ಮಂಗಳಮುಖಿ ವಿವಸ್ತ್ರಗೊಳಿಸಿ ಹಲ್ಲೆ?

ಮಂಗಳಮುಖಿ ವಿವಸ್ತ್ರಗೊಳಿಸಿ ಹಲ್ಲೆ?

ವಿಜಯಪುರ : ಮಂಗಳಮುಖಿಯರೇ ಮಂಗಳಮುಖಿಯನ್ನು ಹಾಡಹಗಲೇ ಸಾರ್ವಜನಿಕವಾಗಿ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ನಗರದ ಕೇಂದ್ರ ಬಸ್ ನಿಲ್ದಾಣದ ಪರಿಸರದಲ್ಲಿ ಪ್ಯಾಂಟ್ ಶರ್ಟ್ ಧರಿಸಿದ್ದ ಮಂಗಳಮುಖಿ ಹಣ ಪಡೆಯುತ್ತಿದ್ದಾಗ ಆಕೆಯನ್ನು ಬೆನ್ನಟ್ಟಿ ಅಟ್ಟಾಡಿಸಿದ ಮಂಗಳಮುಖಿಯರ ಗುಂಪು, ಅಮಾನವೀಯ ರೀತಿಯಲ್ಲಿ ದೌರ್ಜನ್ಯ ಎಸಗಿದೆ. ಬೆತ್ತಲೆಗೊಳಿಸಿ, ಮರ್ಮಾಂಗಕ್ಕೆ ಖಾರದ ಪುಡಿ ಎರಚಿ ಮನಬಂದಂತೆ ಥಳಿಸಿದ್ದಾರೆ.

ಥಳಿತಕ್ಕೊಳಗಾದುದ್ದು ಮಂಗಳಮುಖಿಯಲ್ಲ. ಮಂಗಳಮುಖಿಯರ ರೀತಿಯಲ್ಲಿ ವರ್ತಿಸಿ ನಗರದಲ್ಲಿ ಹಣ ಎತ್ತುವಳಿ ನಡೆಸಿದ್ದಾಳೆ ಎಂಬುದು ಹಲ್ಲೆ ನಡೆಸಿರುವ ಮಂಗಳಮುಖಿಯರ ವಾದ. ಇಡೀ ದೌರ್ಜನ್ಯ ಘಟನೆಯ ವಿಡಿಯೋ ಇದೀಗ ವೈರಲ್ ಆಗಿದೆ.ಥಳಿತಕ್ಕೊಳಗಾದ ಮಂಗಳಮುಖಿ ಅಂಗಲಾಚಿ ಬೇಡಿಕೊಂಡರೂ ಸಹ ಬಿಡದ ಮಂಗಳಮುಖಿಯರು ಗುಂಪು ಸಂಪೂರ್ಣ ಬೆತ್ತಲೆಗೊಳಿಸಿ ಮನಬಂದಂತೆ ಹಲ್ಲೆ ಮಾಡುತ್ತಿದ್ದರೂ ಸಾರ್ವಜನಿಕರು ನೆರವಿಗೆ ಬಾರದೇ, ಘಟನೆಯನ್ನು ನೋಡುತ್ತ ನಿಂತಿರುವುದು ಕಂಡುಬಂದಿದೆ.

ಇದಲ್ಲದೇ ದೌರ್ಜನ್ಯ ಎಸಗಿದ ಗುಂಪಿನಲ್ಲಿದ್ದ ಕೆಲ ಮಂಗಳಮುಖಿಯರು ಸಾರ್ವಜನಿಕವಾಗಿ ತಮ್ಮ ಸೀರೆ ಎತ್ತಿ ಖಾಸಗಿ ಅಂಗ ತೋರಿಸಿ ಅಸಹ್ಯಕರ ರೀತಿಯಲ್ಲಿ ವಿಕೃತಿ ಮೆರೆದಿದ್ದಾರೆ.

ಈ ಅಮಾನವೀಯ ಘಟನೆ ಎರಡು ವಾರಗಳ ಹಿಂದೆಯೇ ನಡೆದಿದೆ ಎನ್ನಲಾಗಿದೆ. ಇಡೀ ಘಟನೆಯ ವಿಡಿಯೋ ವೈರಲ್ ಆಗಿದ್ದರೂ ಪೊಲೀಸ್ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲು‌ ಆಗಿಲ್ಲ.

Latest News

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಬೇಕು

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ ಮಾಡಬೇಕು ಎಂದು ಬಿಇಒ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಎಂ.ಜಿ.ವಿ.ಸಿ ಕಾಲೇಜಿನ ಆವರಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸನ್ 2026-27ನೇ ಸಾಲಿನ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಆಟಗಳಲ್ಲಿ ಇಂದು ಸಾಕಷ್ಟು ಬದಲಾವಣೆಗಳಾಗಿದ್ದು ಗೆದ್ದವರು ಹಿಗ್ಗದೇ ಸೋತವರು ಕುಗ್ಗದೇ ಸ್ಪರ್ಧಾ ಮನೋಭಾವದಿಂದ ಆಟಗಳಲ್ಲಿ ಪಾಲ್ಗೊಳ್ಳುವಂತೆ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ