ಮಂಗಳಮುಖಿ ವಿವಸ್ತ್ರಗೊಳಿಸಿ ಹಲ್ಲೆ?

ಮಂಗಳಮುಖಿ ವಿವಸ್ತ್ರಗೊಳಿಸಿ ಹಲ್ಲೆ?

ವಿಜಯಪುರ : ಮಂಗಳಮುಖಿಯರೇ ಮಂಗಳಮುಖಿಯನ್ನು ಹಾಡಹಗಲೇ ಸಾರ್ವಜನಿಕವಾಗಿ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ನಗರದ ಕೇಂದ್ರ ಬಸ್ ನಿಲ್ದಾಣದ ಪರಿಸರದಲ್ಲಿ ಪ್ಯಾಂಟ್ ಶರ್ಟ್ ಧರಿಸಿದ್ದ ಮಂಗಳಮುಖಿ ಹಣ ಪಡೆಯುತ್ತಿದ್ದಾಗ ಆಕೆಯನ್ನು ಬೆನ್ನಟ್ಟಿ ಅಟ್ಟಾಡಿಸಿದ ಮಂಗಳಮುಖಿಯರ ಗುಂಪು, ಅಮಾನವೀಯ ರೀತಿಯಲ್ಲಿ ದೌರ್ಜನ್ಯ ಎಸಗಿದೆ. ಬೆತ್ತಲೆಗೊಳಿಸಿ, ಮರ್ಮಾಂಗಕ್ಕೆ ಖಾರದ ಪುಡಿ ಎರಚಿ ಮನಬಂದಂತೆ ಥಳಿಸಿದ್ದಾರೆ.

ಥಳಿತಕ್ಕೊಳಗಾದುದ್ದು ಮಂಗಳಮುಖಿಯಲ್ಲ. ಮಂಗಳಮುಖಿಯರ ರೀತಿಯಲ್ಲಿ ವರ್ತಿಸಿ ನಗರದಲ್ಲಿ ಹಣ ಎತ್ತುವಳಿ ನಡೆಸಿದ್ದಾಳೆ ಎಂಬುದು ಹಲ್ಲೆ ನಡೆಸಿರುವ ಮಂಗಳಮುಖಿಯರ ವಾದ. ಇಡೀ ದೌರ್ಜನ್ಯ ಘಟನೆಯ ವಿಡಿಯೋ ಇದೀಗ ವೈರಲ್ ಆಗಿದೆ.ಥಳಿತಕ್ಕೊಳಗಾದ ಮಂಗಳಮುಖಿ ಅಂಗಲಾಚಿ ಬೇಡಿಕೊಂಡರೂ ಸಹ ಬಿಡದ ಮಂಗಳಮುಖಿಯರು ಗುಂಪು ಸಂಪೂರ್ಣ ಬೆತ್ತಲೆಗೊಳಿಸಿ ಮನಬಂದಂತೆ ಹಲ್ಲೆ ಮಾಡುತ್ತಿದ್ದರೂ ಸಾರ್ವಜನಿಕರು ನೆರವಿಗೆ ಬಾರದೇ, ಘಟನೆಯನ್ನು ನೋಡುತ್ತ ನಿಂತಿರುವುದು ಕಂಡುಬಂದಿದೆ.

ಇದಲ್ಲದೇ ದೌರ್ಜನ್ಯ ಎಸಗಿದ ಗುಂಪಿನಲ್ಲಿದ್ದ ಕೆಲ ಮಂಗಳಮುಖಿಯರು ಸಾರ್ವಜನಿಕವಾಗಿ ತಮ್ಮ ಸೀರೆ ಎತ್ತಿ ಖಾಸಗಿ ಅಂಗ ತೋರಿಸಿ ಅಸಹ್ಯಕರ ರೀತಿಯಲ್ಲಿ ವಿಕೃತಿ ಮೆರೆದಿದ್ದಾರೆ.

ಈ ಅಮಾನವೀಯ ಘಟನೆ ಎರಡು ವಾರಗಳ ಹಿಂದೆಯೇ ನಡೆದಿದೆ ಎನ್ನಲಾಗಿದೆ. ಇಡೀ ಘಟನೆಯ ವಿಡಿಯೋ ವೈರಲ್ ಆಗಿದ್ದರೂ ಪೊಲೀಸ್ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲು‌ ಆಗಿಲ್ಲ.

Latest News

ತಾಯಿ-ಮಗನನ್ನು ಮಧ್ಯರಾತ್ರಿ ಊರಿಗೆ ತಲುಪಿಸಿ ಮಾನವೀಯತೆ ಮೆರೆದ ‘112’ ಪೊಲೀಸರು..!

ತಾಯಿ-ಮಗನನ್ನು ಮಧ್ಯರಾತ್ರಿ ಊರಿಗೆ ತಲುಪಿಸಿ ಮಾನವೀಯತೆ ಮೆರೆದ ‘112’ ಪೊಲೀಸರು..!

ಮುದ್ದೇಬಿಹಾಳ : ತಮ್ಮೂರಿಗೆ ಹೋಗುವ ಬಸ್ ತಪ್ಪಿಸಿಕೊಂಡಿದ್ದ ಕನ್ನಡ ಅಸ್ಪಷ್ಟವಾಗಿ ಮಾತನಾಡುವ ತಾಯಿ ಹಾಗೂ

ಎ.ಎಸ್.ಎನ್ ಕಾನೂನು ಮಾಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆ

ಎ.ಎಸ್.ಎನ್ ಕಾನೂನು ಮಾಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆ

ನಾಲತವಾಡ : ನವೆಂಬರ್ 1ರಂದು ಎ.ಎಸ್.ಎನ್. ಕಾನೂನು ಮಾಹಾವಿದ್ಯಾಲಯ ನಾಲತವಾಡದಲ್ಲಿ 70ನೇ ಕನ್ನಡ ರಾಜ್ಯೋತ್ಸವ

ಮುದ್ದೇಬಿಹಾಳ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ : ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರಿಗೆ ಶೂ ಎಸೆತ ಪ್ರಕರಣ,

ಇಂಗಳಗೇರಿ ಗ್ರಾಪಂ ನೂತನ ಕಟ್ಟಡಕ್ಕೆ ಅನುದಾನ – ಶಾಸಕ ಸಿ.ಎಸ್.ನಾಡಗೌಡ

ಇಂಗಳಗೇರಿ ಗ್ರಾಪಂ ನೂತನ ಕಟ್ಟಡಕ್ಕೆ ಅನುದಾನ – ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಗ್ರಾಮ ಪಂಚಾಯಿತಿ ಚುನಾವಣೆಗಳು ಸ್ಥಳೀಯ ಮಟ್ಟದಲ್ಲಿ ಪ್ರಾಮುಖ್ಯತೆ ಪಡೆದುಕೊಳ್ಳುತ್ತಿದ್ದು ಇದರಲ್ಲಿಪಕ್ಷದ ಪಾತ್ರ

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಯೋಜನಾ ವರದಿ ದಿಕ್ಸೂಚಿ ಆಗಿರಲಿ: ಸಚಿವ ಸಂತೋಷ್ ಲಾಡ್

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಯೋಜನಾ ವರದಿ ದಿಕ್ಸೂಚಿ ಆಗಿರಲಿ: ಸಚಿವ ಸಂತೋಷ್ ಲಾಡ್

ಧಾರವಾಡ ಅ.27: ಸುಮಾರು ವರ್ಷಗಳ ನಂತರ ಪ್ರಥಮ ಬಾರಿಗೆ ಜಿಲ್ಲಾ ಅಭಿವೃದ್ಧಿ ಯೋಜನೆ ರೂಪಿಸಲು ಸರಕಾರ ಅವಕಾಶ ನೀಡಿದ್ದು, ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ನಿಂದ ರಾಜ್ಯದಲ್ಲಿಯೇ ಮೊದಲನೇಯದಾಗಿ ಅಭಿವೃದ್ಧಿ ಯೋಜನಾ ವರದಿ ಕುರಿತ ಸಭೆ ಆಯೋಜಿಸಲಾಗಿದೆ. ಅಭಿವೃದ್ಧಿ ಯೋಜನಾ ವರದಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ದಿಕ್ಸೂಚಿ ಆಗಿರಬೇಕು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ

ಮುದ್ದೇಬಿಹಾಳ : TAPCMS  ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : TAPCMS ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : ಇಲ್ಲಿನ ಟಿ.ಎ.ಪಿ.ಸಿ.ಎಂ.ಎಸ್ ಆಡಳಿತ ಮತ್ತೆ ಎರಡನೇ ಬಾರಿಗೆ ಅಧ್ಯಕ್ಷರಾಗಿ ಮನೋಹರ ಮೇಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದು ಟಿಎಪಿಸಿಎಂಎಸ್‌ನಲ್ಲಿ ತಮ್ಮ ಹಿಡಿತ ಸಡಿಲಗೊಂಡಿಲ್ಲ ಎಂಬ ಸಂದೇಶವನ್ನು ತಮ್ಮ ವಿರೋಧಿಗಳಿಗೆ ರವಾನಿಸಿದ್ದಾರೆ. ಪಟ್ಟಣದ ಏಪಿಎಂಸಿಯಲ್ಲಿರುವ ಸಂಘದ ಕಚೇರಿಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಸಲಾಯಿತು.ಅಧ್ಯಕ್ಷ ಸ್ಥಾನಕ್ಕೆ ಮನೋಹರ ಎಸ್.ಮೇಟಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚಿದಾನಂದ ಎಂ.ಸೀತಿಮನಿ ಎರಡೂ ಸ್ಥಾನಗಳಿಗೆ ತಲಾ ಒಬ್ಬೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ಆರ್.ಎನ್.ಆಳೂರ ಅವಿರೋಧ