ಮಂಗಳಮುಖಿ ವಿವಸ್ತ್ರಗೊಳಿಸಿ ಹಲ್ಲೆ?

ಮಂಗಳಮುಖಿ ವಿವಸ್ತ್ರಗೊಳಿಸಿ ಹಲ್ಲೆ?

ವಿಜಯಪುರ : ಮಂಗಳಮುಖಿಯರೇ ಮಂಗಳಮುಖಿಯನ್ನು ಹಾಡಹಗಲೇ ಸಾರ್ವಜನಿಕವಾಗಿ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ನಗರದ ಕೇಂದ್ರ ಬಸ್ ನಿಲ್ದಾಣದ ಪರಿಸರದಲ್ಲಿ ಪ್ಯಾಂಟ್ ಶರ್ಟ್ ಧರಿಸಿದ್ದ ಮಂಗಳಮುಖಿ ಹಣ ಪಡೆಯುತ್ತಿದ್ದಾಗ ಆಕೆಯನ್ನು ಬೆನ್ನಟ್ಟಿ ಅಟ್ಟಾಡಿಸಿದ ಮಂಗಳಮುಖಿಯರ ಗುಂಪು, ಅಮಾನವೀಯ ರೀತಿಯಲ್ಲಿ ದೌರ್ಜನ್ಯ ಎಸಗಿದೆ. ಬೆತ್ತಲೆಗೊಳಿಸಿ, ಮರ್ಮಾಂಗಕ್ಕೆ ಖಾರದ ಪುಡಿ ಎರಚಿ ಮನಬಂದಂತೆ ಥಳಿಸಿದ್ದಾರೆ.

ಥಳಿತಕ್ಕೊಳಗಾದುದ್ದು ಮಂಗಳಮುಖಿಯಲ್ಲ. ಮಂಗಳಮುಖಿಯರ ರೀತಿಯಲ್ಲಿ ವರ್ತಿಸಿ ನಗರದಲ್ಲಿ ಹಣ ಎತ್ತುವಳಿ ನಡೆಸಿದ್ದಾಳೆ ಎಂಬುದು ಹಲ್ಲೆ ನಡೆಸಿರುವ ಮಂಗಳಮುಖಿಯರ ವಾದ. ಇಡೀ ದೌರ್ಜನ್ಯ ಘಟನೆಯ ವಿಡಿಯೋ ಇದೀಗ ವೈರಲ್ ಆಗಿದೆ.ಥಳಿತಕ್ಕೊಳಗಾದ ಮಂಗಳಮುಖಿ ಅಂಗಲಾಚಿ ಬೇಡಿಕೊಂಡರೂ ಸಹ ಬಿಡದ ಮಂಗಳಮುಖಿಯರು ಗುಂಪು ಸಂಪೂರ್ಣ ಬೆತ್ತಲೆಗೊಳಿಸಿ ಮನಬಂದಂತೆ ಹಲ್ಲೆ ಮಾಡುತ್ತಿದ್ದರೂ ಸಾರ್ವಜನಿಕರು ನೆರವಿಗೆ ಬಾರದೇ, ಘಟನೆಯನ್ನು ನೋಡುತ್ತ ನಿಂತಿರುವುದು ಕಂಡುಬಂದಿದೆ.

ಇದಲ್ಲದೇ ದೌರ್ಜನ್ಯ ಎಸಗಿದ ಗುಂಪಿನಲ್ಲಿದ್ದ ಕೆಲ ಮಂಗಳಮುಖಿಯರು ಸಾರ್ವಜನಿಕವಾಗಿ ತಮ್ಮ ಸೀರೆ ಎತ್ತಿ ಖಾಸಗಿ ಅಂಗ ತೋರಿಸಿ ಅಸಹ್ಯಕರ ರೀತಿಯಲ್ಲಿ ವಿಕೃತಿ ಮೆರೆದಿದ್ದಾರೆ.

ಈ ಅಮಾನವೀಯ ಘಟನೆ ಎರಡು ವಾರಗಳ ಹಿಂದೆಯೇ ನಡೆದಿದೆ ಎನ್ನಲಾಗಿದೆ. ಇಡೀ ಘಟನೆಯ ವಿಡಿಯೋ ವೈರಲ್ ಆಗಿದ್ದರೂ ಪೊಲೀಸ್ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲು‌ ಆಗಿಲ್ಲ.

Latest News

ಸಚಿವ ಸ್ಥಾನಕ್ಕಾಗಿ ಮುದ್ದೇಬಿಹಾಳ ಬಂದ್’ಗೆ  ಉತ್ತಮ ಪ್ರತಿಕ್ರಿಯೆ;                                                                                ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ನೀಡದಿದ್ದರೆ ಪಕ್ಷತ್ಯಾಗ

ಸಚಿವ ಸ್ಥಾನಕ್ಕಾಗಿ ಮುದ್ದೇಬಿಹಾಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ; ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ನೀಡದಿದ್ದರೆ ಪಕ್ಷತ್ಯಾಗ

ಮುದ್ದೇಬಿಹಾಳ : ಆರು ಬಾರಿ ಶಾಸಕರಾಗಿರುವ ರಾಜ್ಯದ ಅತ್ಯಂತ ಸರಳ ಸಜ್ಜನಿಕೆಯ ಹಿರಿಯ ರಾಜಕಾರಣಿ,ಯಾವುದೇ

ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ವಿಳಂಬ:                  ಕಾoಗ್ರೆಸ್‌ಗೆ ಮಹ್ಮದರಫೀಕ ಶಿರೋಳ ರಾಜೀನಾಮೆ

ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ವಿಳಂಬ: ಕಾoಗ್ರೆಸ್‌ಗೆ ಮಹ್ಮದರಫೀಕ ಶಿರೋಳ ರಾಜೀನಾಮೆ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಜಿಲ್ಲಾ ಯುವ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಸಕ್ರಿಯ ಕಾರ್ಯಕರ್ತ

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಜೂ.19

ಮುದ್ದೇಬಿಹಾಳ : ಬಲವಂತದ ಬಂದ್ ಕರೆ ಅಗತ್ಯವಿಲ್ಲ-ಪಂಪಣ್ಣವರ

ಮುದ್ದೇಬಿಹಾಳ : ಬಲವಂತದ ಬಂದ್ ಕರೆ ಅಗತ್ಯವಿಲ್ಲ-ಪಂಪಣ್ಣವರ

ಮುದ್ದೇಬಿಹಾಳ ; ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಅವರ ಸರ್ಕಾರದಲ್ಲಿ ಸಚಿವ ಸ್ಥಾನ ದೊರಕಲಿ.ಅವರ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಆರಂಭೋತ್ಸವ ಸರಳವಾಗಿ ನಡೆಸಲಾಯಿತು. ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಅವರ ನೇತೃತ್ವದಲ್ಲಿ ಶಿಕ್ಷಕರು ಸರಸ್ವತಿ ದೇವಿ ಚಿತ್ರಕ್ಕೆ ಪೂಜೆ ಸಲ್ಲಿಸಿದರು.ಇದೇ ವೇಳೆ ಶಾಲೆಗೆ ಅನಿರೀಕ್ಷಿತವಾಗಿ ಭೇಟಿ ನೀಡಿದ ತಹಶೀಲ್ದಾರ್ ಕೀರ್ತಿ ಚಾಲಕ್ ಅವರು, ಸರಸ್ವತಿ ದೇವಿಗೆ ನಮಿಸಿ ಶಾಲಾ ಮಕ್ಕಳಿಗೆ ಹೂವು ನೀಡಿ ಶಾಲಾ ಆರಂಭೋತ್ಸವಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಇದೇ ವೇಳೆ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ ಟಿಸಿ ಒದಗಿಸುವಲ್ಲಿ ವಿಳಂಬ ಧೋರಣೆ ಖಂಡಿಸಿದ ರೈತರು ಸೋಮವಾರ ಇಲ್ಲಿನ ಹೆಸ್ಕಾಂ ಕಚೇರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ತಾಲ್ಲೂಕಿನ ಅನೇಕ ಗ್ರಾಮಗಳಿಂದ ಬಂದಿದ್ದ ರೈತರು ತಮ್ಮೂರುಗಳಲ್ಲಿ ಎದುರಿಸುತ್ತಿರುವ ವಿದ್ಯುತ್ ಸಂಬoಧಿ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು. ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ