ಚಿಕ್ಕ‌ಆದಾಪೂರ ಗ್ರಾಮದಲ್ಲಿ ಶಾಸಕ ಕಾಶಪ್ಪನವರ ನಿಂದಿಸಿದ ಮಾಜಿ ಶಾಸಕರ ಮಗ.. ರಾಜುಗೌಡ ವಿರುದ್ಧ FIR ದಾಖಲು..!

ಚಿಕ್ಕ‌ಆದಾಪೂರ ಗ್ರಾಮದಲ್ಲಿ ಶಾಸಕ ಕಾಶಪ್ಪನವರ ನಿಂದಿಸಿದ ಮಾಜಿ ಶಾಸಕರ ಮಗ.. ರಾಜುಗೌಡ ವಿರುದ್ಧ FIR ದಾಖಲು..!

ಇಳಕಲ್: ಶಾಸಕ ವಿಜಯಾನಂದ ಕಾಶಪ್ಪನವರ ಅವರನ್ನು ಏಕವಚನದಲ್ಲಿ ನಿಂದಿಸಿ, ಸುಳ್ಳು ಆರೋಪ ಮಾಡಿದ್ದಾರೆ ಎಂದು ಮಾಜಿ ಶಾಸಕ ದೊಡ್ಡನಗೌಡ ಜಿ. ಪಾಟೀಲ್ ಅವರ ರಾಜುಗೌಡ ದೊಡ್ಡನಗೌಡ ಪಾಟೀಲ್ ವಿರುದ್ಧ ಇಳಕಲ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮತ್ತಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಹೌದು, ದಿನಾಂಕ 26-8-2024 ರಂದು ತಾಲೂಕಿನ ಚಿಕ್ಕ ಆದಾಪೂರ ಗ್ರಾಮದಲ್ಲಿ ಆಯೋಜಿಸಿದ್ದ “ಕಿಲಾಡಿ ರಂಗಣ್ಣ” ನಾಟಕ ಉದ್ಘಾಟನೆ ಮಾಡಿದ ನಂತರ ಶಾಸಕ ಕಾಶಪ್ಪನವರ ವಿರುದ್ಧ ರಾಜುಗೌಡ ಪಾಟೀಲ್ ವಾಗ್ದಾಳಿ ಮಾಡಿದ್ದರು.

“ಈ ವೇಳೆ ಏಕವಚನದಲ್ಲಿ ವಾಗ್ದಾಳಿ ನಡೆಸಿ, ಇಲ್ಲಸಲ್ಲದ ಸುಳ್ಳು ಆರೋಪ‌ ಮಾಡಿದ್ದಾರೆ” ಎಂದು ಮಲ್ಲಿಕಾರ್ಜುನ್ ಬಸಪ್ಪ ಮಡಿವಾಳರ ಎಂಬುವರು ದಿನಾಂಕ 29-8-2024ರಂದು ರಾಜುಗೌಡ ದೊಡ್ಡನಗೌಡ ಪಾಟೀಲ್ ವಿರುದ್ಧ ದೂರು ನೀಡಿದ್ದಾರೆ.

ಇದನ್ನೂ ಓದಿ: Death news: ಮಾಜಿ ಸಚಿವ ಶ್ರೀನಿವಾಸ್ ಇನ್ನಿಲ್ಲ

ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಇಳಕಲ್ ಗ್ರಾಮೀಣ PSI ಎಂ.ಎ. ಸತಿಗೌಡರ್ ತನಿಖೆ ಕೈಗೊಂಡಿದ್ದಾರೆ.

ಇನ್ನೂ ನೀನು ಬೋ* ನಾನು ಸಜ್ಜಾಗಿ ನಿಂತಿದ್ದೇನೆ: ಏಕ ವಚನದಲ್ಲಿಯೇ ರಾಜುಗೌಡ ಪಾಟೀಲ್ ವಾಗ್ದಾಳಿ

ಇಳಕಲ್: “** ವಿಜ್ಜಾ.. ಇನ್ನೂ ನೀನು ಬೋ* ನಾನು ಸಜ್ಜಾಗಿ ನಿಂತಿದ್ದೇನೆ” ಎಂದು ಮಾಜಿ ಶಾಸಕ ದೊಡ್ಡನಗೌಡ ಜಿ. ಪಾಟೀಲ್ ಅವರ ಮಗನಾದ ರಾಜುಗೌಡ ಪಾಟೀಲ್ ಅವರು ಸವಾಲು ಹಾಕಿದರು.

ತಾಲೂಕಿನ ಚಿಕ್ಕ ಆದಾಪೂರ ಗ್ರಾಮದಲ್ಲಿ ಗ್ರಾಮ ದೇವತೆ ಕಾಳಿಕಾ ದೇವಿ ಜಾತ್ರೆಯ ಅಂಗವಾಗಿ ಆಯೋಜಿಸಿದ್ದ “ಕಿಲಾಡಿ ರಂಗಣ್ಣ” ಸಾಮಾಜಿಕ ನಾಟಕವನ್ನು ಉದ್ಘಾಟಿಸಿ ಮಾತನಾಡಿದರು.

“ಇಂದು ನಾನು ರಾಜಕೀಯ ಮಾತನಾಡಲು ಬಂದಿರಲಿಲ್ಲ. ಆದರೆ, ಇಳಕಲ್ ನಲ್ಲಿ ಶಾಸಕ ವಿಜಯಾನಂದ ಕಾಶಪ್ಪನವರ ಸುದ್ದಿಗೋಷ್ಠಿಯಲ್ಲಿ ನಮ್ಮ ತಂದೆಯವರಿಗೆ ದೊಡ್ಡನಗೌಡ ನೀ ದಡ್ಡ ಎಂದು ನಿಂದಿಸಿದ ಕಾರಣ ರಾಜಕೀಯ ಮಾತನಾಡಲೇ ಬೇಕಾದ ಅನಿವಾರ್ಯತೆ ಉಂಟಾಗಿದೆ” ಎಂದು ಮಾತು ಆರಂಭಿಸಿದರು.

“ನಾವು ಇಳಕಲ್ ನಲ್ಲಿ ಇರುವವರು. ಬಾಯಿಗೆ ಬಂದಂಗ ಮಾತನಾಡಿದರೆ ಸುಮ್ಮನೆ ಕೂರಲು ಆಗಲ್ಲ. ಇನ್ನು ಮುಂದೆ ನೀ ಬೊಗಳು.. ನಾನು ನೋಡ್ತಿನಿ…” ಎಂದು ಎಚ್ಚರಿಕೆ ರೀತಿ ಮಾತನಾಡಿದರು.

“ಅಭಿವೃದ್ಧಿ ಕೆಲಸ ಮಾಡುವುದನ್ನು ಬಿಟ್ಟು, ಬಾಯಿಗೆ ಬಂದಂಗ ಮಾತನಾಡುತ್ತಾ, ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುತ್ತಿಯಾ? ನಾಳೆ‌ ಚಿಕ್ಕ ಆದಾಪೂರ ಗ್ರಾಮಕ್ಕೆ ಬರ್ತಿಯಲ್ಲ… ಬಾ.. ಏನು ಮಾಡ್ತಿ ನೋಡ್ತಿವಿ” ಎಂದು ಗುಡುಗಿದರು.

ವಾಗ್ವಾದಕ್ಕೆ ಕಾರಣ ಏನು?

ಇಳಕಲ್ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಚುನಾವಣೆ ನಂತರ ಶಾಸಕರು ಮತ್ತು ಮಾಜಿ‌ ಶಾಸಕರ ನಡುವಿನ ವಾಕ್ಸಮರ ಜೋರಾಗಿದೆ. ಈಗ ಮಾಜಿ ಶಾಸಕ ದೊಡ್ಡನಗೌಡ ಅವರ ಮಗನೂ ಮಾತಿನ ಮಲ್ಲ ಯುದ್ಧಕ್ಕೆ ಮತ್ತೆ ಪ್ರವೇಶವನ್ನು ಚಿಕ್ಕ ಆದಾಪೂರ ಗ್ರಾಮದಿಂದ‌ ಮಾಡಿದ್ದಾರೆ.

ಬಿಜೆಪಿ ನಾಯಕತ್ವ ಯಾರದ್ದು?

ವಿಧಾನಸಭೆ ಚುನಾವಣೆ ಪೂರ್ವದಲ್ಲಿಯೂ ಹೀಗೆ ಮಾತಿನ ಯುದ್ಧ ನಡೆಸಿದ್ದ ಕಾಶಪ್ಪನವರ ಮತ್ತು ದೊಡ್ಡನಗೌಡ ಅವರು ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ಸು ಕಂಡಿದ್ದರು. ಈಗ ತಾಲೂಕು ಬಿಜೆಪಿ ನಾಯಕತ್ವ ಚರ್ಚೆ ಜೋರಾಗಿರುವಾಗಲೇ ಮಾಜಿ ಶಾಸಕರು ತಮ್ಮ ಮಗನನ್ನು ಮತ್ತೆ ಮುನ್ನೆಲೆ ತರಲು ಮುಂದಾಗಿದ್ದಾರಾ ಎಂಬ ಚರ್ಚೆ ಸ್ಥಳೀಯ ರಾಜಕೀಯ ವಲಯದಲ್ಲಿ ನಡೆಯುತ್ತಿದೆ.

ಏತನ್ಮಧ್ಯೆ, ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಬಿಜೆಪಿ ಸೇರಿಸಿದ ನಂತರ ಎಸ್. ಆರ್. ನವಲಿಹಿರೇಮಠ ಅವರೂ ಬಿಜೆಪಿ ಸೇರುತ್ತಾರೆ ಎಂದು ಹೇಳಲಾಗುತ್ತಿದೆ. ಹೀಗಾಗಿ, ಬಿಜೆಪಿ ನಾಯಕತ್ವ ಯಾರ ಬಳಿ ಉಳಿಯುತ್ತದೆ ಎಂಬುದು ಭಾರೀ ಕುತೂಹಲ ಮೂಡಿಸಿದೆ.

Latest News

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ಮುದ್ದೇಬಿಹಾಳ : ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ಸಂಪೂರ್ಣವಾಗಿ ತಮ್ಮನ್ನು ಆಧುನಿಕ ಮಾಧ್ಯಮಗಳಲ್ಲಿ ಮಗ್ನರಾಗಿದ್ದು ಮಾನವೀಯ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್‌ದಿಂದ ಎ.ಎಲ್.ಬಿ.ಸಿ ಕಾಲುವೆಯ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ ಸಿಡಿಲಿಗೆ ಬಲಿಯಾಗಿರುವ ಘಟನೆ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ತಾಂಡಾದ ಮಾರುತೇಶ್ವರ ಜಾತ್ರೆಯ ಅಂಗವಾಗಿ ಹಮ್ಮಿಕೊಂಡಿದ್ದ ತೆರಬಂಡಿ ಸ್ಪರ್ಧೆಯಲ್ಲಿ ಶ್ರೀ ಲಕ್ಷ್ಮಿದೇವಿ ಕಮೀಟಿ ರೂಢಗಿ ಎತ್ತುಗಳು ಪ್ರಥಮ, ರೂಢಗಿ ಎಸ್.ಕೆ.ಟಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡವು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಂತೋಷ ಚವ್ಹಾಣ, ಗ್ರಾಮೀಣ ಪ್ರದೇಶದಲ್ಲಿ ರೈತರು ಎತ್ತುಗಳ ಸಂಸ್ಕೃತಿಯನ್ನು ಜೀವಂತವಾಗಿಡುವ ಸಲುವಾಗಿ ಇಂತಹ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದರು. ಗ್ರಾಪಂ ಸದಸ್ಯ ಶಿವಾನಂದ ಲಮಾಣಿ, ಮಾಜಿ ಸದಸ್ಯ ಥಾವರಪ್ಪ

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಬಾಗಲಕೋಟೆ :ಮುರನಾಳ ಗ್ರಾಮದ ಶ್ರೀ ಗದಿಗೆಪ್ಪಗೌಡ ವೆಂಕಪ್ಪ ಕೋನಪ್ಪನವರ ( ೮೩ ) ಇವರು ವಿದ್ಯಾಗಿರಿ , ಬಾಗಲಕೋಟೆ ನಿವಾಸದಲ್ಲಿ ಸ್ವರ್ಗಸ್ಥರಾದರು. ಸೋಮವಾರ ದಿ ೧೨ ಮೇ ೨೦೨೫ ರಂದು ಬೆಳಿಗ್ಗೆ ೧೦ ಗಂಟೆಗೆ ನಂದೀಶ್ವರ ನಗರ, ವಿದ್ಯಾಗಿರಿ ಬಾಗಲಕೋಟೆ ದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವದು. ಸಂಪರ್ಕ ಮೊಬೈಲ್ ನಂಬರ್9740339050 _ಓಂ ಶಾಂತಿ