First Maharathotsava of the magnificent Kuntoji Basaveshwara temple

ವೈಭವದ ಕುಂಟೋಜಿ ಬಸವೇಶ್ವರರ ದೇವಸ್ಥಾನದ ಪ್ರಥಮ ಮಹಾರಥೋತ್ಸವ

ವೈಭವದ ಕುಂಟೋಜಿ ಬಸವೇಶ್ವರರ ದೇವಸ್ಥಾನದ ಪ್ರಥಮ ಮಹಾರಥೋತ್ಸವ

ಮುದ್ದೇಬಿಹಾಳ : ಕೊಪ್ಪಳದ ಗವಿಸಿದ್ಧೇಶ್ವರ ಸ್ವಾಮೀಜಿ ಲೋಕಾರ್ಪಣೆಗೊಳಿಸಿದ ತಾಲ್ಲೂಕಿನ ಕುಂಟೋಜಿ ಶ್ರೀ ಬಸವೇಶ್ವರ ಹಾಗೂ ಶ್ರೀ ಸಂಗಮೇಶ್ವರ ದೇವಸ್ಥಾನದ ರಥೋತ್ಸವ ಸಾವಿರಾರು ಭಕ್ತಾದಿಗಳ ಜಯಘೋಷಗಳ ಮಧ್ಯೆ ಮಂಗಳವಾರ ಸಂಜೆ 6.35ಕ್ಕೆ ಜರುಗಿತು.

ತಾಲ್ಲೂಕಿನ ಆಲೂರು ಗ್ರಾಮದ ಭಕ್ತರಿಂದ ತೇರಿನ ಕಳಸ, ಗರಸಂಗಿಯಿಂದ ತೇರಿನ ಹಗ್ಗ, ಮುದ್ದೇಬಿಹಾಳ ಹಾಗೂ ಅಬ್ಬಿಹಾಳ ಭಕ್ತರಿಂದ ರುದ್ರಾಕ್ಷಿ ಹಾರಗಳು ಆಗಮಿಸಿದ ನಂತರ ಪಲ್ಲಕ್ಕಿಯೊಂದಿಗೆ ರಥದ ಸುತ್ತ ಪ್ರದಕ್ಷಿಣೆ ಹಾಕಲಾಯಿತು. ನಿಡಸೋಸಿ ಶಿವಲಿಂಗೇಶ್ವರ ಸಿದ್ಧಸಂಸ್ಥಾನಮಠದ ಪ್ರಭು ಸ್ವಾಮೀಜಿ, ಕುಂಟೋಜಿ ಚೆನ್ನವೀರ ಶಿವಾಚಾರ್ಯರು, ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ, ಜಾತ್ರಾ ಕಮೀಟಿ ಅಧ್ಯಕ್ಷ ಗುರುಲಿಂಗಪ್ಪ ಸುಲ್ಲಳ್ಳಿ ಹಾಗೂ ಇತರರು ನೂತನ ಪ್ರಥಮ ರಥೋತ್ಸವಕ್ಕೆ ಪೂಜೆ ಸಲ್ಲಿಸಿ ಚಾಲನೆ ನೀಡಿದರು.

ಪ್ರಥಮ ಬಾರಿಗೆ ರಥೋತ್ಸವದಲ್ಲಿ ಪಾಲ್ಗೊಂಡಿದ್ದ ತರುಣರು ತಮ್ಮೂರಿನ ತೇರು ಪಾದಗಟ್ಟಿ ಮುಟ್ಟುತ್ತಲೇ ಜಯಘೋಷಗಳೊಂದಿಗೆ ಕುಣಿದು ಸಂಭ್ರಮಿಸಿದರು.‌ ಭಕ್ತರು ರಥಕ್ಕೆ ಉತ್ತತ್ತಿ, ಬಾಳೆ ಹಣ್ಣು ಮತ್ತಿತರ ಮಂಗಲಕಾರಿ ವಸ್ತುಗಳು ಅರ್ಪಿಸಿ ನಮಿಸಿದರು. ಸಿಪಿಐ ಮೊಹ್ಮದ ಫಸಿವುದ್ದೀನ, ಪಿಎಸ್‌ಐ ಸಂಜಯ ತಿಪರೆಡ್ಡಿ ಹಾಗೂ ಸಿಬ್ಬಂದಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಂಡರು.
ವಿಶೇಷವೆಂದರೆ ಎರಡು ದಿನಗಳಿಂದ ಬಿಟ್ಟು ಬಿಡದೇ ಸುರಿಯುತ್ತಿದ್ದ ಮಳೆರಾಯ ರಥೋತ್ಸವದ ಸಮಯದಲ್ಲಿ ಎರಡ್ಮೂರು ತಾಸು ಬಿಡುವು ಕೊಟ್ಟಿದ್ದು ವಿಶೇಷವಾಗಿತ್ತು. ರಥೋತ್ಸವದ ಸಂದರ್ಭದಲ್ಲಿ ಪ್ರಮುಖರಾದ ಸಂಗನಬಸಯ್ಯ ಹಿರೇಮಠ, ಸಿದ್ದಲಿಂಗಯ್ಯ ಕಲ್ಯಾಣಮಠ, ಶಿವಣ್ಣ ಚಿನಿವಾರ,ಅಮರೇಶ ಗೂಳಿ, ಶರಣು ಹಿರೇಮಠ, ಎಂ.ಎಸ್.ಕನ್ನೂರ, ಸಂಗಮ್ಮ ಉಣ್ಣಿಬಾವಿ, ಸುರೇಶ ಅಳಗುಂಡಗಿ, ಮಲ್ಲಪ್ಪ ಬಡಿಗೇರ, ಹಣಮಪ್ಪ ಕಾರಕೂರ, ರಾಘವೇಂದ್ರ ಬಡಿಗೇರ, ಮಹೇಶ ಅಂಬಿಗೇರ ಭಾಗವಹಿಸಿದ್ದರು.

Latest News

ಕಂದಗನೂರ-ಮುದೂರ ರಸ್ತೆ ದುರಸ್ತಿ : ರೈತರ ಹೊಲಗಳ ದರ ದುಪ್ಪಟ್ಟು-ಶಾಸಕ ಸಿ.ಎಸ್.ನಾಡಗೌಡ

ಕಂದಗನೂರ-ಮುದೂರ ರಸ್ತೆ ದುರಸ್ತಿ : ರೈತರ ಹೊಲಗಳ ದರ ದುಪ್ಪಟ್ಟು-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಹಳ್ಳಿಗಳನ್ನು ಸಂಪರ್ಕಿಸುವ ರೈತರ ಹೊಲಗಳಿಗೆ ಹೋಗುವ ರಸ್ತೆಗಳ ಸುಧಾರಣೆಯಿಂದ

ನಾನು  ಕಾಂಗ್ರೆಸ್  ಹೈಕಮಾಂಡ್  ಲಿಸ್ಟ್’ನಲ್ಲಿರುವೆ-C.S.ನಾಡಗೌಡ

ನಾನು  ಕಾಂಗ್ರೆಸ್  ಹೈಕಮಾಂಡ್  ಲಿಸ್ಟ್’ನಲ್ಲಿರುವೆ-C.S.ನಾಡಗೌಡ

ಮುದ್ದೇಬಿಹಾಳ : ‘ಕೆಲವರು ನಾನು ಡಿಕೆಶಿ ಲಿಸ್ಟ್’ನಲ್ಲಿರುವೆ,ಇನ್ನು ಕೆಲವರು ಸಿದ್ಧರಾಮಯ್ಯ ಲಿಸ್ಟ್’ನಲ್ಲಿರುವೆ ಎನ್ನುತ್ತಿದ್ದಾರೆ.ನಾನು ಅವರಿಬ್ಬರ

ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ಸವಾರಿ ಮಾಡುವರು : ಕೆ. ಶಿವಕುಮಾರ್

ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ಸವಾರಿ ಮಾಡುವರು : ಕೆ. ಶಿವಕುಮಾರ್

ಚಾಮರಾಜನಗರ : ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ನಿಮ್ಮಗಳ ಮೇಲೆ ಸವಾರಿ ಮಾಡುವರು ಎಂದು ವಿಧಾನ

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ಬೀದರ್ ;- ರಾಜ್ಯದಲ್ಲಿ ಸಂಭವಿಸಿರುವ ನೆರೆ, ಬರ, ಪ್ರವಾಹ ಮೊದಲಾದ ಪ್ರಕೃತಿ ವಿಕೋಪಗಳಿಂದ ರೈತರು,

ಗುಳಬಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆ

ಗುಳಬಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆ

ಗುಳಬಾಳ : ಹುಣಸಗಿ ತಾಲ್ಲೂಕಿನ ಗುಳಬಾಳ ಗ್ರಾಮದ ನಿವಾಸಿಯಾದ ಶ್ರೀಮತಿ ಯಂಕಮ್ಮ ಬಮ್ಮನಳ್ಳಿ ಅವರು ಕಲಿತ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆಯಾಗಿ ನೀಡಿದರು. "ನಾನು ಕಲಿತ ಶಾಲೆ ನನ್ನ ಹೆಮ್ಮೆ" ಎಂದು ತಿಳಿದು ಶಾಲೆಯಲ್ಲಿ ನಡೆಯುವ ರಾಷ್ಟ್ರೀಯ ಕಾರ್ಯಕ್ರಮಗಳು ಇನ್ನಿತರೆ ಜಯಂತಿಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅನುಕೂಲವಾಗುವಂತೆ ತಮ್ಮ ವೈಯಕ್ತಿಕ ಹಣದಲ್ಲಿ ಶಾಲೆಗೆ ದೇಣಿಗೆ ನೀಡಿದರು. ಹುಣಸಗಿ ತಾಲೂಕಿನ ಪದವಿದರರೂ ತಮ್ಮ ಊರಿನ ಶಾಲೆಗೆ ದೇಣಿಗೆ ನೀಡಿ ಮಾದರಿಯಾಗಿ

ಬಸರಕೋಡ ಪಿ.ಕೆ.ಪಿ.ಎಸ್ :                                         ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ, ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಅವಿರೋಧ ಆಯ್ಕೆ

ಬಸರಕೋಡ ಪಿ.ಕೆ.ಪಿ.ಎಸ್ : ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ, ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ವಿವಿದೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ,ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಎರಡನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಕಚೇರಿಯಲ್ಲಿ ಮಂಗಳವಾರ ನಡೆದ ಅಧ್ಯಕ್ಷ,ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ತಲಾ ಒಂದೊAದೇ ನಾಮಪತ್ರ ಸಲ್ಲಿಕೆ ಆದ ಹಿನ್ನೆಲೆಯಲ್ಲಿ ಎರಡೂ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದೆ ಎಂದು ಚುನಾವಣಾಧಿಕಾರಿ, ಸಹಕಾರ ಅಭಿವೃದ್ಧಿ ಅಧಿಕಾರಿ ವಿ.ಎಸ್.ಉತ್ನಾಳ ತಿಳಿಸಿದರು. ಎರಡನೇ ಅವಧಿಗೆ