ಮಂಗಳಮುಖಿ ವಿವಸ್ತ್ರಗೊಳಿಸಿ ಹಲ್ಲೆ?

ಮಂಗಳಮುಖಿ ವಿವಸ್ತ್ರಗೊಳಿಸಿ ಹಲ್ಲೆ?

ವಿಜಯಪುರ : ಮಂಗಳಮುಖಿಯರೇ ಮಂಗಳಮುಖಿಯನ್ನು ಹಾಡಹಗಲೇ ಸಾರ್ವಜನಿಕವಾಗಿ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ನಗರದ ಕೇಂದ್ರ ಬಸ್ ನಿಲ್ದಾಣದ ಪರಿಸರದಲ್ಲಿ ಪ್ಯಾಂಟ್ ಶರ್ಟ್ ಧರಿಸಿದ್ದ ಮಂಗಳಮುಖಿ ಹಣ ಪಡೆಯುತ್ತಿದ್ದಾಗ ಆಕೆಯನ್ನು ಬೆನ್ನಟ್ಟಿ ಅಟ್ಟಾಡಿಸಿದ ಮಂಗಳಮುಖಿಯರ ಗುಂಪು, ಅಮಾನವೀಯ ರೀತಿಯಲ್ಲಿ ದೌರ್ಜನ್ಯ ಎಸಗಿದೆ. ಬೆತ್ತಲೆಗೊಳಿಸಿ, ಮರ್ಮಾಂಗಕ್ಕೆ ಖಾರದ ಪುಡಿ ಎರಚಿ ಮನಬಂದಂತೆ ಥಳಿಸಿದ್ದಾರೆ.

ಥಳಿತಕ್ಕೊಳಗಾದುದ್ದು ಮಂಗಳಮುಖಿಯಲ್ಲ. ಮಂಗಳಮುಖಿಯರ ರೀತಿಯಲ್ಲಿ ವರ್ತಿಸಿ ನಗರದಲ್ಲಿ ಹಣ ಎತ್ತುವಳಿ ನಡೆಸಿದ್ದಾಳೆ ಎಂಬುದು ಹಲ್ಲೆ ನಡೆಸಿರುವ ಮಂಗಳಮುಖಿಯರ ವಾದ. ಇಡೀ ದೌರ್ಜನ್ಯ ಘಟನೆಯ ವಿಡಿಯೋ ಇದೀಗ ವೈರಲ್ ಆಗಿದೆ.ಥಳಿತಕ್ಕೊಳಗಾದ ಮಂಗಳಮುಖಿ ಅಂಗಲಾಚಿ ಬೇಡಿಕೊಂಡರೂ ಸಹ ಬಿಡದ ಮಂಗಳಮುಖಿಯರು ಗುಂಪು ಸಂಪೂರ್ಣ ಬೆತ್ತಲೆಗೊಳಿಸಿ ಮನಬಂದಂತೆ ಹಲ್ಲೆ ಮಾಡುತ್ತಿದ್ದರೂ ಸಾರ್ವಜನಿಕರು ನೆರವಿಗೆ ಬಾರದೇ, ಘಟನೆಯನ್ನು ನೋಡುತ್ತ ನಿಂತಿರುವುದು ಕಂಡುಬಂದಿದೆ.

ಇದಲ್ಲದೇ ದೌರ್ಜನ್ಯ ಎಸಗಿದ ಗುಂಪಿನಲ್ಲಿದ್ದ ಕೆಲ ಮಂಗಳಮುಖಿಯರು ಸಾರ್ವಜನಿಕವಾಗಿ ತಮ್ಮ ಸೀರೆ ಎತ್ತಿ ಖಾಸಗಿ ಅಂಗ ತೋರಿಸಿ ಅಸಹ್ಯಕರ ರೀತಿಯಲ್ಲಿ ವಿಕೃತಿ ಮೆರೆದಿದ್ದಾರೆ.

ಈ ಅಮಾನವೀಯ ಘಟನೆ ಎರಡು ವಾರಗಳ ಹಿಂದೆಯೇ ನಡೆದಿದೆ ಎನ್ನಲಾಗಿದೆ. ಇಡೀ ಘಟನೆಯ ವಿಡಿಯೋ ವೈರಲ್ ಆಗಿದ್ದರೂ ಪೊಲೀಸ್ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲು‌ ಆಗಿಲ್ಲ.

Latest News

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಮುದ್ದೇಬಿಹಾಳ(ಜಿಲ್ಲೆ : ವಿಜಯಪುರ) : ದೇಶದ ಪ್ರತಿಷ್ಠಿತ ಐಐಟಿ ಕಾಲೇಜುಗಳಲ್ಲಿ ಒಂದಾಗಿರುವ ಕಾನ್ಪುರದ ಐಐಟಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ : ಸಿಎಂ ಸಿದ್ಧರಾಮಯ್ಯನವರ ಅವಧಿಯಲ್ಲಿ ಕಳೆದ ಬಜೆಟ್‌ನಲ್ಲಿ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದ ಬೆಳ್ಳಿ ಕವಚ ಕಳ್ಳತನ ಪ್ರಕರಣಕ್ಕೆ

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ ನಿರ್ಮಾಣ ಸಮಿತಿಯ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಸಮಿತಿಯ ಅಧ್ಯಕ್ಷರಾಗಿ ಪುನೀತ ಹಿಪ್ಪರಗಿ, ಉಪಾಧ್ಯಕ್ಷರಾಗಿ ಸೋಮನಗೌಡ ಬಿರಾದಾರ ಹಾಗೂ ಕಾರ್ಯದರ್ಶಿಯಾಗಿ ಕಾಶಿನಾಥ ಹುಗ್ಗಿ ಅವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಅಧ್ಯಕ್ಷ ಮಹಾಂತೇಶ ಬೂದಿಹಾಳಮಠ, ನೂತನ ಪದಾಧಿಕಾರಿಗಳು ಕಾರ್ಗಿಲ್ ಸಮಿತಿಯ ಉದ್ದೇಶಗಳನ್ನು ಮತ್ತಷ್ಟು ಬಲಪಡಿಸಿ, ದೇಶಭಕ್ತಿ ಹಾಗೂ ಸಾಮಾಜಿಕ ಸೇವಾ ಚಟುವಟಿಕೆಗಳಿಗೆ ಹೆಚ್ಚಿನ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ ಯುವಕನೋರ್ವ ಕರ್ತವ್ಯಕ್ಕೆ ಅಡ್ಡಿ ಪಡಿಸುವುದಲ್ಲದೆ, ಕಳೆದ ಒಂದು ವರ್ಷದಿಂದ ಉದ್ದೇಶಪೂರ್ವಕವಾಗಿ ತನ್ನ ವಿಡಿಯೋ,ಪೋಟೋ ಚಿತ್ರೀಕರಣ ಮಾಡಿ ಅಧಿಕಾರಿಗಳಿಗೆ ಹರಿ ಬಿಡುತ್ತಿದ್ದಾನೆ ಎಂದು ಆರೋಪಿಸಿದ ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ಹೊರ ಗುತ್ತಿಗೆ ಮಹಿಳಾ ಸಿಬ್ಬಂದಿಯೋರ್ವರು ಮಂಗಳವಾರ ಆಸ್ಪತ್ರೆಯಲ್ಲೇ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.ಏತನ್ಮಧ್ಯೆ ಘಟನೆ ಖಂಡಿಸಿ ಆಸ್ಪತ್ರೆಯ ಹೊರಗೆ