ಯಲಗೂರ ಗೋಶಾಲೆಗೆ ಐದು ಟ್ರಾಕ್ಟರ್ ಮೇವು ಕೊಡುಗೆ

ಯಲಗೂರ ಗೋಶಾಲೆಗೆ ಐದು ಟ್ರಾಕ್ಟರ್ ಮೇವು ಕೊಡುಗೆ

ಮುದ್ದೇಬಿಹಾಳ : ಈಚೆಗೆ ಮುದ್ದೇಬಿಹಾಳದಲ್ಲಿ ಜರುಗಿದ್ದ ಹಿಂದೂ ಮಹಾಸಮ್ಮೇಳನದಲ್ಲಿ ಜಮಾಖರ್ಚು ಆಗಿ ಉಳಿತಾಯದ ಹಣದಲ್ಲಿ ಯಲಗೂರಿನ ಗೋಶಾಲೆಗೆ ಇಲ್ಲಿನ ಹಿಂದೂ ಸಮಾಜದ ಬಾಂಧವರು ಐದು ಟ್ರಾö್ಯಕ್ಟರ್‌ನಷ್ಟು ಮೇವು ಕಾಣಿಕೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಪಟ್ಟಣದ ಹನುಮಾನ ದೇವಸ್ಥಾನದಲ್ಲಿ ಬುಧವಾರ ಸಂಜೆ ಮೇವು ತುಂಬಿದ್ದ ಟ್ರಾö್ಯಕ್ಟರ್‌ಗಳಿಗೆ ಪೂಜೆ ಸಲ್ಲಿಸಿ ಬೀಳ್ಕೊಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಯಲಗೂರ ಗೋಶಾಲೆ ಕಾರ್ಯದರ್ಶಿ ವಿಠ್ಠಲ ಬಿರಾದಾರ, ಇದೇ ಮೊದಲ ಬಾರಿಗೆ ಮುದ್ದೇಬಿಹಾಳದ ಹಿಂದೂ ಸಮಾಜದವರು ಗೋವುಗಳಿಗೆ ಇಂತಹ ಕಷ್ಟಕಾಲದಲ್ಲಿ ಮೇವು ಒದಗಿಸುವ ಮೂಲಕ ಮೂಕ ಜಾನುವಾರುಗಳಿಗೆ ಆಸರೆಯಾಗಿದ್ದಾರೆ.ಸಮಾಜದಲ್ಲಿ ಸಾಕಷ್ಟು ಸಿರಿವಂತರು,ಉಳ್ಳವರು ಇದ್ದು ವ್ಯರ್ಥವಾಗಿ ಯಾವುದಕ್ಕೋ ಖರ್ಚು ಮಾಡುತ್ತಾರೆ.ಆದರೆ ನಮಗೆ ಕಾಮಧೇನು ಸ್ವರೂಪವಾಗಿರುವ ಗೋವಿನ ಸಂತತಿ ಉಳಿವಿಗೆ ಹಿಂದೇಟು ಹಾಕುತ್ತಾರೆ.ಆದರೆ ಮುದ್ದೇಬಿಹಾಳದ ಸಮಾಜದ ಬಾಂಧವರು ಇಂತಹದ್ದೊAದು ಮಾನವೀಯ ಸೇವೆ ಇಡೀ ರಾಜ್ಯಕ್ಕೆ ಮಾದರಿಯಾದ ಕಾರ್ಯವಾಗಲಿದೆ ಎಂದು ಹೇಳಿದರು.

ಹಿಂದೂ ಸಮಾಜದ ಮುಖಂಡ ಪ್ರಭು ಕಡಿ ಮಾತನಾಡಿ, ಹಿಂದೂ ಮಹಾ ಸಮ್ಮೇಳನದಲ್ಲಿ ಉಳಿದ ಹಣದಲ್ಲಿ ಗೋವುಗಳಿಗೆ ಸಹಾಯ ಮಾಡಬೇಕು ಎಂಬ ಒಮ್ಮತದ ತೀರ್ಮಾನವನ್ನು ಕೈಗೊಂಡು ಜಾನುವಾರುಗಳಿಗೆ ಮೇವು ಒದಗಿಸುವ ಸೇವೆ ಕೈಗೊಳ್ಳಲಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಹಿಂದೂ ಸಮಾಜದ ಪ್ರಮುಖರಾದ ವೆಂಕನಗೌಡ ಪಾಟೀಲ, ಮಾಣಿಕಚಂದ ದಂಡಾವತಿ, ಮುರಿಗೆಪ್ಪ ಮೋಟಗಿ,ಸಂಗಮೇಶ ನಾವದಗಿ, ಗುರುಸ್ವಾಮಿ ಬೂದಿಹಾಳಮಠ, ಉಮಾರಾಮ್ ಪಟೇಲ್,ಅಶೋಕ ಮಣಿ, ಮಹಾಂತೇಶ ಬೂದಿಹಾಳಮಠ, ಕಾಶೀನಾಥ ಹುಗ್ಗಿ, ಸುರೇಶ ಕಲಾಲ,ವಿಕ್ರಮ ಓಸ್ವಾಲ್,ಸಂಗನಗೌಡ ಪಾಟೀಲ,ಮೋತಿಲಾಲ ಕಲಾಲ,ಶ್ರೀಕಾಂತ ಹಿರೇಮಠ ಮೊದಲಾದವರು ಇದ್ದರು.ಬಜಾರ್ ಹನುಮಾನ ದೇವಸ್ಥಾನದಿಂದ ಪ್ರಮುಖ ಬೀದಿಯಲ್ಲಿ ಮೇವು ತುಂಬಿದ್ದ ಟ್ರಾö್ಯಕ್ಟರ್‌ಗಳನ್ನು ಮೆರವಣಿಗೆ ಮೂಲಕ ಯಲಗೂರಕ್ಕೆ ಕಳಿಸಿಕೊಡಲಾಯಿತು.

ಗೋವುಗಳು ಎಲ್ಲಿಯವರೆಗೆ ನಿಮಗೆ ಉಪಯೋಗಕ್ಕೆ ಬರುತ್ತವೆ ಅವುಗಳನ್ನು ಬಳಸಿಕೊಳ್ಳಿ.ಅವುಗಳಿಂದ ಉಪಯೋಗ ಇಲ್ಲ ಎಂದಾದಾಗ ಯಲಗೂರ ಗೋಶಾಲೆಗೆ ನೀಡಿ ನಾವು ಸಾಕುತ್ತೇವೆ.ದಯವಿಟ್ಟು ಅವುಗಳನ್ನು ಕೊಲ್ಲುವುದಕ್ಕೆ ಕೊಡಬೇಡಿ.
–ವಿಠಲ ಬಿರಾದಾರ,ಯಲಗೂರ ಗೋಶಾಲೆ ಕಾರ್ಯದರ್ಶಿ

Latest News

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಅವೈಜ್ಞಾನಿಕ ಆದಾಯ ಮಿತಿ ರದ್ದುಗೊಳಿಸಲು ವಿಕಲಚೇತನರ ಆಗ್ರಹ

ಅವೈಜ್ಞಾನಿಕ ಆದಾಯ ಮಿತಿ ರದ್ದುಗೊಳಿಸಲು ವಿಕಲಚೇತನರ ಆಗ್ರಹ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸರಕಾರ ಸಾಮಾಜಿಕ ಭದ್ರತೆ ಯೋಜನೆಗಳ ಅಡಿ ನೀಡಲಾಗುವ ಮಾಶಾಸನಕ್ಕೆ

ಎಂಎಲ್‌ಎ,ಮಂತ್ರಿಗಳ ವೇತನ,ಭತ್ಯೆ ಕಡಿತಗೊಳಿಸಿ-ಎ.ಎಸ್.ಪಾಟೀಲ್ ನಡಹಳ್ಳಿ

ಎಂಎಲ್‌ಎ,ಮಂತ್ರಿಗಳ ವೇತನ,ಭತ್ಯೆ ಕಡಿತಗೊಳಿಸಿ-ಎ.ಎಸ್.ಪಾಟೀಲ್ ನಡಹಳ್ಳಿ

ಮುದ್ದೇಬಿಹಾಳ : ಹಿಂದೆoದೂ ಕಂಡರಿಯದoತ ಭೀಕರ ಬರಗಾಲ ಈ ವರ್ಷ ಬಂದಿದ್ದು ರೈತರ ಖಾತೆಗೆ

ಅಂಜುಮನ್ ಚುನಾವಣೆಯಲ್ಲಿ ಮಹತ್ವದ ಬೆಳವಣಿಗೆ: ಮಕಾನದಾರ,ದಫೇದಾರ,ಸೋಠೆ,ಗೋಲಂದಾಜಗೆ ಹೈಕೋರ್ಟ್ ಬಿಗ್ ರಿಲೀಫ್

ಅಂಜುಮನ್ ಚುನಾವಣೆಯಲ್ಲಿ ಮಹತ್ವದ ಬೆಳವಣಿಗೆ: ಮಕಾನದಾರ,ದಫೇದಾರ,ಸೋಠೆ,ಗೋಲಂದಾಜಗೆ ಹೈಕೋರ್ಟ್ ಬಿಗ್ ರಿಲೀಫ್

ಮುದ್ದೇಬಿಹಾಳ : ಮಹತ್ವದ ಬೆಳವಣಿಗೆಯೊಂದರಲ್ಲಿ ಪಟ್ಟಣದ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯಲ್ಲಿ ತಿರಸ್ಕಾರಗೊಂಡಿದ್ದ ನಾಲ್ವರ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ ಬುಡಕಟ್ಟು ದಿನಾಚರಣೆ ಸಮಾರಂಭ ಆ.8 ರಂದು ಮದ್ಯಾಹ್ನ 12.30ಕ್ಕೆ ಪಟ್ಟಣದ ಎಂಜಿಎoಕೆ ಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಪರಿಷತ್ ರಾಜ್ಯಾಧ್ಯಕ್ಷ ಜಾನಪದ ಎಸ್.ಬಾಲಾಜಿ ಉದ್ಘಾಟಿಸುವರು.ಎಂಜಿಎAಕೆ ಸಂಸ್ಥೆಯ ಅಧ್ಯಕ್ಷ ಮನೋಹರ ಕೋರಿ ಉಪಸ್ಥಿತರಿರುವರು.ಕನ್ನಡ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಬಾಳನಗೌಡ ಪಾಟೀಲ ಅಧ್ಯಕ್ಷತೆ ವಹಿಸುವರು.ಬಾಗಲಕೋಟ ಕಜಾಪ ಜಿಲ್ಲಾಧ್ಯಕ್ಷ ಡಿ.ಎಂ.ಸಾಹುಕಾರ ಪ್ರಾಸ್ತಾವಿಕ ನುಡಿಗಳನ್ನಾಡುವರು. ಕಜಾಪ ಜಿಲ್ಲಾ ಸಂಚಾಲಕ ಪುಂಡಲೀಕ ಮುರಾಳ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ ಭೇದಿಸಿರುವ ವಿಜಯಪುರ ಜಿಲ್ಲೆಯ ಪೊಲೀಸರು ಗುಜರಾತ ಮೂಲದ ಅಂತರಾಜ್ಯ ಮಟ್ಟದ ಮೂವರು ಕಳ್ಳರನ್ನು ಬಂಧಿಸಿ ಅವರಿಂದ ತುಂಡರಿಸಿದ ಬೆಳ್ಳಿ ಹಾಗೂ ಬೆಳ್ಳಿ ತುಣುಕು ಸೇರಿ ಹಲವು ಸಾಮಗ್ರಿ ವಶಕ್ಕೆ ಪಡೆದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಬೆಳಗಾವಿ ಉತ್ತರ ವಲಯದ ಐಜಿಪಿ ಸಂದೀಪ ಪಾಟೀಲ ಅವರು,ಕಳೆದ ಜು. 5 ರಂದು ರಾತ್ರಿ ಬಸರಕೋಡದ ಪವಾಡಬಸವೇಶ್ವರ