Fighting for curry: Fight for mutton curry..! 10 people injured

Fighting for curry: ಮಟನ್ ಕರಿಗಾಗಿ ಮಾರಾಮಾರಿ..! 10 ಮಂದಿಗೆ ಗಾಯ..! (ವಿಡಿಯೋ ನೋಡಿ)

Fighting for curry: ಮಟನ್ ಕರಿಗಾಗಿ ಮಾರಾಮಾರಿ..! 10 ಮಂದಿಗೆ ಗಾಯ..! (ವಿಡಿಯೋ ನೋಡಿ)

ಹೈದರಾಬಾದ್: ಮಟನ್ ಕರಿ ವಿಚಾರವಾಗಿ ಮದುವೆ ಮನೆಯಲ್ಲಿ ನಡೆದ ಗಲಾಟೆಯಲ್ಲಿ (Fighting for curry) 10 ಮಂದಿ ಗಾಯಗೊಂಡ ಘಟನೆಯೊಂದು ತೆಲಂಗಾಣದ ನಿಜಾಮಾಬಾದ್‌ನ ನವಿಪೇಟ್‌ನಲ್ಲಿ ಸಂಭವಿಸಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ವಧು ನವಿಪೇಟೆಯ ವಧುವಿಗೂ ನಂದಿಪೇಟ್ ಮಂಡಲದ ಬಡಗುಣ ಗ್ರಾಮದ ವರನಿಗೂ ಮದುವೆ ನಿಶ್ಚಯ ಮಾಡಲಾಗಿತ್ತು. ಅಂತೆಯೇ ಬುಧವಾರ ನಡೆದ ಮದುವೆ ಸಮಾರಂಭದಲ್ಲಿ ಊಟದಲ್ಲಿ ಮಟನ್ ಕರಿ ವಿಚಾರವಾಗಿ ವಧು ಹಾಗೂ ವರನ ಸಂಬಂಧಿಕರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

ಪ್ಲೇಟ್‌ಗಳು, ಗ್ಲಾಸ್‌ಗಳು, ಕುರ್ಚಿಗಳು ಮತ್ತು ಇತರ ವಸ್ತುಗಳ ಮೂಲಕ ದೈಹಿಕ ಹಲ್ಲೆ ನಡೆದಿದೆ.

ವರನ ಕಡೆಯ ಕೆಲವು ಯುವಕರು, ಕಡಿಮೆ ಮಟನ್ ಬಡಿಸಿದ್ದಾರೆ ಎಂದು ಅತೃಪ್ತಗೊಂದು ಅಡುಗೆ ಸಿಬ್ಬಂದಿಯನ್ನು ಪ್ರಶ್ನಿಸುತ್ತಾ ಗಲಾಟೆ (Fighting for curry) ಶರು ಮಾಡಿದ್ದಾರೆ. ಈ ವೇಳೆ ಎರಡೂ ಕಡೆಯ ಸಂಬಂಧಿಕರ ನಡುವೆ ಮಾತಿಗೆ ಮಾತು ಬೆಳೆದಿದೆ. ಅಲ್ಲದೇ ಕಲ್ಲು ದೊಣ್ಣೆಗಳಿಂದ ಪರಸ್ಪರ ಹಲ್ಲೆ ನಡೆಸಿದ್ದಾರೆ.

ವಧು ಹಾಗೂ ವರನ ಕಡೆಯವರು ಹೊಡೆದಾಡಿಕೊಳ್ಳುತ್ತಿರುವ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

ವಿಡಿಯೋದಲ್ಲಿ ಕೆಲ ಪುರುಷರು ಮತ್ತು ಮಹಿಳೆಯರು ಗಾಯಗೊಂಡಿದ್ದು, ಇತರರು ಅವರಿಗೆ ಸಹಾಯ ಮಾಡುತ್ತಿರುವುದನ್ನು ಕಾಣಬಹುದು. ಸ್ಥಳಕ್ಕಾಗಮಿಸಿದ ಸ್ಥಳೀಯರು ಪೊಲೀಸರು ಎರಡೂ ಕಡೆಯವರನ್ನು ಕೂರಿಸಿ ಮಾತನಾಡಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಇದನ್ನೂ ಓದಿ: Time bomb: ಉಗ್ರನ ಮೃತದೇಹದಲ್ಲಿ ಟೈಮ್ ಬಾಂಬ್ ಇಟ್ಟು ಪಾರ್ಸೆಲ್..! ಮುಂದೇನಾಯ್ತು..? (ವಿಡಿಯೋ ನೋಡಿ)

ಗಲಾಟೆಯಲ್ಲಿ ಗಾಯಗೊಂಡ 10 ಮಂದಿಯನ್ನು ನಿಜಾಮಾಬಾದ್‌ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಘಟನೆ ಸಂಬಂಧ ಒಂದು ಗುಂಪಿನ 11 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.

Latest News

ಶ್ರೀಶೈಲ್‌ಗೆ ವಿಶೇಷ ಬಸ್ ವ್ಯವಸ್ಥೆ

ಶ್ರೀಶೈಲ್‌ಗೆ ವಿಶೇಷ ಬಸ್ ವ್ಯವಸ್ಥೆ

ಮುದ್ದೇಬಿಹಾಳ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಶ್ರೀಶೈಲ ಮಲ್ಲಿಕಾರ್ಜುನ ಜಾತ್ರೆಗೆ ತೆರಳುವ

ಸೌಹಾರ್ದತೆಯನ್ನು ಬೆಸೆಯುವ ಹಬ್ಬ ರಂಜಾನ್-ಸಿ.ಬಿ.ಅಸ್ಕಿ

ಸೌಹಾರ್ದತೆಯನ್ನು ಬೆಸೆಯುವ ಹಬ್ಬ ರಂಜಾನ್-ಸಿ.ಬಿ.ಅಸ್ಕಿ

ಮುದ್ದೇಬಿಹಾಳ : ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಹಿಂದೂ ಮುಸ್ಲಿಂ ಬಾಂಧವರ ಮಧ್ಯೆ ಸೌಹಾರ್ದತೆಯನ್ನು ಬೆಸೆಯುವ

ಡಿ.ಕೆ.ಶಿವಕುಮಾರ ಆಕ್ಸಿಜನ್ ಮ್ಯಾನ್-ಸದ್ದಾಂ ಕುಂಟೋಜಿ

ಡಿ.ಕೆ.ಶಿವಕುಮಾರ ಆಕ್ಸಿಜನ್ ಮ್ಯಾನ್-ಸದ್ದಾಂ ಕುಂಟೋಜಿ

ಮುದ್ದೇಬಿಹಾಳ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಡಿಸಿಎಂ ಡಿ.ಕೆ.ಶಿವಕುಮಾರ ಅವರದ್ದು ಪ್ರಧಾನ

ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ:                   ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣ-ಹಾಲಗಂಗಾಧರಮಠ

ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ: ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣ-ಹಾಲಗಂಗಾಧರಮಠ

ಮುದ್ದೇಬಿಹಾಳ : ಮಕ್ಕಳಿಗೆ ಬಾಲ್ಯದಲ್ಲಿ ಗುರುಕುಲ ಮಾದರಿ ಶಿಕ್ಷಣದಿಂದ ಸಂಸ್ಕಾರ,ಸAಸ್ಕೃತಿಯ ಅರಿವು ದೊರೆಯುತ್ತದೆ ಎಂದು

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ ಯೋಜನೆಗಳನ್ನು ರಾಷ್ಟ್ರೀಯ ಮೀನುಗಾರರ ಸಂಘ ಸ್ವಾಗತಿಸುತ್ತದೆ ಎಂದು ಸಂಘದ ರಾಷ್ಟ್ರೀಯ ಉಪಾಧ್ಯಕ್ಷರಾದ ಡಾ. ಗೌತಮ್ ಚೌಧರಿ ತಿಳಿಸಿದ್ದಾರೆ.ಪತ್ರಿಕಾ ಹೇಳಿಕೆ ನೀಡಿರುವ ಅವರು, ಮೀನುಗಾರರಿಗೆ ನೀಡುವ ಕಿಟ್ ದರವನ್ನು ₹10,000 ದಿಂದ ₹20,000ಕ್ಕೆ ಹೆಚ್ಚಿಸಿರುವುದು, ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯದಲ್ಲಿ 'ಸೆಂಟರ್ ಆಫ್ ಎಕ್ಸಲೆನ್ಸ್' ಸ್ಥಾಪನೆ, ಹಾಗೂ ಹೊಸ 'ಮತ್ಸ್ಯದರ್ಶಿನಿ'ಗಳು ಮತ್ತು ಸುಸಜ್ಜಿತ ಮೀನು ಮಾರುಕಟ್ಟೆಗಳನ್ನು ನಿರ್ಮಿಸುತ್ತಿರುವ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ:           ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಮುದ್ದೇಬಿಹಾಳ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ-ನೌಕರರ ವಿವಿಧ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸದಿದ್ದರೆ ಮಾ.11ರಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳುವುದಾಗಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಹಾಗೂ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಕೇಂದ್ರ ಸಂಘದ ತಾಲ್ಲೂಕು ಪದಾಧಿಕಾರಿಗಳು ಶಾಸಕ ಸಿ.ಎಸ್.ನಾಡಗೌಡ ಹಾಗೂ ತಹಶೀಲ್ದಾರ್ ಅವರಿಗೆ ಶುಕ್ರವಾರ ಮನವಿ ಪತ್ರ ಸಲ್ಲಿಸಿದರು. ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಗಳಿಗೆ ಕಾಲಕಾಲಕ್ಕೆ ಇಲಾಖೆಯಿಂದ ಔಷಧಿ