ಮುದ್ದೇಬಿಹಾಳ : ಸವಿತ ಮಹರ್ಷಿಗಳ ಆದರ್ಶಗಳನ್ನು ಸಮಾಜದ ಬಾಂಧವರು ಅಳವಡಿಸಿಕೊಂಡು ಸಮಾಜದ ಮುಖ್ಯವಾಹಿನಿಯಲ್ಲಿ ಬರಬೇಕು ಎಂದು ತಹಶೀಲ್ದಾರ್ ಕೀರ್ತಿ ಚಾಲಕ್ ಹೇಳಿದರು.
ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಭಾನುವಾರ ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಂಡಿದ್ದ ಶ್ರೀ ಸವಿತ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ದಿಕ್ಸೂಚಿ ಭಾಷಣ ಮಾಡಿದ ಸಂಶೋಧಕ ಮಹೇಶ ತೇಲಂಗಿ , “ಇಡೀ ಜಗತ್ತಿಗೆ ಅಜ್ಞಾನದ ಕತ್ತಲೆ ಕಳೆದು ಸುಜ್ಞಾನದ ದಾರಿ ತೋರಿಸಿದ ಉಪನಯನ ಸಂಸ್ಕಾರದ ಜನಕರು ಶ್ರೀ ಸವಿತ ಮಹರ್ಷಿಗಳು. ಸವಿತ ಸಮಾಜವು ಕೇವಲ ಒಂದು ಸಮುದಾಯವಲ್ಲ, ಅದು ವಿಶ್ವದ ಪ್ರಥಮ ವೈದ್ಯಕೀಯ ಪರಂಪರೆಯ ತಾಯಿಬೇರು.”ಸಾಮವೇದವನ್ನು ಗಾಯನ ರೂಪದಲ್ಲಿ ನೀಡಿದ ಕೀರ್ತಿ ಈ ಮಹರ್ಷಿಗಳಿಗೆ ಸಲ್ಲುತ್ತದೆ. ಋಗ್ವೇದ ಪಠಣ ಪುರೋಹಿತರಿಗೆ ಸೀಮಿತವಾದರೆ, ನಾದಸ್ವರದ ಮೂಲಕ ಸಾಮವೇದ ಮೊಳಗಿಸುವ ಸವಿತ ಸಮಾಜದ ಕಲೆ ಸರ್ವರಿಗೂ ತಲುಪಿದೆ. ನಂದವAಶದ ಸ್ಥಾಪಕ ಮಹಾಪದ್ಮನಂದರು, ಪ್ಲಾಸ್ಟಿಕ್ ಸರ್ಜರಿ ಪರಿಚಯಿಸಿದ ಆದಿ ವೈದ್ಯರು ಇದೇ ಸಮಾಜದವರು ಎಂಬುದು ಹೆಮ್ಮೆಯ ಸಂಗತಿ ಎಂದರು.
ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಂ.ಎA. ಬೆಳಗಲ್ ಮಾತನಾಡಿ, ಶಿವನ ಬಲಗಣ್ಣಿನಿಂದ ಉದ್ಭವಿಸಿದ ಸವಿತ ಮಹರ್ಷಿಗಳು 1875 ಶ್ಲೋಕಗಳ ಮೂಲಕ ಜ್ಞಾನದೀಪ್ತಿ ಬೆಳಗಿದ್ದಾರೆ ಎಂದರು.
ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ, ಸವಿತಾ ಸಮಾಜವು ನಾಟಿ ವೈದ್ಯಪದ್ಧತಿಯ ಮೂಲಕ ಜನಸಾಮಾನ್ಯರ ಜೊತೆ ಬೆರೆತ ‘ಸ್ನೇಹ ಸಮಾಜ’ ಎಂದು ಶ್ಲಾಘಿಸಿದರು.
ಶಿರಸ್ತೇದಾರ ಎಂ.ಎ.ಬಾಗೇವಾಡಿ, ಮುಖ್ಯ ಪಶುವೈದ್ಯಾಧಿಕಾರಿ ಶಿವಾನಂದ ಮೇಟಿ, ಎಎಸೈ ಅಮರಪ್ಪ ಸಾಲಿ, ಕಂದಾಯ ನಿರೀಕ್ಷಕ ಪವನ ತಳವಾರ, ಸಮಾಜದ ಅಧ್ಯಕ್ಷ ರವಿ ತೇಲಂಗಿ ಹಾಗೂ ಗೌರವ ಅಧ್ಯಕ್ಷ ಮಲ್ಲಣ್ಣ ತೇಲಂಗಿ,ಸಮಾಜದ ಪ್ರಮುಖರಾದ ದೇವೇಂದ್ರ ಶಹಾಪೂರ, ಈರಣ್ಣ ಇಡ್ಲೂರ, ಅಪ್ಪು ಶಹಾಪೂರ, ಶರಣಪ್ಪ ಮಸಾಲಜಿ, ಶ್ರೀನಿವಾಸ ಶಹಾಪೂರ, ಪ್ರವೀಣ ಮಸಾಲಜಿ, ಶ್ರೀಕಾಂತ ತೇಲಂಗಿ, ಕುಮಾರ್ ತೇಲಂಗಿ, ಸುರೇಶ್ ಮಸಾಲಜಿ, ಶಂಕ್ರಪ್ಪ ಹಡಪದ, ಭೀಮಣ್ಣ ಬಳವಾಟ, ಶಂಕರಪ್ಪ ಅಮರಗೋಳ, ತಿಪ್ಪಣ್ಣ ಶಹಾಪೂರ, ರಾಘವ್ ತೇಲಂಗಿ, ಗೌತಮ್ ಚಿಗನೂರ ಮತ್ತು ಕಾರ್ಮಿಕ ಇಲಾಖೆಯ ಸಿದ್ದು ನಾವಿ ಸೇರಿದಂತೆ ಸವಿತ ಹಾಗೂ ಹಡಪದ ಸಮಾಜದ ಬಂಧುಗಳು ಭಾಗವಹಿಸಿದ್ದರು.
ಶಿಕ್ಷಕ ಎಂ.ಬಿ. ಗುಡಗುಂಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ಸವಿತ ಮಹರ್ಷಿ ವೃತ್ತದಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.







