ಮಂಗಳಮುಖಿ ವಿವಸ್ತ್ರಗೊಳಿಸಿ ಹಲ್ಲೆ?

ಮಂಗಳಮುಖಿ ವಿವಸ್ತ್ರಗೊಳಿಸಿ ಹಲ್ಲೆ?

ವಿಜಯಪುರ : ಮಂಗಳಮುಖಿಯರೇ ಮಂಗಳಮುಖಿಯನ್ನು ಹಾಡಹಗಲೇ ಸಾರ್ವಜನಿಕವಾಗಿ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ನಗರದ ಕೇಂದ್ರ ಬಸ್ ನಿಲ್ದಾಣದ ಪರಿಸರದಲ್ಲಿ ಪ್ಯಾಂಟ್ ಶರ್ಟ್ ಧರಿಸಿದ್ದ ಮಂಗಳಮುಖಿ ಹಣ ಪಡೆಯುತ್ತಿದ್ದಾಗ ಆಕೆಯನ್ನು ಬೆನ್ನಟ್ಟಿ ಅಟ್ಟಾಡಿಸಿದ ಮಂಗಳಮುಖಿಯರ ಗುಂಪು, ಅಮಾನವೀಯ ರೀತಿಯಲ್ಲಿ ದೌರ್ಜನ್ಯ ಎಸಗಿದೆ. ಬೆತ್ತಲೆಗೊಳಿಸಿ, ಮರ್ಮಾಂಗಕ್ಕೆ ಖಾರದ ಪುಡಿ ಎರಚಿ ಮನಬಂದಂತೆ ಥಳಿಸಿದ್ದಾರೆ.

ಥಳಿತಕ್ಕೊಳಗಾದುದ್ದು ಮಂಗಳಮುಖಿಯಲ್ಲ. ಮಂಗಳಮುಖಿಯರ ರೀತಿಯಲ್ಲಿ ವರ್ತಿಸಿ ನಗರದಲ್ಲಿ ಹಣ ಎತ್ತುವಳಿ ನಡೆಸಿದ್ದಾಳೆ ಎಂಬುದು ಹಲ್ಲೆ ನಡೆಸಿರುವ ಮಂಗಳಮುಖಿಯರ ವಾದ. ಇಡೀ ದೌರ್ಜನ್ಯ ಘಟನೆಯ ವಿಡಿಯೋ ಇದೀಗ ವೈರಲ್ ಆಗಿದೆ.ಥಳಿತಕ್ಕೊಳಗಾದ ಮಂಗಳಮುಖಿ ಅಂಗಲಾಚಿ ಬೇಡಿಕೊಂಡರೂ ಸಹ ಬಿಡದ ಮಂಗಳಮುಖಿಯರು ಗುಂಪು ಸಂಪೂರ್ಣ ಬೆತ್ತಲೆಗೊಳಿಸಿ ಮನಬಂದಂತೆ ಹಲ್ಲೆ ಮಾಡುತ್ತಿದ್ದರೂ ಸಾರ್ವಜನಿಕರು ನೆರವಿಗೆ ಬಾರದೇ, ಘಟನೆಯನ್ನು ನೋಡುತ್ತ ನಿಂತಿರುವುದು ಕಂಡುಬಂದಿದೆ.

ಇದಲ್ಲದೇ ದೌರ್ಜನ್ಯ ಎಸಗಿದ ಗುಂಪಿನಲ್ಲಿದ್ದ ಕೆಲ ಮಂಗಳಮುಖಿಯರು ಸಾರ್ವಜನಿಕವಾಗಿ ತಮ್ಮ ಸೀರೆ ಎತ್ತಿ ಖಾಸಗಿ ಅಂಗ ತೋರಿಸಿ ಅಸಹ್ಯಕರ ರೀತಿಯಲ್ಲಿ ವಿಕೃತಿ ಮೆರೆದಿದ್ದಾರೆ.

ಈ ಅಮಾನವೀಯ ಘಟನೆ ಎರಡು ವಾರಗಳ ಹಿಂದೆಯೇ ನಡೆದಿದೆ ಎನ್ನಲಾಗಿದೆ. ಇಡೀ ಘಟನೆಯ ವಿಡಿಯೋ ವೈರಲ್ ಆಗಿದ್ದರೂ ಪೊಲೀಸ್ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲು‌ ಆಗಿಲ್ಲ.

Latest News

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕೆಲವು ಗುತ್ತಿಗೆದಾರರು ಸಹಾಯ ಮಾಡುವುದು ತಮ್ಮ ರಾಜಕೀಯ ಲಾಭಕ್ಕೋಸ್ಕರ ಮಾಡುತ್ತಾರೆಯೇ ಹೊರತು

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ಗ್ರಾಮದ ಎಸ್.ಎನ್.ಡಿ ನ್ಯಾಷನಲ್ ಪಬ್ಲಿಕ್ ಶಾಲೆಗೆ 2025-26ನೇ ಸಾಲಿನಲ್ಲಿ

ಎಸ್.ಎಸ್.ಎಲ್.ಸಿ ಪರೀಕ್ಷೆ:                                         ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್

ಉತ್ತಮ ಕಾರ್ಯನಿರ್ವಹಣೆ :                                              KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಉತ್ತಮ ಕಾರ್ಯನಿರ್ವಹಣೆ : KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಮುದ್ದೇಬಿಹಾಳ : ವಿಜಯಪುರದ ಕೆ.ಆರ್.ಐ.ಡಿ.ಎಲ್ ಇಲಾಖೆಯ ಇಇ ಆನಂದಸ್ವಾಮಿ ಅವರು ಇಲಾಖೆಯಲ್ಲಿ ಸಲ್ಲಿಸುತ್ತಿರುವ ಉತ್ತಮ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಮುದ್ದೇಬಿಹಾಳ : ಇಲ್ಲಿನ ಯುವ ಉದ್ಯಮಿ,ಕಾಂಗ್ರೆಸ್ ಪಕ್ಷದ ಮುಖಂಡ ಆನಂದ ಪೂಜಾರಿ ಅವರನ್ನು ಕಾಂಗ್ರೆಸ್ ಪಕ್ಷದ ಎಸ್.ಟಿ.ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಅವರ ಶಿಫಾರಸ್ಸಿನ ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮೀತಿ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಅಧ್ಯಕ್ಷ ಎಂ.ವಿಜಯನಾಯಕ ನೇಮಕ ಮಾಡಿ ಆದೇಶಿಸಿದ್ದಾರೆ.

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಮುದ್ದೇಬಿಹಾಳ : ದೇವಾಂಗ(ನೇಕಾರ)ಸಮುದಾಯದ ಸಂಘಟನೆ,ಜಾಗೃತಿಗಾಗಿ ಅಖಿಲ ಭಾರತ ದೇವಾಂಗ ಬೃಹತ್ ಜನಜಾಗೃತಿ ಸಮಾವೇಶ ಹಾಗೂ ದಯಾನಂದಪುರಿ ಸ್ವಾಮೀಜಿಗಳ 36ನೇ ಪಟ್ಟಾಭಿಷೇಕ ಮಹೋತ್ಸವವನ್ನು ಮೇ.8 ಹಾಗೂ 9 ರಂದು ಬಾದಾಮಿ ತಾಲ್ಲೂಕು ಬನಶಂಕರಿ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದ್ದು ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ದೇವಾಂಗ ಸಮಾಜದ ಜಿಲ್ಲಾಧ್ಯಕ್ಷ ಬಸವರಾಜ ಚಿತ್ತರಗಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಬುಧವಾರ ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಹಂಪಿ ಹೇಮಕೂಟ ಶ್ರೀ ಗಾಯತ್ರಿಪೀಠದ