ಮಂಗಳಮುಖಿ ವಿವಸ್ತ್ರಗೊಳಿಸಿ ಹಲ್ಲೆ?

ಮಂಗಳಮುಖಿ ವಿವಸ್ತ್ರಗೊಳಿಸಿ ಹಲ್ಲೆ?

ವಿಜಯಪುರ : ಮಂಗಳಮುಖಿಯರೇ ಮಂಗಳಮುಖಿಯನ್ನು ಹಾಡಹಗಲೇ ಸಾರ್ವಜನಿಕವಾಗಿ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ನಗರದ ಕೇಂದ್ರ ಬಸ್ ನಿಲ್ದಾಣದ ಪರಿಸರದಲ್ಲಿ ಪ್ಯಾಂಟ್ ಶರ್ಟ್ ಧರಿಸಿದ್ದ ಮಂಗಳಮುಖಿ ಹಣ ಪಡೆಯುತ್ತಿದ್ದಾಗ ಆಕೆಯನ್ನು ಬೆನ್ನಟ್ಟಿ ಅಟ್ಟಾಡಿಸಿದ ಮಂಗಳಮುಖಿಯರ ಗುಂಪು, ಅಮಾನವೀಯ ರೀತಿಯಲ್ಲಿ ದೌರ್ಜನ್ಯ ಎಸಗಿದೆ. ಬೆತ್ತಲೆಗೊಳಿಸಿ, ಮರ್ಮಾಂಗಕ್ಕೆ ಖಾರದ ಪುಡಿ ಎರಚಿ ಮನಬಂದಂತೆ ಥಳಿಸಿದ್ದಾರೆ.

ಥಳಿತಕ್ಕೊಳಗಾದುದ್ದು ಮಂಗಳಮುಖಿಯಲ್ಲ. ಮಂಗಳಮುಖಿಯರ ರೀತಿಯಲ್ಲಿ ವರ್ತಿಸಿ ನಗರದಲ್ಲಿ ಹಣ ಎತ್ತುವಳಿ ನಡೆಸಿದ್ದಾಳೆ ಎಂಬುದು ಹಲ್ಲೆ ನಡೆಸಿರುವ ಮಂಗಳಮುಖಿಯರ ವಾದ. ಇಡೀ ದೌರ್ಜನ್ಯ ಘಟನೆಯ ವಿಡಿಯೋ ಇದೀಗ ವೈರಲ್ ಆಗಿದೆ.ಥಳಿತಕ್ಕೊಳಗಾದ ಮಂಗಳಮುಖಿ ಅಂಗಲಾಚಿ ಬೇಡಿಕೊಂಡರೂ ಸಹ ಬಿಡದ ಮಂಗಳಮುಖಿಯರು ಗುಂಪು ಸಂಪೂರ್ಣ ಬೆತ್ತಲೆಗೊಳಿಸಿ ಮನಬಂದಂತೆ ಹಲ್ಲೆ ಮಾಡುತ್ತಿದ್ದರೂ ಸಾರ್ವಜನಿಕರು ನೆರವಿಗೆ ಬಾರದೇ, ಘಟನೆಯನ್ನು ನೋಡುತ್ತ ನಿಂತಿರುವುದು ಕಂಡುಬಂದಿದೆ.

ಇದಲ್ಲದೇ ದೌರ್ಜನ್ಯ ಎಸಗಿದ ಗುಂಪಿನಲ್ಲಿದ್ದ ಕೆಲ ಮಂಗಳಮುಖಿಯರು ಸಾರ್ವಜನಿಕವಾಗಿ ತಮ್ಮ ಸೀರೆ ಎತ್ತಿ ಖಾಸಗಿ ಅಂಗ ತೋರಿಸಿ ಅಸಹ್ಯಕರ ರೀತಿಯಲ್ಲಿ ವಿಕೃತಿ ಮೆರೆದಿದ್ದಾರೆ.

ಈ ಅಮಾನವೀಯ ಘಟನೆ ಎರಡು ವಾರಗಳ ಹಿಂದೆಯೇ ನಡೆದಿದೆ ಎನ್ನಲಾಗಿದೆ. ಇಡೀ ಘಟನೆಯ ವಿಡಿಯೋ ವೈರಲ್ ಆಗಿದ್ದರೂ ಪೊಲೀಸ್ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲು‌ ಆಗಿಲ್ಲ.

Latest News

ಅತೀ ಹೆಚ್ಚು ಮೊತ್ತಕ್ಕೆ ಬಿಡ್ ಮಾಡಿದ ಮೋಮಿನ: ಮುದ್ದೇಬಿಹಾಳ : ಸಂತೆ ಕರ 15 ಲಕ್ಷ ರೂ.ಗೆ ಹರಾಜು

ಅತೀ ಹೆಚ್ಚು ಮೊತ್ತಕ್ಕೆ ಬಿಡ್ ಮಾಡಿದ ಮೋಮಿನ: ಮುದ್ದೇಬಿಹಾಳ : ಸಂತೆ ಕರ 15 ಲಕ್ಷ ರೂ.ಗೆ ಹರಾಜು

ಮುದ್ದೇಬಿಹಾಳ : ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿರುವ ಜಾಗೆಯಲ್ಲಿ ದೈನಂದಿನ ಸಂತೆ ಕರ ವಸೂಲಿಗಾಗಿ ಮಂಗಳವಾರ

‘ರಾಷ್ಟ್ರದ್ವಜ ಹಿಡಿದು ಶತ್ರು ಸಂಹಾರ ಮಾಡ್ತೀನಿ,ಇಲ್ಲಂದ್ರೆ ಮೈಮೇಲೆ ಅದೇ ಧ್ವಜ ಹೊತ್ತು ಬರ‍್ತೀನಿ’

‘ರಾಷ್ಟ್ರದ್ವಜ ಹಿಡಿದು ಶತ್ರು ಸಂಹಾರ ಮಾಡ್ತೀನಿ,ಇಲ್ಲಂದ್ರೆ ಮೈಮೇಲೆ ಅದೇ ಧ್ವಜ ಹೊತ್ತು ಬರ‍್ತೀನಿ’

ಮುದ್ದೇಬಿಹಾಳ : ನಾನು ಸೈನ್ಯಕ್ಕೆ ಸೇರುತ್ತಿದ್ದಂತೆ ನನ್ನ ತಾಯಿ ‘ನೀ ಹೆಣ್ಣು ಮಗಳಾಗಿ ಗಡಿ

ರೈತರ ಮಕ್ಕಳು ವೈದ್ಯರಾಗಬೇಕು-ಇದು ನನ್ನ ಕನಸು-ಎಂ.ಎಸ್.ಪಾಟೀಲ

ರೈತರ ಮಕ್ಕಳು ವೈದ್ಯರಾಗಬೇಕು-ಇದು ನನ್ನ ಕನಸು-ಎಂ.ಎಸ್.ಪಾಟೀಲ

ಮುದ್ದೇಬಿಹಾಳ : ನನ್ನ ಕನಸು ಸೈನ್ಸ್ ಕಾಲೇಜು ಆರಂಭಿಸಬೇಕು ಎಂಬುದಿತ್ತು.ದುಡ್ಡು ಮಾಡುವುದಕ್ಕಾಗಿ ಸೈನ್ಸ್ ಕಾಲೇಜು

ಪತ್ನಿ ಕೊಲೆಗೈದಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ, 1.50 ಲಕ್ಷ ರೂ.ದಂಡ

ಪತ್ನಿ ಕೊಲೆಗೈದಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ, 1.50 ಲಕ್ಷ ರೂ.ದಂಡ

ಮುದ್ದೇಬಿಹಾಳ : ಪತ್ನಿ ತವರು ಮನೆಯಲ್ಲಿದ್ದಿರುವುದನ್ನು ಸಹಿಸದೇ ಆಕೆಗೆ ಮೇಲೆ ಹೊಲಿಗೆ ಮಷಿನ್ ಎತ್ತಿ

ದೇಶದ ಪ್ರಗತಿಗೆ ಸಂಸ್ಕಾರಭರಿತ ಶಿಕ್ಷಣ ಅವಶ್ಯ-ಆರ್.ಎಸ್.ಬಂಗಿ

ದೇಶದ ಪ್ರಗತಿಗೆ ಸಂಸ್ಕಾರಭರಿತ ಶಿಕ್ಷಣ ಅವಶ್ಯ-ಆರ್.ಎಸ್.ಬಂಗಿ

ಮುದ್ದೇಬಿಹಾಳ : ದೇಶದ ಪ್ರಗತಿ ಪಥದ ಚಾಲನೆಗೆ ಸಂಸ್ಕಾರ ಭರಿತ ಶಿಕ್ಷಣ ಅವಶ್ಯಕ ಎಂದು ಕ್ರೈಂ ಪಿ.ಎಸ್.ಆಯ್ ಆರ್.ಎಸ್.ಬಂಗಿ ಹೇಳಿದರು. ಪಟ್ಟಣದ ವಿವೇಕಾನಂದ ವಿದ್ಯಾ ಪ್ರಸಾರ ಸಮಿತಿ ಅಡಿಯಲ್ಲಿ ನಡೆಯುವ ಜ್ಞಾನ ಭಾರತಿ ವಿದ್ಯಾ ಮಂದಿರ ಸಮೂಹ ವಿದ್ಯಾ ಸಂಸ್ಥೆಯ 40ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು. ದೇಶದ ಅಭಿವೃದ್ಧಿಯಲ್ಲಿ ಯುವ ಜನತೆಯ ಪಾತ್ರ ಹಿರಿದಾಗಿದೆ. ವ್ಯಸನಕ್ಕೆ ಒಳಗಾಗಬಾರದು. ವ್ಯಸನಮುಕ್ತ ಸದ್ಗುಣ ಯುಕ್ತ ವ್ಯಕ್ತಿಯನ್ನು ನಿರ್ಮಾಣ ಮಾಡುವಲ್ಲಿ ಮನೆ, ಶಾಲೆ,

ಸಂಘಟನೆಗೆ ಆದ್ಯತೆ ನೀಡಿ-ಅಶೋಕ ಚಟ್ಟೇರ

ಸಂಘಟನೆಗೆ ಆದ್ಯತೆ ನೀಡಿ-ಅಶೋಕ ಚಟ್ಟೇರ

ಮುದ್ದೇಬಿಹಾಳ : ಬಣಜಿಗ ಸಮಾಜದ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಬೇಕು.ಸಮಾಜದಲ್ಲಿ ಬೆಳೆಯುತ್ತಿರುವ ಪ್ರೋತ್ಸಾಹ ನೀಡುವ ಕಾರ್ಯ ಆಗಬೇಕು ಎಂದು ಬಣಜಿಗ ಸಮಾಜದ ತಾಲ್ಲೂಕು ಅಧ್ಯಕ್ಷ ಅಶೋಕ ಚಟ್ಟೇರ್ ಹೇಳಿದರು. ಪಟ್ಟಣದ ಕಿಲ್ಲಾದ ಹೊಸಮಠದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬಣಜಿಗ ಸಮಾಜದ ೨೩ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಬಸವರಾಜ ನಾಲತವಾಡ, ಸಮಾಜದ ಯುವ ಘಟಕದ ಅಧ್ಯಕ್ಷ ಶಂಕರ ಕಡಿ, ನಿವೃತ್ತ ಶಿಕ್ಷಕ