ಚಿಕ್ಕ‌ಆದಾಪೂರ ಗ್ರಾಮದಲ್ಲಿ ಶಾಸಕ ಕಾಶಪ್ಪನವರ ನಿಂದಿಸಿದ ಮಾಜಿ ಶಾಸಕರ ಮಗ.. ರಾಜುಗೌಡ ವಿರುದ್ಧ FIR ದಾಖಲು..!

ಚಿಕ್ಕ‌ಆದಾಪೂರ ಗ್ರಾಮದಲ್ಲಿ ಶಾಸಕ ಕಾಶಪ್ಪನವರ ನಿಂದಿಸಿದ ಮಾಜಿ ಶಾಸಕರ ಮಗ.. ರಾಜುಗೌಡ ವಿರುದ್ಧ FIR ದಾಖಲು..!

ಇಳಕಲ್: ಶಾಸಕ ವಿಜಯಾನಂದ ಕಾಶಪ್ಪನವರ ಅವರನ್ನು ಏಕವಚನದಲ್ಲಿ ನಿಂದಿಸಿ, ಸುಳ್ಳು ಆರೋಪ ಮಾಡಿದ್ದಾರೆ ಎಂದು ಮಾಜಿ ಶಾಸಕ ದೊಡ್ಡನಗೌಡ ಜಿ. ಪಾಟೀಲ್ ಅವರ ರಾಜುಗೌಡ ದೊಡ್ಡನಗೌಡ ಪಾಟೀಲ್ ವಿರುದ್ಧ ಇಳಕಲ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮತ್ತಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನಲ್ ಗೆ ಸೇರಿ: https://t.me/dcgkannada

ಹೌದು, ದಿನಾಂಕ 26-8-2024 ರಂದು ತಾಲೂಕಿನ ಚಿಕ್ಕ ಆದಾಪೂರ ಗ್ರಾಮದಲ್ಲಿ ಆಯೋಜಿಸಿದ್ದ “ಕಿಲಾಡಿ ರಂಗಣ್ಣ” ನಾಟಕ ಉದ್ಘಾಟನೆ ಮಾಡಿದ ನಂತರ ಶಾಸಕ ಕಾಶಪ್ಪನವರ ವಿರುದ್ಧ ರಾಜುಗೌಡ ಪಾಟೀಲ್ ವಾಗ್ದಾಳಿ ಮಾಡಿದ್ದರು.

“ಈ ವೇಳೆ ಏಕವಚನದಲ್ಲಿ ವಾಗ್ದಾಳಿ ನಡೆಸಿ, ಇಲ್ಲಸಲ್ಲದ ಸುಳ್ಳು ಆರೋಪ‌ ಮಾಡಿದ್ದಾರೆ” ಎಂದು ಮಲ್ಲಿಕಾರ್ಜುನ್ ಬಸಪ್ಪ ಮಡಿವಾಳರ ಎಂಬುವರು ದಿನಾಂಕ 29-8-2024ರಂದು ರಾಜುಗೌಡ ದೊಡ್ಡನಗೌಡ ಪಾಟೀಲ್ ವಿರುದ್ಧ ದೂರು ನೀಡಿದ್ದಾರೆ.

ಇದನ್ನೂ ಓದಿ: Death news: ಮಾಜಿ ಸಚಿವ ಶ್ರೀನಿವಾಸ್ ಇನ್ನಿಲ್ಲ

ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಇಳಕಲ್ ಗ್ರಾಮೀಣ PSI ಎಂ.ಎ. ಸತಿಗೌಡರ್ ತನಿಖೆ ಕೈಗೊಂಡಿದ್ದಾರೆ.

ಇನ್ನೂ ನೀನು ಬೋ* ನಾನು ಸಜ್ಜಾಗಿ ನಿಂತಿದ್ದೇನೆ: ಏಕ ವಚನದಲ್ಲಿಯೇ ರಾಜುಗೌಡ ಪಾಟೀಲ್ ವಾಗ್ದಾಳಿ

ಇಳಕಲ್: “** ವಿಜ್ಜಾ.. ಇನ್ನೂ ನೀನು ಬೋ* ನಾನು ಸಜ್ಜಾಗಿ ನಿಂತಿದ್ದೇನೆ” ಎಂದು ಮಾಜಿ ಶಾಸಕ ದೊಡ್ಡನಗೌಡ ಜಿ. ಪಾಟೀಲ್ ಅವರ ಮಗನಾದ ರಾಜುಗೌಡ ಪಾಟೀಲ್ ಅವರು ಸವಾಲು ಹಾಕಿದರು.

ತಾಲೂಕಿನ ಚಿಕ್ಕ ಆದಾಪೂರ ಗ್ರಾಮದಲ್ಲಿ ಗ್ರಾಮ ದೇವತೆ ಕಾಳಿಕಾ ದೇವಿ ಜಾತ್ರೆಯ ಅಂಗವಾಗಿ ಆಯೋಜಿಸಿದ್ದ “ಕಿಲಾಡಿ ರಂಗಣ್ಣ” ಸಾಮಾಜಿಕ ನಾಟಕವನ್ನು ಉದ್ಘಾಟಿಸಿ ಮಾತನಾಡಿದರು.

“ಇಂದು ನಾನು ರಾಜಕೀಯ ಮಾತನಾಡಲು ಬಂದಿರಲಿಲ್ಲ. ಆದರೆ, ಇಳಕಲ್ ನಲ್ಲಿ ಶಾಸಕ ವಿಜಯಾನಂದ ಕಾಶಪ್ಪನವರ ಸುದ್ದಿಗೋಷ್ಠಿಯಲ್ಲಿ ನಮ್ಮ ತಂದೆಯವರಿಗೆ ದೊಡ್ಡನಗೌಡ ನೀ ದಡ್ಡ ಎಂದು ನಿಂದಿಸಿದ ಕಾರಣ ರಾಜಕೀಯ ಮಾತನಾಡಲೇ ಬೇಕಾದ ಅನಿವಾರ್ಯತೆ ಉಂಟಾಗಿದೆ” ಎಂದು ಮಾತು ಆರಂಭಿಸಿದರು.

“ನಾವು ಇಳಕಲ್ ನಲ್ಲಿ ಇರುವವರು. ಬಾಯಿಗೆ ಬಂದಂಗ ಮಾತನಾಡಿದರೆ ಸುಮ್ಮನೆ ಕೂರಲು ಆಗಲ್ಲ. ಇನ್ನು ಮುಂದೆ ನೀ ಬೊಗಳು.. ನಾನು ನೋಡ್ತಿನಿ…” ಎಂದು ಎಚ್ಚರಿಕೆ ರೀತಿ ಮಾತನಾಡಿದರು.

“ಅಭಿವೃದ್ಧಿ ಕೆಲಸ ಮಾಡುವುದನ್ನು ಬಿಟ್ಟು, ಬಾಯಿಗೆ ಬಂದಂಗ ಮಾತನಾಡುತ್ತಾ, ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸುತ್ತಿಯಾ? ನಾಳೆ‌ ಚಿಕ್ಕ ಆದಾಪೂರ ಗ್ರಾಮಕ್ಕೆ ಬರ್ತಿಯಲ್ಲ… ಬಾ.. ಏನು ಮಾಡ್ತಿ ನೋಡ್ತಿವಿ” ಎಂದು ಗುಡುಗಿದರು.

ವಾಗ್ವಾದಕ್ಕೆ ಕಾರಣ ಏನು?

ಇಳಕಲ್ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಚುನಾವಣೆ ನಂತರ ಶಾಸಕರು ಮತ್ತು ಮಾಜಿ‌ ಶಾಸಕರ ನಡುವಿನ ವಾಕ್ಸಮರ ಜೋರಾಗಿದೆ. ಈಗ ಮಾಜಿ ಶಾಸಕ ದೊಡ್ಡನಗೌಡ ಅವರ ಮಗನೂ ಮಾತಿನ ಮಲ್ಲ ಯುದ್ಧಕ್ಕೆ ಮತ್ತೆ ಪ್ರವೇಶವನ್ನು ಚಿಕ್ಕ ಆದಾಪೂರ ಗ್ರಾಮದಿಂದ‌ ಮಾಡಿದ್ದಾರೆ.

ಬಿಜೆಪಿ ನಾಯಕತ್ವ ಯಾರದ್ದು?

ವಿಧಾನಸಭೆ ಚುನಾವಣೆ ಪೂರ್ವದಲ್ಲಿಯೂ ಹೀಗೆ ಮಾತಿನ ಯುದ್ಧ ನಡೆಸಿದ್ದ ಕಾಶಪ್ಪನವರ ಮತ್ತು ದೊಡ್ಡನಗೌಡ ಅವರು ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ಸು ಕಂಡಿದ್ದರು. ಈಗ ತಾಲೂಕು ಬಿಜೆಪಿ ನಾಯಕತ್ವ ಚರ್ಚೆ ಜೋರಾಗಿರುವಾಗಲೇ ಮಾಜಿ ಶಾಸಕರು ತಮ್ಮ ಮಗನನ್ನು ಮತ್ತೆ ಮುನ್ನೆಲೆ ತರಲು ಮುಂದಾಗಿದ್ದಾರಾ ಎಂಬ ಚರ್ಚೆ ಸ್ಥಳೀಯ ರಾಜಕೀಯ ವಲಯದಲ್ಲಿ ನಡೆಯುತ್ತಿದೆ.

ಏತನ್ಮಧ್ಯೆ, ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಬಿಜೆಪಿ ಸೇರಿಸಿದ ನಂತರ ಎಸ್. ಆರ್. ನವಲಿಹಿರೇಮಠ ಅವರೂ ಬಿಜೆಪಿ ಸೇರುತ್ತಾರೆ ಎಂದು ಹೇಳಲಾಗುತ್ತಿದೆ. ಹೀಗಾಗಿ, ಬಿಜೆಪಿ ನಾಯಕತ್ವ ಯಾರ ಬಳಿ ಉಳಿಯುತ್ತದೆ ಎಂಬುದು ಭಾರೀ ಕುತೂಹಲ ಮೂಡಿಸಿದೆ.

Latest News

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ:                                           ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ದಿ.ದೇಶಮುಖ ದಂಪತಿ ಪುಣ್ಯಸ್ಮರಣೆ: ಸಕ್ರಿಯ ರಾಜಕಾರಣಕ್ಕೆ ದೇಶಮುಖ ಮನೆತನದ ಕುಡಿ ಮರಳಲಿ-ಕತ್ತಿ

ಮುದ್ದೇಬಿಹಾಳ : ಕಲುಷಿತಗೊಂಡಿರುವ ರಾಜಕೀಯ ಕ್ಷೇತ್ರದ ಶುದ್ಧೀಕರಣಕ್ಕೆ ದೇಶಮುಖ ಮನೆತನದಂತ ಕುಟುಂಬದವರು ಸಕ್ರಿಯ ರಾಜಕಾರಣದಲ್ಲಿರಬೇಕು

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ನನ್ನ ಜನ ರಾಜೀನಾಮೆ ಕೊಡು ಎಂದರೆ ಕೊಡುತ್ತೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ತಮಗೆ ಷಡ್ಯಂತ್ರದಿಂದ ಸಚಿವ ಸ್ಥಾನ ಕೈ ತಪ್ಪಿದ್ದು ಇದಕ್ಕಾಗಿ ತಮ್ಮ ಸ್ಥಾನಕ್ಕೆ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ ಮರಿಯೊಂದನ್ನು ಅರಣ್ಯ ಇಲಾಖೆಯ ಅಧಿಕಾರಿಗಳ ಸಹಕಾರದಿಂದ ಇಲ್ಲಿನ ಪಶು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಮಾನವೀತೆ ತೋರಿದ್ದಾರೆ. ಘಟನೆ ವಿವರ : ಮುದ್ದೇಬಿಹಾಳ ಪಟ್ಟಣದ ಕುಂಟೋಜಿ ರಸ್ತೆಯ ಕಾರು ಸರ್ವಿಸ್ ಮಾಡುವ ಗುಂಡಿಯಲ್ಲಿ ಬಿದ್ದಿದ್ದ ನರಿ ಮರಿಯೊಂದು ಬಿದ್ದು ಒದ್ದಾಡುತ್ತಿದ್ದನ್ನು ಕಂಡ ಅದೇ ದಾರಿಯಲ್ಲಿ ನಿತ್ಯ ವಾಯುವಿಹಾರಕ್ಕೆಂದು ಹೋಗುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ ಅಂಜುಮನ್ ಕಮೀಟಿ ಚುನಾವಣಾಧಿಕಾರಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿಗಳೂ ಆಗಿರುವ ಡಾ.ಔದ್ರಾಮ್ ಅವರು ಜು.23 ರಂದು ಅಧಿಸೂಚನೆ ಹೊರಡಿಸಿದ್ದು ಚುನಾವಣೆ ಪ್ರಕ್ರಿಯೆ ಆರಂಭಗೊoಡಿದೆ. ಜು.24 ರಿಂದ 30ರವರೆಗೆ ಬೆಳಗ್ಗೆ 11 ರಿಂದ ಮದ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸ್ವೀಕಾರ,ಜು.31 ರಂದು ನಾಮಪತ್ರಗಳ ಪರಿಶೀಲನೆ,ಆ.1 ರಂದು ಬೆಳಗ್ಗೆ 11 ರಿಂದ ಮದ್ಯಾಹ್ನ 3ರವರೆಗೆ ನಾಮಪತ್ರ ಹಿಂದಕ್ಕೆ ಪಡೆದುಕೊಳ್ಳುವ