ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್ನಲ್ಲಿ ಘೋಷಿಸಿರುವ ಯೋಜನೆಗಳನ್ನು ರಾಷ್ಟ್ರೀಯ ಮೀನುಗಾರರ ಸಂಘ ಸ್ವಾಗತಿಸುತ್ತದೆ ಎಂದು ಸಂಘದ ರಾಷ್ಟ್ರೀಯ ಉಪಾಧ್ಯಕ್ಷರಾದ ಡಾ. ಗೌತಮ್ ಚೌಧರಿ ತಿಳಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು, ಮೀನುಗಾರರಿಗೆ ನೀಡುವ ಕಿಟ್ ದರವನ್ನು ₹10,000 ದಿಂದ ₹20,000ಕ್ಕೆ ಹೆಚ್ಚಿಸಿರುವುದು, ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯದಲ್ಲಿ ‘ಸೆಂಟರ್ ಆಫ್ ಎಕ್ಸಲೆನ್ಸ್’ ಸ್ಥಾಪನೆ, ಹಾಗೂ ಹೊಸ ‘ಮತ್ಸ್ಯದರ್ಶಿನಿ’ಗಳು ಮತ್ತು ಸುಸಜ್ಜಿತ ಮೀನು ಮಾರುಕಟ್ಟೆಗಳನ್ನು ನಿರ್ಮಿಸುತ್ತಿರುವ ಸರ್ಕಾರದ ಕ್ರಮ ಶ್ಲಾಘನೀಯ. ಈ ಯೋಜನೆಗಳು ಮೀನುಗಾರಿಕೆ ಮಾರುಕಟ್ಟೆ ವಿಸ್ತರಣೆಗೆ ವರದಾನವಾಗಲಿವೆ ಎಂದು ಅವರು ತಿಳಿಸಿದ್ದಾರೆ.
ಆದರೆ, ಕಡಲಿಗೆ ಇಳಿಯುವ ಮೀನುಗಾರರ ಬದುಕಿನ ಅತ್ಯಂತ ಸೂಕ್ಷ್ಮ ಹಾಗೂ ಜರೂರತ್ತಿನ ಬೇಡಿಕೆಗಳನ್ನು ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷಿಸಿದೆ ಎಂದು ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
“ಮೀನುಗಾರರ ಕಲ್ಯಾಣ ಎಂದರೆ ಕೇವಲ ಮಾರುಕಟ್ಟೆ ನಿರ್ಮಾಣವಲ್ಲ. ಪ್ರತಿದಿನ ಪ್ರಾಣದ ಹಂಗು ತೊರೆದು ಸಮುದ್ರಕ್ಕಿಳಿಯುವ ಮೀನುಗಾರನಿಗೆ ಈ ಬಜೆಟ್ನಲ್ಲಿ ‘ಜೀವ ವಿಮೆ’ಯ ಭದ್ರತೆ ಮಿಸ್ ಆಗಿದೆ. ಮೀನುಗಾರರ ಸಾವಿನ ಸಂದರ್ಭದಲ್ಲಿ ಅವರ ಕುಟುಂಬಕ್ಕೆ ಆಸರೆಯಾಗಬೇಕಿದ್ದ ಪರಿಹಾರದ ಮೊತ್ತ ಹೆಚ್ಚಳದ ಬಗ್ಗೆ ಸರ್ಕಾರ ಮೌನ ವಹಿಸಿದೆ. ಇದರ ಜೊತೆಗೆ, ಬಡ ಮೀನುಗಾರರ ಮಕ್ಕಳ ವಿದ್ಯಾಭ್ಯಾಸಕ್ಕೆ ವಿಶೇಷ ಪ್ರೋತ್ಸಾಹಧನ ಹಾಗೂ ಮೀನುಗಾರರ ಕುಟುಂಬಗಳ ಆರ್ಥಿಕ ನಿರ್ವಹಣೆಗೆ ಸಿಗಬೇಕಿದ್ದ ನೇರ ನೆರವು ಬಜೆಟ್ನಲ್ಲಿ ಸಂಪೂರ್ಣವಾಗಿ ಕೈಬಿಟ್ಟು ಹೋಗಿರುವುದು ದುರಾದೃಷ್ಟಕರ. ಮೂಲಸೌಕರ್ಯದ ಜೊತೆಗೆ ಮೀನುಗಾರನ ಜೀವ ಹಾಗೂ ಆತನ ಕುಟುಂಬದ ಭವಿಷ್ಯಕ್ಕೂ ಸರ್ಕಾರ ಆದ್ಯತೆ ನೀಡಬೇಕಿತ್ತು” ತಮ್ಮ ಹೇಳಿಕೆಯಲ್ಲಿ ಅಸಮಾಧಾನ ಹೊರಹಾಕಿದ್ದಾರೆ.
ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ
ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ
Latest News
ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್
ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು
ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ
ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.
ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ
ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು
ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್
ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ
ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ
ಮುದ್ದೇಬಿಹಾಳ : ಕೆಎಸ್ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ
ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ
ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ







