ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್ನಲ್ಲಿ ಘೋಷಿಸಿರುವ ಯೋಜನೆಗಳನ್ನು ರಾಷ್ಟ್ರೀಯ ಮೀನುಗಾರರ ಸಂಘ ಸ್ವಾಗತಿಸುತ್ತದೆ ಎಂದು ಸಂಘದ ರಾಷ್ಟ್ರೀಯ ಉಪಾಧ್ಯಕ್ಷರಾದ ಡಾ. ಗೌತಮ್ ಚೌಧರಿ ತಿಳಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು, ಮೀನುಗಾರರಿಗೆ ನೀಡುವ ಕಿಟ್ ದರವನ್ನು ₹10,000 ದಿಂದ ₹20,000ಕ್ಕೆ ಹೆಚ್ಚಿಸಿರುವುದು, ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯದಲ್ಲಿ ‘ಸೆಂಟರ್ ಆಫ್ ಎಕ್ಸಲೆನ್ಸ್’ ಸ್ಥಾಪನೆ, ಹಾಗೂ ಹೊಸ ‘ಮತ್ಸ್ಯದರ್ಶಿನಿ’ಗಳು ಮತ್ತು ಸುಸಜ್ಜಿತ ಮೀನು ಮಾರುಕಟ್ಟೆಗಳನ್ನು ನಿರ್ಮಿಸುತ್ತಿರುವ ಸರ್ಕಾರದ ಕ್ರಮ ಶ್ಲಾಘನೀಯ. ಈ ಯೋಜನೆಗಳು ಮೀನುಗಾರಿಕೆ ಮಾರುಕಟ್ಟೆ ವಿಸ್ತರಣೆಗೆ ವರದಾನವಾಗಲಿವೆ ಎಂದು ಅವರು ತಿಳಿಸಿದ್ದಾರೆ.
ಆದರೆ, ಕಡಲಿಗೆ ಇಳಿಯುವ ಮೀನುಗಾರರ ಬದುಕಿನ ಅತ್ಯಂತ ಸೂಕ್ಷ್ಮ ಹಾಗೂ ಜರೂರತ್ತಿನ ಬೇಡಿಕೆಗಳನ್ನು ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷಿಸಿದೆ ಎಂದು ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
“ಮೀನುಗಾರರ ಕಲ್ಯಾಣ ಎಂದರೆ ಕೇವಲ ಮಾರುಕಟ್ಟೆ ನಿರ್ಮಾಣವಲ್ಲ. ಪ್ರತಿದಿನ ಪ್ರಾಣದ ಹಂಗು ತೊರೆದು ಸಮುದ್ರಕ್ಕಿಳಿಯುವ ಮೀನುಗಾರನಿಗೆ ಈ ಬಜೆಟ್ನಲ್ಲಿ ‘ಜೀವ ವಿಮೆ’ಯ ಭದ್ರತೆ ಮಿಸ್ ಆಗಿದೆ. ಮೀನುಗಾರರ ಸಾವಿನ ಸಂದರ್ಭದಲ್ಲಿ ಅವರ ಕುಟುಂಬಕ್ಕೆ ಆಸರೆಯಾಗಬೇಕಿದ್ದ ಪರಿಹಾರದ ಮೊತ್ತ ಹೆಚ್ಚಳದ ಬಗ್ಗೆ ಸರ್ಕಾರ ಮೌನ ವಹಿಸಿದೆ. ಇದರ ಜೊತೆಗೆ, ಬಡ ಮೀನುಗಾರರ ಮಕ್ಕಳ ವಿದ್ಯಾಭ್ಯಾಸಕ್ಕೆ ವಿಶೇಷ ಪ್ರೋತ್ಸಾಹಧನ ಹಾಗೂ ಮೀನುಗಾರರ ಕುಟುಂಬಗಳ ಆರ್ಥಿಕ ನಿರ್ವಹಣೆಗೆ ಸಿಗಬೇಕಿದ್ದ ನೇರ ನೆರವು ಬಜೆಟ್ನಲ್ಲಿ ಸಂಪೂರ್ಣವಾಗಿ ಕೈಬಿಟ್ಟು ಹೋಗಿರುವುದು ದುರಾದೃಷ್ಟಕರ. ಮೂಲಸೌಕರ್ಯದ ಜೊತೆಗೆ ಮೀನುಗಾರನ ಜೀವ ಹಾಗೂ ಆತನ ಕುಟುಂಬದ ಭವಿಷ್ಯಕ್ಕೂ ಸರ್ಕಾರ ಆದ್ಯತೆ ನೀಡಬೇಕಿತ್ತು” ತಮ್ಮ ಹೇಳಿಕೆಯಲ್ಲಿ ಅಸಮಾಧಾನ ಹೊರಹಾಕಿದ್ದಾರೆ.
ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ
ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ
Latest News
58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ
ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ
ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ
ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ
ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ
ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ
ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ
ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು
S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ
ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್ಓಗಳು,ಮೇಲ್ವಿಚಾರಕರು,ಬಿಎಲ್ಎಗಳ ಹಾಗೂ ಮತದಾರರ ಸಹಕಾರದಿಂದ ಗಣತಿ ನಮೂನೆಗಳ ವಿತರಣೆ ಕಾರ್ಯದಲ್ಲಿ ಮುದ್ದೇಬಿಹಾಳ ಮತಕ್ಷೇತ್ರ ಶೇ.98.38ರಷ್ಟು ಸಾಧನೆ ಮಾಡಿ ವಿಜಯಪುರ ಜಿಲ್ಲೆಗೆ ಎರಡನೇ ಸ್ಥಾನ ಪಡೆದುಕೊಂಡಿದೆ ಎಂದು ಮತದಾರರ ನೋಂದಣಾಧಿಕಾರಿ,ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಎಸ್ಐಆರ್ ಪ್ರಕ್ರಿಯೆಯ ಕುರಿತು ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.2,28,285 ಮತದಾರರಲ್ಲಿ 2,24,589 ಮತದಾರರಿಗೆ ಗಣತಿ ನಮೂನೆ
ಎನ್ರೋಲ್ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ
ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್ಆಯ್ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ







