ಮಂಗಳಮುಖಿ ವಿವಸ್ತ್ರಗೊಳಿಸಿ ಹಲ್ಲೆ?

ಮಂಗಳಮುಖಿ ವಿವಸ್ತ್ರಗೊಳಿಸಿ ಹಲ್ಲೆ?

ವಿಜಯಪುರ : ಮಂಗಳಮುಖಿಯರೇ ಮಂಗಳಮುಖಿಯನ್ನು ಹಾಡಹಗಲೇ ಸಾರ್ವಜನಿಕವಾಗಿ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ನಗರದ ಕೇಂದ್ರ ಬಸ್ ನಿಲ್ದಾಣದ ಪರಿಸರದಲ್ಲಿ ಪ್ಯಾಂಟ್ ಶರ್ಟ್ ಧರಿಸಿದ್ದ ಮಂಗಳಮುಖಿ ಹಣ ಪಡೆಯುತ್ತಿದ್ದಾಗ ಆಕೆಯನ್ನು ಬೆನ್ನಟ್ಟಿ ಅಟ್ಟಾಡಿಸಿದ ಮಂಗಳಮುಖಿಯರ ಗುಂಪು, ಅಮಾನವೀಯ ರೀತಿಯಲ್ಲಿ ದೌರ್ಜನ್ಯ ಎಸಗಿದೆ. ಬೆತ್ತಲೆಗೊಳಿಸಿ, ಮರ್ಮಾಂಗಕ್ಕೆ ಖಾರದ ಪುಡಿ ಎರಚಿ ಮನಬಂದಂತೆ ಥಳಿಸಿದ್ದಾರೆ.

ಥಳಿತಕ್ಕೊಳಗಾದುದ್ದು ಮಂಗಳಮುಖಿಯಲ್ಲ. ಮಂಗಳಮುಖಿಯರ ರೀತಿಯಲ್ಲಿ ವರ್ತಿಸಿ ನಗರದಲ್ಲಿ ಹಣ ಎತ್ತುವಳಿ ನಡೆಸಿದ್ದಾಳೆ ಎಂಬುದು ಹಲ್ಲೆ ನಡೆಸಿರುವ ಮಂಗಳಮುಖಿಯರ ವಾದ. ಇಡೀ ದೌರ್ಜನ್ಯ ಘಟನೆಯ ವಿಡಿಯೋ ಇದೀಗ ವೈರಲ್ ಆಗಿದೆ.ಥಳಿತಕ್ಕೊಳಗಾದ ಮಂಗಳಮುಖಿ ಅಂಗಲಾಚಿ ಬೇಡಿಕೊಂಡರೂ ಸಹ ಬಿಡದ ಮಂಗಳಮುಖಿಯರು ಗುಂಪು ಸಂಪೂರ್ಣ ಬೆತ್ತಲೆಗೊಳಿಸಿ ಮನಬಂದಂತೆ ಹಲ್ಲೆ ಮಾಡುತ್ತಿದ್ದರೂ ಸಾರ್ವಜನಿಕರು ನೆರವಿಗೆ ಬಾರದೇ, ಘಟನೆಯನ್ನು ನೋಡುತ್ತ ನಿಂತಿರುವುದು ಕಂಡುಬಂದಿದೆ.

ಇದಲ್ಲದೇ ದೌರ್ಜನ್ಯ ಎಸಗಿದ ಗುಂಪಿನಲ್ಲಿದ್ದ ಕೆಲ ಮಂಗಳಮುಖಿಯರು ಸಾರ್ವಜನಿಕವಾಗಿ ತಮ್ಮ ಸೀರೆ ಎತ್ತಿ ಖಾಸಗಿ ಅಂಗ ತೋರಿಸಿ ಅಸಹ್ಯಕರ ರೀತಿಯಲ್ಲಿ ವಿಕೃತಿ ಮೆರೆದಿದ್ದಾರೆ.

ಈ ಅಮಾನವೀಯ ಘಟನೆ ಎರಡು ವಾರಗಳ ಹಿಂದೆಯೇ ನಡೆದಿದೆ ಎನ್ನಲಾಗಿದೆ. ಇಡೀ ಘಟನೆಯ ವಿಡಿಯೋ ವೈರಲ್ ಆಗಿದ್ದರೂ ಪೊಲೀಸ್ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲು‌ ಆಗಿಲ್ಲ.

Latest News

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ:                            ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ: ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ಮುದ್ದೇಬಿಹಾಳ : ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆಯನ್ನು ಇಳಿಮುಖಗೊಳಿಸುವ ಕಾರ್ಯ ಶಿಕ್ಷಕರು ಮಾಡಬೇಕು.ಸರ್ಕಾರ ಜಾರಿಗೊಳಿಸಿರುವ

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ;     ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ; ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಮುದ್ದೇಬಿಹಾಳ : ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ಆದಷ್ಟು ಬೇಗ ಸರ್ಕಾರ ಈ ಕುರಿತು ತೀರ್ಮಾನ ಕೈಗೊಂಡು ರೈತರಿಗೆ ಪರಿಹಾರ ನೀಡಬೇಕು. ಇಲ್ಲವಾದರೆ ರೈತರನ್ನು ಪಕ್ಷಾತೀತವಾಗಿ ಒಗ್ಗೂಡಿಸಿ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ ಎಚ್ಚರಿಸಿದರು. ಮುದ್ದೇಬಿಹಾಳದಲ್ಲಿ ಬರ ಘೋಷಣೆಗೆ ಆಗ್ರಹಿಸಿ ತಹಶೀಲ್ದಾರ್ ಕಚೇರಿ ಮುಂದೆ ಸೋಮವಾರದಿಂದ ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದಲ್ಲಿ ಮಾತನಾಡಿದ ಅವರು, ಸರ್ಕಾರಕ್ಕೆ ಮಗ್ಗಲ ಮುಳ್ಳಾಗಿ

ಸೆ.6 ರಂದು ನೂತನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ

ಸೆ.6 ರಂದು ನೂತನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳದ ಶ್ರೀ ಸಂಗಮೇಶ್ವರ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಸೆ.6ರಂದು ಮದ್ಯಾಹ್ನ 1 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ದಿವ್ಯ ಸಾನಿಧ್ಯವನ್ನು ಲಿಂಗಸೂರು ತಾಲ್ಲೂಕು ಅಂಕಲಿಮಠದ ವೀರಭದ್ರ ಸ್ವಾಮೀಜಿ ವಹಿಸುವರು.ಬಸವನ ಬಾಗೇವಾಡಿ ಶಾಸಕ ಶಿವಾನಂದ ಪಾಟೀಲ ನೂತನ ಕಚೇರಿ ಉದ್ಘಾಟಿಸುವರು.ಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ನೂತನ ಗೋಡವನ್ ಹಾಗೂ ವಾಣಿಜ್ಯ ಮಳಿಗೆ ಉದ್ಘಾಟಿಸುವರು.ಸಂಘದ ಅಧ್ಯಕ್ಷ ಮಲ್ಲನಗೌಡ ಪಾಟೀಲ ಅಧ್ಯಕ್ಷತೆ ವಹಿಸುವರು.ಸಂಘದ ಉಪಾಧ್ಯಕ್ಷ