಅತ್ಯಾಧುನಿಕ ಸೌಲಭ್ಯಗಳುಳ್ಳ ಕೊಠಡಿಗಳ ನಿರ್ಮಾಣ

Ad
Ad

ಮುದ್ದೇಬಿಹಾಳ : ಭಕ್ತಾದಿಗಳ ಸಹಾಯ, ದಾನಿಗಳ ನೆರವಿನಿಂದ ಅಂದಾಜು 70 ಲಕ್ಷ ವೆಚ್ಚದಲ್ಲಿ ಜಾತ್ರೆಗೆ ಬರುವ ಭಕ್ತರಿಗೆ ಅತ್ಯಾಧುನಿಕ ಸೌಲಭ್ಯವುಳ್ಳ ವಸತಿ ಕೊಠಡಿಗಳನ್ನು ಹೊಂದಿರುವ ಯಾತ್ರಿ ನಿವಾಸ ನಿರ್ಮಾಣ ಮಾಡಿದ್ದೇವೆ. ಕಮೀಟಿಯ ಅಧಿಕಾರ ವಹಿಸಿಕೊಂಡ ಒಂದೇ ವರ್ಷದಲ್ಲಿ ಭಕ್ತಾದಿಗಳಿಗೆ ಯಾತ್ರಿ ನಿವಾಸವನ್ನು ಮುಕ್ತಗೊಳಿಸಿದ್ದೇವೆ ಎಂದು ಕುಂಟೋಜಿ ದೇವಸ್ಥಾನ ಕಮೀಟಿಯ ಅಧ್ಯಕ್ಷ ಗುರುಲಿಂಗಪ್ಪ ಸುಲ್ಲಳ್ಳಿ ಹೇಳಿದರು

Ad
Ad

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ತಾಲ್ಲೂಕಿನ ಕುಂಟೋಜಿ ದೇವಸ್ಥಾನದ ನೂತನ ಯಾತ್ರಿ ನಿವಾಸದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ಜಾತ್ರೆಯ ಕಾರ್ಯಕ್ರಮಗಳ ವಿವರ ನೀಡಿದರು.

ಯಾತ್ರಾ ನಿವಾಸದಲ್ಲಿರುವ ಕೊಠಡಿಗಳಲ್ಲಿ ದೇಶೀಯ, ವಿದೇಶಿಯ ಮಾದರಿಯ ಶೌಚಾಲಯವನ್ನು ನಿರ್ಮಾಣ ಮಾಡಿದ್ದು ಸ್ನಾನಕ್ಕೆ ಆಧುನಿಕ ಶೈಲಿಯ ವಿನ್ಯಾಸವನ್ನು ರೂಪುಗೊಳಿಸಲಾಗಿದೆ. ಜಾತ್ರೆಗೆ ದೂರು ಊರಿಂದ ಬರುವ ಭಕ್ತರು ನೆಮ್ಮದಿಯಿಂದ ಶುಚಿತ್ವ ಕಾಪಾಡಿಕೊಂಡು ಜಾತ್ರೆಯ ವೈಭವವನ್ನು ಕಣ್ತುಂಬಿಕೊಳ್ಳಬಹುದಾಗಿದೆ. ಕೆಲವು ದಾನಿಗಳು ಸ್ವಯಂಪ್ರೇರಣೆಯಿಂದ ದೇವಸ್ಥಾನದ ಯಾತ್ರಾ ನಿವಾಸಕ್ಕೆ ಸಹಾಯ, ಸೇವೆ ಸಲ್ಲಿಸಿದ್ದಾರೆ ಎಂದು ತಿಳಿಸಿದರು.

ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳನ್ನು ಸ್ವಾಮೀಜಿಗಳು, ಶಾಸಕರು, ಮಾಜಿ ಶಾಸಕರು, ಉದ್ಯಮಿದಾರರು, ಜನಪ್ರತಿನಿಧಿಗಳು, ದೇವಸ್ಥಾನ ಕಮಿಟಿ ಪದಾಧಿಕಾರಿಗಳು ನಡೆಸಿಕೊಡಲಿದ್ದಾರೆ.

ಮುಂದಿನ ವರ್ಷ ಬಾಗಲಕೋಟೆಯ ಭಕ್ತರು ದೇವಸ್ಥಾನಕ್ಕೆ ನೂತನ ಕಟ್ಟಿಗೆಯ ರಥ ಮಾಡಿಸಿಕೊಡುವ ಸಂಕಲ್ಪ ಮಾಡಿದ್ದಾರೆ ಎಂದು ತಿಳಿಸಿದರು.

ಮಾಜಿ ಸೈನಿಕ ನಾಗಲಿಂಗಯ್ಯ ಮಠ ಮಾತನಾಡಿ, ಕುಂಟೋಜಿ ಬಸವೇಶ್ವರ ಜಾತ್ರಾ ಮಹೋತ್ಸವ ಸೆ.1 ರಿಂದ 5ರವರೆಗೆ ಹಮ್ಮಿಕೊಂಡಿದ್ದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಕಾರ್ಯಕ್ರಮಗಳ ಮಾಹಿತಿ ಒದಗಿಸಿದರು.

ದೇವಸ್ಥಾನ ಸಮೀತಿ ಸದಸ್ಯ ಸಂತೋಷ ಬಿರಾದಾರ ಮಾತನಾಡಿ, ಜಾತ್ರೆಗೆ ಬರುವ ಭಕ್ತರಿಗೆ ಸಮಸ್ಯೆಯಾಗದಿರಲಿ, ಕಾರ್ಯಕ್ರಮಗಳಲ್ಲಿ ಭಾಗವಹಿಸುವ ವಿವಿಧ ಊರುಗಳಿಂದ ಬರುವ ಸ್ಪರ್ಧಾಳುಗಳ ಅನುಕೂಲಕ್ಕೆ ಐದು ದಿನವೂ ಪ್ರಸಾದ ಸೇವೆ ಇರಲಿದೆ ಎಂದು ತಿಳಿಸಿದರು.

ಇದನ್ನೂ ಓದಿ: Love story: ಪ್ರೀತಿಸಲು ಹುಡುಗಿ ಸಿಗಲಿಲ್ಲವೆಂದು ಡೆತ್ ನೋಟ್ ಬರೆದಿಟ್ಟ ಯುವಕ.. ತುಂಗಾ ನದಿಗೆ ಹಾರಿದ್ನಾ..?

ಸುದ್ದಿಗೋಷ್ಠಿಯಲ್ಲಿ ದೇವಸ್ಥಾನ ಸಮಿತಿಯ ಮಲ್ಲಿಕಾರ್ಜುನ ನಾಟೇಕಾರ, ಆನಂದ ಗಸ್ತಿಗಾರ, ಬಸನಗೌಡ ಬಿರಾದಾರ,ಬಸವರಾಜ ಹುಲಗಣ್ಣಿ,ಸಿದ್ದಪ್ಪ ಹೂಗಾರ, ಮಲ್ಲಿಕಾರ್ಜುನ ಹೆಬ್ಬಾಳ, ಬಸರಕೋಡ ಹೆಸ್ಕಾಂ ಶಾಖಾಧಿಕಾರಿ ಶಿವಪ್ಪ ಆರೇಶಂಕರ, ಸಂಗಯ್ಯ ಮಠ,ವೀರಬಸ್ಸು ಊರಾನ, ಬಸಯ್ಯ ಮಠ ಮೊದಲಾದವರು ಇದ್ದರು.

Latest News

ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ

ಯತ್ನಾಳ ಉಚ್ಚಾಟನೆಗೆ ಆಕ್ರೋಶ: ಯತ್ನಾಳರಿಗಾಗಿ ಪ್ರಾಣ ಕೊಡಲು ಸಿದ್ಧ- ದೇಸಾಯಿ

ಯತ್ನಾಳ ಉಚ್ಚಾಟನೆಗೆ ಆಕ್ರೋಶ: ಯತ್ನಾಳರಿಗಾಗಿ ಪ್ರಾಣ ಕೊಡಲು ಸಿದ್ಧ- ದೇಸಾಯಿ

ಮುದ್ದೇಬಿಹಾಳ : ಬಸನಗೌಡ ಪಾಟೀಲ ಯತ್ನಾಳರು ಯಾವ ಪಕ್ಷದಲ್ಲಿರುತ್ತಾರೆಯೋ ಸಾಯುವವರಿಗೂ ಅವರ ಜೊತೆಗೆ ಇದ್ದು

ಭಾವಚಿತ್ರಗಳಿಗೆ ಅಪಮಾನ ತಡೆಗಟ್ಟಲು ಪೊಲೀಸರಿಗೆ ಬಿಜೆಪಿ ಪತ್ರ

ಭಾವಚಿತ್ರಗಳಿಗೆ ಅಪಮಾನ ತಡೆಗಟ್ಟಲು ಪೊಲೀಸರಿಗೆ ಬಿಜೆಪಿ ಪತ್ರ

ಯತ್ನಾಳ ಆಪ್ತ, ಜಿಪಂ ಮಾಜಿ ಉಪಾಧ್ಯಕ್ಷ ದೇಸಾಯಿ ವಿರುದ್ಧ ಕ್ರಮಕ್ಕೆ ಆಗ್ರಹ ಮುದ್ದೇಬಿಹಾಳ :

ರೇವಣಸಿದ್ದಪ್ಪಗೆ ಟ್ಯಾಲೆಂಟ್ ಅವಾರ್ಡ್ ಪ್ರಶಸ್ತಿಶಿಕ್ಷಣದೊಂದಿಗೆ ಸಂಸ್ಕಾರವೂ ಹೆಚ್ಚಲಿ- ಅಮರೇಶ್ವರ ಸ್ವಾಮೀಜಿ

ರೇವಣಸಿದ್ದಪ್ಪಗೆ ಟ್ಯಾಲೆಂಟ್ ಅವಾರ್ಡ್ ಪ್ರಶಸ್ತಿಶಿಕ್ಷಣದೊಂದಿಗೆ ಸಂಸ್ಕಾರವೂ ಹೆಚ್ಚಲಿ- ಅಮರೇಶ್ವರ ಸ್ವಾಮೀಜಿ

ಮುದ್ದೇಬಿಹಾಳ : ಮೊದಲು ಸಂಸ್ಕಾರ ಹೆಚ್ಚಾಗಿತ್ತು,ಶಿಕ್ಷಣ ಕಡಿಮೆ ಇತ್ತು. ಆದರೆ ಇಂದು ಶಿಕ್ಷಣ ಹೆಚ್ಚಿದಂತೆ

ಯತ್ನಾಳ ಉಚ್ಚಾಟನೆ ವಾಪಸಾತಿಗೆ ಪಂಚಮಸಾಲಿಗರ ಆಗ್ರಹ

ಯತ್ನಾಳ ಉಚ್ಚಾಟನೆ ವಾಪಸಾತಿಗೆ ಪಂಚಮಸಾಲಿಗರ ಆಗ್ರಹ

ಮುದ್ದೇಬಿಹಾಳ : ಬಿಜೆಪಿಯಿಂದ ಆರು ವರ್ಷಗಳ ಕಾಲ ಉಚ್ಚಾಟನೆಗೊಳಗಾಗಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಗೌರವಯುತವಾಗಿ ಮರಳಿ ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಪಂಚಮಸಾಲಿ ಸಮಾಜದ ಮುಖಂಡರು ಇಂದಿಲ್ಲಿ ಆಗ್ರಹಿಸಿದರು. ಪಟ್ಟಣದ ಏಪಿಎಂಸಿಯಲ್ಲಿರುವ ಬಸಲಿಂಗಪ್ಪ ರಕ್ಕಸಗಿ ಅವರ ಅಡತಿ ಅಂಗಡಿಯಲ್ಲಿ ಗುರುವಾರ ಪಂಚಮಸಾಲಿ ಸಮಾಜದ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಾಜದ ಮುಖಂಡರಾದ ಶಿವಶಂಕರಗೌಡ ಹಿರೇಗೌಡರ, ಸಮಾಜದ ತಾಲ್ಲೂಕು ಅಧ್ಯಕ್ಷ ಅಮರೇಶ ಗೂಳಿ, ಕಾಮರಾಜ ಬಿರಾದಾರ ಮೊದಲಾದವರು,

ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಸ್ಪರ್ಧೆ:ಏ.5 ರಂದು 172 ಮೆಡಿಕಲ್ ವಿದ್ಯಾರ್ಥಿಗಳ ಸನ್ಮಾನ

ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಸ್ಪರ್ಧೆ:ಏ.5 ರಂದು 172 ಮೆಡಿಕಲ್ ವಿದ್ಯಾರ್ಥಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನಲ್ಲಿ ಏ.5 ರಂದು ಜೀನಿಯಸ್ ಸ್ಟೂಡೆಂಟ್ ಅವಾರ್ಡ್ ಪರೀಕ್ಷೆ-2025 ನ್ನು ಹಮ್ಮಿಕೊಳ್ಳಲಾಗಿದ್ದು ಆಯ್ಕೆಯಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಲಾಗುತ್ತದೆ ಎಂದು ಸಂಸ್ಥೆಯ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ ಹೇಳಿದರು. ಪಟ್ಟಣದಲ್ಲಿ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಮಿತಗೌಡ ಪಾಟೀಲ ಗುರುವಾರ ಸುದ್ದಿಗೋಷ್ಠಿಯಲ್ಲಿ ಪರೀಕ್ಷೆಯ ವಿವರಗಳನ್ನು ಅವರು ನೀಡಿದರು. ಸಂಸ್ಥೆಯ ಚೇರಮನ್ ಎಂ. ಎಸ್. ಪಾಟೀಲ್ ಅವರ ಮಾರ್ಗದರ್ಶನದಲ್ಲಿ ಈ